BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ
  • ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ
  • ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ
  • ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು
  • ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ
  • ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ
  • ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
  • ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದೇವೇಗೌಡರನ್ನು ಬೆಂಬಲಿಸಿದರೆ ತುಮಕೂರು ಮರಳುಗಾಡಾಗುತ್ತದೆ- ಜಿಎಸ್‍ಬಿ
ತುಮಕೂರು ಜಿಲ್ಲಾ ಸುದ್ಧಿಗಳು

ದೇವೇಗೌಡರನ್ನು ಬೆಂಬಲಿಸಿದರೆ ತುಮಕೂರು ಮರಳುಗಾಡಾಗುತ್ತದೆ- ಜಿಎಸ್‍ಬಿ

By News Desk BenkiyabaleUpdated:April 02, 2019 7:17 pm

ತುಮಕೂರು:

       ಹೇಮಾವತಿ ನೀರಿನ ವಿಚಾರದಲ್ಲಿ ತುಮಕೂರಿನ ರೈತರಿಗೆ ವಂಚಿಸಿರುವವರು ಯಾವ ನೈತಿಕತೆಯಲ್ಲಿ ಇಂದು ತುಮಕೂರು ಜನತೆಯ ಮುಂದೆ ಮತ ಯಾಚಿಸುತ್ತಿದ್ದಾರೆ. ಒಂದು ವೇಳೆ ತುಮಕೂರು ಜನತೆ ದೇವೇಗೌಡರನ್ನು ಬೆಂಬಲಿಸಿದರೆ ತುಮಕೂರು ಜಿಲ್ಲೆಯನ್ನು ಮರಳುಗಾಡು ಮಾಡುತ್ತಾರೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಹೇಳಿದರು.

      ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಪಕ್ಷದ ಮುಖಂಡರುಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು ದೇವೇಗೌಡರ ಕುಟುಂಬ ಹೇಮಾವತಿ ನೀರಿನ ವಿಚಾರದಲ್ಲಿ ತುಮಕೂರಿನ ರೈತರ ಕಣ್ಣಲ್ಲಿ ರಕ್ತ ಸುರಿಸಿದ್ದಾರೆ, ಹೇಮಾವತಿ ನಾಲೆಗೆ ಮಣ್ಣು ಸುರಿದು ನೀರನ್ನು ತಡೆದಿರುವುದನ್ನು ನಮ್ಮ ತುಮಕೂರು ಜನತೆ ಮರೆತಿಲ್ಲ, ಈ ಚುನಾವಣೆ ಸ್ವಾಭಿಮಾನದ ಪ್ರಶ್ನೆಯಾಗಿದ್ದು ತುಮಕೂರಿನ ಮತದಾರರು ಪ್ರಜ್ನಾವಂತರಿದ್ದು ಸರಿಯಾದ ಆಯ್ಕೆ ಕೈಗೊಳ್ಳುತ್ತಾರೆ ಎನ್ನುವ ನಂಬಿಕೆಯಿದೆ ಎಂದರು.

      ಲೋಕಸಭೆಗೆ ನಾನು ನಾಲ್ಕುಬಾರಿ ಸಂಸದನಾಗಿ ಆಯ್ಕೆಯಾಗಿದ್ದೇನೆ ಜಿಲ್ಲೆಗೆ ನಾನು ಮಾಡಿರುವ ಕೆಲಸಗಳನ್ನು ಶ್ವೇತಪತ್ರದ ಮೂಲಕ ಜನರಿಗೆ ತಿಳಿಸುತ್ತೇನೆ, ರಾಷ್ಟ ನಿರ್ಮಾಣಕ್ಕೆ ಮುಂದಾಗಿರುವ ನರೇಂದ್ರ ಮೋದಿಯವರನ್ನು ಎದುರಿಸಲು ಪ್ರತಿಪಕ್ಷಗಳು ಘಟಭಂಧನ್ ಮಾಡಿಕೊಂಡಿದ್ದಾರೆ ಆದರೆ ಅದ್ಯಾವುದೂ ನಡೆಯುವುದಿಲ್ಲ ವಿಶ್ವಮಟ್ಟದಲ್ಲಿ ಭಾರತದ ಹೆಸರನ್ನು ಮುಂಚೂಣಿಗೆ ಕೊಂಡೊಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಆಯ್ಕೆ ಮೊತ್ತೊಮ್ಮೆ ಅವಶ್ಯಕತೆಯಿದೆ ಎಂದರು.

      ಶಾಸಕ ಮಸಾಲೆಜಯರಾಮ್ ಮಾತನಾಡಿ ದೇವೇಗೌಡರ ಬಗ್ಗೆ ನನಗೆ ವಯಕ್ತಿಕವಾಗಿ ಗೌರವವಿದೆ ಆದರೆ ರಾಜಕೀಯವಾಗಿ ಒಕ್ಕಲಿಗರ ಸ್ವಾಭಿಮಾನವನ್ನು ಪೆರೀಕ್ಷಿಸುವ ಕೆಲಸ ದೇವೇಗೌಡರ ಕುಟುಂಬ ಮಾಡುತ್ತಿದೆ, ಹಾಸನದಲ್ಲಿ, ಮಂಡ್ಯದಲ್ಲಿ, ತುಮಕೂರಿನಲ್ಲಿ, ಲೋಕಸಭೆಗೆ ಸ್ಪರ್ಧಿಸಬಲ್ಲ ಒಕ್ಕಲಿಗ ಮುಖಂಡರಿಲ್ಲವೇ ಇವರ ಕುಟುಂಬ ರಾಜಕಾರಣವನ್ನು ನೋಡುತ್ತಿದ್ದರೆ ಒಕ್ಕಲಿಗನಾದ ನನಗೆ ಅಸಹ್ಯಹುಟ್ಟುತ್ತದೆ ತುಮಕೂರು ಲೋಕಸಭಾ ಒಕ್ಕಲಿಗ ಸಮುದಾಯದವರ ಸ್ವಾಭಿಮಾನದ ಪ್ರಶ್ನೆ ಈ ಭಾರಿ ದೇವೇಗೌಡರನ್ನು ಸೋಲಿಸಿ ಜಿ.ಎಸ್.ಬಸವರಾಜುರವರನ್ನು ಗೆಲ್ಲಿಸುವುದರ ಮೂಲಕ ನಮ್ಮ ಆತ್ಮಾಭಿಮಾನವನ್ನು ಕಾಪಾಡಿಕೊಲ್ಲುತ್ತೇವೆ. ನಮ್ಮ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದವರು ಜೆಡಿಎಸ್ ಅಭ್ಯರ್ಥಿಗೆ ಮತಹಾಕುವುದಿಲ್ಲ ಈಬಾರಿ ನಮ್ಮ ಅಭ್ಯರ್ಥಿ ಬೆಂಬಲಿಸಲಿದ್ದಾರೆ ಎಂದರಲ್ಲದೆ 23 ರ ನಂತರ ಸರ್ಕಾರ ಫಥನವಾಗಲಿದ್ದು ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.

     ಮಾಜಿ ಶಾಸಕ ಸುರೇಶ್‍ಗೌಡ ಮಾತನಾಡಿ ಡಿ.ಸಿ.ಎಂ.ಪರಮೇಶ್ವರ್ ಅಧಿಕಾರದಾಸೆಗೆ ಪಕ್ಷದಲ್ಲಿನ ಹಾಲಿ ಸಂಸದರಿಗೆ ಟಿಕೆಟ್‍ ಕೈ ತಪ್ಪಿಸಿದ್ದಾ ಹಾಲಿ ಸಂಸದರನ್ನು ಬಿಕಾರಿಮಾಡಿದ್ದು ಇಂದು ಕಾಂಗ್ರೆಸ್ ಮುಕ್ತ ತುಮಕೂರನ್ನಾಗಿ ಮಾಡಲು ಡಾ.ಜಿ.ಪರಮೇಶ್ವರ್ ಹೊರಟಿದ್ದಾರೆ. ಅವರಿಗೆ ತಿಳಿದಿಲ್ಲ ದೇವೇಗೌಡರೇನಾದರೂ ಈ ಭಾರಿ ಗೆದ್ದರೆ ಪರಮೇಶ್ವರ್ ಹೆಸರ ಮುಂದೆ ಮಾಜಿ ಎನ್ನುವ ಪಟ್ಟ ಖಾಯಂ ಆಗಿಬಿಡುತ್ತದೆ ಎಂದು ಎಚ್ಚರಿಸಿದರು.

      ಮಂಡ್ಯ, ಹಾಸನಗಳಿಗೆ ಸಾವಿರಾರು ಕೋಟಿ ಕೊಡುವ ಗೌಡರ ಕುಟುಂಬ ತುಮಕೂರಿನಲ್ಲಿ ಸ್ಪರ್ಧಿಸುವ ಮುಂಚೆ ಯಾಕೆ ಕೊಡಲಿಲ್ಲ, ಹೇಮಾವತಿ ನೀರಿಗೆ ಅಡ್ಡಗಾಲಾಕುವ ಗೌಡರ ಸ್ಪರ್ದೆ ಎಷ್ಟು ಸರಿ, ವೇವೇಗೌಡ ಹಾಗೂ ಕುಮಾರಸ್ವಾಮಿ ಎದುರು ಸತ್ಯ ಹೇಳುವಂತಿಲ್ಲ, ಒಂದೊಮ್ಮೆ ಅವರ ವಿರುದ್ದ ಮಾತನಾಡಿದರೆ ಜಾತಿ ಲಾಭಿ ಮಾಡುತ್ತಾರೆ ಯಾಕೆ ನಾನು ಒಕ್ಕಲಿಗನಲ್ಲವೇ, ಮುದ್ದಹನುಮೇಗೌಡ ಒಕ್ಕಲಿಗನಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

      ಒಕ್ಕಲಿಗ ಸಮುದಾಯದ ಮುಖಂಡರೊಬ್ಬರು ಪ್ರಾಧನಿಯಾಗಿದಿದ್ದು ನನಗೂ ವಯಕ್ತಿಕವಾಗಿ ಸಂತೋಷವಿದೆ. ಈ ವಿಚಾರದಲ್ಲಿ ಅವರಿಗೆ ನಾನು ಸನ್ಮಾನ ಮಾಡುತ್ತೇನೆ, ಹಾರ ತುರಾಯಿ ಹಾಕುತ್ತೇನೆ ಆದರೆ ನನ್ನ ಮತವನ್ನು ಹಾಕುವುದಿಲ್ಲ ಅದೇರೀತಿ ಮತ ಹಾಕಬೇಡಿ ಎಂದು ನಮ್ಮ ಕಾರ್ಯಕರ್ತರಲ್ಲಿ ವಿನಂತಿಯನ್ನು ಮಾಡುತ್ತೇನೆ ಎಂದರು.

      ಕಾರ್ಯಕ್ರಮದಲ್ಲಿ ಶಾಸಕ ಜೆ.ಸಿ.ಮಾದುಸ್ವಾಮಿ, ಮಾಜಿ ವಿಧಾನಪರಿಷತ್ ಸದಸ್ಯ ನರೇಂದ್ರಬಾಬು, ಪಕ್ಷದ ಅಧ್ಯಕ್ಷ ದುಂಡರೇಣುಕಯ್ಯ, ಮಾಜಿ ಜಿ.ಪಂ.ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಮುಖಂಡರಾದ ಕೊಂಡಜ್ಜಿವಿಶ್ವನಾಥ್, ವಿಜಯ್‍ಕುಮರ್, ವಿ.ಬಿ.ಸುರೇಶ್, ವಿ.ಟಿ.ವೆಂಕಟರಾಮ್, ಹೆಡಗಿಹಳ್ಳಿವಿಶ್ವನಾಥ್, ಕಾಳಂಜಿಹಳ್ಳಿ ಸೋಮಣ್ಣ, ಪ್ರಕಾಶ್, ಜಯಶೀಲ, ಚಿದಾನಂದ್ ಇತರರು ಇದ್ದರು.

 

(Visited 28 times, 1 visits today)
Previous Articleಕಾರಿನ ಗಾಜು ಒಡೆದು ಕ್ಯಾಮೆರಾ, ನಗದು ಕಳವು
Next Article ಹೇಮಾವತಿ ನೀರು ಕೊಡುತ್ತಿಲ್ಲ ಎಂಬ ಹೇಳಿಕೆಯಲ್ಲಿ ಸತ್ವವಿಲ್ಲ – ದೇವೇಗೌಡರು
News Desk Benkiyabale

Related Posts

ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ

March 28, 2026 3:43 pm ತುಮಕೂರು ಜಿಲ್ಲಾ ಸುದ್ಧಿಗಳು

ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ

March 28, 2026 3:33 pm ತುಮಕೂರು ಜಿಲ್ಲಾ ಸುದ್ಧಿಗಳು

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm
ತುಮಕೂರು ಜಿಲ್ಲಾ ಸುದ್ಧಿಗಳು

ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ

March 28, 2026 3:43 pm
ಇತರೆ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm
ಇತರೆ ಸುದ್ಧಿಗಳು

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm
ತುಮಕೂರು ಜಿಲ್ಲಾ ಸುದ್ಧಿಗಳು

ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ

March 28, 2026 3:33 pm
ಇತರೆ ಸುದ್ಧಿಗಳು

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
Our Youtube Channel
Our Picks

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm

ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

March 27, 2026 4:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

By News Desk BenkiyabaleMarch 28, 2026 4:00 pm

ತುಮಕೂರು: ನಗರದಲ್ಲಿ ಶುಕ್ರವಾರ ಬೆಳಗ್ಗೆ ೧೧ ಕ್ಕೆ ನಾಟಕಮನೆ ತುಮಕೂರುರವರು ಆಯೋಜಿ ಸಿದ್ದ ವಿಶ್ವ ರಂಗಭೂಮಿ ದಿನಾಚರಣೆ-೨೦೨೬ ನಗರದ ಡಾ.…

ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ

March 28, 2026 3:43 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.