ತುಮಕೂರು: ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹೊರಡಿಸಿರುವ ಆದೇಶವನ್ನು ದೃಢೀಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಸರ್ಕಾರಿ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದಿಂದ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಮರುಗೇಶ್, ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು ೪.೫ ಲಕ್ಷ ಹೊರಗುತ್ತಿಗೆ ನೌಕರರು ಸಂಕಷ್ಟದಲ್ಲಿದ್ದಾರೆ.ಏರುತ್ತಿರುವ ಜೀವನ ಮಟ್ಟ, ಅಗತ್ಯ ವಸ್ತುಗಳ ಬೆಲೆ ಮತ್ತು ಪ್ರಸ್ತುತ ಜೀವನ ವೆಚ್ಚವನ್ನು ಪರಿಗಣಿಸಿ ಕನಿಷ್ಠ ವೇತನವನ್ನು ಸಮರ್ಪಕವಾಗಿ ಪರಿಷ್ಕರಿಸುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಕನಿಷ್ಠ ವೇತನ ಪರಿಷ್ಕರಣೆಗೆ ಸಂಬAಧಿಸಿದAತೆ ಹೊರಡಿಸಲಾಗಿರುವ ಆದೇಶದ ಅಧಿಸೂಚನೆಯಲ್ಲಿ ವಿವಿಧ ವರ್ಗಗಳ ನೌಕರರಿಗೆ ಪರಿಷ್ಕೃತ ವೇತನ ದರಗಳನ್ನು ನಿಗದಿಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಹೊರಗುತ್ತಿಗೆ ನೌಕರರ ಹಿತದೃಷ್ಟಿಯಿಂದ ಪ್ರಸ್ತಾವಿತ ಆದೇಶವನ್ನು ಇನ್ನಷ್ಟು ವಿಳಂಬ ಮಾಡದೆ ಅಂತಿಮವಾಗಿ ದೃಢೀಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿ, ಅದರಂತೆ ಕನಿಷ್ಠ ವೇತನವನ್ನು ಕಡ್ಡಾಯವಾಗಿ ¥ರಿಗಣಿಸುವಂತೆ ಸಂಬAಧಪಟ್ಟ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಕನಿಷ್ಠ ವೇತನ ಪರಿಷ್ಕರಣೆ ಅಧಿಸೂಚನೆಯನ್ನು ತಕ್ಷಣ ದೃಢೀಕರಿಸಿ ಪರಿಷ್ಕೃತ ಕನಿಷ್ಠ ವೇತನವನ್ನು ಎಲ್ಲಾ ಅರ್ಹ ಹೊರಗುತ್ತಿಗೆ ನೌಕರರಿಗೆ ಕಡ್ಡಾಯವಾಗಿ ಜಾರಿಗೊಳಿಸಬೇಕು. ಸರ್ಕಾರದ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೂ ಅನ್ವಯ ಆಗುವಂತೆ ಸ್ಪಷ್ಟ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ನಿಗಧಿಪಡಿಸಿದ ಕನಿಷ್ಠ ವೇತನಕ್ಕಿಂತ ಕಡಿಮೆ ವೇತನ ಪಾವತಿಸುವ ಗುತ್ತಿಗೆದಾರರು/ಸಂಸ್ಥೆಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಮೇಲ್ವಿಚಾರಣಾ ವ್ಯವಸ್ಥೆ ಜಾರಿಗೊಳಿಸಬೇಕು. ಪರಿಷ್ಕೃತ ವೇತನ ಜಾರಿಗೆ ಬಂದ ನಂತರ ಬಾಕಿ ಉಳಿದಿರುವ ವೇತನ ವ್ಯತ್ಯಾಸವನ್ನು ಅರ್ಹ ನೌಕರರಿಗೆ ಪಾವತಿಸುವ ಕುರಿತು ಸ್ಪಷ್ಟ ನಿರ್ದೇಶನ ನೀಡಬೇಕು. ಕನಿಷ್ಠ ವೇತನದ ಜೊತೆಗೆ ಕಾನೂನು ಬದ್ಧವಾಗಿ ಅನ್ವಯಿಸುವ ಇತರೆ ಸೌಲಭ್ಯಗಳು ಮತ್ತು ಭತ್ಯೆಗಳನ್ನು ಸಹ ನೌಕರರಿಗೆ ಸಮರ್ಪಕವಾಗಿ ನೀಡುವಂತೆ ಖಚಿತಪಡಿಸಬೇಕು ಎಂದು ಡಮರುಗೇಶ್ ಒತ್ತಾಯ ಮಾಡಿದರು. ಈ ಕುರಿತು ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳನ್ನು ನೇಮಿಸಿ, ಕನಿಷ್ಠ ವೇತನ ಜಾರಿಯಾಗುತ್ತಿರುವ ಬಗ್ಗೆ ನಿಯಮಿತ ಪರಿಶೀಲನೆ ನಡೆಸಬೇಕು. ನೌಕರರ ಶ್ರಮಕ್ಕೆ ನ್ಯಾಯಯುತ ಪ್ರತಿಫಲ ದೊರೆಯುವುದು ಸಾಮಾಜಿಕ ನ್ಯಾಯದ ಪ್ರಮುಖ ಅಂಶವಾಗಿದೆ. ನೌಕರರ ಹಿತ ಕಾಪಾಡುವ ನಿಟ್ಟಿನಲ್ಲಿ ಮನವಿಯನ್ನು ತುರ್ತಾಗಿ ಪರಿಗಣಿಸಿ ನ್ಯಾಯಯುತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಸಂಘದ ಜಿಲ್ಲಾಧ್ಯಕ್ಷ ಹರ್ಷ, ಕಾರ್ಯಾಧ್ಯಕ್ಷ ನಂಜರೆಡ್ಡಿ, ರಾಜ್ಯ ಸಮಿತಿ ಸದಸ್ಯರಾದ ಮಹೇಶ್ವರ, ಹರೀಶ್, ಭವ್ಯಶ್ರೀ ಮೊದಲಾದವರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

(Visited 1 times, 1 visits today)