BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ
  • ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ
  • ಕೊರಟಗೆರೆಯಲ್ಲಿ ನೂತನ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನೆ
  • ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ
  • ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸೂಚನೆ
  • ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
  • ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜಕೀಯ ದೊಂಬರಾಟ ನಿಲ್ಲಿಸಿ : ಬರ ಪರಿಹಾರ ಕೈಗೊಳ್ಳಿ
ತುಮಕೂರು ಜಿಲ್ಲಾ ಸುದ್ಧಿಗಳು

ರಾಜಕೀಯ ದೊಂಬರಾಟ ನಿಲ್ಲಿಸಿ : ಬರ ಪರಿಹಾರ ಕೈಗೊಳ್ಳಿ

By News Desk BenkiyabaleUpdated:January 16, 2019 5:41 pm

 ತುಮಕೂರು:

      ರಾಜ್ಯದ 156 ತಾಲ್ಲೂಕುಗಳು ಬರದಲ್ಲಿ ನರಳುತ್ತಿದ್ದರೆ, ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ದೊಂಬರಾಟವಾಡುತ್ತಿದ್ದು, ರೈತರ ಸ್ಥಿತಿ ಗಂಭೀರವಾಗಿದ್ದರು, ರೆಸಾರ್ಟ್ ರಾಜಕಾರಣ ಮಾಡುತ್ತಿರುವ ಶಾಸಕರುಗಳನ್ನು ಜನರೇ ಕ್ಷೇತ್ರ ಬಿಟ್ಟು ಓಡಿಸುತ್ತಾರೆ ಎಂದು ರಾಜ್ಯ ರೈತಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ತಿಳಿಸಿದ್ದಾರೆ.

      ನಗರದ ಕನ್ನಡಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರದಿಂದ ತತ್ತರಿಸಿರುವ ರೈತರಿಗೆ ಸೂಕ್ತ ಪರಿಹಾರ ದೊರೆಯುತ್ತಿಲ್ಲ, ಪರಿಹಾರವನ್ನು ದೊರಕಿಸಿಕೊಡಬೇಕಾದ ಶಾಸಕರುಗಳು ಜವಾಬ್ದಾರಿ ಇಲ್ಲದೆ ರೆಸಾರ್ಟ್‍ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ರೈತರ ಸಂಕಷ್ಟದ ಅರಿವಿಲ್ಲದ ಜನಪ್ರತಿನಿಧಿಗಳಿಗೆ ಜನರ ಬಗ್ಗೆ ಕಳಕಳಿ ಇಲ್ಲದಂತಾಗಿದೆ ಎಂದು ತಿಳಿಸಿದರು.

      ರಾಜ್ಯದಲ್ಲಿ ಬರ ಅಧ್ಯಯನ ನಡೆಸಿದ ಬಿಜೆಪಿ ಮಾಡಿದ್ದು ಕೇವಲ ರಾಜಕೀಯ ಗಿಮಿಕ್ ಅಷ್ಟೇ, ಬರ ಅಧ್ಯಯನದ ನಾಟಕವಾಡಿದರೆ ಹೊರತು ಕೇಂದ್ರದಿಂದ ನಯಾಪೈಸೆ ಅನುದಾನವನ್ನು ಪರಿಹಾರಕ್ಕಾಗಿ ಬಿಡುಗಡೆ ಮಾಡಿಸಲಿಲ್ಲ, ಮತಗಳಿಕೆಗಾಗಿ ಬರ ಅಧ್ಯಯನವನ್ನು ಮಾಡಿದರೆ ಹೊರತು ನಿಜವಾದ ರೈತ ಪರ ಕಳಕಳಿಯಿಲ್ಲ, ಬರದಿಂದ ಜನರು ಗುಳೇ ಹೋಗುತ್ತಿದ್ದಾರೆ, ಮೈವಿಲ್ಲದೇ, ನೀರಿಲ್ಲದೆ ರೈತರು ಹತಾಶರಾಗಿದ್ದಾರೆ, ಈ ಬಗ್ಗೆ ಯಾವುದೇ ಪಕ್ಷಗಳು ಚಿಂತಿಸುತ್ತಿಲ್ಲ ಎಂದರು.

Displaying DSC_7364.JPG

      ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ದಕ್ಷ ಆಡಳಿತವನ್ನು ನೀಡುವಲ್ಲಿ ಅಸಮರ್ಥವಾಗಿದೆ ಹಾಗೆಯೇ ವಿರೋಧ ಪಕ್ಷವಾಗಿಯೂ ಬಿಜೆಪಿ ಸೋತಿದೆ. ಈ ರಾಜಕೀಯ ದೊಂಬರಾಟವನ್ನು ಬಿಟ್ಟು ರೈತ ಸಮುದಾಯದ ಬಗ್ಗೆ ಗಮನಹರಿಸಬೇಕಾದ ಅನಿವಾರ್ಯತೆ ಇದೆ, ಹಳ್ಳಿಗಳತ್ತ ಜನಪ್ರತಿನಿಧಿಗಳು ಇಂತಹ ಸ್ಥಿತಿಯಲ್ಲಿಯೂ ನೋಡದೇ ಇದ್ದರೆ ಹಳ್ಳಿಗಾಡಿನ ಜನರು ನಗರಗಳತ್ತ ಗುಳೇ ಹೊರಡುತ್ತಾರೆ ಎಂದು ಎಚ್ಚರಿಕೆ ನೀಡಿದರು.

      ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಡಗಲಹಳ್ಳಿ ನಾಗೇಂದ್ರ ಮಾತನಾಡಿ, ಹಳ್ಳಿಗಾಡಿನ ಸಂಸ್ಕøತಿಯನ್ನು ಬಿಂಬಿಸುವ ಸಂಕ್ರಾಂತಿಯನ್ನು ಶಾಸಕರು ರೆಸಾರ್ಟ್‍ನಲ್ಲಿ ಆಚರಿಸುತ್ತಿರುವುದು ಅಸಹ್ಯವನ್ನುಟ್ಟಿಸುವ ಸಂಗತಿಯಾಗಿದೆ. ರಾಜ್ಯದಲ್ಲಿ ಬರದ ನೋವು, ಕೊಡಗು ಅತಿವೃಷ್ಠಿ, ರೈತರ ಆತ್ಮಹತ್ಯೆ ನಡುವೆ ಮೋಜಿನ ಸಂಕ್ರಾಂತಿ ಮಾಡುತ್ತಿರುವವರ ಅಸಂಸ್ಕøತಿಯನ್ನು ತೋರುತ್ತದೆ, ಇದು ಪ್ರಜಾ ಪ್ರಭುತ್ವದ ಅಣಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಫ್ಯಾಸಿಸ್ಟ್ ಕೇಂದ್ರ ಸರ್ಕಾರ ಸಂವಿಧಾನ ಉಳಿಸುತ್ತಿಲ್ಲ ಎನ್ನುವುದಕ್ಕೆ ಕನ್ಹಯ್ಯಕುಮಾರ್ ಮೇಲೆ ಮೂರು ವರ್ಷಗಳ ನಂತರ ಪ್ರಕರಣ ದಾಖಲಿಸಿರುವುದನ್ನು ನೋಡಿದರೆ ತಿಳಿಯುತ್ತದೆ. ನ್ಯಾಯಾಲಯವೇ ನಕಲಿ ವಿಡಿಯೋ ಎಂದು ತೀರ್ಪು ನೀಡಿದ್ದರು, ಹೋರಾಟಗಾರರನ್ನು ಹತ್ತಿಕ್ಕುವ ಉದ್ದೇಶದಿಂದ, ಹೋರಾಟಗಾರರ ಮೇಲೆ ದೇಶದ್ರೋಹಿ ಪಟ್ಟವನ್ನು ಕಟ್ಟಿ, ಮತ ಪಡೆಯುವ ಗಿಮಿಕ್‍ಗಾಗಿ ಕನ್ಹಯ್ಯ ಮೇಲೆ ಇಂದು ಪ್ರಕರಣ ದಾಖಲಿಸಲಾಗಿದ್ದು, ಇದರಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ ಎನ್ನುವುದನ್ನು ಕೇಂದ್ರ ಸರ್ಕಾರ  ಅರಿತುಕೊಳ್ಳಬೇಕಾಗಿದೆ ಎಂದರು.

Displaying DSC_7369.JPG

 

      ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಜಿಲ್ಲೆಯ 10 ತಾಲ್ಲೂಕುಗಳು ಬರಪೀಡಿತ ತಾಲ್ಲೂಕುಗಳಾಗಿದ್ದು, ನೀರು, ಮೇವಿನ ಸಮಸ್ಯೆ ನೀಗಿಸಲು ಜಿಲ್ಲಾಡಳಿತ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ. ತುಮಕೂರು-ಶಿವಮೊಗ್ಗ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಭೂಮಿ ಕಳೆದುಕೊಂಡವರಿಗೆ ವೈಜ್ಞಾನಿಕವಾಗಿ ಸೂಕ್ತ ಬೆಲೆ ನಿಗದಿಪಡಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದ್ದು, ರೈತರು ನಾಲ್ಕೈದು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಸಂಸದರು, ಸಚಿವರು ರೈತರೊಂದಿಗೆ ಚರ್ಚಿಸಿ ಸೂಕ್ತ ಬೆಲೆ ನಿಗದಿ ಪಡಿಸದೇ ಇದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದರು.

      ಜಲಾಶಯದಲ್ಲಿ ಸಾಕಷ್ಟು ನೀರಿದ್ದರು, ಜಿಲ್ಲೆಗೆ ಹೇಮಾವತಿ ನೀರು ಹರಿಸದೇ ಇರುವ ಕಾರಣ ಜಿಲ್ಲೆಯ ಕೆರೆಗಳಲ್ಲಿ ನೀರಿಲ್ಲ, ನಾಲೆಗಳಲ್ಲಿ ಹೂಳು ತುಂಬಿದ್ದು, ನಾಲೆಗಳನ್ನು ಅಗಲೀಕರಣಗೊಳಿಸಬೇಕು ಎಂದು ಒತ್ತಾಯಿಸಿದ ಅವರು, 69 ಕಿಮೀಯಿಂದ ನಿರ್ಮಿಸಲು ಉದ್ದೇಶಿಸಿರುವ ಎಕ್ಸ್‍ಪ್ರೆಸ್ ಲೈನ್ ಯೋಜನೆಯನ್ನು ಕೈಬಿಡಬೇಕು, ಬಿಕ್ಕೆಗುಡ್ಡ, ಹಾಗಲವಾಡಿ ಕುಡಿಯುವ ನೀರಿನ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

      ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ ಮಾತನಾಡಿ ಡಿಸಿಸಿ ಬ್ಯಾಂಕ್ ಮೂಲಕ ರೈತರಿಗೆ ಸಾಲ ವಿತರಣೆ ಮಾಡುವಾಗ ಶೇ.10 ರಷ್ಟು ಷೇರು ಮೊತ್ತವನ್ನು ಠೇವಣಿಯಾಗಿಟ್ಟುಕೊಂಡಿದ್ದು, ಷೇರು ಮೊತ್ತವನ್ನು ರೈತರಿಗೆ ವಾಪಾಸ್ ನೀಡಬೇಕು ಎಂದು ಒತ್ತಾಯಿಸಿದರು. ತೆಂಗು ಮರಗಳು ಕೆಂಪುಮೂತಿ ರೋಗದಿಂದ ಒಣಗುತ್ತಿದ್ದು, ತೆಂಗಿನ ಮರಗಳು ಒಣಗದಂತೆ ನೂವಾನ್ ಔಷಧಿಯನ್ನು ತೋಟಗಾರಿಕೆ ಪೂರೈಸಬೇಕು ಎಂದರು.
ಸಭೆಯಲ್ಲಿ ವಿವಿಧ ತಾಲ್ಲೂಕುಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

 

(Visited 33 times, 1 visits today)
Previous Articleಪರಮೇಶ್ವರ ಕರೆದಾಗ ಹೋಗಬೇಕು : ಹೆಚ್.ಡಿ. ದೇವೇಗೌಡ
Next Article ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್‌ವೈ
News Desk Benkiyabale

Related Posts

ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ

September 15, 2026 6:20 pm news

ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ

September 15, 2026 6:18 pm news

ಕೊರಟಗೆರೆಯಲ್ಲಿ ನೂತನ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನೆ

September 15, 2026 6:16 pm news
ತಾಜಾ ಸುದ್ಧಿಗಳು
news

ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ

September 15, 2026 6:20 pm
news

ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ

September 15, 2026 6:18 pm
news

ಕೊರಟಗೆರೆಯಲ್ಲಿ ನೂತನ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನೆ

September 15, 2026 6:16 pm
news

ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

September 15, 2026 6:14 pm
news

ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸೂಚನೆ

September 15, 2026 6:13 pm
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm
Our Youtube Channel
Our Picks

ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ

September 15, 2026 6:20 pm

ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ

September 15, 2026 6:18 pm

ಕೊರಟಗೆರೆಯಲ್ಲಿ ನೂತನ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನೆ

September 15, 2026 6:16 pm

ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

September 15, 2026 6:14 pm

ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸೂಚನೆ

September 15, 2026 6:13 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ

By News Desk BenkiyabaleSeptember 15, 2026 6:20 pm

ತುಮಕೂರು: ಮಳೆ ಕೊರತೆ, ತೀವ್ರ ಬರ, ರಣ ಬಿಸಿಲು ಹಾಗೂ ಬೆಲೆ ಏರಿಕೆ ನಡುವೆಯೂ ಗೌರಿ-ಗಣೇಶ ಹಬ್ಬವನ್ನು ಕಲ್ವತರುನಾಡಿನಲ್ಲಿ ಅತ್ಯಂತ…

ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ

September 15, 2026 6:18 pm

ಕೊರಟಗೆರೆಯಲ್ಲಿ ನೂತನ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನೆ

September 15, 2026 6:16 pm

ನಿವೇಶನ ಹಂಚಿಕೆ ಪ್ರಕ್ರಿಯೆ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

September 15, 2026 6:14 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.