ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಹೋಬಳಿ ವ್ಯಾಪ್ತಿಯ ಅಂಕಸAದ್ರ ಗ್ರಾಮ ಪಂಚಾಯಿತಿಯ ಹೂವಿನಕಟ್ಟೆ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ ಅವರು ಇಂದು ಭೇಟಿ ನೀಡಿ ಶಾಲೆ ಹಾಗೂ ವಸತಿ ನಿಲಯದ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳು, ವಸತಿ ನಿಲಯದ ನಿರ್ವಹಣೆ ಹಾಗೂ ಶೈಕ್ಷಣಿಕ ವಾತಾವರಣದ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಭೇಟಿಯ ವೇಳೆ ವಸತಿ ನಿಲಯದ ಅಡುಗೆಮನೆ, ಊಟದ ವ್ಯವಸ್ಥೆ, ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆರೋಗ್ಯಕರ ವಾತಾವರಣವನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿದರು. ವಿದ್ಯಾರ್ಥಿಗಳ ಹಾಜರಾತಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಮತ್ತು ಗುಣಮಟ್ಟದ ಆಹಾರ ಒದಗಿಸುವುದರೊಂದಿಗೆ ವಸತಿ ನಿಲಯದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇರುವ ಕುರಿತು ಅಧಿಕಾರಿಗಳು ಗಮನ ಸೆಳೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಸಂಬAಧಿತ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಆಡಳಿತದೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿದರು. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಹೊಸ ಕೊಳವೆಬಾವಿ ಕೊರೆಯುವ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸುಮಾರು ೧,೬೦೦ ಅಡಿ ಆಳದವರೆಗೆ ಕೊರೆಸಿದರೂ ನೀರು ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಈ ಹಿನ್ನೆಲೆಯಲ್ಲಿ ಪರ್ಯಾಯ ವ್ಯವಸ್ಥೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಗೆ ನಿರಂತರ ಕುಡಿಯುವ ನೀರಿನ ಪೂರೈಕೆ ಖಚಿತಪಡಿಸಬೇಕೆಂದು ಜಿಲ್ಲಾಧಿಕಾರಿಯವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿರುವ ವಾಲಿಬಾಲ್ ಕ್ರೀಡಾಂಗಣ ಸೇರಿದಂತೆ ಕ್ರೀಡಾ ಸೌಲಭ್ಯಗಳನ್ನು ವೀಕ್ಷಿಸಿ ವಿದ್ಯಾರ್ಥಿಗಳ ದೈಹಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದರು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆಗಳ ಮಹತ್ವವನ್ನು ಒತ್ತಿ ಹೇಳಿದ ಅವರು, ಕ್ರೀಡಾ ಸೌಲಭ್ಯಗಳ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಸತಿ ಶಾಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)



