ಪಾವಗಡ: ತಾಲ್ಲೂಕಿನ ಪಳವಳ್ಳಿ ಗ್ರಾಮದ ಆಟೋ ಚಾಲಕ ಚಂದ್ರಶೇಖರ್ ರವರ ಅನುಮಾನಾಸ್ಪದ ಸಾವಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೊಂದು ಪೂರ್ವಯೋಜಿತ ಕೊಲೆ ಎಂದು ಆರೋಪಿಸಿರುವ ಗ್ರಾಮಸ್ಥರು ಹಾಗೂ ಮೃತನ ಕುಟುಂಬಸ್ಥರು, ತಪ್ಪಿತಸ್ಥರನ್ನು ಬಂಧಿಸುವAತೆ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು.
ಚಂದ್ರಶೇಖರ್ ಹಾಗೂ ಅದೇ ಗ್ರಾಮದ ಬೊಮ್ಮಲಾಟ ಮೂರ್ತಿ, ಮಧು ಮತ್ತು ಹರೀಶ್ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು. ಇದೇ ವೈಷಮ್ಯದಿಂದ ಆರೋಪಿಗಳು ಸಂಜೆ ವೇಳೆಗೆ ಚಂದ್ರಶೇಖರ್ ಅವರನ್ನು ಮನೆಯಿಂದ ಕರೆದುಕೊಂಡು ಹೋಗಿ, ಸಪ್ಪಲಮ್ಮ ದೇವಸ್ಥಾನದ ಬಳಿ ಮನಬಂದAತೆ ಥಳಿಸಿದ್ದಾರೆ. ನಂತರ ಪ್ರಕರಣದಿಂದ ತಪ್ಪಿಸಿಕೊಳ್ಳಲು ಅಪಘಾತದ ನಾಟಕವಾಡಿದ್ದಾರೆ ಎಂದು ಮೃತನ ಪತ್ನಿ ಶಿಲ್ಪಾ ಪೊಲೀಸರ ಎದುರು ಕಣ್ಣೀರಿಡುವ ಮೂಲಕ ದೂರು ಕೊಟ್ಟಿದ್ದಾರೆ
ಕಳೆದ ೨೦ ದಿನಗಳ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಂದ್ರಶೇಖರ್ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿದ್ದ ಒಬ್ಬನೇ ಮಗನನ್ನು ಕಳೆದುಕೊಂಡಿದ್ದೇವೆ. ೨ ವರ್ಷದ ಮಗಳು ಹಾಗೂ ೨ ತಿಂಗಳ ಹಸುಗೂಸಿಗೆ ಈಗ ತಂದೆಯಿಲ್ಲದAತಾಗಿದೆ ಎಂದು ಮೃತನ ತಂದೆ-ತಾಯಿ ಗೋಳಾಡಿದ್ದು ಪ್ರತಿಯೊಬ್ಬರ ಕಣ್ಣಂಚಲ್ಲಿ ನೀರು ತರಿಸುವಂತಿತ್ತು.
ಪೋಲೀಸ್ ವೃತ್ತ ನಿರೀಕ್ಷಕರಾದ ಸುರೇಶ್ ರವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟ ಚಂದ್ರಶೇಖರ್ ಅವರ ಪತ್ನಿ ಶಿಲ್ಪಾ ನೀಡಿರುವ ದೂರಿನ ಆಧಾರದ ಮೇಲೆ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ವರದಿಯಲ್ಲಿ ಇದು ಕೊಲೆ ಎಂದು ದೃಢಪಟ್ಟರೆ, ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಂಡು ಸೂಕ್ತ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು
ಪೊಲೀಸ್ ವೃತ್ತ ನಿರೀಕ್ಷಕರ ಭರವಸೆಯ ಮೇರೆಗೆ ಮೃತನ ಕುಟುಂಬಸ್ಥರು ಹಾಗೂ ಪಳವಳ್ಳಿ ಗ್ರಾಮಸ್ಥರು ತಮ್ಮ ಪ್ರತಿಭಟನೆಯನ್ನು ಹಿಂಪಡೆದುಕೊAಡರು.

(Visited 1 times, 1 visits today)