BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ
  •  ಜು.೨೯ರವರೆಗೆ ಮನೆ-ಮನೆ ಭೇಟಿ
  • ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
  • ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
  • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ
  • ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ
  • ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
  • ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೇವು ಖರೀದಿಗಿಂತ ಸ್ಥಳೀಯವಾಗಿ ಮೇವು ಬೆಳೆಸಲು ಕೃಷಿ ಸಚಿವರ ಸಲಹೆ
Trending

ಮೇವು ಖರೀದಿಗಿಂತ ಸ್ಥಳೀಯವಾಗಿ ಮೇವು ಬೆಳೆಸಲು ಕೃಷಿ ಸಚಿವರ ಸಲಹೆ

By News Desk BenkiyabaleUpdated:January 12, 2019 4:14 pm

ತುಮಕೂರು

     ಜಿಲ್ಲೆಯಲ್ಲಿ ಮುಂದೆ ಉದ್ಬವಿಸಬಹುದಾದ ಮೇವಿನ ಕೊರತೆ ನೀಗಿಸಲು ಹೊರ ರಾಜ್ಯಗಳಿಂದ ಮೇವು ಖರೀದಿಸುವ ಮುನ್ನ ಜಿಲ್ಲೆಯಲ್ಲಿ ನೀರಾವರಿ ಪ್ರದೇಶಗಳಲ್ಲಿ ಮೇವಿನ ಕಿಟ್ಟು ವಿತರಿಸಿ ಸ್ಥಳೀಯವಾಗಿ ಮೇವು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ಕೃಷಿ ಸಚಿವ ಶಿವಶಂಕರ ರೆಡ್ಡಿ ನೇತೃತ್ವದ ಬರಪರಿಹಾರ ಅಧ್ಯಯನಕ್ಕೆ ಆಗಮಿಸಿದ್ದ ಸಚಿವ ಸಂಪುಟದ ಉಪಸಮಿತಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.

      ತುಮಕೂರು ಜಿಲ್ಲೆಗೆ ಇಂದು ಆಗಮಿಸಿದ್ದ ಕೃಷಿ ಸಚಿವ ಶಿವಶಂಕರರೆಡ್ಡಿ ನೇತೃತ್ವದ ಬರ ಪರಿಹಾರ ಅಧ್ಯಯನ ತಂಡ ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮೇವು ಬ್ಯಾಂಕ್ ತೆರೆಯುವ ಬಗ್ಗೆ ಅಧಿಕಾರಿಗಳ ಪ್ರಸ್ತಾಪಕ್ಕೆ ಮೇಲಿನಂತೆ ಸಲಹೆ ನೀಡಿದ ತಂಡ, ಸದ್ಯದ ಪರಿಸ್ಥಿತಿಯಲ್ಲಿ ಜಿಲ್ಲೆಯಲ್ಲಿ ಮೇವಿನ ಕೊರತೆಯಿಲ್ಲ. ಕೆಲವು ಕಡೆಗಳಲ್ಲಿ ಈಗಾಗಲೇ ನೀಡಿರುವ ಮೇವಿನ ಬೀಜಗಳಿಂದ ಕೆಲವು ರೈತರು ತಮ್ಮ ಗೋವುಗಳಿಗೆ ಆಗುವಷ್ಟು ಮೇವು ಬೆಳೆದುಕೊಂಡಿದ್ದು, ಸರ್ಕಾರದ ನಿಯಮದಂತೆ ಒಂದು ಟನ್‍ಗೆ ಇಷ್ಟು ಎಂದು ಹಣ ನೀಡಿ, ಮೇವು ಖರೀದಿಸುವ ಕೆಲಸ ಮಾಡಿದರೆ, ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ಸೂಚಿಸಿದರು.

Displaying DSC_6743.JPG

      ಕುಡಿಯುವ ನೀರಿಗೆ ಸಂಬಂಧಿಸಿದಂತೆ ಹೊಸ ಕೊಳವೆ ಬಾವಿಗಳನ್ನು ಕೊರೆಯುವ ಮುನ್ನ ಹಾಲಿ ಇರುವ ಕೊಳವೆ ಬಾವಿ ಆಳಗೊಳಿಸಿ, ನೀರೆತ್ತಲು ಸಾಧ್ಯವೇ ಎಂಬುದನ್ನು ಭೂ ವಿಜ್ಞಾನಿಗಳ ಸಲಹೆ ಪಡೆದುಕೊಳ್ಳಲು ಸೂಚಿಸಿ ಕುಡಿಯುವ ನೀರಿನ ಕೊಳವೆ ಬಾವಿಗಳಿಗೆ ತಕ್ಷಣವೇ ಪಂಪು ಮೋಟಾರು ಅಳವಡಿಸಿ ಜನರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಸಲಹೆ ನೀಡಿತು. ಅಂತರಜಲ ಬಳಕೆ ಈ ಭಾಗದಲ್ಲಿ ಹೆಚ್ಚಾಗಿರುವ ಕಾರಣ, ಅಗತ್ಯವಿದ್ದರೆ ಮಾತ್ರ ಕೊಳವೆ ಬಾವಿ ಕೊರೆಸುವಂತೆ ಸೂಚಿಸಿದರು.

Displaying DSC_6750.JPG

      ಸತತ ಬರದಿಂದ ಕೃಷಿ ಕಾರ್ಯಗಳಿಲ್ಲದೆ ಬರಿಗೈಯಲ್ಲಿರುವ ದುಡಿಯುವ ಜನರಿಗೆ ಅವರ ಮನೆ ಬಾಗಿಲ್ಲಲಿಯೇ ಕೆಲಸ ನೀಡುವ ನಿಟ್ಟಿನಲ್ಲಿ ಎನ್.ಆರ್.ಇ.ಜಿ.ಎ ಒಂದು ಉತ್ತಮ ಯೋಜನೆ, ಇದಕ್ಕೆ ಯಾವುದೇ ಭೌತಿಕ, ಆರ್ಥಿಕ ಗುರಿಯಿಲ್ಲ. ನೀವು ಕೆಲಸ ಮಾಡಿದಷ್ಟು ಹಣ ಬರುತ್ತದೆ. ವೈಯುಕ್ತಿಕ ಕೆಲಸಗಳಾದ ಶೌಚಾಲಯ ನಿರ್ಮಾಣ,ಹಣ್ಣಿನ ಗಿಡಗಳನ್ನು ಹಾಕುವುದು, ಇಂತಹ ಕೆಲಸಗಳ ಜೊತೆಗೆ ಸಮುದಾಯಕ್ಕೆ ಅನುಕೂಲವಾಗುವ ಶಾಶ್ವತ ಆಸ್ತಿ ವೃದ್ದಿಸುವ ರಸ್ತೆ, ಕೆರೆಗಳ ಹೂಳೆತ್ತುವುದು ಇಂತಹ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡುವಂತೆ, ಕನಿಷ್ಠ ಒಂದು ಗ್ರಾ.ಪಂ.ನಿಂದ 5 ಕೋಟಿ ಕಾಮಗಾರಿ ಕೈಗೊಳ್ಳುವಂತೆ ಸಿಇಓಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಸಲಹೆ ನೀಡಿದರು.
ಸಭೆಯ ನಂತರ ರೈತರೊಂದಿಗೆ ಸಂವಾದ ನಡೆಯಿತು. ಈ ವೇಳೆ ರೈತರು ಜಿಲ್ಲೆಯ ಕೆರೆಗಳಿಗೆ ನದಿ ಮೂಲದಿಂದ ನೀರು ತುಂಬಿಸುವ, ಅರಣ್ಯ ಕೃಷಿಗೆ ಒತ್ತು ನೀಡುವಂತೆ ಬರಪರಿಹಾರ ಅಧ್ಯಯನ ತಂಡಕ್ಕೆ ಮನವಿ ಮಾಡಿದರು.
ಸಭೆಯಲ್ಲಿ ಕೃಷಿ ಸಚಿವ ಶಿವಶಂಕರರೆಡ್ಡಿ, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಡಿ.ಸಿ.ತಮ್ಮಣ್ಣ, ವೆಂಕಟರಮಣಪ್ಪ, ಸಣ್ಣ ಕೈಗಾರಿಕ ಸಚಿವ ಎಸ್.ಆರ್.ಶ್ರೀನಿವಾಸ್, ಸಂಸದ ಎಸ್.ಪಿ.ಮುದ್ದಹನುಮೇಗೌಡ, ಸಂಸದ ಚಂದ್ರಪ್ಪ, ಎಂ.ಎಲ್.ಸಿ. ಬೆಮೆಲ್ ಕಾಂತರಾಜು, ಜಿಲ್ಲಾಧಿಕಾರಿ ಡಾ.ಕೆ.ರಾಕೇಶಕುಮಾರ್, ಸಿಇಓ ಅನೀಸ್ ಕಣ್ಮಣಿ ಜಾಯ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಮತ್ತಿತರರು ಉಪಸ್ಥಿತರಿದ್ದರು.

(Visited 26 times, 1 visits today)
Previous Articleದೇವರನ್ನು ನಾವು ಮಾಡುವ ಕೆಲಸದಲ್ಲಿ ಕಾಣಬಹುದು : ನ್ಯಾಯಾಧೀಶ ಕೆ.ಎಸ್ ಭರತ್ ಕುಮಾರ್
Next Article ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸಂಪುಟದ ಉಪಸಮಿತಿ ತಂಡ
News Desk Benkiyabale

Related Posts

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm news

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm news

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm news
ತಾಜಾ ಸುದ್ಧಿಗಳು

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ

July 01, 2026 5:01 pm

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm
Our Youtube Channel
Our Picks

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ

July 01, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

By News Desk BenkiyabaleJuly 01, 2026 5:13 pm

ತುಮಕೂರು : ಇಂದು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ಸ್ಲಂ ಜನಾಂದೋಲನ ಕರ್ನಾಟಕದಿಂದ ನಗರದ ಕನ್ನಡ…

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.