BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ
  • ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ
  • ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ
  • ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ
  • ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ
  • ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ
  • ರೌಡಿಶೀಟರ್ ಮಲ್ಲ ಭೀಕರ ಹತ್ಯೆ
  • ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿದ್ದಗಂಗಾ ಶ್ರೀಗಳಲ್ಲದೆ ಭಕ್ತ ವೃಂದ ಬಡವಾಗಿದೆ-ಜೋತಿಗಣೇಶ್
ತುಮಕೂರು ಜಿಲ್ಲಾ ಸುದ್ಧಿಗಳು

ಸಿದ್ದಗಂಗಾ ಶ್ರೀಗಳಲ್ಲದೆ ಭಕ್ತ ವೃಂದ ಬಡವಾಗಿದೆ-ಜೋತಿಗಣೇಶ್

By News Desk BenkiyabaleUpdated:January 30, 2019 4:58 pm

ತುಮಕೂರು:

      ಕಾಯಕ, ದಾಸೋಹ ಎನ್ನುವ ಬಸವಣ್ಣನವರ ತತ್ವವನ್ನು ಅಕ್ಷರಷಃ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅಧುನಿಕ ಬಸವಣ್ಣನಂತೆ ಬದುಕಿದ ಡಾ.ಶ್ರೀಶಿವಕುಮಾರಸ್ವಾಮೀಜಿ ಅವರನ್ನು ಕಳೆದುಕೊಂಡಿರುವ ಭಕ್ತವೃಂದ ಬಡವಾಗಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದ್ದಾರೆ.

      ನಗರದ ಎಸ್.ಐ.ಟಿ. ಬಡಾವಣೆಯ ಶ್ರೀಸಿದ್ದೇಶ್ವರ್ ಕನ್ವೆಷನ್ ಹಾಲ್‍ನಲ್ಲಿ 26ನೇ ವಾರ್ಡಿನ ನಾಗರಿಕರು ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿಗಳಿಗೆ ಆಯೋಜಿಸಿದ್ದ ನುಡಿನಮನ ಹಾಗೂ ಗುರುವಂದನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,1941ರಲ್ಲಿ ಮಠದ ಪೀಠಾಧ್ಯಕ್ಷರಾಗಿ ನೇಮಕಗೊಂಡ ದಿನದಿಂದಲೂ ಮಠದಲ್ಲಿ ಕಲಿಯುತ್ತಿ ರುವ ಮಕ್ಕಳು,ಮಠಕ್ಕೆ ಬರುವ ಭಕ್ತರ ಯೋಗಕ್ಷೇಮಕ್ಕಾಗಿಯೇ ತನ್ನ ಇಡೀ ಜೀವನವನ್ನು ಮುಡಿಪಾಗಿಟ್ಟ ಡಾ.ಶ್ರೀಶಿವಕು ಮಾರಸ್ವಾಮೀಜಿ ಅವರು,ತಮ್ಮ ತ್ರಿವಿಧ ದಾಸೋಹ ಎಂಬ ತತ್ವದ ಮೂಲಕ ಬಡವರು, ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡಲು ನಿರಂತರ ಶ್ರಮಿಸಿದವರು ಎಂದರು.

       ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದ ಜಾನಪದ ವಿದ್ವಾಂಸ ಹಾಗೂ ಉಪನಾಸ್ಯಕ ಹೆಚ್.ವಿ.ವೀರಭದ್ರಯ್ಯ ಮಾತನಾಡಿ,ಚಿಕ್ಕವಯಸ್ಸಿನಿಂದ ಶತಾಯುಷಿಯವರೆಗೆ ಅವರು ರೂಢಿಸಿಕೊಂಡು ಬಂದಿದ್ದ ಶಿಸ್ತು ಬದ್ದ ಜೀವನ ಶೈಲಿ,ಒಂದು ಕಾಲಕ್ಕೆ ಮಕ್ಕಳಿಗೆ ಅನ್ನ ಹಾಕಲು ಕಷ್ಟ ಪಡುತ್ತಿದ್ದ ಮಠ,ಇಂದು 10 ಸಾವಿರಕ್ಕೂ ಹೆಚ್ಚು ಮಕ್ಕಳ ಜೊತೆಗೆ,ಭಕ್ತಾಧಿಗಳಿಗೆ ನಿತ್ಯ ದಾಸೋಹ ನೀಡುವಷ್ಟು ಶಕ್ತವಾಗಲು ಕಾರಣ.ಅಟವಿ ಶ್ರೀಗಳು ಹಚ್ಚಿದ ಒಲೆ ನೂರಾರು ವರ್ಷಗಳ ನಂತರವೂ ಆರಿಲ್ಲ.ಭೌತಿಕವಾಗಿ ಶ್ರೀಗಳು ನಮ್ಮನ್ನು ಅಗಲಿದ್ದರೂ,ಮಾನಸಿಕವಾಗಿ ಅವರು ನಮ್ಮೊಂದಿ ಗೆ ಇದ್ದಾರೆ ಎಂಬುದಕ್ಕೆ ಅವರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ಲಕ್ಷಾಂತರ ಭಕ್ತರೇ ಸಾಕ್ಷಿ.ಮಠವನ್ನು ಮುನ್ನೆಡೆ ಸುವ ಶಕ್ತಿ ಶ್ರೀಸಿದ್ದಲಿಂಗಸ್ವಾಮೀಜಿ ಅವರಿಗೆ ಇದೆ ಎಂದರು.

Displaying _DSC0461.JPG

      ಹಿರಿಯ ಪ್ರವಾಚಕ ಟಿ.ಮುರುಳಿಕೃಷ್ಣ ಮಾತನಾಡಿ,ಜಾತ್ಯಾತೀತೆಯನ್ನು ಮೈಗೂಡಿಸಿಕೊಂಡಿದ್ದ ಶ್ರೀಗಳು,ತ್ರಿವಿಧ ದಾಸೋಹದ ಮೂಲಕ ಇಡೀ ಜಗತ್ತಿನ ಕಣ್ಣು ತೆರೆಸಿದವರು.ಇಂತಹವರಿಗೆ ಭಾರತ ರತ್ನ ಒಂದು ಸಾಟಿಯೇ ಎಂದು ಪ್ರಶ್ನಿಸಿದ ಅವರು, ಶ್ರೀಮಠದ ಉತ್ತಾರಾಧಿಕಾರಿಯಾಗಿ ನೇಮಕಗೊಂಡ ನಂತರ,ಪೂರ್ವಾಶ್ರಮದ ತಂದೆ,ತಾಯಿಗಳ ಆಶ್ರಯವನ್ನು ಬದಿಗಿರಿಸಿ, ಲೋಕಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಂಡವರು ಶ್ರೀಸಿದ್ದಗಂಗಾ ಶ್ರೀಗಳು ಎಂದು ನುಡಿದರು.

      ವಿಧಾನಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಮಾತನಾಡಿ,ಧರ್ಮದ ನಿಜ ಅರ್ಥ ತಿಳಿದು ಅದರಂತೆ ನಡೆದ ಡಾ.ಶ್ರೀಶಿವಕುಮಾರಸ್ವಾಮೀಜಿ ಅವರನ್ನು ಕಳೆದುಕೊಂಡಿರುವ ಭಕ್ತರಲ್ಲಿ ಶೂನ್ಯ ಭಾವ ಅವರಿಸಿದೆ.ಶಿಕ್ಷಣದ ಮೂಲಕ ಸಮಾಜದಲ್ಲಿ ಸಮಾನತೆಯನ್ನು ತರಲು ಹಗಲಿರುಳು ಶ್ರಮಿಸಿದವರು ಶ್ರೀಗಳು ಎಂದರು.

Displaying _DSC0490.JPG

      ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಹಿರೇಮಠದ ಡಾ.ಶ್ರೀಶಿವಾನಂದ ಶಿವಾಚಾರ್ಯಸ್ವಾಮೀಜಿ ಮಾತನಾಡಿ,12ನೇ ಶತಮಾನದ ನಂತರ ಬಸವಣ್ಣನವರ ಐಕ್ಯದೊಂದಿಗೆ ಮೆರೆಯಾಗಿದ್ದ ದಾಸೋಹ ಎಂಬ ಪದಕ್ಕೆ ಚಾಲನೆ ಬಂದಿದ್ದು, ಸಿದ್ದಗಂಗಾ ಶ್ರೀಗಳಿಂದ.ಅವರ ದಾರಿಯಲ್ಲಿ ನಡೆಯುವುದೇ ನಾವು ಸಿದ್ದಗಂಗಾ ಶ್ರೀಗಳಿಗೆ ಸಲ್ಲಿಸುವ ಗೌರವ.ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಜಾತಿ, ಭೇಧವಿಲ್ಲದೆ, ಮುಸ್ಲಿಂರೂ ಸೇರಿದಂತೆ ಎಲ್ಲರೂ ಸಹ ಬಂದ ಭಕ್ತರಿಗೆ ದಾಸೋಹ ನೀಡುವ ಮೂಲಕ, ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಲಿಂಗೈಕ್ಯರಾದರೂ ಭಕ್ತರ ಹೃದಯದಲ್ಲಿ ನೆಲೆಸಿದ್ದಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.ಇಂದು ಮಠವನ್ನು ಮುನ್ನೆಡೆಸುತ್ತಿರುವ ಶ್ರೀಸಿದ್ದಲಿಂಗಸ್ವಾಮೀಜಿ ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ.ಅವರ ಮನೋಬಲವನ್ನು ಹೆಚ್ಚಿಸುವ ಕೆಲಸವನ್ನು ತುಮಕೂರಿನ ಸದ್ಬಕ್ತರು ಮಾಡಬೇಕಿದೆ ಎಂದರು.

      ಕಾರ್ಯಕ್ರಮದಲ್ಲಿ 26ನೇ ವಾರ್ಡಿನ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ್, 15ನೇ ವಾರ್ಡಿನ ಪಾಲಿಕೆ ಸದಸ್ಯೆ ಗಿರಿಜಾ ಧನಿಯಕುಮಾರ್,ಪ್ರೊ.ಡಿ.ಚಂದ್ರಪ್ಪ, ಕೊಪ್ಪಲ್ ನಾಗರಾಜು,ಸುಜಾತ ಚಂದ್ರಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. 26ನೇ ವಾರ್ಡಿನ ಮಹಿಳಾ ಭಕ್ತರಿಂದ ವಚನ ಗಾಯನ ನಡೆಯಿತು.

(Visited 16 times, 1 visits today)
Previous Articleಶಿವಕುಮಾರಶ್ರೀಗೆ ಭಾರತ ರತ್ನ ನೀಡಲಿ: ಮುರುಳೀಧರ ಹಾಲಪ್ಪ
Next Article ಬುದ್ಧನ ಕಾರುಣ್ಯ, ಬಸವಣ್ಣನ ಸಮಾನತೆ ತತ್ವವನ್ನು ಪಾಲಿಸಿದ ಶ್ರೀಗಳು ವಿಶ್ವರತ್ನಕ್ಕೆ ಸಮಾನ
News Desk Benkiyabale

Related Posts

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm news

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm news

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm news
ತಾಜಾ ಸುದ್ಧಿಗಳು
news

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm
news

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm
news

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm
news

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm
news

ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ

July 27, 2026 5:07 pm
news

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ

July 27, 2026 5:06 pm
Our Youtube Channel
Our Picks

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm

ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ

July 27, 2026 5:07 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

By News Desk BenkiyabaleJuly 27, 2026 5:14 pm

ತುಮಕೂರು: ಎಐಸಿಸಿಯ ಅಧ್ಯಕ್ಷರಾದ ಮಲ್ಲಿಕಾರ್ಜನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನಿರ್ದೇಶನದಂತೆ ಕಾಂಗ್ರೆಸ್ ಪಕ್ಷದ…

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.