BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ
  • ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ
  • ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ
  • ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ
  • ತುಮಕೂರು: ಕಾಣೆಯಾದ ಮಹಿಳೆಯ ಕೊಲೆ
  • ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್
  • ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಜಿ.ಚಂದ್ರಶೇಖರ ಗೌಡ
  • ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪವರ್‍ಗ್ರಿಡ್ ಸಂಸ್ಥೆಯಿಂದ ರೈತರಿಗೆ ಅನ್ಯಾಯ: ಚುನಾವಣೆ ಬಹಿಷ್ಕಾರದ ಎಚ್ಚರಿಕೆ
Trending

ಪವರ್‍ಗ್ರಿಡ್ ಸಂಸ್ಥೆಯಿಂದ ರೈತರಿಗೆ ಅನ್ಯಾಯ: ಚುನಾವಣೆ ಬಹಿಷ್ಕಾರದ ಎಚ್ಚರಿಕೆ

By News Desk BenkiyabaleUpdated:February 27, 2019 4:39 pm

 ತುಮಕೂರು:

      ಪವರ್ ಗ್ರಿಡ್ ಸಂಸ್ಥೆ ಮತ್ತು ಕೂಡ್ಗಿ ಸಂಸ್ಥೆಯಿಂದ ಅನ್ಯಾಯಕ್ಕೊಳಗಾದ ಜಿಲ್ಲೆಯ ರೈತರಿಗೆ ಸೂಕ್ತ ಪರಿಹಾರವನ್ನು ಮುಂಬರುವ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಜಿಲ್ಲಾಧಿಕಾರಿಗಳು ಸಭೆ ಕರೆದು ರೈತರಿಗೆ ಸೂಕ್ತ ಪರಿಹಾರ ನೀಡುವ ಅನುಮೋದನೆ ನೀಡಬೇಕು ಇಲ್ಲದಿದ್ದರೆ ರೈತರು ಕುಟುಂಬ ಸಮೇತ ಸಾಮೂಹಿಕವಾಗಿ ಬಹಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ಕೃಷಿಕ ಸಮಾಜ, ನವದೆಹಲಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಕಂಚೇನಹಳ್ಳಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ನಿಯೋಗ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಕೃಷಿಕ ಸಮಾಜ ನವದೆಹಲಿ ಜಿಲ್ಲಾಧ್ಯಕ್ಷ ಸುರೇಶ್ ಕಂಚೇನಹಳ್ಳಿ ತುಮಕೂರು ತಾಲ್ಲೂಕಿನ ಬೆಳ್ಳಾವಿ ಮತ್ತು ಕೋರಾ ಹೋಬಳಿ, ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಕಸಬಾ ಮತ್ತು ಹುಲಿಕುಂಟೆ ಹೋಬಳಿ, ಮಧುಗಿರಿ ತಾಲ್ಲೂಕಿನ ಕಸಬಾ, ದೊಡ್ಡೇರಿ ಹೋಬಳಿ, ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಗಳಲ್ಲಿನ ರೈತರ ಜಮೀನುಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಯಾದ ಹೈ ಟೆನ್ಷನ್ ವಿದ್ಯುತ್ ಕಂಬಗಳ ಮತ್ತು ತಂತಿ ಅಳವಡಿಸುವ ಕಾಮಗಾರಿಯನ್ನು ಪವರ್ ಗ್ರಿಡ್ ಮತ್ತು ಕೂಡಿ ಸಂಸ್ಥೆಯವರು ನಿರ್ವಹಿಸುತ್ತಿದ್ದು, ಲೈನ್ ಹಾದುಹೋಗಿರುವ ರೈತರ ಜಮೀನುಗಳಿಗೆ ಹಾಗೂ ಜಮೀನುಗಳಲ್ಲಿರುವ ಮರಗಳಿಗೆ 2014ರ ಜುಲೈ 8 ರಂದು ಅಂದಿನ ಜಿಲ್ಲಾಧಿಕಾರಿಗಳು ಕ್ಲಾಸ್ ಎ ಮರಗಳೆಂದು ಪರಿಗಣಿಸಿ ಪ್ರತಿಯೊಂದು ತೆಂಗಿನ ಮರಕ್ಕೆ 16,314, 3728, 27862, 14800 ಹೀಗೆ ಪರಿಹಾರ ನೀಡಲು ಸೂಚಿಸಿದ್ದರು.

      ಇತರೆ ಮರಗಳಿಗೆ ಸರ್ಕಾರ ನಿಗಧಿಪಡಿಸಿರುವ ದರದಂತೆ ಪರಿಹಾರ ನೀಡುವುದು ಜೊತೆಗೆ ಶೇ.10 ರಷ್ಟು ಎಕ್ಸ್ ಗ್ರೇಷಿಯಾ ಪರಿಹಾರವನ್ನು ಪಾವತಿಸಲು ಸೂಚಿಸಿದ್ದರು. ಜಮೀನುಗಳಲ್ಲಿ ಪವರ್‍ಲೈನ್ ಎಳೆಯುವ ಸಂದರ್ಭದಲ್ಲಿ ಜಮೀನಿಗೆ ಆಗುವ ಹಾನಿ ಬಗ್ಗೆ ಪ್ರತಿ ಎಕರೆಗೆ ಅಧಿಕ ಪರಿಹಾರವಾಗಿ 2ಲಕ್ಷ ಪಾವತಿಸಲು ತೀರ್ಮಾನಿಸಿದ್ದರು. ಆದರೆ ಈ ಪರಿಹಾರದ ಮೊತ್ತವು ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದರು.

      ಕೃಷಿಕ ಸಮಾಜ ನವದೆಹಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಆರ್. ಸುಧೀಂದ್ರ ಮಾತನಾಡಿ ರೈತರ ನ್ಯಾಯಯುತ ಬೇಡಿಕೆಗಳಾದ ಪವರ್ ಗ್ರಿಡ್‍ಸಂಸ್ಥೆಯವರು ರೈತರ ಮೇಲೆ ದಾಖಲು ಮಾಡಿರುವ ಎಲ್ಲಾ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು ಮತ್ತು ಸದರಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಭಾಕರ್, ಶ್ರೀಧರ್, ಮತ್ತು ಶ್ರೀಧರ್ ಅವರ ಮೇಲೆ ರೈತರಿಂದ ದೂರು ಪಡೆದು ಮೋಸ ವಂಚನೆ, ಬೆದರಿಕೆ ಸುಳ್ಳು ದೂರು ಸೃಷ್ಠಿ ಮಾಡಿದ್ದು, ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ರೈತರುಗಳ ಜಮೀನಿನ ಜೆಎಂಸಿ ಮತ್ತು ಪಂಚನಾಮೆ ನೀಡಬೇಕು ಮತ್ತು 2014ರ ನಷ್ಟ ಪರಿಹಾರ ಆದೇಶವನ್ನು ಮರು ಪರಿಶೀಲಿಸಿ ಮನವಿಯಲ್ಲಿ ಕೋರಿದಂತೆ ನ್ಯಾಯಯುತ ಪರಿಹಾರ ನಿಗಧಿಪಡಿಸಬೇಕೆಂದು ಒತ್ತಾಯಿಸಿದರು.

      ಪ್ರತಿ ರೈತರಿಗೂ ಪರಿಹಾರವನ್ನು ಜಿಲ್ಲಾಧಿಕಾರಿಗಳು ಮತ್ತು ರೈತ ಸಂಘಟನೆ ಮುಖಂಡರ ಪರಿಶೀಲನೆಯಲ್ಲಿ ಪರಿಹಾರ ನೀಡಬೇಕು, 2014 ರಿಂದ ಇಲ್ಲಿಯವರೆಗೆ ಬಡ್ಡಿ ಸಹಿತ ರೈತರಿಗೆ ಪರಿಹಾರ ಕೊಡಿಸಬೇಕು ಇಲ್ಲದಿದ್ದರೆ ರೈತರಿಗೆ ಆಗುತ್ತಿರುವ ಅನ್ಯಾಯಕ್ಕೆ ನ್ಯಾಯ ಕೊಡಿಸಲು ವಿಫಲವಾಗಿರುವುದರಿಂದ ಜಿಲ್ಲಾಡಳಿತ ನಿರ್ವಹಿಸಲಿರುವ 2019ರ ಲೋಕಸಭಾ ಚುನಾವಣೆಯ ಪ್ರಕ್ರಿಯೆಯಲ್ಲಿ ಪವರ್ ಗ್ರಿಡ್ ಸಂಸ್ಥೆ ಮತ್ತು ಕೂಡ್ಗಿ ಸಂಸ್ಥೆ ಯಿಂದ ಅನ್ಯಾಯಕ್ಕೊಳಗಾಗಿರುವ ಜಿಲ್ಲೆಯ ರೈತರು ಸಾಮೂಹಿಕವಾಗಿ ಕುಟುಂಬ ಸಮೇತ ಚುನಾವಣೆ ಬಹಿಷ್ಕರಿಸಲು ಮತ್ತು ಮತದಾನದ ದಿನ ಮತ ಕೇಂದ್ರದ 100 ಮೀಟರ್ ದೂರದಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಗುವುದು. ಇದಕ್ಕೆ ಅವಕಾಶ ನೀಡದೆ ಜಿಲ್ಲಾಡಳಿತ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಅನುಮೋದನೆ ನೀಡಬೇಕೆಂದು ಮನವಿ ಮಾಡಿದರು.

 

(Visited 16 times, 1 visits today)
Previous Articleಋತುಮಾನ ಬದಲಾದಂತೆ ಮಳೆ ಕಡಿಮೆಯಾಗುತ್ತಿದೆ -ಶಾಸಕ ಜೆ.ಸಿ.ಮಾಧುಸ್ವಾಮಿ
Next Article ದಲಿತ ಯುವಕ ಆತ್ಮಹತ್ಯೆ: ಆರೋಪಿಗಳ ಬಂಧನಕ್ಕೆ ಒತ್ತಾಯ
News Desk Benkiyabale

Related Posts

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

August 13, 2025 3:02 pm
ಇತರೆ ಸುದ್ಧಿಗಳು

ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ

August 13, 2025 2:48 pm
ಇತರೆ ಸುದ್ಧಿಗಳು

ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ

August 13, 2025 2:32 pm
ಇತರೆ ಸುದ್ಧಿಗಳು

ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ

August 11, 2025 3:25 pm
ಇತರೆ ಸುದ್ಧಿಗಳು

ತುಮಕೂರು: ಕಾಣೆಯಾದ ಮಹಿಳೆಯ ಕೊಲೆ

August 11, 2025 3:24 pm
ಇತರೆ ಸುದ್ಧಿಗಳು

ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ಯಾಕೇಜ್

August 09, 2025 2:01 pm
Our Youtube Channel
Our Picks

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

August 13, 2025 3:02 pm

ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ

August 13, 2025 2:48 pm

ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ

August 13, 2025 2:32 pm

ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ

August 11, 2025 3:25 pm

ತುಮಕೂರು: ಕಾಣೆಯಾದ ಮಹಿಳೆಯ ಕೊಲೆ

August 11, 2025 3:24 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

By News Desk BenkiyabaleAugust 13, 2025 3:02 pm

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನಿಸಿ, ಧರ್ಮಾಧಿಕಾರಿಗಳಾದ ಶ್ರೀವೀರೇಂದ್ರ ಹೆಗಡೆ ಅವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವವರನ್ನು…

ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ

August 13, 2025 2:48 pm

ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ

August 13, 2025 2:32 pm

ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ

August 11, 2025 3:25 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.