BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇನ್ನರ್ ವಿಲ್ ಸಂಸ್ಥೆ ಸಮಾಜದಲ್ಲಿ ಪರಸ್ಪರ ಸೇವಾ ಸಹಕಾರ ನೀಡುತ್ತಿದೆ: ಭವಾನಿ ಜಯರಾಮ್
  • ಹಿರಿಯ ನಾಗರೀಕರಿಗಾಗಿ ವಯಾ ವಿಕಾಸ್ ಸಂಸ್ಥೆ ಪ್ರಾರಂಭ
  • ಎಸ್‌ಎಸ್‌ಐಟಿಐಯಲ್ಲಿ ನೇಮಕಾತಿ ಡ್ರೆöÊವ್: ೬೯ವಿದ್ಯಾರ್ಥಿಗಳು ಆಯ್ಕೆ
  • ಇಸಿ-೨೦ ಹೆದ್ದಾರಿ ಕಾಮಗಾರಿಗೆ ಶೀಘ್ರ ಪರಿಹಾರ: ಸಂಸದ
  • ಜು.೦೮ ರಿಂದ ಪ್ರಿಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ
  • ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಗಮಕ ಕಲೆ ಪರಿಚಯ ಅತ್ಯಗತ್ಯ: ಚಿಕ್ಕಬೆಳ್ಳಾವಿ ಶಿವಕುಮಾರ್ ಹೇಳಿಕೆ
  • ಸಚಿವರಿಂದ ಮೇಲ್ಸೇತುವೆಗಳಿಗೆ ಶಂಕುಸ್ಥಾಪನೆ
  • ಸಿದ್ಧಾರ್ಥ ರೇಡಿಯೋ ಕೇಂದ್ರಕ್ಕೆ ಬೆಂಗಳೂರಿನ ಸೇಂಟ್ ಪೌಲ್ಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಭೇಟಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ನೀಡಲು ಆಗ್ರಹಿಸಿ ಸಿಐಟಿಯು ಪ್ರತಿಭಟನೆ
ತುಮಕೂರು ಜಿಲ್ಲಾ ಸುದ್ಧಿಗಳು

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ನೀಡಲು ಆಗ್ರಹಿಸಿ ಸಿಐಟಿಯು ಪ್ರತಿಭಟನೆ

By News Desk BenkiyabaleUpdated:February 20, 2019 5:09 pm

ತುಮಕೂರು:

      ಅಸಂಘಟಿತ ಕಾರ್ಮಿಕರಾದ ಮನೆಗೆಲಸಗಾರರು, ಹಮಾಲಿಗಳು, ಮೆಕ್ಯಾನಿಕ್‍ಗಳು, ಕ್ಷೌರಿಕರು, ಚಿಂದಿ ಆಯುವವರು, ಬೀದಿಬದಿ ವ್ಯಾಪಾರಿಗಳು, ಟೈಲರ್‍ಗಳು, ಚಿನ್ನಬೆಳ್ಳಿ ಕೆಲಸಗಾರರು ಪುರಿಭಟ್ಟಿ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಅಸಂಘಟಿತ ಕಾರ್ಮಿಕರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು.

      ತುಮಕೂರು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ವೃತ್ತದಲ್ಲಿ ಸಮಾವೇಶಗೊಂಡ ಅಸಂಘಟಿತ ವಲಯದ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿ ಕಾರ್ಮಿಕ ಅಧಿಕಾರಿಗಳ ಮೂಲಕ ಸಚಿವ ವೆಂಕಟರಮಣಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

      ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ರಾಜ್ಯ ಸರ್ಕಾರವು ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿಯಡಿ ಅರ್ಜಿಗಳು ಸಲ್ಲಿಸಿ ಆರು ತಿಂಗಳುಗಳು ಕಳೆದಿದ್ದರೂ ಇದುವರೆಗೂ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಿಲ್ಲ. ಇದರಿಂದ ಕಾರ್ಮಿಕರಿಗೆ ಗೊಂದಲ ಉಂಟಾಗಿದೆ. ಕೂಡಲೇ ಸ್ಮಾರ್ಟ್‍ಕಾರ್ಡ್‍ಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

      ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಭಾಗವಾಗಿ ಉಚಿತ ಚಿಕಿತ್ಸಾ ಸೌಲಭ್ಯ, ಮಕ್ಕಳ ಶಿಕ್ಷಣಕ್ಕೆ ಸಹಾಯ, ಸ್ವಯಂ ಉದ್ಯೋಗಿಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯಗಳಿಗೆ ಯೋಜನೆಯನ್ನು ರೂಪಿಸಬೇಕು ಎಂದರು.
ಹಮಾಲಿ ಕಾರ್ಮಿಕ ಸಂಘಟನೆಯ ಮುಖಂಡ ಗಂಗಾಧರ್ ಮಾತನಾಡಿ, ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ಸಂಬಂಧ ಸರ್ಕಾರ ಜಾಗವನ್ನು ಗುರುತಿಸಿದ್ದು ಸರಿಯಷ್ಟೇ. ಅವರಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

      ಮನೆಗೆಲಸಗಾರರ ಸಂಘದ ಮುಖಂಡರಾದ ಮಂಜುಳ ಮಾತನಾಡಿ ಅಸಂಘಟಿತ ವಲಯದ ಎಲ್ಲಾ ಕಾರ್ಮಿಕರಿಗೆ ಸಾಮೂಹಿಕ ಉಚಿತ ವಸತಿ ಯೋಜನೆಯನ್ನು ರೂಪಿಸಬೇಕು. ಸೇವಾಭದ್ರತೆ ಮತ್ತು ಸಾಮಾಜಿಕ ಭದ್ರತೆಯನ್ನು ನೀಡಬೇಕು. ಒಂಟಿ ಮಹಿಳೆಯರು, ವಿಧವೆಯರು ಕುಟುಂಬ ಜವಾಬ್ದಾರಿ ಹೊತ್ತಿದ್ದು ಅವರು ಕುಟುಂಬ ನಿರ್ವಹಣೆಗೆ ಮನೆಗೆಲಸ ಮಾಡಿಕೊಂಡಿದ್ದಾರೆ. ಅವರ ರಕ್ಷಣೆ ಸರ್ಕಾರ ಮುಂದೆ ಬರಬೇಕು ಎಂದು ಮನವಿ ಮಾಡಿದರು.

      ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಮಾತನಾಡಿ ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿಯನ್ನೊಳಗೊಂಡ ಭವಿಷ್ಯನಿಧಿ ಯೋಜನೆಯನ್ನು ರೂಪಿಸಬೇಕು. ಅಸಂಘಟಿತ ಕಾರ್ಮಿಕರ ತ್ರಿಪಕ್ಷೀಯ ಜಿಲ್ಲಾ ಮಟ್ಟದ ಸಮಿತಿಗಳಿಗೆ ಸಮಪ್ರಮಾಣದ ಕಾರ್ಮಿಕ ಪ್ರಾತಿನಿಧ್ಯವನ್ನು ನೀಡುವಂತೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

      ಕಟ್ಟಡ ಕಾರ್ಮಿಕ ಸಂಘಟನೆಯ ಮುಖಂಡ ಬಿ.ಉಮೇಶ್ ಮಾತನಾಡಿ, ಕಚೇರಿಗಳಲ್ಲಿ ಹೆಚ್ಚಿನ ಸಿಬ್ಬಂದಿ ಇಲ್ಲ. ಹೀಗಾಗಿ ಸಿಬ್ಬಂದಿಯನ್ನು ನೇಮಕ ಮಾಡಿ ಅಸಂಘಟಿತ ಕಾರ್ಮಿಕರು ಸೇರಿದಂತೆ ಇತರ ಕಾರ್ಮಿಕರಿಗೆ ಸೂಕ್ತ ಸೌಲಭ್ಯವನ್ನು ವಿತರಿಸಬೇಕಿದೆ ಎಂದು ಹೇಳಿದರು. ಸರ್ಕಾರ ಒಂದು ಕಡೆ ಸಕಾಲ ಯೋಜನೆಯಡಿ ಒಂದು ತಿಂಗಳೊಳಗೆ ಅರ್ಜಿ ವಿಲೇವಾರಿ ಮಾಡುವುದಾಗಿ ಹೇಳುತ್ತಿದ್ದರೂ ಅದು ಆಗುತ್ತಿಲ್ಲ. ಈ ಸಂಬಂಧ ಜಿಲ್ಲಾಡಳಿತ ಮತ್ತು ಸರ್ಕಾರ ಗಮನಹರಿಸಬೇಕೆಂದು ಆಗ್ರಹಿಸಿದರು.

      ಕೊಳಗೇರಿ ಹಿತರಕ್ಷಣಾ ಸಮಿತಿ ಮುಖಂಡ ಶೆಟ್ಟಾಳಯ್ಯ ಮಾತನಾಡಿ, ಮನೆಗೆಲಸಗಾರರ ಸೇವಾ ನಿಯಮಾವಳಿಗಳನ್ನು ಒಳಗೊಂಡಂತಹ ಶಾಸನವನ್ನು ಕೇಂದ್ರ ಮಟ್ಟದಲ್ಲಿ ರೂಪಿಸಲು ಕರ್ನಾಟಕ ಸರ್ಕಾರ ಒತ್ತಾಯಿಸಬೇಕು. ಅಸಂಘಟಿತ ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಲು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದ ತ್ರಿಪಕ್ಷೀಯ ಸಭೆಯನ್ನು ಕಡ್ಡಾಯವಾಗಿ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಬೇಕು ಎಂದರು.

      ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಗೋವಿಂದರಾಜು, ತಿಮ್ಮೇಗೌಡ, ಟೈಲರ್ ಸಂಘಟನೆಯ ಮುಖಂಡ ನಾಗರಾಜು ಮಾತನಾಡಿದರು. ಪ್ರತಿಭಟನಾ ನೇತೃತ್ವನ್ನು ಚಿನ್ನಬೆಳ್ಳಿ ಕೆಲಸಗಾರರ ಸಂಘದ ಸುರೇಶ್, ಕಾರ್ಮಿಕ ಸಂಘಟನೆಯ ಮುಖಂಡರಾದ ಪಲ್ಲವಿ, ಮನೆಗೆಲಸಗಾರರ ಸಂಘದ ಗಿರಿಜ, ಮಂಗಳಮ್ಮ ನೂರ್ ಜಾನ್, ಗೀತಾ, ವಸಂತ ಮೊದಲಾದವರು ವಹಿಸಿದ್ದರು.

 

(Visited 30 times, 1 visits today)
Previous Articleರಾಗಿ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ
Next Article ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ತತ್ವ ಅನುಸರಿಸಲು ಕರೆ
News Desk Benkiyabale

Related Posts

ಇನ್ನರ್ ವಿಲ್ ಸಂಸ್ಥೆ ಸಮಾಜದಲ್ಲಿ ಪರಸ್ಪರ ಸೇವಾ ಸಹಕಾರ ನೀಡುತ್ತಿದೆ: ಭವಾನಿ ಜಯರಾಮ್

July 04, 2025 3:19 pm ತುಮಕೂರು

ಹಿರಿಯ ನಾಗರೀಕರಿಗಾಗಿ ವಯಾ ವಿಕಾಸ್ ಸಂಸ್ಥೆ ಪ್ರಾರಂಭ

July 04, 2025 3:08 pm ತುಮಕೂರು

ಎಸ್‌ಎಸ್‌ಐಟಿಐಯಲ್ಲಿ ನೇಮಕಾತಿ ಡ್ರೆöÊವ್: ೬೯ವಿದ್ಯಾರ್ಥಿಗಳು ಆಯ್ಕೆ

July 04, 2025 3:05 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಇನ್ನರ್ ವಿಲ್ ಸಂಸ್ಥೆ ಸಮಾಜದಲ್ಲಿ ಪರಸ್ಪರ ಸೇವಾ ಸಹಕಾರ ನೀಡುತ್ತಿದೆ: ಭವಾನಿ ಜಯರಾಮ್

July 04, 2025 3:19 pm
ತುಮಕೂರು

ಹಿರಿಯ ನಾಗರೀಕರಿಗಾಗಿ ವಯಾ ವಿಕಾಸ್ ಸಂಸ್ಥೆ ಪ್ರಾರಂಭ

July 04, 2025 3:08 pm
ತುಮಕೂರು

ಎಸ್‌ಎಸ್‌ಐಟಿಐಯಲ್ಲಿ ನೇಮಕಾತಿ ಡ್ರೆöÊವ್: ೬೯ವಿದ್ಯಾರ್ಥಿಗಳು ಆಯ್ಕೆ

July 04, 2025 3:05 pm
ತುಮಕೂರು

ಇಸಿ-೨೦ ಹೆದ್ದಾರಿ ಕಾಮಗಾರಿಗೆ ಶೀಘ್ರ ಪರಿಹಾರ: ಸಂಸದ

July 04, 2025 3:03 pm
ತುಮಕೂರು

ಜು.೦೮ ರಿಂದ ಪ್ರಿಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ

July 04, 2025 3:02 pm
ತುಮಕೂರು

ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಗಮಕ ಕಲೆ ಪರಿಚಯ ಅತ್ಯಗತ್ಯ: ಚಿಕ್ಕಬೆಳ್ಳಾವಿ ಶಿವಕುಮಾರ್ ಹೇಳಿಕೆ

July 04, 2025 3:00 pm
Our Youtube Channel
Our Picks

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಇನ್ನರ್ ವಿಲ್ ಸಂಸ್ಥೆ ಸಮಾಜದಲ್ಲಿ ಪರಸ್ಪರ ಸೇವಾ ಸಹಕಾರ ನೀಡುತ್ತಿದೆ: ಭವಾನಿ ಜಯರಾಮ್

By News Desk BenkiyabaleJuly 04, 2025 3:19 pm

ಚಿಕ್ಕನಾಯಕನಹಳ್ಳಿ: ಸಹಕಾರ ನಾಯಕತ್ವದ ಹೆಜ್ಜೆಯ ನಡೆಯನ್ನು ಇನ್ನರ್ ವಿಲ್ ಸಂಸ್ಥೆ ನೀಡಿತು ಈ ಮೂಲಕ ಪರಸ್ಪರ ಸೇವಾ ಸಹಕಾರ ನೀಡುವ…

ಹಿರಿಯ ನಾಗರೀಕರಿಗಾಗಿ ವಯಾ ವಿಕಾಸ್ ಸಂಸ್ಥೆ ಪ್ರಾರಂಭ

July 04, 2025 3:08 pm

ಎಸ್‌ಎಸ್‌ಐಟಿಐಯಲ್ಲಿ ನೇಮಕಾತಿ ಡ್ರೆöÊವ್: ೬೯ವಿದ್ಯಾರ್ಥಿಗಳು ಆಯ್ಕೆ

July 04, 2025 3:05 pm

ಇಸಿ-೨೦ ಹೆದ್ದಾರಿ ಕಾಮಗಾರಿಗೆ ಶೀಘ್ರ ಪರಿಹಾರ: ಸಂಸದ

July 04, 2025 3:03 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.