BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
  • ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
news

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

ಕೊರಟಗೆರೆಯಲ್ಲಿ ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತಿ ಆಚರಣೆ
By News Desk BenkiyabaleUpdated:June 29, 2026 3:34 pm

ಕೊರಟಗೆರೆ: ಈ ವೇಳೆ ಒಕ್ಕಲಿಗ ಸಮುದಾಯ ಭವನ ನಿರ್ಮಾಣಕ್ಕೆ ಉದ್ಯಮಿಗಳಿಂದ ಒಟ್ಟು ೧ ಕೋಟಿ ೧ ಲಕ್ಷ ರೂಪಾಯಿ ನೆರವಿನ ಘೋಷಣೆ ಗಮನ ಸೆಳೆಯಿತು. ಈ ಕುರಿತು ವರದಿ ಇಲ್ಲಿದೆ.
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತಿಯನ್ನು ಕೊರಟಗೆರೆ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ಸಂಯುಕ್ತಾಶ್ರ ಯದಲ್ಲಿ ಪಟ್ಟಣದ ಸಾದರ ಸಮುದಾಯ ಭವನ ದಲ್ಲಿ ವಿಜೃಂಭಣೆಯಿAದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿ ಮಂಜುನಾಥ್ ಕೆ.ಎಂ., ಕೆಂಪೇಗೌಡರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಎಲ್ಲಾ ಜಾತಿ-ಧರ್ಮದ ಜನರನ್ನು ಒಗ್ಗೂಡಿಸಿ ಕೆರೆ, ಕಟ್ಟೆ, ದೇವಾಲಯ ಹಾಗೂ ಮಾರುಕಟ್ಟೆಗಳನ್ನು ನಿರ್ಮಿಸುವ ಮೂಲಕ ಬೆಂಗಳೂರಿಗೆ ಭದ್ರ ಅಡಿಪಾಯ ಹಾಕಿದ ದೂರದೃಷ್ಟಿಯ ಆಡಳಿತಗಾರ ಎಂದು ಬಣ್ಣಿಸಿದರು. ಯುವಜನತೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಂಎನ್‌ಜೆ ಗ್ರೂಪ್‌ನ ಸಂಸ್ಥಾಪಕ ಎಂ.ಎನ್.ಜೆ. ಮಂಜುನಾಥ್, ಕೆಂಪೇಗೌಡರ ವ್ಯಾಪಾರ ಹಾಗೂ ಅಭಿವೃದ್ಧಿ ದೃಷ್ಟಿಕೋನವೇ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾರಣವಾಗಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಕೊರಟಗೆರೆಯಲ್ಲಿ ಒಕ್ಕಲಿಗ ಸಮುದಾಯ ಭವನ ನಿರ್ಮಾಣಕ್ಕೆ ತಮ್ಮ ವತಿಯಿಂದ ೫೦ ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದರು.
ಅದರ ಬೆನ್ನಲ್ಲೇ ಪಿ.ಎನ್.ಕೆ ಟೌನ್‌ಶಿಪ್ ಮಾಲೀಕರಾದ ಪಿ.ಎನ್. ಕೃಷ್ಣಮೂರ್ತಿ, ಸಮುದಾಯ ಭವನ ನಿರ್ಮಾಣಕ್ಕೆ ೫೧ ಲಕ್ಷ ರೂಪಾಯಿ ಸಹಾಯಧನ ನೀಡುವುದಾಗಿ ಘೋಷಿಸಿ ನಮ್ಮ ಸಮುದಾಯದ ಜೊತೆ ಇತರ ಸಮುದಾಯಗಳಿಗೂ ಸಮುದಾಯ ಭವನ ನಿರ್ಮಾಣ ಮಾಡಲು ನಾನು ಸಹಾಯ ಮಾಡುತ್ತೇನೆ ಶಾಲಾ ಮಕ್ಕಳಿಗೆ ದೇವಸ್ಥಾನಗಳಿಗೆ ನಮ್ಮ ತಾಲೂಕಿನ ಅಭಿವೃದ್ಧಿಗೆ ಯಾವಾಗಲೂ ಜನರ ಜೊತೆ ಇರುತ್ತೇನೆ ಎಂದು ತಿಳಿಸಿದರು…
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು ಮಾತನಾಡಿ, ಎಂ.ಎನ್.ಜೆ. ಮಂಜುನಾಥ್ ಹಾಗೂ ಪಿ.ಎನ್. ಕೃಷ್ಣಮೂರ್ತಿ ಅವರಂತಹ ಉದಾರ ಮನಸ್ಸಿನ ದಾನಿಗಳು ಸಮಾಜಕ್ಕೆ ಮಾದರಿಯಾಗಿದ್ದಾರೆ.
ಸಮುದಾಯ ಭವನ ನಿರ್ಮಾಣ ಕಾರ್ಯಕ್ಕೆ ಇನ್ನಷ್ಟು ದಾನಿಗಳು ಮುಂದೆ ಬಂದು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಕಾಮರಾಜು, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ರಂಗರಸಯ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ ಸೇರಿದಂತೆ ಹಲವು ಗಣ್ಯರು ಮಾತನಾಡಿದರು. ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯ ವೇದಿಕೆಯಲ್ಲೇ ಒಕ್ಕಲಿಗ ಸಮುದಾಯ ಭವನ ನಿರ್ಮಾಣಕ್ಕೆ ಒಟ್ಟು ೧ ಕೋಟಿ ೧ ಲಕ್ಷ ರೂಪಾಯಿ ನೆರವಿನ ಘೋಷಣೆ ನಡೆದಿರುವುದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಪರಿಣಮಿಸಿತು.
ಈ ಘೋಷಣೆಗೆ ಸಾರ್ವಜನಿಕರು ಹಾಗೂ ಸಮುದಾಯದ ಮುಖಂಡರು ಹರ್ಷ ವ್ಯಕ್ತಪಡಿಸಿದರು.

(Visited 1 times, 1 visits today)
FATHER OF BENGALURU kannada news karnataka koratagere news taluk news TUMKUR LOCAL NEWS
Previous Articleಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
Next Article ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
News Desk Benkiyabale

Related Posts

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm news

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news
ತಾಜಾ ಸುದ್ಧಿಗಳು

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
Our Youtube Channel
Our Picks

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

By News Desk BenkiyabaleJune 29, 2026 3:36 pm

ತುಮಕೂರು: ಹೊರಗಿನ ಯಶಸ್ಸನ್ನು ಹುಡುಕುವ ಆತುರದಲ್ಲಿ ನಾವಿಂದು ಅಂತರ್ಯದಲ್ಲಿರುವ ನಿಜವಾದ ಯಶಸ್ಸನ್ನು ಕಂಡುಕೊಳ್ಳುವುದರಲ್ಲಿ ವಿಫಲರಾಗುತ್ತಿದ್ದೇವೆ. ಹಾಗಾಗಿ, ಪ್ರತಿಯೊಬ್ಬರೂ ಮೊದಲು ತಮ್ಮ…

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

June 29, 2026 3:34 pm

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.