BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್
  • ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ
  • ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ
  • ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ
  • ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
  • ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್
  • ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
  • ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಹಾಶಿವರಾತ್ರಿ : ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳಿಂದ ಮಧುಗಿರಿ ಶ್ರೀ ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
Trending

ಮಹಾಶಿವರಾತ್ರಿ : ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳಿಂದ ಮಧುಗಿರಿ ಶ್ರೀ ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

By News Desk BenkiyabaleUpdated:March 02, 2019 6:14 pm

ಮಧುಗಿರಿ:-

      ಪಟ್ಟಣದ ಹೃದಯ ಭಾಗದಲ್ಲಿ ಹರಿಹರ ಸಂಗಮದಂತೆ ಮಧುಗಿರಿಯ ಎರಡು ಕಣ್ಣುಗಳಂತೆ ಐತಿಹಾಸಿಕ ಶ್ರೀ ಮಲ್ಲೇಶ್ವರ ಸ್ವಾಮಿ ಮತ್ತು ಶ್ರೀ ವೆಂಕಟರಮಣ ಸ್ವಾಮಿ ದೇವಾಲಯಗಳಿವೆ. ಮಹಾಶಿವರಾತ್ರಿ ಹಬ್ಬದ ಜಾಗರಣೆ ಪ್ರಯುಕ್ತ ಶ್ರೀ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಂಸ್ಕøತಿಕ ಭಜನಾ ಕಾರ್ಯಕ್ರಮಗಳು, ರುದ್ರಾಭಿಷೇಕ ಮತ್ತು ವಿಶೇಷ ಪೂಜೆಗಳನ್ನು ಆಯೋಜಿಸಲಾಗಿದೆ. ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಮಧ್ಯೆರಾತ್ರಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

     ದೇವಸ್ಥಾನದ ಇತಿಹಾಸ:

      ಜಗತ್ತಿನ ಜೀವನದಲ್ಲಿ ಜನತೆಯ ನಂಬುಗೆಯ ಶಕ್ತಿಯಿಂದ ಭಕ್ತಿಪೂರ್ಣದಿಂದ ವಿವಿಧ ರೂಪದಿಂದ ಪರಮಾತ್ಮನು ತನ್ನ ದರ್ಶನವನ್ನು ಅನೇಕ ಕಡೆ ಪ್ರದರ್ಶನ ಮಾಡಿ ತೋರಿಸಿರುವಂತೆ ವನದೇವತೆಯ ಮಡಿಲೆನಿಸಿದ ಈ ಮಧುಗಿರಿ ಎಂಬ ಸುಗ್ರಾಮದಲ್ಲಿ ಉದ್ಭವಿಸಿ ಜನತೆಯನ್ನು ಮುಗ್ಧಗೊಳಿಸಿರುತ್ತಾನೆ. ಈ ಮೂರ್ತಿಯು ಪ್ರಪಂಚಕ್ಕೆ ಸುಪ್ರಸಿದ್ದವಾದ ಕಾಶೀಲಿಂಗ ಮೂರ್ತಿಯನ್ನು ಹೋಲುತ್ತದೆ ಇಂತಹ ದಿವ್ಯ ಸುಂದರ ಉದ್ಬವ ಮೂರ್ತಿಯ ಸೃಷ್ಠಿಯನ್ನು ಜನವಾಖ್ಯಗಳಿಂದ ಆರಿವಾಗುತ್ತದೆ.

      ಪ್ರಾರಂಭದಲ್ಲಿ ಈ ದೇವಸ್ಥಾನವು ಮೂರು ನಾಲ್ಕು ಬಂಡೆಗಳಿಂದ ನಿರ್ಮಿತವಾಗಿದ್ದು ಅಲ್ಲಿ ಈ ಸ್ವಾಮಿಯು ಉದ್ಭವಾವಿದ್ದನು. ತನ್ನ ಭಕ್ತವರ್ಯನೆಸಿಸಿದ ಮಲ್ಲಶೆಟ್ಟಿ ಎಂಬ ವರ್ತಕನು ರತ್ನಪಡಿ ವ್ಯಾಪಾರಾರ್ಥವಾಗಿ ಈ ಸ್ಥಳದಲ್ಲಿ ತಂಗಿದ್ದಾಗ ನನಗೆ ಒಳ್ಳೆಯ ವ್ಯಾಪಾರವಾಗಿ ಲಾಭಗಳಿಸಿದರೆ ನಿನಗೆ ಶಿವಾಲಯವನ್ನು ಈ ಸ್ಥಳದಲ್ಲಿ ಕಟ್ಟಿಸುವೆನೆಂದು ಮನದಲ್ಲಿ ಅಂದುಕೊಂಡು ನಿದ್ರೆಯಲ್ಲಿರುವಾಗ ಪರಮೇಶ್ವರನು ಸ್ವಪ್ಮದಲ್ಲಿ ದರ್ಶನಕೊಟ್ಟು ‘ಅಯ್ಯಾ ವರ್ತಕನೆ ನೀನು ಈಗ ನಾನು ಉದ್ಭವಿಸಿರುವ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಿ ನನಗೆ ಪೂಜಾದಿಗಳಿಗೆ ಅವಕಾಶಮಾಡಿದರೆ ನಾನು ಇಲ್ಲಿ ಮಲ್ಲೇಶ್ವರನಾಗಿ ನಿತ್ಯದರ್ಶನ ಕೊಡುವೆನೆಂದು ಹೇಳಿದಂತಾಯಿತು. ಬಳಿಕ ಶಿವನಿಚ್ಛೆಯಂತೆ ಮಲ್ಲಶೆಟ್ಟಿಗೆ ವ್ಯಾಪಾರವು ಸುಗಮವಾಗಿ ನಡೆದು ಹಿಂದಿರುಗುವಾಗ ಆತನು ಶ್ರದ್ಧಾ ಭಕ್ತಿಗಳಿಂದ ಅಲ್ಲಿನ ಪ್ರಮುಖರನ್ನು ಕರೆಸಿದನು. ಆಗ ಪ್ರಮುಕರೆಲ್ಲರು ವರ್ತಕನ ಅಭೀಷ್ಠಕ್ಕೆ ಅನುಗುಣವಾಗಿ ನಿರ್ಮಿಸಲು ಸಂತೋಷದಿಂದ ಸಹಕಾರ ನೀಡಿ ಗರ್ಭಗುಡಿಯನ್ನು ಕಟ್ಟಿಸಿದರು. ಈ ಉದ್ಭವ ಮೂರ್ತಿಯ ಕೃಪೆಯಿಂದ ಗ್ರಾಮಸ್ಥರೆಲ್ಲಾ ಸೇವೆ, ಪೂಜೆಪುನಸ್ಕಾರಗಳನ್ನು ದಿನವಹಿ ಮಾಡಿಸುತ್ತಾ ಬಂದರು. ಆಮೇಲೆ ದೇವರ ದಯೆಯಿಂದ ಜನರ ಜೀವನದಲ್ಲಿ ಸಮೃದ್ಧಿ ಕಾಣಿಸಿತು.

      ಮಧುಗಿರಿ ನಾಡಪ್ರಭುಗಳಾಗಿದ್ದ ಮುಮ್ಮಡಿ ಚಿಕ್ಕಪ್ಪಗೌಡರು ಈಗಿರುವ ರೀತಿಯಲ್ಲಿ ದೇವಾಲಯದ ಹಜಾರವನ್ನು ಕಟ್ಟಿಸಿದರು. ಅಂಗಳದ ಬಲಭಾಗಕ್ಕೆ ಉಯ್ಯಾಲೋತ್ಸವ ಮಂಟಪ ಎಂದು ಕರೆಯುವ, ನಯನಮನೋಹರವಾದ ಆಕರ್ಷಣೀಯವಾದ ಶಿಲ್ಪಕಲೆಯುಳ್ಳ ಪೀಠ, ವಿವಿಧೋದ್ದೇಶಗಳಿಗಾಗಿ ನಿರ್ಮಿಸಿರುವುದು ಅಂದಿನವರ ದೂರದೃಷ್ಟಿಯನ್ನು ತೋರಿಸುತ್ತದೆ. ಇದು ಒಂದು ಸಣ್ಣ ರಂಗಮಂಟಪದಂತಿದೆ. ಹಿಂದೆ ರಾಜರುಗಳು ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭಗಳಲ್ಲಿ ಈ ಸ್ಥಳದಲ್ಲಿ ಕುಳಿತು ಜನರೊಡನೆ ಸಂಭಾಷಿಸುತ್ತಿದ್ದರು. ಹರಿಕಥೆ ವಿಚಾರಘೋಷ್ಠಿ, ಪುರಾಣ ಬಗ್ಗೆ ವ್ಯಾಖ್ಯಾನ, ಸಂಗೀತ ಕಾರ್ಯಕ್ರಮಗಳು ಮುಂತಾದವುಗಳಿಗೆ ಉಪಯುಕ್ತವಾದ ವೇದಿಕೆಯಾಗಿದೆ. ಇದರ ಎದುರಗಡೆ ಒಂದು ದೀಪಸ್ತಂಭವಿದೆ.

      ಈ ಅಂಗಳದಲ್ಲಿ ನಿರ್ಮಿತವಾಗಿರುವ ದೊಡ್ಡ ದೊಡ್ಡ ಕಂಭಗಳೂ, ಬಸವೇಶ್ವರ, ಗಣಪತಿ, ದ್ವಾರಪಾಲಕರ ವಿಗ್ರಹಗಳನ್ನು ಮುಮ್ಮಡಿಪಟ್ಟಣದಿಂದ ತರಿಸಿ ಸ್ಥಾಪಿಸಿದರು, ಅದೂ ಅಲ್ಲದೆ ಇತ್ತೀಚೆಗೆ ವೀರಭದ್ರಸ್ವಾಮಿ, ಶನಿದೇವರ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ್ದಾರೆ.

      ಮುಮ್ಮಡಿ ಚಿಕ್ಕಪ್ಪಗೌಡರ ಹೆಂಡತಿ ಬಹು ಧರ್ಮಿಷ್ಠಗಳಾಗಿದ್ದು ಶ್ರೀ ಮಲ್ಲೇಶ್ವರನ ಪಕ್ಕದಲ್ಲಿ ಪಾರ್ವತಿದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಿದರು. ಇವರ ಹೆಸರು ಪಾರ್ವತಿದೇವಿಯವರ ವಿಗ್ರಹದ ಪೀಠದಲ್ಲಿ ಈ ರೀತಿಯಾಗಿ ಉಲ್ಲೇಖವಾಗಿದೆ. ಒಂದು ಪಕ್ಕಕ್ಕೆ ಗೌರಮ್ಮನವರು ಅದರ ಎದುರಿಗೆ ಅಜಂಮ್ಮನವರು ಬಹುಷಃ ಅಂಜಮ್ಮ ಎಂಬುದಾಗಿರಬಹುದು ಎಂಬುದು ಎಲ್ಲರ ಅಭಿಮತ.

      ಇತ್ತೀಚೆಗೆ ಭಕ್ತಾಗಳ ನೆರವಿನಿಂದ ಅನೇಕ ವಿಗ್ರಹಗಳನ್ನು ನಿರ್ಮಾಣ ಮಾಡಿದ್ದಾರೆ. ಅವುಗಳಲ್ಲಿ ಮುಖ್ಯವಾದುವು 1. ಸಿದ್ದಿಬುದ್ಧಿ ಸಮೇತನಾದ ಗಣಪತಿ, 2. ಶ್ರೀಲಕ್ಷ್ಮೀದೇವಿ, 3.ಭೀಕ್ಷಾಮೂರ್ತಿಯಾದ ಶಿವ, 4. ಪಾರ್ವತಿ ಕಲ್ಯಾಣದ ವಿಗ್ರಹಗಳು, 5. ಕೈಲಾಸದ ಶಂಕರಮೂರ್ತಿ, 6. ಕಿರಾತಾರ್ಜುನೀಯ, 7.ತಾಂಡವ ನೃತ್ಯದ ಮೂರ್ತಿ, 8.ಸರಸ್ವತಿ, 9.ವಲ್ಲೀದೇವ ಸೇನಾಸಮೇತ ಶ್ರೀ ಸುಬ್ರಹ್ಮಣೇಶ್ವರಸ್ವಾಮಿ ಇನ್ನೂ ಅನೇಕ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ.

      ದೇವಾಲಯದ ಪ್ರಾಕಾರದಲ್ಲಿ ಪ್ರದಕ್ಷಿಣೆಗೆ ಹೊರಟರೆ ಅನೇಕ ಶಿಲಾ ವಿಗ್ರಹಗಳು ಕಾಣುವುವು. ಇವೆಲ್ಲ ಶಿವನ ಪರಿವಾರ ಮತ್ತು ಶಿವಪಾರ್ವತಿಯರ ಚಿತ್ರಗಳೇ ಆಗಿವೆ. ಶ್ರೀ ಮಲ್ಲೇಶನ ಎಡಭಾಗಕ್ಕೆ ಶ್ರೀ ಕಾಶಿವಿಶ್ವನಾಥನ ವಿಗ್ರಹವೂ ಇದೆ. ಉತ್ತರಾಯಣ ಪುಣ್ಯಕಾಲದಲ್ಲಿ ಶಿವಪಾರ್ವತಿಯರ ದರ್ಶನಮಾಡಿ ಉತ್ತರಬಾಗಿಲಿನಿಂದ ಹೊರಬಂದರೆ ಸ್ವರ್ಗ ಪ್ರಾಪ್ತಿಯಾಗುವುದೆಂದೇ ಜನರ ನಂಬಿಕೆಯಾಗಿದೆ.

      ಈ ದೇವಾಲಯವು ದ್ರಾವಿಡಶೈಲಿಯನ್ನು ಹೋಲುತ್ತದೆ. ಈ ದೇವಾಲಯದ ಎದುರಿಗೆ ಸುಮಾರು 20 ಅಡಿ ಸ್ತಂಭವಿದೆ. ಕಾರ್ತೀಕಮಾಸದ ಪೂರ್ಣಿಮಾ ದಿವಸ ಸ್ತಂಭದ ಮೇಲೆ ದೊಡ್ಡದಾಗಿ ದೀಪವನ್ನು ಹಚ್ಚುತ್ತಾರೆ, (ಈ ದೇವಸ್ಥಾನವನ್ನು 1778 ರಲಲಿ ಸಾಗ್ಗೆರೆ ನಾರಾಯಣವಾಸಿ ಯವರಿಂದಲೂ 1795 ರಲ್ಲಿ ಸರ್ಕಾರದಿಂದಲೂ ರಿಪೇರಿಯಾದಂತೆ ತಿಳಿಸುಬರುತ್ತದೆ) ಪ್ರತಿ ಚೈತ್ರ ಮಾಸದಲ್ಲಿ ಬ್ರಹ್ಮರಥೋತ್ಸವವು ನಡೆಯುತ್ತದೆ. ಈ ಸ್ಥಳವನ್ನು ನೋಡಿ ಜನ ಕೃತಕೃತರಾಗುವ ಸ್ಥಳವಾಗಿದೆ. ಈ ದೇವಾಲಯದ ಪಕ್ಕದಲ್ಲಿರುವ ಶ್ರೀ ವೆಂಕಟರಮಣಸ್ವಾಮಿ ದೇವಾಲಯವು ವಿಜೃಂಭಿಸುತ್ತಿದೆ. ಈ ಎರಡು ದೇವಾಲಯದ ಶಿಖರಗಳು ಮಧುಗಿರಿಯ ಎರಡು ನೇತ್ರಗಳಂತೆ ಎದ್ದುಕಾಣುತ್ತಿರುವುದು ಮಧುಗಿರಿ ಮಹಾಜನರ ಪುಣ್ಯ.

      ವಿಶೇಷ ಸಾಂಸ್ಕøತಿಕ ಕಾರ್ಯಕ್ರಮಗಳು: ಮಾ.4 ರ ಮಧ್ಯಾಹ್ನ 3 ರಿಂದ 4 ರವರೆಗೂ ಲಲಿತ ಸಹಸ್ರನಾಮಗಳು, ದೇವರ ಭಜನಾ ಕಾರ್ಯಕ್ರಮ, ಭಕ್ತಿಗೀತೆಗಳ ಭಜನೆ, ಭರತನಾಟ್ಯ, ಸಂಗೀತ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ 12 ರಿಂದ ಬೆಂಗಳೂರಿನ ಪ್ರಶಾಂತ ಭಾರ್ಗವಚಾರ್ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಭಕ್ತರು ಸಕಾಲಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಭಕ್ತ ಮಂಡಳಿ ಕೋರಿದ್ದಾರೆ.

(Visited 251 times, 1 visits today)
Previous Articleವಿಜಯ ಸಂಕಲ್ಪ ಯಾತ್ರೆ : ಬಿಜೆಪಿ ಕಾರ್ಯಕರ್ತರ ಬೈಕ್ ರ್ಯಾಲಿ
Next Article ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪರಿಗೆ ಹಾಲಿ ಶಾಸಕ ಮಸಾಲೆ ಜಯರಾಮ್ ತಿರುಗೇಟು
News Desk Benkiyabale

Related Posts

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

August 19, 2026 5:40 pm news

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm news

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm news
ತಾಜಾ ಸುದ್ಧಿಗಳು
news

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

August 19, 2026 5:40 pm
news

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm
news

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm
news

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm
news

ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

August 19, 2026 5:34 pm
news

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

August 18, 2026 5:00 pm
Our Youtube Channel
Our Picks

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

August 19, 2026 5:40 pm

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm

ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

August 19, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

By News Desk BenkiyabaleAugust 19, 2026 5:40 pm

ತುಮಕೂರು: ಮಕ್ಕಳಿಗೆ ಗುಣಮಟ್ಟದ ಆರೋಗ್ಯ, ಶಿಕ್ಷಣ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು…

ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ

August 19, 2026 5:39 pm

ಹಾಲಿನ ಡೇರಿ ಪಿಲ್ಲರ್ ಕುಸಿದು ವಿದ್ಯಾರ್ಥಿ ಧನುಷ್ ಸಾವು: ಗ್ರಾಮದಲ್ಲಿ ಶೋಕಸಾಗರ

August 19, 2026 5:37 pm

ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ

August 19, 2026 5:36 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.