ತುಮಕೂರು: ವಾಲ್ಮೀಕಿ ಸಮಾಜದ ನಾಯಕರು, ಸಮುದಾಯದ ಧ್ವನಿಯಾಗಿ ಗುರುತಿಸಿಕೊಂಡಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ನಾಯಕರು ನಡೆಸಿರುವ ತಂತ್ರಗಳಿಗೆ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ಮಣಿಯಬಾರದು, ಬಿ.ನಾಗೇಂದ್ರ ಅವರನ್ನು ಮಂತ್ರಿಯಾಗಿ ಮುಂದುವರೆಸಬೇಕು ಎಂದು ರಾಷ್ಟಿçÃಯ ಬುಡಕಟ್ಟು ಬೇಡರ ಪಡೆಯ ಅಧ್ಯಕ್ಷ ಮಾರಣ್ಣ ಪಾಳೇಗಾರ್ ಒತ್ತಾಯಿಸಿದರು.
ಬುಧವಾರ ನಗರದಲ್ಲಿ ಪತ್ರಿಕಾ ಗೋಷ್ಠೀಯಲ್ಲಿ ಮಾತನಾಡಿದ ಅವರು, ಬಿ. ನಾಗೇಂದ್ರ ಅವರೊಂದಿಗೆ ವಾಲ್ಮೀಕಿ ಸಮಾಜ ಸದಾ ಬೆಂಬಲವಾಗಿ ನಿಲ್ಲಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬAಧಿಸಿದ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಬಿ.ನಾಗೇಂದ್ರ ಅವರಿಗೆ ಪ್ರಕರಣದಲ್ಲಿ ಯಾವುದೇ ಸಂಬAಧವಿಲ್ಲ ಎಂಬ ಅಂಶ ತನಿಖಾ ಪ್ರಕ್ರಿಯೆಯಲ್ಲಿ ಉಲ್ಲೇಖವಾಗಿದೆ. ಈ ಹಿನ್ನೆಲೆಯಲ್ಲಿ, ಯಾವುದೇ ಅಂತಿಮ ಅಧಿಕೃತ ನಿರ್ಣಯ ಅಥವಾ ನ್ಯಾಯಾಂಗ ತೀರ್ಪು ಹೊರಬರುವ ಮುನ್ನ ವ್ಯಕ್ತಿಯ ಘನತೆ ಹಾಗೂ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಆರೋಪಗಳು ಅಥವಾ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಸೂಕ್ತವಲ್ಲ ಎಂದು ಹೇಳಿದರು.
ಈ ಬೆಳವಣಿಗೆಯ ನಡುವೆ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಜನಾರ್ದನರೆಡ್ಡಿ ಅವರು ರಾಜಕೀಯವಾಗಿ ಎತ್ತಿಕಟ್ಟಿ, ಒಂದೇ ಸಮುದಾಯದ ನಾಯಕರ ನಡುವೆ ಹಾಗೂ ಸಮಾಜದೊಳಗೆ ಭಿನ್ನಾಭಿಪ್ರಾಯ ಮೂಡಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಒಂದೇ ಸಮಾಜದ ನಾಯಕರನ್ನು ಪರಸ್ಪರ ಎದುರು ನಿಲ್ಲಿಸುವ ಯಾವುದೇ ರಾಜಕೀಯ ಪ್ರಯತ್ನ ಸಮಾಜದ ಒಗ್ಗಟ್ಟಿಗೆ ಧಕ್ಕೆ ತರಬಾರದು ಎಂದರು.
ವಾಲ್ಮೀಕಿ ಸಮಾಜದ ನಾಯಕರು ಹಾಗೂ ಮುಖಂಡರ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸುವ ಬದಲು, ಸಮುದಾಯದ ಹಿತಾಸಕ್ತಿ, ಯುವಜನರ ಭವಿಷ್ಯ ಮತ್ತು ಸಾಮಾಜಿಕ ನ್ಯಾಯದ ವಿಚಾರಗಳಿಗೆ ಆದ್ಯತೆ ನೀಡಬೇಕು. ವೈಯಕ್ತಿಕ ಅಥವಾ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ, ಸಮುದಾಯದ ಹಿತಕ್ಕಾಗಿ ಎಲ್ಲ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ. ಬಿ. ನಾಗೇಂದ್ರ ಅವರು ವಾಲ್ಮೀಕಿ ಸಮಾಜದ ಯುವ ನಾಯಕನಾಗಿ ಸಮುದಾಯದ ಹಿತಾಸಕ್ತಿ, ಯುವಜನರ ಆಶಯಗಳು ಹಾಗೂ ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂಬುದು ಸಮಾಜದ ಆಶಯವಾಗಿದೆ. ಶಿಕ್ಷಣ, ಉದ್ಯೋಗ, ಯುವಕರಿಗೆ ಉತ್ತಮ ಅವಕಾಶಗಳು, ಸಾಮಾಜಿಕ ನ್ಯಾಯ ಮತ್ತು ಸಮುದಾಯದ ಅಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರು ಇನ್ನಷ್ಟು ಬಲವಾಗಿ ಕೆಲಸ ಮಾಡಬೇಕು ಎಂಬ ನಿರೀಕ್ಷೆ ಸಮಾಜದಲ್ಲಿದೆ ಎಂದು ಮಾರಣ್ಣ ಪಾಳೇಗಾರ್ ಹೇಳಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಮುಖಂಡರು, ಯುವಕರು ಹಾಗೂ ಸಮುದಾಯದ ಸದಸ್ಯರು ಯಾವುದೇ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಬಿ.ನಾಗೇಂದ್ರ ಅವರಿಗೆ ನೈತಿಕ ಬೆಂಬಲ ನೀಡುವುದರ ಜೊತೆಗೆ, ಸಮಾಜದ ಹಿತಕ್ಕಾಗಿ ಇನ್ನಷ್ಟು ಜವಾಬ್ದಾರಿಯುತ ಹಾಗೂ ಪರಿಣಾಮಕಾರಿ ನಾಯಕತ್ವವನ್ನು ಅವರಿಂದ ನಿರೀಕ್ಷಿಸಬೇಕು. ವ್ಯಕ್ತಿಗಿಂತ ಸಮಾಜದ ಹಿತ ದೊಡ್ಡದು ಎಂದು ತಿಳಿಸಿದರು.
ವಾಲ್ಮೀಕಿ ಸಮಾಜದ ಮುಖಂಡರಾದ ಮರಳೂರು ನಾಗರಾಜ್, ಭಾನುಪ್ರಕಾಶ್, ಎ.ಆರ್.ಶಿವಪ್ರಸಾದ್ ಹಾಜರಿದ್ದರು.
(Visited 1 times, 1 visits today)





