BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
news

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ
By News Desk BenkiyabaleUpdated:June 27, 2026 5:27 pm

ತುಮಕೂರು: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ, ಅವರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿಯಾಗಿದೆ ಎಂದು ಶಾಸಕ ಬಿ.ಸುರೇಶ್‌ಗೌಡ ತಿಳಿಸಿದರು.
ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ. ಜಿಲ್ಲಾ ಕಸಾಪ ಹಾಗೂ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣಾ ಸಮಿತಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿ ದಕ್ಷ ಆಡಳಿತಗಾರರಾಗಿ ಅವರು ಮಾಡಿದ ಅಭಿವೃದ್ದಿ ಇಂದು ಬೆಂಗಳೂರನ್ನು ವಿಶ್ವ ಮಟ್ಟಕ್ಕೆ ಪರಿಚಯಿಸಿದೆ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ, ಕೆಂಪೇಗೌಡರನ್ನು ಇಂದು ಕೇವಲ ಬೆಂಗಳೂರಿಗೆ ಸೀಮಿತಗೊಳಿಸಲಾಗಿದೆ. ಆದರೆ ಅವರು ಅಂದು ನೀಡಿದ ಯೋಜನೆಗಳನ್ನು ಹೇಗೆ ನಮ್ಮ ಜಿಲ್ಲೆಯ ಬೆಳವಣಿಗೆಗೆ ಬಳಕೆ ಮಾಡಬಹುದು ಎಂಬುದನ್ನು ಇಂದಿನ ಯುವಜನರು ಚಿಂತಿಸಬೇಕಿದೆ. ಅವರು ದೂರದೃಷ್ಟಿಯ ಯೋಜನೆಗಳು, ಅವುಗಳ ಉಪಯೋಗ ಕುರಿತು ಪುಸ್ತಕ ಮುದ್ರಿಸಿ ಎಲ್ಲರಿಗೂ ತಲುಪುವಂತೆ ಮಾಡಬೇಕು ಎಂದು ತಿಳಿಸಿದರು.
ಇಂದು ಸಾಂಕೇತಿಕವಾಗಿ ಜಿಲ್ಲಾಡಳಿತ ಜಯಂತಿಯನ್ನು ಆಚರಿಸುತ್ತಿದ್ದು, ಕೆಲವೇ ದಿನಗಳಲ್ಲಿ ಬಿಜಿಎಸ್ ವೃತ್ತದಲ್ಲಿ ಅವರ ನಾಮಫಲಕ ಆನಾವರಣ ಮಾಡುವ ಮೂಲಕ ಅದ್ದೂರಿಯಾಗಿ ಆಚರಿಸಲಾಗುವುದು ಎಂದರು.
ತಹಶೀಲ್ದಾರ್ ರಾಜೇಶ್ವರಿ ಮಾತನಾಡಿ, ಕೆಂಪೇಗೌಡ ಅವರು ಒಂದು ಸಮುದಾಯಕ್ಕೆ ಸಿಮೀತರಾದವರಲ್ಲ, ಅವರು ವಿಶ್ವಮಾನವರು. ಎಲ್ಲ ವರ್ಗದ ಜನರು ಅವರ ಕುಲ ಕಸುಬಿನಿಂದ ಬಂದ ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ಒದಗಿಸಿ, ಜನರ ಅರ್ಥಿಕ, ಸಾಮಾಜಿಕ ಬೆಳವಣಿಗೆಗೆ ಕಾರಣರಾಗಿದ್ದರು. ನೂರಾರು ಕೆರೆ ಕಟ್ಟೆಗಳನ್ನು ನಿರ್ಮಿಸಿ, ಜನರ ಬದುಕಿಗೆ ಆಸರೆ ಒದಗಿಸಿದ್ದರು. ಇಂದಿಗೂ ಬೆಂಗಳೂರು ವಿಶ್ವದಲ್ಲಿಯೇ ಗಮನ ಸೆಳೆಯುವ ನಗರವಾಗಿದ್ದರೆ ಅದಕ್ಕೆ ಕೆಂಪೇಗೌಡರ ದೂರದೃಷ್ಠಿಯೇ ಕಾರಣ ಎಂದರು.
ಮಾಜಿ ಶಾಸಕ ಹೆಚ್.ನಿಂಗಪ್ಪ ಮಾತನಾಡಿ, ಜನರಿಗೆ ಕುಲಕಸುಬಿನ ಆಧಾರದಲ್ಲಿ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಟ್ಟು, ಗಡಿಗಳನ್ನು ನಿರ್ಮಿಸಿ, ನಗರದ ಸಮಗ್ರ ಅಭಿವೃದ್ದಿಗೆ ಯೋಜನೆ ರೂಪಿಸಿದ ಕೆಂಪೇಗೌಡರು, ವಿಜಯನಗರದ ಅರಸರ ಒಪ್ಪಿಗೆ ಪಡೆದು ಸ್ವಂತ ನಾಣ್ಯ ಚಲಾವಣೆಗೆ ತಂದು, ನಾಡಿನ ಬೆಳವಣಿಗೆಗೆ ಪೂರಕ ವಾತಾವರಣದ ಸೃಷ್ಟಿ ಮಾಡಿದ್ದರು. ಇಂತಹವರ ಜಯಂತಿಯನ್ನು ಎಲ್ಲಾ ಸಮುದಾಯದವರು ಒಗ್ಗೂಡಿ ಆಚರಿಸುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದರು.
ನಾಡಪ್ರಭು ಕೆಂಪೇಗೌಡರ ಕುರಿತು ವಿಶೇಷ ಉಪನ್ಯಾಸ ನೀಡಿದ ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ, ೧೫೩೨ ರಿಂದ ೧೫೯೭ ರವರೆಗೆ ಸುಮಾರು ೫೫ ವರ್ಷಗಳ ಕಾಲ ಯಲಹಂಕ ನಾಡಪ್ರಭುಗಳಾಗಿ ಆಳ್ವಿಕೆ ನಡೆಸಿದ ಕೆಂಪೇಗೌಡರು ವಿಜಯನಗರ ಅರಸ ಅಚ್ಚುತರಾಯನ ಅನುಮತಿ ಪಡೆದು ಕೋಟೆ ನಿರ್ಮಿಸಿ ಅಧಿಕಾರ ನಡೆಸಿದರು. ಕುಲಕಸುಬು ಆಧಾರಿತ ಪೇಟೆಗಳನ್ನು ನಿರ್ಮಿಸಿ, ಜನರು ಅರ್ಥಿಕವಾಗಿ ಅಭಿವೃದ್ದಿ ಹೊಂದಲು ಅಗತ್ಯ ವಾತಾವರಣ ಸೃಷ್ಟಿಸಿದರು. ಕೃಷಿ ಮತ್ತು ನೀರಾವರಿಗೆ ಒತ್ತು ನೀಡಿದ ಕೆಂಪೇಗೌಡರು, ಬೆಂಗಳೂರಿನಲ್ಲಿ ೫೪೭ ಕೆರೆಗಳು, ಒಂದು ಸಾವಿರಕ್ಕೂ ಹೆಚ್ಚು ಕುಂಟೆಗಳನ್ನು ನಿರ್ಮಿಸಿ, ಜನ-ಜಾನುವಾರು ಹಾಗೂ ಕೃಷಿಗೆ ನೀರಿನ ಸೌಲಭ್ಯ ಕಲ್ಪಿಸಿದ್ದರು. ಅವರ ಆಡಳಿತ ಮಾಗಡಿ, ಶಿವನಸಮುದ್ರ, ಕೊರಟಗೆರೆ, ಕುಣಿಗಲ್ ವರೆಗೆ ವಿಸ್ತರಣೆಗೊಂಡಿತ್ತು. ಕೆಂಪಾಪುರ ಮುಂತಾದ ಕಡೆಗಳಲ್ಲಿ ಇರುವ ಹಿರಿಯರ ಸಮಾಧಿಗಳನ್ನು ಸಂರಕ್ಷಿಸಿ, ಸ್ಮಾರಕವಾಗಿಸುವ ಕೆಲಸ ಆಗಬೇಕು ಎಂದರು.
ಸಮಾರAಭದಲ್ಲಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ ಕು.ಮಿರ್ಜಿ, ಹಿರಿಯರಾದ ಲಕ್ಕಪ್ಪಗೌಡ, ಲಲಿತಾ ಮಲ್ಲಪ್ಪ, ನರಸೇಗೌಡ, ಮನೋಹರಗೌಡ, ಸಿದ್ದರಾಜೇಗೌಡ, ಸಿದ್ದಲಿಂಗೇಗೌಡ, ಅಶ್ವಥಗೌಡ, ಡಿಡಿಪಿಐ ರಾಧಾ, ರೇವಣ್ಣ, ರಾಮಮೂರ್ತಿ ಗೌಡ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
jothi ganesh karnataka kempegowda jayanthi nadaprabhu kempegowda Suresh gowda tumkur news
Previous Articleಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
Next Article ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
News Desk Benkiyabale

Related Posts

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm news
ತಾಜಾ ಸುದ್ಧಿಗಳು

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm
Our Youtube Channel
Our Picks

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

By News Desk BenkiyabaleJune 27, 2026 5:34 pm

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ…

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.