ತುಮಕೂರು: ಸರ್ಕಾರದ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯುವ ಮಿಷನ್ ಯೋಜನೆಯು ಯುವಜನರಲ್ಲಿ ಶಿಸ್ತು, ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಹಾಗೂ ಸಂಘಟನಾ ಕೌಶಲ್ಯಗಳನ್ನು ಬೆಳೆಸುವ ಉದ್ದೇಶ ಹೊಂದಿದ್ದು, ಈ ಯೋಜನೆಯಡಿ ನೋಂದಾಯಿಸಿಕೊAಡಿರುವ ಶಿರಾ ತಾಲೂಕು ಬೇವಿನಹಳ್ಳಿ ಗ್ರಾಮದ ಚಿದಾನಂದ ಹಾಗೂ ಗುಬ್ಬಿ ತಾಲೂಕು ಇರಕಸಂದ್ರ ಗ್ರಾಮದ ಸಂತೋಷ್ ಅವರಿಗೆ ನೋಂದಣಿ ದೃಢೀಕರಣ ಪತ್ರವನ್ನು ಉಪ ಮುಖ್ಯಮಂತ್ರಿ ಹಾಗೂ ಕಂದಾಯ, ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಸಚಿವ ಡಾ: ಜಿ. ಪರಮೇಶ್ವರ ಅವರು ಬುಧವಾರ ಸಾಂಕೇತಿಕವಾಗಿ ವಿತರಿಸಿದರು.
ಃಎಙSನಲ್ಲಿ ನೋಂದಾಯಿಸಿಕೊAಡಿರುವ ಯುವಕರನ್ನು ಅಭಿನಂದಿಸಿ ಮಾತನಾಡಿದ ಅವರು, ಯುವಕರಲ್ಲಿ ನಾಯಕತ್ವ ಗುಣ, ಸಂಘಟನಾ ಸಾಮರ್ಥ್ಯ ಹಾಗೂ ಸಾಮಾಜಿಕ ಕಳಕಳಿಯನ್ನು ಬೆಳೆಸುವ ಮೂಲಕ ಸಮಾಜದ ಅಭಿವೃದ್ಧಿಯಲ್ಲಿ ಅವರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಮಿಷನ್‌ನ ಪ್ರಮುಖ ಉದ್ದೇಶವಾಗಿದ್ದು. ಈ ಹಿನ್ನೆಲೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊAಡು ಯೋಜನೆಯ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಕೆ.ಪಿ. ಸಂಜೀವಪ್ಪ ಹಾಗೂ ಈಶ್ವರಪ್ಪ, ತುಮಕೂರು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷಿö್ಮÃನಾರಾಯಣ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಡಿಸಿಎಂಯಿAದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

(Visited 1 times, 1 visits today)