ಗುಬ್ಬಿ: ತಾಲೂಕು ಬಿದರೆಹಳ್ಳ ಕಾವಲ್ ನಲ್ಲಿರುವ ಹೆಚ್.ಎ.ಎಲ್‌ಗೆ ಹೆಚ್ಚುವರಿ ಭೂಮಿಗಾಗಿ ರೈತರ ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಸಾಮಾಜಿಕ ಅರಣ್ಯ, ಹುಲ್ಲುಬಂದಿ, ಗೋಮಾಳ ಜಮೀನು ಬಳಕೆ ಮಾಡುವಂತೆ ಇಂದು ಹಾಲಪ್ಪ ಪ್ರತಿಷ್ಠಾನದ ನೇತೃತ್ವದಲ್ಲಿ ಮುರುಳೀಧರ ಹಾಲಪ್ಪ ಹಾಗೂ ತುಮುಲ್ ನಿರ್ದೇಶಕರಾದ ಶ್ರೀಮತಿ ಭಾರತೀ ಶ್ರೀನಿವಾಸ್ ರವರುಗಳು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ಅಧಿಕಾರಿಗಳಿಗೆ ನೂರಾರು ರೈತರೊಂದಿಗೆ ನಿಯೋಗ ತೆರಳಿ ಮನವಿ ಸಲ್ಲಿಸಿದರು.
ಕಳೆದ ಹತ್ತು ವರ್ಷಗಳ ಹಿಂದೆ ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್ ಬಳಿ ರೈತರ ಸಾಗುವಳಿ ಭೂಮಿಯೂ ಸೇರಿದಂತೆ ಸುಮಾರು ೬೬೦ ಎಕರೆ ಪ್ರದೇಶದಲ್ಲಿ ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ಹೆಚ್.ಎ.ಎಲ್‌ನ ಬಹು ಉಪಯೋಗಿ ಹೆಲಿಕ್ಯಾಪ್ಟರ್ ನಿರ್ಮಾಣ ಘಟಕ ಆರಂಭಗೊAಡಿದ್ದು, ಇದರ ವಿಸ್ತರಣಾ ಘಟಕಕ್ಕೆ ಸುಮಾರು ೪೦೦ ಎಕರೆಗೂ ಹೆಚ್ಚು ಜಾಗಬೇಕು ಎಂದು ಸರಕಾರಕ್ಕೆ ಹೆಚ್.ಎ.ಎಲ್ ವತಿಯಿಂದ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸರಕಾರ ಕೆ.ಐ.ಎ.ಡಿ.ಬಿ. ಅವರಿಗೆ ಹೆಚ್.ಎ.ಎಲ್. ವಿಸ್ತರಣಾ ಘಟಕಕ್ಕೆ ಅಗತ್ಯವಿರುವ ಭೂಮಿ ಗುರುತಿಸಿ,ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು.
ಸರಕಾರದ ಆದೇಶದ ಮೇರೆಗೆ ಕೆ.ಐ.ಎ.ಡಿ.ಬಿ. ಅಧಿಕಾರಿಗಳು ಹಾಲಿ ಕಾರ್ಯನಿರ್ವಹಿಸುತ್ತಿರುವ ಹೆಚ್.ಎ.ಎಲ್. ಘಟಕದ ಸುತ್ತಮುತ್ತಲ ಸುಮಾರು ೪೫೭ ಎಕರೆ ಜಾಗ ಗುರುತಿಸಿ ಸರಕಾರಕ್ಕೆ ವರದಿ ಸಲ್ಲಿಸಿದ್ದು, ಇದರಲ್ಲಿ ರೈತರ ಸುಮಾರು ೧೪೬ ಎಕರೆ ಫಲವತ್ತಾದ ಭೂಮಿಯೂ ಸೇರಿದ ಹಿನ್ನೆಲೆಯಲ್ಲಿ ಭೂಮಿ ನೀಡಲು ನಿರಾಕರಿಸಿದ ರೈತರು,ಸ್ಥಳೀಯ ಶಾಸಕರಾದ ಎಸ್.ಆರ್,ಶ್ರೀನಿವಾಸ್ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳಿಗೆ ತಮ್ಮ ಫಲವತ್ತಾ ಭೂಮಿಯನ್ನು ಉಳಿಸಿಕೊಡುವಂತೆ ಮನವಿ ಮಾಡಿದ್ದರು. ರೈತರ ಮನವಿಗೆ ಸ್ಪಂದಿಸಿದ ಶಾಸಕರು, ರೈತರ ಜಮೀನನ್ನು ಕೈಬಿಡುವಂತೆ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ತಂದು,ಅಧಿಕಾರಿಗಳಿಗೆ ಲಿಖಿತ ಆದೇಶ ಮಾಡಿಸುವ ಕೆಲಸ ಮಾಡಿದ್ದರು.
ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ ಇಂದು ಕೆ.ಐ.ಎ.ಡಿ.ಬಿ ಅಧಿಕಾರಿಗಳು ರೈತರು ಹಾಗೂ ರೈತ ಮುಖಂಡರೊAದಿಗೆ ಚರ್ಚೆ ನಡೆಸಲು ಆಹ್ವಾನ ನೀಡಿದ್ದರು.ಈ ವೇಳೆ ರೈತರ ಪರವಾಗಿ ಮನವಿ ಸಲ್ಲಿಸಿ ಮಾತನಾಡಿದ ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ,ಈಗಾಗಲೇ ಈ ಭಾಗದ ರೈತರು ಮೊದಲ ಹಂತದ ಹೆಚ್.ಎ.ಎಲ್‌ಗೆ ತಮ್ಮ ಅಲ್ಪಸ್ವಲ್ಪ ಭೂಮಿಯನ್ನು ಕಳೆದುಕೊಂಡಿದ್ದಾರೆ.ಹೆಚ್.ಎ.ಎಲ್ ನೀಡಿದ ಭರವಸೆಯಂತೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗವನ್ನು ನೀಡಿಲ್ಲ.ಗುತ್ತಿಗೆ ಆಧಾರದಲ್ಲಿ ಡಿ ದರ್ಜೆ ನೌಕರಿ ನೀಡಿ ಕೈತೊಳೆದುಕೊಂಡಿದೆ.ಅದಲ್ಲದೆ ಹೆಚ್.ಎ.ಎಲ್.ವಿಸ್ತರಣಾ ಘಟಕಕ್ಕೆ ರೈತರ ಫಲವತ್ತಾದ ಭೂಮಿಯ ಬದಲಾಗಿದೆ.ಹೆಚ್.ಎ.ಎಲ್ ಘಟಕಕ್ಕೆ ಹೊಂದಿಕೊAಡAತೆಯೇ ೨೦೦೦ ಎಕರೆ ಸಾಮಾಜಿಕ ಅರಣ್ಯ ಭೂಮಿ ಇದೆ.ಅದನ್ನು ಬಳಕೆ ಮಾಡಿಕೊಳ್ಳಬಹುದು. ೆ. ಶಾಸಕರು ಸಹ ಇದೇ ಆಶಯದೊಂದಿಗೆ ರೈತರ ಪರವಾಗಿ ಮುಖ್ಯಮಂತ್ರಿಗಳೊAದಿಗೆ ಮಾತನಾಡಿ, ಆದೇಶ ಮಾಡಿಸಿದ್ದಾರೆ. ಕೆ.ಐ.ಎ.ಡಿ.ಬಿ. ಅಧಿಕಾರಿಗಳು ಇದನ್ನು ಪರಿಗಣಿಸಿ, ರೈತರ ಭೂಮಿಯನ್ನು ಭೂಸ್ವಾಧೀನದಿಂದ ಹೊರಗಿಡಬೇಕೆಂದರು.
ತುಮುಲ್ ನಿರ್ದೇಶಕ ಶ್ರೀಮತಿ ಭಾರತೀ ಶ್ರೀನಿವಾಸ್ ಮಾತನಾಡಿ, ರೈತರ ಆಶಯದಂತೆ ಈಗಾಗಲೇ ಶಾಸಕರು ಮುಖ್ಯಮಂತ್ರಿಗಳ ಬಳಿ ಮಾತನಾಡಿ, ರೈತರ ಫಲವತ್ತಾದ ಜಮೀನು ಉಳಿಸುವ ಕೆಲಸ ಮಾಡಿದ್ದಾರೆ. ಹೆಚ್.ಎ.ಎಲ್ ಘಟಕಕ್ಕೆ ಹೊಂದಿಕೊAಡAತೆಯೇ ಇರುವ ಸಾಮಾಜಿಕ ಅರಣ್ಯ ಭೂಮಿಯನ್ನು ಸರಕಾರ ಬಳಕೆ ಮಾಡಿಕೊಳ್ಳಲಿ, ಇದಕ್ಕೆ ನಮ್ಮ ಅಭ್ಯಂತರವಿಲ್ಲ. ನಾವು ಸದಾ ಕಾಲ ರೈತರ ಪರವಾಗಿ ಇರುತ್ತೇವೆ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಮುಖಂಡರಾದ ಗೋವಿಂದೇಗೌಡ, ರೈತ ಸಂಘದ ರಾಚಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)