ಹುಳಿಯಾರು: ಸ್ಥಳೀಯ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ತಹಸೀಲ್ದಾರ್ ಮಮತಾ ಎಂ. ಅವರ ಅಧ್ಯಕ್ಷತೆಯಲ್ಲಿ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ವೀಕ್ಷಿಸಿದ ತಹಸೀಲ್ದಾರರು, ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿ (ಬಿಎಲ್‌ಒ) ಹಾಗೂ ಮತಗಟ್ಟೆ ಏಜೆಂಟರೊAದಿಗೆ ಸುದೀರ್ಘ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡರು.
ಸಮಸ್ಯೆಗಳ ಕುರಿತು ಚರ್ಚೆ: ಎಲ್ಲಾ ವಾರ್ಡ್ಗಳಲ್ಲಿ ಕಂಡುಬರುವ ವಿಶೇಷ ಪ್ರಕರಣಗಳಾದ ಸ್ಥಳಾಂತರಗೊAಡವರು, ಮೃತರಾದವರು, ಇತರೆಡೆ ನೋಂದಣಿ ಮಾಡಿಸಿಕೊಂಡವರು ಹಾಗೂ ಅಲಭ್ಯರಿರುವ ಮತದಾರರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ತಹಸೀಲ್ದಾರರು, ಸಾರ್ವಜನಿಕರಿಂದ ಏನಾದರೂ ಆಕ್ಷೇಪಣೆ ಅಥವಾ ತಕರಾರು ಬಂದಿದೆಯೇ ಎಂದು ವಿಚಾರಿಸಿದರು.
ಸಾರ್ವಜನಿಕರಿಗೆ ಮನವಿ: ಸಭೆಯ ನಂತರ ಮಾತನಾಡಿದ ತಹಸೀಲ್ದಾರ್ ಮಮತಾ, “ಅರ್ಹ ಯಾವುದೇ ನಾಗರಿಕ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬುದು ನಮ್ಮ ಆಶಯ. ಬಿಎಲ್‌ಒಗಳು ಮನೆ ಮನೆಗೆ ತೆರಳಿ ನಮೂನೆ (ಫಾರ್ಮ್) ಫಾರಂಗಳನ್ನು ವಿತರಿಸುವ ಕಾರ್ಯ ಬಹುತೇಕ ಮುಕ್ತಾಯವಾಗಿದೆ. ಆದರೆ, ಕೆಲ ಮತದಾರರು ಅರ್ಜಿಗಳನ್ನು ಭರ್ತಿ ಮಾಡಿ ಹಿಂತಿರುಗಿಸಲು ವಿಳಂಬ ಮಾಡುತ್ತಿದ್ದಾರೆ. ಆಗಸ್ಟ್ ೮ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಸಾರ್ವಜನಿಕರು ಕೊನೆಯ ದಿನದವರೆಗೆ ಕಾಯದೆ ತಕ್ಷಣವೇ ಅರ್ಜಿಗಳನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ಬಿಎಲ್‌ಒಗಳಿಗೆ ತಲುಪಿಸಬೇಕು” ಎಂದು ಮನವಿ ಮಾಡಿದರು.
ಡಿಜಿಟಲೀಕರಣ: ಇದುವರೆಗೆ ೯,೧೫ ಮತದಾರರ ಮಾಹಿತಿಯನ್ನು ಡಿಜಿಟಲ್ ತಂತ್ರಾAಶಕ್ಕೆ ಅಪ್‌ಲೋಡ್ ಮಾಡಲಾಗಿದ್ದು, ಇನ್ನು ೨,೦೧೬ ಮತದಾರರ ಡಿಜಿಟಲೀಕರಣ ಬಾಕಿ ಇದೆ. ಪ್ರಸ್ತುತ ಈ ಕಾರ್ಯದಲ್ಲಿ ಶೇ. ೮೩.೧೦ ರಷ್ಟು ಪ್ರಗತಿ ಸಾಧಿಸಲಾಗಿದೆ.
ಸಭೆಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಂಜುನಾಥ್, ಕಂದಾಯಾಧಿಕಾರಿ ಶೃತಿ, ಪಟ್ಟಣ ಪಂಚಾಯಿತಿ ಸದಸ್ಯರು, ಬಿಎಲ್‌ಒಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟರು ಉಪಸ್ಥಿತರಿದ್ದರು.

(Visited 1 times, 1 visits today)