BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
news

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

ಲೋಕಾಯುಕ್ತರ ತರಾಟೆಗೆ ಬೆಚ್ಚಿ ಬಿದ್ದ ಅಧಿಕಾರಿಗಳು, ಜೆಸಿಬಿ ಮೂಲಕ ಸ್ವಚ್ಛತಾ ಕಾರ್ಯ ಚುರುಕು!
By News Desk BenkiyabaleUpdated:June 25, 2026 10:54 am

ಹುಳಿಯಾರು: ದಶಕಗಳಿಂದ ತ್ಯಾಜ್ಯದ ಕೂಪವಾಗಿ ಮಾರ್ಪಟ್ಟು, ದುರ್ನಾಥ ಬೀರುತ್ತಿದ್ದ ಹುಳಿಯಾರು ಕೆರೆಗೆ ಕೊನೆಗೂ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದೆ. ಕೆರೆಯ ದುಸ್ಥಿತಿಯ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಹಾಗೂ ಸಾರ್ವಜನಿಕರ ದೂರಿನನ್ವಯ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಉಪ ಲೋಕಾಯುಕ್ತರು ತೀವ್ರ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಎಚ್ಚೆತ್ತ ಸಣ್ಣ ನೀರಾವರಿ ಇಲಾಖೆಯು ಕಳೆದ ಎರಡು ದಿನಗಳಿಂದ ಹಿಟಾಚಿ ಯಂತ್ರದ ಮೂಲಕ ಕೆರೆ ಅಂಗಳವನ್ನು ಕ್ಲೀನ್ ಮಾಡಲು ಮುಂದಾಗಿದೆ.
ಕಲ್ಮಶವಾಗಿದ್ದ ಕೆರೆ: ಸಾರ್ವಜನಿಕರ ಆಕ್ರೋಶ: ಹುಳಿಯಾರು ಪಟ್ಟಣದ ಜೀವನಾಡಿಯಾಗಿದ್ದ ಈ ಇತಿಹಾಸ ಪ್ರಸಿದ್ಧ ಕೆರೆಯು ಇತ್ತೀಚಿನ ವರ್ಷಗಳಲ್ಲಿ ಸಂಪೂರ್ಣವಾಗಿ ಕಸದ ತೊಟ್ಟಿಯಾಗಿ ಮಾರ್ಪಟ್ಟಿತ್ತು. ಪಟ್ಟಣದ ಹೋಟೆಲ್‌ಗಳು, ಕೋಳಿ ಅಂಗಡಿಗಳು, ತರಕಾರಿ ಮಾರುಕಟ್ಟೆಯ ತ್ಯಾಜ್ಯಗಳನ್ನೆಲ್ಲಾ ನೇರವಾಗಿ ಕೆರೆಗೆ ಸುರಿಯಲಾಗುತ್ತಿತ್ತು. ಇದರ ಜೊತೆಗೆ, ಕೆರೆ ಅಂಗಳದ ಫುಟ್‌ಪಾತ್ ವ್ಯಾಪಾರಿಗಳು ಪಾನಿಪುರಿ, ಗೋಬಿ, ಟೀ ಹಾಗೂ ತಿಂಡಿ ಸೇರಿದಂತೆ ತಮ್ಮ ಅಂಗಡಿಯ ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯಗಳನ್ನು ಕೆರೆಯೊಳಗೆ ಎಸೆಯುತ್ತಿದ್ದರು. ಇದರಿಂದ ಕೆರೆಯ ನೀರು ಸಂಪೂರ್ಣ ಕಲ್ಮಶಗೊಂಡು, ಜಲಚರಗಳು ಸತ್ತು ಹೋಗುವ ಭೀತಿ ಎದುರಾಗಿತ್ತು. ಕೆರೆ ಏರಿ ಮೇಲೆ ನಿತ್ಯ ಓಡಾಡುವ ಶಾಲಾಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದುರ್ನಾಥದಿಂದಾಗಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಷ್ಟಾದರೂ ಸ್ಥಳೀಯ ಪಟ್ಟಣ ಪಂಚಾಯಿತಿ ಮಾತ್ರ ಕಣ್ಣು ಮುಚ್ಚಿ ಕುಳಿತಿತ್ತು. ಕೊನೆಗೆ ಇದೇ ಕೆರೆಗೆ ಅಪಾಯಕಾರಿ ವೈದ್ಯಕೀಯ (ಔಷಧಿ) ತ್ಯಾಜ್ಯಗಳನ್ನು ಸುರಿಯುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ÷್ಯ ವಹಿಸಿದ್ದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಅಧಿಕಾರಿಗಳಿಗೆ ಉಪ ಲೋಕಾಯುಕ್ತರ ಚಾಟಿ!: ಹಿಂದೆ ಹುಳಿಯಾರು ಪಟ್ಟಣಕ್ಕೆ ಭೇಟಿ ನೀಡಿದ್ದ ಉಪ ಲೋಕಾಯುಕ್ತರಾದ ವೀರಣ್ಣ ಅವರು, ಕೆರೆ ಹಾಗೂ ಬಸ್ ನಿಲ್ದಾಣವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಪಟ್ಟಣ ಪಂಚಾಯಿತಿಗೆ ಕಡಕ್ ಸೂಚನೆ ನೀಡಿದ್ದರು. ಆದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಬಗ್ಗೆ ಪತ್ರಿಕೆಗಳಲ್ಲಿ ಸರಣಿ ವರದಿಗಳು ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಲೋಕಾಯುಕ್ತರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದರು.
ಸಣ್ಣ ನೀರಾವರಿ ಇಲಾಖೆ, ಪಟ್ಟಣ ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತಕ್ಕೆ ತಕ್ಷಣವೇ ನೋಟಿಸ್ ಜಾರಿ ಮಾಡಿದ್ದಲ್ಲದೆ, ಸಣ್ಣ ನೀರಾವರಿ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳನ್ನು ಕಚೇರಿಗೆ ಕರೆಸಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಲೋಕಾಯುಕ್ತರ ಈ ಖಡಕ್ ಕ್ರಮಕ್ಕೆ ಬೆದರಿದ ಅಧಿಕಾರಿಗಳು ಈಗ ಯುದ್ಧೋಪಾದಿಯಲ್ಲಿ ಕೆರೆ ಸ್ವಚ್ಛತೆಗೆ ಮುಂದಾಗಿದ್ದಾರೆ.
ಎರಡು ದಿನಗಳಿಂದ ಮುಂದುವರಿದ ಸ್ವಚ್ಛತಾ ಕಾರ್ಯ: ಲೋಕಾಯುಕ್ತರ ಬಿಸಿ ತಟ್ಟುತ್ತಿದ್ದಂತೆ ಕಾರ್ಯಪ್ರವೃತ್ತವಾಗಿರುವ ಸಣ್ಣ ನೀರಾವರಿ ಇಲಾಖೆಯು, ಕಳೆದ ಎರಡು ದಿನಗಳಿಂದ ಹಿಟಾಚಿ ಯಂತ್ರಗಳನ್ನು ಬಳಸಿ ಕೆರೆ ಅಂಚಿನಲ್ಲಿ ದಶಕಗಳಿಂದ ಸಂಗ್ರಹವಾಗಿದ್ದ ಹೋಟೆಲ್, ತರಕಾರಿ ತ್ಯಾಜ್ಯ ಹಾಗೂ ಟನ್‌ಗಟ್ಟಲೆ ಪ್ಲಾಸ್ಟಿಕ್ ಕಸವನ್ನು ತೆರವುಗೊಳಿಸುತ್ತಿದೆ. ಅಲ್ಲದೆ ಬಳ್ಳಾರಿ ಜಾಲಿ ಗಿಡಗಳನ್ನು ಕಿತ್ತೆಸೆಯುತ್ತಿದೆ. ಸದ್ಯ ಕೆರೆ ಅಂಗಳ ಸಾರ್ವಜನಿಕರು ನಿಟ್ಟುಸಿರು ಬಿಡುವಂತೆ ಸ್ವಚ್ಛಗೊಳ್ಳುತ್ತಿದೆ.

(Visited 1 times, 1 visits today)
huliyaru lake huliyaru news karnataka news local news tumkur news
Previous Article೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
News Desk Benkiyabale

Related Posts

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am news

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am news

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news
ತಾಜಾ ಸುದ್ಧಿಗಳು

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm
Our Youtube Channel
Our Picks

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

By News Desk BenkiyabaleJune 25, 2026 10:54 am

ಹುಳಿಯಾರು: ದಶಕಗಳಿಂದ ತ್ಯಾಜ್ಯದ ಕೂಪವಾಗಿ ಮಾರ್ಪಟ್ಟು, ದುರ್ನಾಥ ಬೀರುತ್ತಿದ್ದ ಹುಳಿಯಾರು ಕೆರೆಗೆ ಕೊನೆಗೂ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದೆ. ಕೆರೆಯ…

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.