ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ಶುಕ್ರವಾರ ಚಿಕ್ಕನಾಯಕನಹಳ್ಳಿ ತಾಲೂಕಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ತಾಲ್ಲೂಕಿನ ಕಂದಿಕೆರೆ ಗ್ರಾಮ ಪಂಚಾಯಿತಿ ಸಾಧಾರಹಳ್ಳಿ ವ್ಯಾಪ್ತಿಯಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ ಯೋಜನೆಯಡಿ ಕೈಗೊಂಡಿರುವ ಸಮಗ್ರ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮೀಣ ಕೂಲಿಕಾರರ ಸಂಘದ ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದು, ಕಾರ್ಮಿಕರಿಗೆ ಕಾಮಗಾರಿ ಸ್ಥಳದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಿಳಿಸಿದ ಅವರು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಕೂಲಿಕಾರರ ಸಂಘವನ್ನು ಪ್ರೋತ್ಸಾಹಿಸಬೇಕು ಮತ್ತು ಕೂಲಿಕಾರರಿಗೆ ಅಗತ್ಯ ಮಾಹಿತಿ ನೀಡಿ ಯೋಜನೆಯಡಿ ಕೆಲಸ ಕೊಡಬೇಕು ಎಂದರು. ಇದೇ ವೇಳೆ ಯೋಜನೆಗೆ ಸಂಬAಧಿಸಿದ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ಪರಿಶೀಲನೆ ನಡೆಸಿ ಮಕ್ಕಳಿಗೆ ಕಲಿಯಲು ಉತ್ತಮ ವಾತಾವರಣ ನಿರ್ಮಿಸಬೇಕು. ಶಾಲೆಗೆ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಅಗತ್ಯವಿರುವ ಕಡೆ ಹೆಚ್ಚುವರಿ ಶಾಲಾ ಕೊಠಡಿಗಳನ್ನು ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ನಗರದಲ್ಲಿರುವ ಪಿಎಂ ಶ್ರೀ ಶಾಲೆ, ಸರ್ಕಾರಿ ಪ್ರೌಢಶಾಲೆ, ಪದವಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು.
ಬೋರನ ಕಣಿವೆ ಶುದ್ಧೀಕರಣ ಕಾಮಗಾರಿ ಸ್ಥಳಕ್ಕೆ ಭೇಟಿ: ಬೋರನಕಣಿವೆ ಹಿನ್ನೀರಿನ ಪ್ರದೇಶದಲ್ಲಿ ಪ್ರಗತಿ ಹಂತದಲ್ಲಿರುವ ಕಾಮಗಾರಿ ಪರಿಶೀಲಿಸಿದ ಅವರು, “ಬಹು ಗ್ರಾಮಗಳ ಕುಡಿಯುವ ನೀರಿನ ಶುದ್ಧೀಕರಣ” ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ, ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ/ಸಿಬ್ಬಂದಿ ಇದ್ದರು.
(Visited 1 times, 1 visits today)



