BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
  • ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ
  • ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ
  • ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ
  • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ
  • ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
  • ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್
  • ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಮಷ್ಟಿ ಶಿಕ್ಷಣಕ್ಕೆ ಸಾಮಾಜಿಕ ಜಾಲತಾಣಗಳು ಹೊಸ ಭರವಸೆಯಂತೆ ಒದಗಿ ಬಂದಿವೆ
ತುಮಕೂರು ಜಿಲ್ಲಾ ಸುದ್ಧಿಗಳು

ಸಮಷ್ಟಿ ಶಿಕ್ಷಣಕ್ಕೆ ಸಾಮಾಜಿಕ ಜಾಲತಾಣಗಳು ಹೊಸ ಭರವಸೆಯಂತೆ ಒದಗಿ ಬಂದಿವೆ

By News Desk BenkiyabaleUpdated:January 31, 2019 4:51 pm

ತುರುವೇಕೆರೆ :

      ‘ಧರ್ಮ ಮತ್ತು ರಾಜಕಾರಣಗಳು ಪರಸ್ಪರ ಕೈಜೋಡಿಸಿ ಉಂಟು ಮಾಡುತ್ತಿರುವ ಸಮಕಾಲೀನ ಭಾರತದ ತಲ್ಲಣ ಮತ್ತು ಸಂಘರ್ಷಮಯ ಸನ್ನಿವೇಶ ಕವಿ, ಕಲಾವಿದ ಮತ್ತು ಚಿಂತಕನಿಗೆ ತೀವ್ರ ಸ್ವರೂಪದ ಬೆದರಿಕೆ ಹಾಗು ಆತಂಕ ಸೃಷ್ಟಿಸಿದೆ. ಕವಿಯಾದವನು ಇದನ್ನು ಸವಾಲಾಗಿ ಸ್ವೀಕರಿಸಿ ಮಹತ್ವಕಾಂಕ್ಷೆಯಿಂದ ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕಿದೆ’ ಎಂದು ಸಾಹಿತಿ ಕೆ.ಪಿ.ನಟರಾಟ್ ಯುವ ಕವಿಗಳಿಗೆ ಕಿವಿ ಮಾತು ಹೇಳಿದರು.

      ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದದಲ್ಲಿ ಜರುಗಿದ ನಾಲ್ಕನೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ತಾಳಕೆರೆಸುಬ್ರಹ್ಮಣ್ಯಂ ವೇದಿಕೆಯಲ್ಲಿ ಎರಡನಢ ದಿನ ನಡೆದ ನನ್ನ ಕವಿತೆ ನನ್ನದು ಎಂಬ ಕವಿ ಗೋಷ್ಟಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

      ಫೇಸ್ ಬುಕ್‍ನಂತಹ ಡಿಜಿಟಲ್ ಸ್ವರೂಪದ ಸಾಮಾಜಿಕ ಜಾಲ ತಾಣಗಳ ಮಾದ್ಯಮಗಳು ಬರೆಯುವ, ಚಿಂತಿಸುವ ಅನುಸಂಧಾನ ಮಾಡುವ ಜ್ಞಾನ ವಿನಿಮಯದ ಅನಂತ ಸಾದ್ಯತೆಗಳನ್ನು ನಮ್ಮೆದುರಿಟ್ಟಿದ್ದು ಮುದ್ರಣ ಮತು ದೃಶ್ಯ ಮಾದ್ಯಮಗಳ ಪಟ್ಟಭದ್ರ ಚಿಂತನೆಯ ಕೇಂದ್ರಗಳಿಂದ ದೂರ ಉಳಿದು ಸ್ವತಂತ್ರ ಚಿಂತನೆಯನ್ನು ಕಟ್ಟಬಲ್ಲ ಪ್ರಜಾತಾಂತ್ರಿಕ ವೇದಿಕೆಯನ್ನು ಕಲ್ಪಿಸಿದೆ. ಇದು ನಮ್ಮ ಸಂವಿಧಾನವು ಎತ್ತಿ ಹಿಡಿದಿರುವ ವ್ಯಕ್ತಿ ಸ್ವಾತಂತ್ರ್ಯದ ಅನನ್ಯತೆ.

      ದೇಶದಲ್ಲಿ ಸಮಷ್ಟಿ ಶಿಕ್ಷಣಕ್ಕೆ ಸಾಮಾಜಿಕ ಜಾಲತಾಣಗಳು ಹೊಸ ಭರವಸೆಯಂತೆ ಒದಗಿ ಬಂದಿವೆ. ಇದನ್ನು ಕವಿ, ಚಿಂತಕ ಅರಿಯಬೇಕಿದೆ. ಕಲಾವಿದನೊಬ್ಬ ಹೇಗೆ ಪ್ರಭುತ್ವದ ವಿರುದ್ದ ಹೇಗೆ ಬಂಡೇಳಬಲ್ಲ ಮತ್ತು ಪ್ರಭುತ್ವವನ್ನು ಪ್ರಶ್ನಿಸಬಲ್ಲ ಎಂಬುದಕ್ಕೆ ಉದಾಹರಣೆಯಾಗಿ 16ನೆ ಶತಮಾನದ ಲಕ್ಷ್ಮೀಷನ ಪದ್ಯವೊಂದನ್ನು ಅವಲೋಕಿಸಿದಾಗ “ಲಕ್ಷ್ಮಣ ತನ್ನ ಅಣ್ಣ ರಾಮನ ಅಣತಿಯಂತೆ ಸೀತೆಯನ್ನು ಕಾಡಿಗಟ್ಟುವ ಸನ್ನಿವೇಶವನ್ನು ಕವಿ ವರ್ಣಿಸುತ್ತಾ ಲಕ್ಷ್ಮಣ ಅತಿ ಜರೂರಾಗಿ ರಥವನ್ನು ಅಂಧಕಾರದ ದಿಕ್ಕಿಗೆ ವಾಯು ವೇಗದಲ್ಲಿ ಚಲಿಸಿದ”. ಹೀಗೆ
ಸೀತೆಗೆ ರಾಮಪರಿತ್ಯಾಗದ ಸಂಗತಿ ತಿಳಿದಿರಕ್ಕಿಲ್ಲ. ಆದರೆ ಅಯೋದ್ಯೆಯ ಜನಕ್ಕೆ ಈ ವಿಚಾರ ಗೊತ್ತಿತ್ತೆಂದು ಕವಿ ಬಹಳ ಸೂಚ್ಯವಾಗಿ ಸೀತೆಯ ಸಂತಾಪದ ಬಗ್ಗೆ ತಳಮಳಗೊಂಡು ಕುದಿಯುತ್ತಾನೆ ಎಂದು ಅಭಿಪ್ರಾಯಪಟ್ಟರು.

      ಇಲ್ಲಿ ರಾಮನ ಈ ಕೃತ್ಯ ಅಥವಾ ರಾಮ ಎಂಬ ಪ್ರಭುತ್ವದ ವಿರುದ್ದ ಲಕ್ಷ್ಮೀಷನ ಪ್ರತಿಭಟನೆಯು ಕಾವ್ಯದಲ್ಲಿ ದ್ವನಿತ ದಾಖಲೆಯಾಗಿದೆ. ಇಂತಹ ಪ್ರತಿಭಟನೆಗಳು ವರ್ತಮಾನದ ತಲ್ಲಣಗಳ ನಡುವೆ ಬರೆಯುತ್ತಿರುವ ಕವಿ ಧ್ಯಾನಸ್ಥಿತಿಯಲ್ಲಿ ಗ್ರಹಿಸಿ ಕಾವ್ಯಕ್ಕಿಳಿಸಬೇಕು ಎಂದು ವಿಶ್ಷೇಷಿಸಿದರು.

      ಸತ್ಯ ಮತ್ತು ನ್ಯಾಯ ವಿತರಣೆಯಲ್ಲಿ ಜಾತಿ, ಮತ ಲಿಂಗ ಪಂಥ ರಾಷ್ಟ್ರೀಯತೆಗಳಂತಹ ಸ್ವಾಪಿತ ಪೂರ್ವಾಗ್ರಹಗಳು ಅಡ್ಡಬರಬಾರದು ಹಾಗೇನಾದರು ಆದಲ್ಲಿ ಆತ ಕಲಿತ ವಿದ್ಯೆ ವ್ಯರ್ಥ ಜೊತೆಗೆ ಆತ ಸುಶಿಕ್ಷತ ಪ್ರಜೆಯಾಗಿರಲು ಸಾದ್ಯವಿಲ್ಲ. ಇವನು ಮನುಕುಲಕ್ಕೆ ಹೊರೆ ಎನ್ನುವ ಆಪ್ರಿಕನ್ ಚಿಂತಕನ ಮಾತು ನಮ್ಮ ದೇಶದ ಮನಸ್ಥಿತಿಯನ್ನು ಸರಿಯಾಗಿ ಹೇಳುತ್ತದೆ. ಕವಿ ಇದನ್ನು ಮೀರಿ ಬರೆದಾಗ ಆತನ ಕಾವ್ಯ ಆದರ್ಶವಾಗಬಲ್ಲದು ಎಂದು ಅಭಿಪ್ರಾಯಪಟ್ಟರು.

      ‘ಇದೇ ವೇಳೆ ಯುವ ಕವಿಗಳಾದ ತ್ರಿಶೂಲಮೂರ್ತಿ, ಅನಿಲ್‍ಕುಮಾರ್ ಮಾಳೋದೆ, ವಿರೂಪಾಕ,್ಷ ಪಾಂಡುರಂಗಯ್ಯ ಎ.ಹೊಸಹಳ್ಳಿ, ಗಂಗಾಧರ್ ಅಮ್ಮಸಂದ್ರ, ಬಾಣಸಂದ್ರ ರವಿ, ರೂಪಕಲ್ಕೆರೆ ಸೇರಿದಂತೆ ಹಲವು ಕವಿಗಳು ತಮ್ಮ ಕವಿತೆ ವಾಚನ ಮಾಡಿದರು.

       ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷ ಹುಲಿಕಲ್‍ನಟರಾಜ್, ಶಾಸಕ ಮಸಾಲೆಜಯರಾಮ್ ಇದ್ದರು. ಕವಿ ಗೋಷ್ಟಿಯಲ್ಲಿ ಬೋರಪ್ಪ ಸ್ವಾಗತಿಸಿ, ಶ್ರೀನಿವಾಸ್ ನಿರೂಪಿಸಿ, ರಾಜಶೇಖರ್ ವಂದಿಸಿದರು.

(Visited 45 times, 1 visits today)
Previous Articleಬುದ್ಧನ ಕಾರುಣ್ಯ, ಬಸವಣ್ಣನ ಸಮಾನತೆ ತತ್ವವನ್ನು ಪಾಲಿಸಿದ ಶ್ರೀಗಳು ವಿಶ್ವರತ್ನಕ್ಕೆ ಸಮಾನ
Next Article ಅಹಂಕಾರವನ್ನು ನಿರಾಕರಿಸುವವನೇ ನಿಜಶರಣ – ಶಾಸಕ ಜಿ.ಬಿ ಜ್ಯೋತಿಗಣೇಶ್
News Desk Benkiyabale

Related Posts

ಹುಳಿಯಾರು ಬಂದ್‌ಗೆ ಕರೆ ಕೊಡಲು ನಿರ್ಧಾರ

October 18, 2025 1:53 pm ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

October 17, 2025 12:04 pm ತುಮಕೂರು

ತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ

October 16, 2025 1:03 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm
ಇತರೆ ಸುದ್ಧಿಗಳು

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm
ಇತರೆ ಸುದ್ಧಿಗಳು

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm
ಇತರೆ ಸುದ್ಧಿಗಳು

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm
ಇತರೆ ಸುದ್ಧಿಗಳು

ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ

October 27, 2025 1:23 pm
ಇತರೆ ಸುದ್ಧಿಗಳು

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

October 24, 2025 1:30 pm
Our Youtube Channel
Our Picks

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm

ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ

October 27, 2025 1:23 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

By News Desk BenkiyabaleOctober 29, 2025 2:01 pm

ತುರುವೇಕೆರೆ: ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದರು. ಪಟ್ಟಣದ ಎಪಿಎಂಸಿ…

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.