BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
  • ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ
  • ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸೋಲನ್ನು ಸವಾಲಾಗಿ ಸ್ವೀಕರಿಸಿ – ಆರ್.ಸುದೀಪ್ ಕುಮಾರ್
ತುಮಕೂರು ಜಿಲ್ಲಾ ಸುದ್ಧಿಗಳು

ಸೋಲನ್ನು ಸವಾಲಾಗಿ ಸ್ವೀಕರಿಸಿ – ಆರ್.ಸುದೀಪ್ ಕುಮಾರ್

By News Desk BenkiyabaleUpdated:February 25, 2019 3:50 pm

 ಮಿಡಿಗೇಶಿ :

      ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶ್ರಮಸಂಸ್ಕøತಿ ಹಿನ್ನೆಲೆ ಹೊಂದಿದ್ದು, ಅವರಲ್ಲಿ ಕ್ರೀಡಾಸ್ಪೂರ್ತಿ ಹೆಚ್ಚಾಗಿದೆ. ಇಂತಹ ಪ್ರತಿಭೆಗಳಿಗೆ ಸೂಕ್ತ ತರಬೇತಿ ನೀಡಿದಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮುತ್ತಾರೆ. ಆಟಗಾರರು ಕ್ರೀಡಾಸ್ಪೂರ್ತಿಯಿಂದ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ಎದುರಾಗುವ ಪ್ರತಿಯೊಂದು ಸೋಲನ್ನು ಸವಾಲಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಂಡಾಗ, ಬಹುದೊಡ್ಡ ಗೆಲುವು ನಿಮ್ಮದಾಗಲಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಂಯೋಜಕರಾದ ಆರ್.ಸುದೀಪ್‍ಕುಮಾರ್ ಕರೆ ನೀಡಿದರು.

       ಅವರು ಮಿಡಿಗೇಶಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ತುಮಕೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರಕಾಲೇಜುಗಳ ಮಹಿಳೆಯರ ಥ್ರೋಬಾಲ್ ಮತ್ತು ಟೆನ್ನಿಕಾಯ್ಟ್ ಪಂದ್ಯಾವಳಿಗಳ ವಿಜೇತರಿಗೆ ಬಹುಮಾನ ಮತ್ತು ಟ್ರೋಫಿ ವಿತರಿಸಿ ಮಾತನಾಡಿ ಇಡೀ ಜೀವನ ಒಂದು ಕ್ರೀಡೆಯಿದ್ದಂತೆ ಆಟಗಾರರು ಗೆಲುವಿಗಾಗಿ ಸತತ ಶ್ರಮಪಡುತ್ತಿದ್ದರೆ, ಪ್ರತಿಸ್ಪರ್ಧಿಗಳು ಅವರನ್ನು ಸೋಲಿಸಲು ಪ್ರಯತ್ನಿಸುತ್ತಿರುತ್ತಾರೆ. ಹಾಗೆಯೇ ನಿಜಜೀವನದಲ್ಲಿಯೂ ಸಹ ಸಾಧನೆಗೆ ಬರುವ ಅಡ್ಡಿಆತಂಕಗಳನ್ನು ನಿವಾರಿಸಿ ಯಶಸ್ಸಿನ ಮೆಟ್ಟಿಲನ್ನು ಏರಬೇಕಾಗಿದೆ. ಕ್ರೀಡೆಗೆ ಹೆಚ್ಚಿನ ಮಹತ್ವ ಸಿಗುತ್ತಿರುವ ಈ ಕಾಲಘಟ್ಟದಲ್ಲಿ ಪ್ರತಿಯೊಬ್ಬರೂ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿ ಜೀವನ ರೂಪಿಸಿಕೊಳ್ಳಬೇಕೆಂದರು.

      ಮುಖ್ಯಅತಿಥಿಗಳಾಗಿದ್ದ ಮುಖ್ಯಶಿಕ್ಷಕ ಪುಟ್ಟಲಿಂಗಪ್ಪ ಮಾತನಾಡಿ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಾಧ್ಯ. ಉತ್ತಮ ಕ್ರೀಡಾಪಟುಗಳು ಉತ್ತಮ ನಾಯಕತ್ವ, ಮುಂದಾಳತ್ವ ಗುಣಗಳನ್ನು ಮೈಗೂಡಿಸಿಕೊಳ್ಳುತ್ತಾರೆ. ಆದುದರಿಂದ ಬಾಲ್ಯಾವಸ್ಥೆಯಿಂದಲೇ ಕ್ರೀಡೆಗಳಲ್ಲಿ ಭಾಗವಹಿಸಲು ಮಕ್ಕಳಿಗೆ ಪ್ರೋತ್ಸಾಹಿಸಬೇಕೆಂದರು.

       ಮುಖ್ಯ ಅತಿಥಿಗಳಾಗಿದ್ದ ವೈದ್ಯಾಧಿಕಾರಿ ಡಾ||ಅರವಿಂದರೆಡ್ಡಿ ಮಾತನಾಡಿ ಆಟಗಳನ್ನು ನಿರಂತರವಾಗಿ ಆಡುವುದರಿಂದ ಅನೇಕ ಕಾಯಿಲೆಗಳನ್ನು ದೂರವಿಡಬಹುದು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಆದುದರಿಂದ ಯಾವ ವಯಸ್ಸಿನ ಬೇಧವಿಲ್ಲದೆ ಎಲ್ಲರೂ ತಮಗೊಪ್ಪುವ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು.

      ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ.ಟಿ.ಎನ್.ನರಸಿಂಹಮೂರ್ತಿ ಮಾತನಾಡಿ ಕ್ರೀಡೆಗಳು ಎಲ್ಲರ ಮನಸ್ಸನ್ನೂ ಒಗ್ಗೂಡಿಸುವ ಸಾಮಾಜಿಕ ಒಕ್ಕೂಟವಿದ್ದಂತೆ. ಕ್ರೀಡಾಕೂಟಗಳಿಂದ ಎಲ್ಲರೂ ಒಂದೆಡೆ ಸೇರುವ ಅವಕಾಶ ಲಭ್ಯವಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಕ್ರೀಡಾಕೂಟಗಳಿಂದ ಕ್ರೀಡಾಸ್ಪೂರ್ತಿ ಲಭಿಸಿ, ರಾಷ್ಟ್ರಮಟ್ಟದ ಪ್ರತಿಭೆಗಳು ಉದಯಿಸುವ ಅವಕಾಶ ಲಭಿಸುತ್ತದೆ. ಉತ್ತಮ ಕ್ರೀಡಾಪಟುಗಳಿಗೆ ಸರ್ಕಾರಿ ಮತ್ತು ಖಾಸಗೀ ರಂಗದಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು, ಅವುಗಳನ್ನು ಪಡೆಯಲು ಕ್ರೀಡಾಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಅವಶ್ಯಕ. ಸರ್ಕಾರ ಕ್ರೀಡಾಕ್ಷೇತ್ರಕ್ಕೆ ಅನೇಕ ಸವಲತ್ತುಗಳನ್ನು ನೀಡಿ ಪ್ರೋತ್ಸಾಹಿಸುತ್ತದೆ. ವಿದ್ಯಾರ್ಥಿ ವೇತನ, ಕ್ರೀಡಾ ಹಾಸ್ಟೆಲ್‍ಗಳು, ತರಬೇತಿ ಶಾಲೆಗಳನ್ನು ತೆರೆಯುವ ಮೂಲಕ ಕ್ರೀಡೆಗಳಿಗೆ, ಆಟಗಾರರಿಗೆ ಉತ್ತೇಜನ ನೀಡುತ್ತಿದೆ. ಈ ವಿಪುಲ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳಲು ಸತತ ಪರಿಶ್ರಮ, ಕಟ್ಟುನಿಟ್ಟಿನ ತಯಾರಿ ಅತ್ಯವಶ್ಯಕ ಎಂದರು.

       ತುಮಕೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಿಂದ ತಲಾ ಎಂಟು ತಂಡಗಳು ಮಹಿಳೆಯರ ಥ್ರೋಬಾಲ್ ಮತ್ತು ಮಹಿಳೆಯರ ಟೆನ್ನಿಕಾಯ್ಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಮಹಿಳೆಯರ ಥ್ರೋಬಾಲ್‍ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಿಪಟೂರಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನಗಳಿಸಿ ಟ್ರೋಫಿ ಪಡೆದುಕೊಂಡರು ಮತ್ತು ಸಿದ್ದಗಂಗಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದುಕೊಂಡರು. ಮಹಿಳೆಯರ ಟಿನ್ನಿಕಾಯ್ಟ್ ಸ್ಪರ್ಧೆಯಲ್ಲಿ ವಿಶ್ವವಿದ್ಯಾಲಯ ಕಲಾ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನಗಳಿಸಿ ಟ್ರೋಫಿ ಪಡೆದುಕೊಂಡರು, ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದುಕೊಂಡರು. ಪ್ರಥಮ ಸ್ಥಾನ ಪಡೆದ ಎರಡೂ ತಂಡಗಳಿಗೆ ನಿವೃತ್ತ ಮುಖ್ಯಶಿಕ್ಷಕರಾದ ಬಸವರಾಜಪ್ಪ ನೀಡಿದ ನಗದು ಪುರಸ್ಕಾರ ನೀಡಿ ಗೌರವಿಸಿದರು.

      ಮುಖ್ಯ ಅತಿಥಿಗಳಾಗಿ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಜಯಮ್ಮ, ನಿವೃತ್ತ ಶಿಕ್ಷಕರಾದ ಬಸವರಾಜು, ದೈಹಿಕ ಶಿಕ್ಷಣ ನಿರ್ದೇಶಕರಾದ ಮನೋಜ್‍ಕುಮಾರ್, ಡಾ.ಪ್ರಕಾಶ್, ವಿಶ್ವನಾಥ್, ಮುಖ್ಯಶಿಕ್ಷಕ ಪುಟ್ಟಲಿಂಗಪ್ಪ, ಮಿಡಿಗೇಶಿ ಅಂಜಿನಪ್ಪ, ಉಪನ್ಯಾಸಕರಾದ ಮುನಿರಾಜ, ಲಕ್ಷ್ಮೀನಾರಾಯಣ, ಸತೀಶ್, ಸತೀಶ್‍ಕುಮಾರ್, ಶ್ರೀನಿವಾಸಮೂರ್ತಿ, ಮಹೇಶ್ ಎ. ಸುರೇಶ್, ರಹಮತ್,ಮಂಜುಳ ಮತ್ತಿತರರು ಭಾಗವಹಿಸಿದ್ದರು.

(Visited 20 times, 1 visits today)
Previous Article3ಡಿ ಚಿತ್ರಗಳಿಂದ ತುಮಕೂರು ನಗರಕ್ಕೆ ಹೊಸ ಮೆರಗು
Next Article ಪೊಲೀಸರಿಗೆ ಹೊಸ ವಾಹನ ಸೌಲಭ್ಯ ಕಲ್ಪಿಸಲು ಮನವಿ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
ಇತರೆ ಸುದ್ಧಿಗಳು

ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ

February 18, 2026 2:02 pm
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm
Our Youtube Channel
Our Picks

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm

ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ

February 18, 2026 2:02 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

By News Desk BenkiyabaleFebruary 18, 2026 2:14 pm

ನಗರದ ಧ್ಹಾನಾ ಪ್ಯಾಲೇಸ್‌ನಲ್ಲಿ ತಹರೀಕ್ ಉರ್ದು- ಅದಬ್,ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಕರು ಎಂಬ…

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.