ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯ ಕುರಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಗಿಡಕ್ಕೆ ನೀರೆರೆಯುವುದರ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಚಾಲನೆ ನೀಡಿದರು.
ತರಬೇತಿ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಜುಲೈ ೦೧ ರಿಂದ ವಿಬಿ ಜಿ ರಾಮ್ ಜಿ ಯೋಜನೆ ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ವಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ಉದ್ದೇಶದಿಂದ ಎಲ್ಲಾ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಸದರಿ ತರಬೇತಿಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಆಡಳಿತ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ಹಾಜರಾಗಿದ್ದು, ತರಬೇತಿಯ ಎಲ್ಲಾ ಅಂಶಗಳನ್ನು ತಿಳಿದುಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನ ಮಾಡುವ ಉದ್ದೇಶದಿಂದ ಈಗಾಗಲೇ ಎಲ್ಲಾ ರೂಪುರೇಷೆಗಳನ್ನು ಸಿದ್ದ ಮಾಡಿಕೊಳ್ಳಲಾಗುತ್ತಿದ್ದು, ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಲಾಗುವುದು ಎಂದರು.


ಮೈಸೂರಿನ ಅಬ್ದುಲ್ ನಜಿûÃರ್ ಸಾಬ್ ಮಾತನಾಡಿ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಿAದ ತರಬೇತಿ ಪಡೆದ ನಾಲ್ಕು ಜನ ಮಾಸ್ಟರ್ ಟ್ರೆöÊನರ್‌ಗಳಿಂದ ತರಬೇತಿ ನೀಡಲಾಗುತ್ತಿದ್ದು, ಯೋಜನೆಯ ಕುರಿತ ಹಾಗೂ ಅನುಷ್ಟಾನದ ಕುರಿತ ಎಲ್ಲಾ ಅಂಶಗಳನ್ನು ಹಾಗೂ ಮಾಹಿತಿಯನ್ನು ಅನುಷ್ಟಾನಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಿಳಿಸಲಾಗುವುದು ಎಂದರು.
ಜುಲೈ ೧ ರಿಂದ ಆರಂಭವಾಗುತ್ತಿರುವ ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ಒಂದು ಅರ್ಹ ಗ್ರಾಮೀಣ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ೧೨೫ ದಿನಗಳ ಉದ್ಯೋಗ ಕಲ್ಪಿಸಲಾಗುವುದು. ಈ ಯೋಜನೆಯು ಭಾರತ ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ದೃಷ್ಟಿಕೋನವಾಗಿದ್ದು, ಸ್ವಾತಂತ್ರ‍್ಯದ ೧೦೦ ವರ್ಷಗಳ ನೆನಪಿಗಾಗಿ ೨೦೪೭ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟçವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ಈ ಉಪಕ್ರಮವು ಎಲ್ಲರನ್ನೂ ಒಳಗೊಂಡ ಬೆಳವಣಿಗೆ, ನಾವೀನ್ಯತೆ, ಸುಸ್ಥಿರತೆ ಮತ್ತು ಉತ್ತಮ ಆಡಳಿತಕ್ಕೆ ಒತ್ತು ನೀಡುತ್ತದೆ, ಸಮಾಜದ ಎಲ್ಲಾ ವರ್ಗಗಳಿಗೂ ಸಮೃದ್ಧಿಯನ್ನು ಖಚಿತಪಡಿಸುತ್ತದೆ ಎಂದರು.
ವಿಬಿ ಜಿ ರಾಮ್ ಜಿ ಯೋಜನೆಯ ಮುಖ್ಯ ಉದ್ದೇಶ: ಸ್ವಯಂಪ್ರೇರಿತರಾಗಿ ಅಕುಶಲ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸುವ ಗ್ರಾಮೀಣ ವಯಸ್ಕ ಸದಸ್ಯರ ಕುಟುಂಬಕ್ಕೆ, ಒಂದು ಆರ್ಥಿಕ ವರ್ಷದಲ್ಲಿ ೧೨೫ ದಿನಗಳ ಕಡ್ಡಾಯ ಉದ್ಯೋಗ ಖಾತರಿ. ವಿಕಸಿತ ಗ್ರಾಮ ಪಂಚಾಯತ್ ಯೋಜನೆಗಳ ಮೂಲಕ ಒಗ್ಗೂಡಿಸುವಿಕೆ, ಸ್ಯಾಚುರೇಷನ್ ಆಧಾರಿತ ಯೋಜನೆ ಮತ್ತು ಸರ್ಕಾರದ ಸಮಗ್ರ ಕಾರ್ಯಾಚರಣೆ ವಿತರಣೆಯನ್ನು ಸಾಂಸ್ಥಿಕರಿಸುವುದು. ಕೃಷಿ ಚಟುವಟಿಕೆಗಳ ಹಂಗಾಮಿನ ಉತ್ತುಂಗದ ಸಮಯದಲ್ಲಿ ಕೃಷಿ ಕಾರ್ಮಿಕರ ಸಮರ್ಪಕ ಲಭ್ಯತೆಯನ್ನು ಸುಗಮಗೊಳಿಸಲು ೬೦ ದಿನಗಳ ವಿರಾಮ. ಪರಿಪೂರ್ಣತೆ ಸಾಧಿಸಲು ಕಾಮಗಾರಿಗಳ ಒಗ್ಗೂಡಿಸುವಿಕೆಗಾಗಿ ವಿಕಸಿತ ಭಾರತ ರಾಷ್ಟಿçÃಯ ಗ್ರಾಮೀಣ ಮೂಲಸೌಕರ್ಯ ಸ್ಟಾö್ಯಕ್ ರಚನೆ. ಸಮಗ್ರ ಡಿಜಿಟಲ್ ವ್ಯವಸ್ಥೆಯ ಮೂಲಕ ಆಡಳಿತ, ಹೊಣೆಗಾರಿಕೆ ಮತ್ತು ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಆಧುನೀಕರಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಈ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಅಭಿವೃದ್ಧಿ) ಸಂಜೀವಪ್ಪ ಕೆ.ಪಿ., ಮಾಸ್ಟರ್ ಟ್ರೆöÊನರ್ ಸುರೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸುಬ್ಬರಾಜು ಅರಸ್, ಗಂಗಾಧರ್ ಸೇರಿದಂತೆ ಸಹಾಯಕ ನಿರ್ದೇಶಕರು, ತಾಂತ್ರಿಕ ಸಿಬ್ಬಂದಿ ಭಾಗಿಯಾಗಿದ್ದರು.

(Visited 1 times, 1 visits today)