ತುಮಕೂರು: ಪೌತಿ ಖಾತಾ ಆಂದೋಲನ-೨ರ ಅಂಗವಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೋಮವಾರ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ವ್ಯಾಪ್ತಿಯ ಕೊಪ್ಪ ಹಾಗೂ ಹೊನ್ನಶೆಟ್ಟಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ, ಇ-ಪೌತಿ ಖಾತಾ ಆಂದೋಲನ, ಕಂದಾಯ ಅದಾಲತ್ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇ-ಪೌತಿ ಖಾತೆ ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಸೇವೆಗಳು ಹಾಗೂ ದಾಖಲೆಗಳನ್ನು ಪಡೆಯುವ ವಿಧಾನಗಳ ಕುರಿತು ಸಾರ್ವಜನಿಕರಿಗೆ ವಿವರವಾಗಿ ಮಾಹಿತಿ ನೀಡಿದರು.
ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮಗಳಿಗೆ ಆಗಮಿಸಿರುವ ಈ ವಿಶೇಷ ಅವಕಾಶದ ಸದುಪಯೋಗ ಪಡೆದು ಅಗತ್ಯ ದಾಖಲೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಕೊಪ್ಪ ಹಾಗೂ ಹೊನ್ನಶೆಟ್ಟಿಹಳ್ಳಿ ಗ್ರಾಮಗಳ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಸ್ವೀಕರಿಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಇ-ಪೌತಿ ಖಾತೆ, ಪಿಂಚಣಿ ಹಾಗೂ ಇತರೆ ಕಂದಾಯ ಸೇವೆಗಳಿಗೆ ಸಂಬAಧಿಸಿದ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಿ, ಜನರಿಗೆ ಸಮಯೋಚಿತ ಸೇವೆ ಒದಗಿಸುವಂತೆ ಸಂಬAಧಿಸಿದ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮ ಮಟ್ಟದಲ್ಲೇ ಕಂದಾಯ ಸೇವೆಗಳನ್ನು ಜನಸ್ನೇಹಿಯಾಗಿ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜೂನ್ ೩೦ ರಿಂದ ಆರಂಭವಾಗಲಿರುವ ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಬೂತ್ ಲೆವೆಲ್ ಅಧಿಕಾರಿಗಳು(ಬಿಎಲ್‌ಒ) ನೀಡುವ ನಮೂನೆಗಳಿಗೆ ಅನುಗುಣವಾಗಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಸಮಗ್ರ ವಿಶೇಷ ಪರಿಷ್ಕರಣೆಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ ಜಿಲ್ಲಾಧಿಕಾರಿಗಳು, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ನಿಯಮಾನುಸಾರ ಹಾಗೂ ಸಮರ್ಪಕವಾಗಿ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಲ್ಲದೆ, ಭಾನುವಾರ ನಡೆದ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪ್ರಗತಿ ಕುರಿತು ಗ್ರಾಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರೊಂದಿಗೆ ಜಿಲ್ಲಾಧಿಕಾರಿಗಳು ಚರ್ಚಿಸಿದರು. ಕಾರ್ಯಕ್ರಮದ ಹಿಂದಿನ ದಿನದ ಪ್ರಗತಿ ವಿವರಗಳನ್ನು ಪರಿಶೀಲಿಸಿ ಮಾಹಿತಿ ಪಡೆದ ಅವರು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದAತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

(Visited 1 times, 1 visits today)