BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
  • ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು
  • ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ
  • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ
  • ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ
  • ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
  • ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು
news

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

ಅಳಿವಿನಂಚಿನಲ್ಲಿ ಹುಳಿಯಾರಿನ ಐತಿಹಾಸಿಕ ಕೆಪಿಎಸ್ ಶಾಲಾ ಕಟ್ಟಡ!
By News Desk BenkiyabaleUpdated:June 30, 2026 4:58 pm

ಹುಳಿಯಾರು: ಖಾಸಗಿ ಶಾಲೆಗಳ ಮಿತಿಮೀರಿದ ಆರ್ಭಟ, ಸರ್ಕಾರಿ ಶಾಲೆಗಳು ಮಕ್ಕಳ ದಾಖಲಾತಿ ಇಲ್ಲದೆ ಮುಚ್ಚುತ್ತಿರುವ ಇಂದಿನ ಆತಂಕಕಾರಿ ದಿನಗಳ ನಡುವೆಯೂ, ಹುಳಿಯಾರಿನ ಕರ್ನಾಟಕ ಪಬ್ಲಿಕ್ ಶಾಲೆ (ಈಗ ಕೆಪಿಎಸ್, ಆಗ ಎಂಪಿಎಸ್) ಇಂದಿಗೂ ಪೋಷಕರು ಮತ್ತು ಮಕ್ಕಳ ಪಾಲಿಗೆ ಭರವಸೆಯ ಬೆಳಕಾಗಿ ನಿಂತಿದೆ. ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಈ ಹೆಮ್ಮೆಯ ವಿದ್ಯಾಕೇಂದ್ರ, ಕೇವಲ ಒಂದು ಕಟ್ಟಡವಲ್ಲ. ಇದು ಹುಳಿಯಾರಿನ ಸಾಂಸ್ಕöÈತಿಕ ಮತ್ತು ಶೈಕ್ಷಣಿಕ ಚರಿತ್ರೆಯ ಜೀವಂತ ಸಾಕ್ಷಿಯಾಗಿದೆ.

ಲಕ್ಷಾಂತರ ಸಾಧಕರನ್ನು ರೂಪಿಸಿದ ಜ್ಞಾನ ದೇಗುಲ: ಶತಮಾನ ಕಂಡಿರುವ ಈ ಶಾಲೆಯಲ್ಲಿ ಓದಿ ಬೆಳೆದ ಲಕ್ಷಾಂತರ ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ಉನ್ನತ ಸ್ಥಾನಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೇಷ್ಠ ಸಾಹಿತಿಗಳು, ನುರಿತ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು, ರಾಜಕಾರಣಿಗಳು ಹಾಗೂ ದಕ್ಷ ಅಧಿಕಾರಿಗಳು ಬಹುಮುಖ್ಯವಾಗಿ ಸಾಮಾಜಿಕ ಕಳಕಳಿಯುಳ್ಳವರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ ಕೀರ್ತಿ ಈ ಜ್ಞಾನದೇಗುಲಕ್ಕೆ ಸಲ್ಲುತ್ತದೆ. ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ ನಿರ್ಮಾಣಗೊಂಡ ಈ ಸುಂದರ ಕಟ್ಟಡವು ಹಿಂದೆ ತಾಲೂಕು ಕಚೇರಿಯಾಗಿಯೂ ಕಾರ್ಯನಿರ್ವಹಿಸುತ್ತಿತ್ತು ಎಂಬ ಇತಿಹಾಸದ ಉಲ್ಲೇಖವಿದೆ. ಪ್ರಸ್ತುತ ಈ ಐತಿಹಾಸಿಕ ಆವರಣದಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಪ್ರಾಥಮಿಕ ಶಾಲೆ ಯಶಸ್ವಿಯಾಗಿ ನಡೆಯುತ್ತಿದ್ದು, ನೂರಾರು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.

ದಾಖಲಾತಿಗೆ ಮುಗಿಬೀಳುತ್ತಿರುವ ಪೋಷಕರು!: ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಇಂದಿನ ದಿನಗಳಲ್ಲಿ ಈ ಕೆಪಿಎಸ್ ಶಾಲೆಗೆ ದಾಖಲಾತಿ ಪಡೆಯಲು ಪೋಷಕರು ವರ್ಷದ ಆರಂಭದಲ್ಲೇ ಮುಗಿಬೀಳುತ್ತಿರುವುದು ಇಲ್ಲಿನ ಶಿಕ್ಷಣದ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಇದಕ್ಕೆ ಅತ್ಯುತ್ತಮ ನಿದರ್ಶನವೆಂಬತೆ, ಸರ್ಕಾರವು ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ಪ್ರವೇಶಕ್ಕಾಗಿ ಕೇವಲ ೩೦ ಮಕ್ಕಳಿಗೆ ಮಾತ್ರ ಅಧಿಕೃತ ಅವಕಾಶ ಕಲ್ಪಿಸಿದೆ. ಆದರೆ ಈ ಶಾಲೆಯ ಮೇಲಿರುವ ಅಭೂತಪೂರ್ವ ನಂಬಿಕೆಯಿAದಾಗಿ ಪ್ರಸ್ತುತ ೬೦ ರಿಂದ ೭೦ ಮಕ್ಕಳು ದಾಖಲಾತಿ ಪಡೆದಿದ್ದಾರೆ.

ಕಬ್ಬಿಣದಂತಿರುವ ಗೋಡೆಗಳು, ಆದರೆ ಗಿಡಗಳ ಆಕ್ರಮಣದ ಭೀತಿ: ನೂರು ವರ್ಷಗಳಿಗಿಂತಲೂ ಹಳೆಯದಾದ ಈ ಕಟ್ಟಡವನ್ನು ಸಾಂಪ್ರದಾಯಿಕ ಗಾರೆಯನ್ನು ಬಳಸಿ ಅತ್ಯಂತ ಬಲಿಷ್ಠವಾಗಿ ನಿರ್ಮಿಸಲಾಗಿದೆ. ಇಂದಿಗೂ ಇದರ ಗೋಡೆಗಳು ಕಬ್ಬಿಣದಂತೆ ಗಟ್ಟಿಯಾಗಿದ್ದು, ಬ್ರಿಟಿಷ್ ಕಾಲದ ವಾಸ್ತುಶಿಲ್ಪದ ವೈಭವವನ್ನು ಸಾರುತ್ತಿವೆ. ಆದರೆ, ಸೂಕ್ತ ನಿರ್ವಹಣೆಯ ಕೊರತೆಯಿಂದಾಗಿ ಅಲ್ಲಲ್ಲಿ ಗೋಡೆಗಳ ಮೇಲೆ ಮತ್ತು ಮೇಲ್ಛಾವಣಿಯ ಬಿರುಕುಗಳಲ್ಲಿ ಕಾಡು ಗಿಡಗಳು ಬೆಳೆದು ನಿಂತಿವೆ. ಈ ಗಿಡಗಳ ಬೇರುಗಳು ಗೋಡೆಯ ಆಳಕ್ಕೆ ಇಳಿಯುತ್ತಿರುವುದರಿಂದ ಐತಿಹಾಸಿಕ ಕಟ್ಟಡಕ್ಕೆ ಹಾನಿಯಾಗುವ ಆತಂಕ ಎದುರಾಗಿದೆ. ಗೋಡೆಗಳ ಮೇಲಿರುವ ಈ ಗಿಡಗಳನ್ನು ತಕ್ಷಣವೇ ಕಿತ್ತುಹಾಕಿ, ಸಣ್ಣಪುಟ್ಟ ಬಿರುಕುಗಳನ್ನು ಪ್ಲಾಸ್ಟರಿಂಗ್ ಮಾಡಿದರೆ ಈ ಭವ್ಯ ಕಟ್ಟಡವು ಇನ್ನೂ ನೂರಾರು ವರ್ಷಗಳ ಕಾಲ ಯಾವುದೇ ತೊಂದರೆಯಿಲ್ಲದೆ ಸುಸ್ಥಿತಿಯಲ್ಲಿ ಬಾಳಿಕೆ ಬರಬಲ್ಲದಾಗಿದೆ.

ಸರ್ಕಾರ ಮತ್ತು ಜನಪ್ರತಿನಿಧಿಗಳ ಉದಾಸೀನತೆ: ಆದರೆ, ದುರದೃಷ್ಟವಶಾತ್ ಶಿಕ್ಷಣದ ಹೆಸರಿನಲ್ಲಿ ಮತ್ತು ಹೊಸ ಕಟ್ಟಡಗಳ ನಿರ್ಮಾಣಕ್ಕಾಗಿ ಕೋಟ್ಯಂತರ ರೂಪಾಯಿಗಳ ಹಣವನ್ನು ವೆಚ್ಚ ಮಾಡುವ ನಮ್ಮ ಸರ್ಕಾರ ಹಾಗೂ ಸಂಬAಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಇಂತಹ ಅಪರೂಪದ ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳಲು ಕನಿಷ್ಠ ಸಣ್ಣ ಪ್ರಯತ್ನವನ್ನೂ ಮಾಡುತ್ತಿಲ್ಲ. ಹೊಸ ಕಾಂಕ್ರೀಟ್ ಕಟ್ಟಡಗಳನ್ನು ನಿರ್ಮಿಸಲು ಕೋಟಿಗಟ್ಟಲೆ ಅನುದಾನ ಬಿಡುಗಡೆ ಮಾಡುವ ಇವರು, ಅತ್ಯಲ್ಪ ಹಣದಲ್ಲಿ ಇಂತಹ ಭವ್ಯ ಇತಿಹಾಸವಿರುವ ಕಟ್ಟಡವನ್ನು ದುರಸ್ತಿ ಮಾಡಿ ಸುಸ್ಥಿತಿಯಲ್ಲಿಡಲು ಮುಂದಾಗುತ್ತಿಲ್ಲ ಎಂಬ ತೀವ್ರ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಪಾರಂಪರಿಕ ಕಟ್ಟಡವಾಗಿ ಘೋಷಿಸಲು ಆಗ್ರಹ: ಇದು ಕೇವಲ ಕಲ್ಲು, ಮಣ್ಣು, ಇಟ್ಟಿಗೆ ಮತ್ತು ಗಾರೆಯಿಂದ ನಿರ್ಮಿಸಿದ ಸಾಮಾನ್ಯ ಕಟ್ಟಡವಲ್ಲ. ಇದು ಹುಳಿಯಾರಿನ ಇತಿಹಾಸ, ಸಂಸ್ಕöÈತಿ ಮತ್ತು ಶೈಕ್ಷಣಿಕ ಅಸ್ಮಿತೆಯ ಹೆಮ್ಮೆಯ ಕುರುಹು. ಇಂತಹ ಪಾರಂಪರಿಕ ಹಿನ್ನೆಲೆಯುಳ್ಳ ಕಟ್ಟಡವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಡುಗೊರೆಯಾಗಿ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆದ್ದರಿಂದ ಸರ್ಕಾರ, ಶಿಕ್ಷಣ ಇಲಾಖೆ ಹಾಗೂ ಪುರಾತತ್ವ ಇಲಾಖೆ ತಕ್ಷಣವೇ ಗಮನಹರಿಸಿ ಇದನ್ನು ‘ಪಾರಂಪರಿಕ ಶಾಲಾ ಕಟ್ಟಡ’ ಎಂದು ಘೋಷಿಸಿ, ಅಗತ್ಯವಿರುವ ಜೀರ್ಣೋದ್ಧಾರ ಕಾರ್ಯಗಳನ್ನು ತಕ್ಷಣವೇ ಕೈಗೊಳ್ಳಬೇಕಾಗಿದೆ.
ಮುಂದಿನ ತಲೆಮಾರಿಗೆ ಪ್ರೇರಣೆಯಾಗಿ ನಿಲ್ಲಿಸಿ: ನಾನು ಅಕ್ಷರ ಕಲಿತ ಹಾಗೂ ಅಕ್ಷರ ಕಲಿಸಿದ ಈ ಪವಿತ್ರ ಜ್ಞಾನದೇಗುಲ ಕೇವಲ ಇಟ್ಟಿಗೆ-ಗಾರೆಯ ಕಟ್ಟಡವಲ್ಲ, ಇದು ಹುಳಿಯಾರಿನ ಅಸ್ಮಿತೆ. ಇಂತಹ ಸಾಂಸ್ಕöÈತಿಕ ಪರಂಪರೆಯುಳ್ಳ ಶಾಲೆಯ ಗೋಡೆಗಳ ಮೇಲೆ ಗಿಡಗಳು ಬೆಳೆದು ಶಿಥಿಲಗೊಳ್ಳುತ್ತಿರುವುದನ್ನು ಕಂಡಾಗ ಮನಸ್ಸಿಗೆ ತೀವ್ರ ನೋವಾಗುತ್ತದೆ. ಹೊಸ ಕಾಂಕ್ರೀಟ್ ಗೋಡೆಗಳು ಜ್ಞಾನದ ಇತಿಹಾಸವನ್ನು ಸೃಷ್ಟಿಸಲಾರವು; ಆದರೆ ಇಂತಹ ಐತಿಹಾಸಿಕ ಪಾರಂಪರಿಕ ಕಟ್ಟಡಗಳು ಮುಂದಿನ ತಲೆಮಾರಿಗೆ ಪ್ರೇರಣೆಯಾಗಿ ನಿಲ್ಲುತ್ತವೆ. ಸರ್ಕಾರ ಮತ್ತು ಜನಪ್ರತಿನಿಧಿಗಳು ತಕ್ಷಣವೇ ಎಚ್ಚೆತ್ತುಕೊಂಡು, ಅತ್ಯಲ್ಪ ವೆಚ್ಚದಲ್ಲೇ ಸಾಧ್ಯವಿರುವ ಈ ದುರಸ್ತಿ ಕಾರ್ಯವನ್ನು ಕೈಗೊಂಡು ನಮ್ಮ ಹೆಮ್ಮೆಯ ಶಾಲೆಯನ್ನು ಸಂರಕ್ಷಿಸಬೇಕು.
ಮುಂದಿನ ಪೀಳಿಗೆಗಾಗಿ ಉಳಿಸಿಕೊಡುವುದು ಕರ್ತವ್ಯ: ನಾವು ಬಾಲ್ಯದಲ್ಲಿ ಓದಿದ, ನಮ್ಮ ಬದುಕಿಗೆ ದಾರಿ ತೋರಿದ ನಮ್ಮ ಹೆಮ್ಮೆಯ ಶಾಲೆ ಇಂದು ಈ ಸ್ಥಿತಿಗೆ ತಲುಪಿರುವುದನ್ನು ಪ್ರತಿದಿನ ಕಣ್ಣಾರೆ ನೋಡುವಾಗ ಎದೆಯುರಿಯುತ್ತದೆ. ನಿತ್ಯ ಇಲ್ಲಿಗೆ ವಾಕಿಂಗ್ ಬಂದಾಗಲೆಲ್ಲಾ ಈ ಐತಿಹಾಸಿಕ ಕಟ್ಟಡದ ಗೋಡೆಗಳ ಮೇಲೆ ಬೆಳೆದಿರುವ ಗಿಡಗಳು, ಉದುರುತ್ತಿರುವ ಗಾರೆ ನಮ್ಮ ಹೆಮ್ಮೆಯ ಇತಿಹಾಸವನ್ನೇ ನುಂಗಿಹಾಕುತ್ತಿರುವAತೆ ಭಾಸವಾಗುತ್ತದೆ. ಈ ಭವ್ಯ ಕಟ್ಟಡ ಸಂಪೂರ್ಣವಾಗಿ ಹಾಳಾಗಿ ಕೈ ಮೀರಿ ಹೋಗುವ ಮುನ್ನವೇ ಸಂಬAಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉದಾಸೀನತೆ ಬಿಟ್ಟು ಎಚ್ಚರಗೊಳ್ಳಬೇಕಿದೆ. ಇತಿಹಾಸದ ಕುರುಹಾಗಿರುವ ಈ ಶಾಲೆಯನ್ನು ಮುಂದಿನ ಪೀಳಿಗೆಗಾಗಿ ಉಳಿಸಿಕೊಡುವುದು ಅವರ ಕರ್ತವ್ಯ.
ದುರಸ್ತಿಗಾಗಿ ಇಲಾಖೆಗೆ ಪತ್ರ ಬರೆಯಲಾಗಿದೆ: ಹೌದು ಬ್ರಿಟಿಷರ ಕಾಲದಲ್ಲಿ ಕಟ್ಟಿದ ಕಟ್ಟಡ ಈಗಲೂ ಕೂಡ ಗಟ್ಟಿಮುಟ್ಟಾಗಿದೆ. ಇಂತಹ ಕಟ್ಟಾಳುಗಳನ್ನು ಉಳಿಸಿಕೊಳ್ಳುವ ಸಲುವಾಗಿ ದುರಸ್ತಿಗಾಗಿ ಅನುದಾನಕ್ಕೆ ಎಸ್ಟಿಮೆಂಟ್ ಮಾಡಿಸಿ ಕಳಿಸಿಕೊಡಲಾಗಿದೆ. ಇನ್ನು ಅಪ್ರುವಲ್ ಆಗಿಲ್ಲ. ಅಪ್ರುವಲ್ ಆದ ತಕ್ಷಣ ದುರಸ್ಧಿಕಾರ್ಯ ಆರಂಭಿಸುತ್ತೇವೆ.

(Visited 1 times, 1 visits today)
Chikkanayakanahalli DC kannada news karnataka local news ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ
Next Article ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
News Desk Benkiyabale

Related Posts

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm news

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm news

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm news
ತಾಜಾ ಸುದ್ಧಿಗಳು

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm

ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ

June 29, 2026 3:36 pm
Our Youtube Channel
Our Picks

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

By News Desk BenkiyabaleJune 30, 2026 5:00 pm

ತುಮಕೂರು: ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ…

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.