ತುಮಕೂರು: ಹಸಿರು ಕ್ರಾಂತಿಯ ಹರಿಕಾರ, ರಾಷ್ಟçನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ೪೦ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರ ಸೇವೆಗಳನ್ನು ಸ್ಮರಿಸಲಾಯಿತು. ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ., ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ಸಮಾಜದ ಮುಖಂಡರು, ಅಧಿಕಾರಿಗಳು ಪುಷ್ಪಾರ್ಚನೆಯಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಹಲವಾರು ಸಮಾಜದ ಮುಖಂಡರು ಮಾತನಾಡಿ, ಡಾ. ಬಾಬು ಜಗಜೀವನ ರಾಮ್ ಅವರು ದೇಶದ ಉಪ ಪ್ರಧಾನಿಯಾಗಿ ಮಹತ್ತರ ಕೊಡುಗೆ ನೀಡಿದ ಮಹಾನ್ ನಾಯಕರು. ಸಂವಿಧಾನದ ಹಕ್ಕುಗಳಿಗಾಗಿ ಹೋರಾಡಿದವರು. ಸಮಾಜದಲ್ಲಿ ಸಮಾನತೆ, ಶಾಂತಿ ಮತ್ತು ಸಹಿಷ್ಣುತೆ ಮೌಲ್ಯಗಳನ್ನು ಪ್ರತಿಪಾದಿಸಿದ ಅವರು, ಯುವಜನತೆಗೆ ಆದರ್ಶವಾಗಿದ್ದಾರೆ ಎಂದು ಬಾಬೂಜಿ ಅವರನ್ನು ಕೊಂಡಾಡಿದರಲ್ಲದೆ, ಅವರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯವೂ ನಡೆಯಬೇಕು. ಬಾಬು ಜಗಜೀವನ ರಾಮ್ ಭವನ ನಿರ್ಮಾಣ ಮತ್ತು ಅವರ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

(Visited 1 times, 1 visits today)