BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • 41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ
  • ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ
  • ೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ
  • ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್
  • ಉತ್ತಮ ಆಡಳಿತ ವಾರ ಕಾರ್ಯಕ್ರಮ
  • ರಾಜ್ಯ ಮಟ್ಟದ ಅಂತರ ಕಾಲೇಜು ಸ್ಪರ್ಧೆ ಉದ್ಘಾಟನೆ
  • ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ
  • ಮಧುಗಿರಿಯಲ್ಲಿ ಅದ್ದೂರಿ ವೈಕುಂಠ ಏಕಾದಶಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದೇವೇಗೌಡರ ಗೆಲುವು ಅನಿವಾರ್ಯ – ಡಿಸಿಎಂ ಪರಮೇಶ್ವರ್
Trending

ದೇವೇಗೌಡರ ಗೆಲುವು ಅನಿವಾರ್ಯ – ಡಿಸಿಎಂ ಪರಮೇಶ್ವರ್

By News Desk BenkiyabaleUpdated:April 03, 2019 6:28 pm

 ತುಮಕೂರು:

      ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಜಿಲ್ಲೆಗೆ ಸೀಮಿತಗೊಳಿಸದೇ, ದೇಶದಲ್ಲಿ ಬಿಜೆಪಿ ವಿರುದ್ಧ ದೊಡ್ಡ ಶಕ್ತಿಯ ನ್ನಾಗಿ ಅವರನ್ನು ಕಾಣಬೇಕಿದ್ದು, ದೇವೇಗೌಡ ಅವರನ್ನು ಗೆಲ್ಲಿಸಬೇಕಾದ ಅನಿವಾರ್ಯತೆ ಇದ್ದು ಈ ನಿಟ್ಟಿನಲ್ಲಿ ಕಾರ್ಯ ಕರ್ತರು ಹೋರಾಟಕ್ಕೆ ಸಿದ್ಧರಾಗಬೇಕಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.

      ನಗರದ ಕೊಲ್ಲಾಪುರದಮ್ಮ ಸಮುದಾಯಭವನದಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತ ನಾಡಿದ ಅವರು, ಮೈತ್ರಿ ಸರ್ಕಾರ ರಚನೆಯಾದಾಗಲೇ ಲೋಕಸಭೆ ಚುನಾವಣೆಯಲ್ಲಿ ಮೋದಿಯನ್ನು ಸೋಲಿಸಲು ಸಿದ್ಧರಾಗಿ ದ್ದೆವೆ. ದೇಶದಲ್ಲಿ ಶಾಂತಿ ನೆಲೆಸಲು, ಸಂವಿಧಾನವನ್ನು ಉಳಿಸಲು ಮಹಾಘಟಿಬಂಧನ್ ಮೂಲಕ ಒಂದಾಗಿದ್ದೇವೆ. ಸಂವಿಧಾನ ಬದಲಿಸಬೇಕು ಎನ್ನುವವರನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ ಎಂದರು.

      ತುಮಕೂರು ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಮೈತ್ರಿ ಸರ್ಕಾರ ಭದ್ರವಾಗಿದೆ. ಬದ್ಧವಾಗಿದೆ. ಸರ್ಕಾರ ಬೀಳುತ್ತದೆ ಎನ್ನುವುದು ಅವರ ಭ್ರಮೆ ಅಷ್ಟೇ, ಜಿಲ್ಲೆಗೆ ಅಗತ್ಯವಿರುವ ನೀರಾವರಿ ಯೋಜನೆಯನ್ನು ಮೈತ್ರಿ ಸರ್ಕಾರ ಮಾಡಲಿದೆ. ಈಗಾಗಲೇ 0-72 ರವರೆಗೆ ಕೆನಾಲ್ ಅಗಲೀಕರಣ ಮಾಡಲಾಗಿದ್ದು, ಈಗ 72-150ವರೆಗೆ ಕೆನಾಲ್ ಅಗಲೀಕರಣ ಹಣ ಮೀಸಲಿಡಲಾಗಿದೆ, ಬಿಜೆಪಿ ಯವರು ನೀರಾವರಿ ಅನ್ನು ಬಿಟ್ಟು ದೇಶದ ಬಗ್ಗೆ ಮಾತನಾಡಿ ಎಂದು ಕುಟುಕಿದರು.
ಬಿಜೆಪಿ ಅಭ್ಯರ್ಥಿ ಬಸವರಾಜುಗೆ ತುಮಕೂರು ಬಿಟ್ಟು ಬೇರೆ ಏನು ಗೊತ್ತಿಲ್ಲ, ನಾಲ್ಕು ಬಾರಿ ಸಂಸದರಾದರೂ ತುಮಕೂರಿಗೆ ಏನು ಮಾಡಲಿಲ್ಲ, ನಮ್ಮ ಪಕ್ಷದಲ್ಲಿದ್ದಾಗ ಅವರನ್ನು ಗೆಲ್ಲಿಸಲು ನಾವೆಲ್ಲ ಹೋರಾಡಿದ್ದೇವೆ, ಮತ ಕೇಳಿದ್ದೇವೆ ಆದರೆ ಈಗ ಅವ ರು ಬಿಜೆಪಿಗೆ ಹೋಗಿದ್ದಾರೆ. ಬಡ,ಶೋಷಿತ ಪರ ಸಿದ್ಧಾಂತವನ್ನು ಮೈತ್ರಿಪಕ್ಷಗಳು ಹೊಂದಿದ್ದರೆ, ಬಿಜೆಪಿ ಕೋಮುವಾದದ ಸಿದ್ಧಾತವನ್ನು ಹೊಂದಿದೆ ಎಂದರು.

      ರೈತರು ಆತ್ಮಹತ್ಯೆ ಮಾಡಿಕೊಂಡಾಗ ಪರಿಹಾರವನ್ನು ನೀಡದ ಮೋದಿ ಚುನಾವಣೆ ಹತ್ತಿರ ಬಂದಾಗ 2000 ರೂ ಕೊಡಲು ಮುಂದಾಗಿದ್ದಾರೆ. ರಫೇಲ್ ಹಗರಣದಲ್ಲಿ 40 ಸಾವಿರ ಕೋಟಿಗೆ ಲೆಕ್ಕ ಇಲ್ಲ, ಬ್ಯಾರಲ್ ಬೆಲೆ ಕಡಿಮೆ ಇದ್ದರು ತೆರಿಗೆ ಜಾಸ್ತಿ ಮಾಡಿ 2.5 ಲಕ್ಷ ಕೋಟಿ ಸಂಪಾದನೆ ಮಾಡಿದ ಮೋದಿ ರೈತರಿಗೆ ಸಾಲಮನ್ನಾ ಮಾಡಲಿಲ್ಲ ಈಗ ಐದು ವರ್ಷದಲ್ಲಿ ಭಾರತದಲ್ಲಿ ಬದಲಾವಣೆ ತರುವುದಾಗಿ ಹೇಳುತ್ತಿದ್ದಾರೆ, ಹಳೇ ಭರವಸೆಯನ್ನು ಈಡೇರಿಸದೇ ಇರುವವರು ಹೊಸ ಭರವಸೆ ನೀಡುತ್ತಿದ್ದಾರೆ ಎಂದರು.

      ಮೋದಿ ಅಧಿಕಾರಕ್ಕೆ ಬರಲಿಕ್ಕೆ ಮಾಧ್ಯಮ ಕಾರಣ, 10 ಕೋಟಿ ಉದ್ಯೋಗ ಎಲ್ಲಿ, ರೈತರ ಸಾವಿಗೆ ಪರಿಹಾರ ಕೊಟ್ಟಿಲ್ಲ, ಮೋದಿ ಅವರ ಸುಳ್ಳುಗಳ ಬಗ್ಗೆ ಮೈತ್ರಿ ಕಾರ್ಯಕರ್ತರು ಮುಖಂಡರು ಮನೆ ಮನೆಗೆ ಹೋಗಿ ಪ್ರಚಾರ ಮಾಡಬೇಕು, ಮೈತ್ರಿ ಪರವಾಗಿ ಮತ ಕೇಳುವ ಮೂಲಕ ಮೈತ್ರಿ ಅಭ್ಯರ್ಥಿಗೆ ಬಹುಮತವನ್ನು ಕೊಡಿಸಬೇಕಿದ್ದು, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದು, ಮೋದಿ ಬಣ್ಣ ಬಯಲು ಮಾಡಲು ದೇವೇಗೌಡರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದರು.

      ಸಚಿವ ಎಸ್.ಆರ್.ಶ್ರೀನಿವಾಸ್ ಮಾತನಾಡಿ ಇಡೀ ದೇಶದಲ್ಲಿ ಸುಳ್ಳು ಹೇಳುವ ಸ್ಪರ್ಧೆಯಲ್ಲಿ ಮೋದಿಯನ್ನು ಬಿಟ್ಟರೆ ಬೇರೆ ಯಾರಿಗೂ ಪ್ರಶಸ್ತಿ ಸಿಗುವುದಿಲ್ಲ, ಹಾಗೆಯೇ ತುಮಕೂರಿನಲ್ಲಿ ಬಸವರಾಜು ಅವರಂತೆ ಸುಳ್ಳು ಹೇಳುವವರಿಲ್ಲ, ನಾಲ್ಕು ಬಾರಿ ಸಂಸದರಾದವರು ಮೋದಿ ಹೆಸರಲ್ಲಿ ಮತ ಕೇಳುವುದಕ್ಕೆ ನಾಚಿಕೆಯಾಗುವುದಿಲ್ಲ, ಚುನಾವಣೆಗೆ ಸ್ಪರ್ಧಿಸಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.

      ಬಿಜೆಪಿಯವರು ಹೇಮಾವತಿ ಬಿಟ್ಟು ಬೇರೆ ಯಾವ ವಿಚಾರವನ್ನು ಮಾತನಾಡುತ್ತಿಲ್ಲ, ಅಪಪ್ರಚಾರದ ಮೂಲಕ ಚುನಾವಣೆ ಗೆಲ್ಲಲ್ಲು ಕಸರತ್ತು ಮಾಡುತ್ತಿದ್ದಾರೆ. ನಾಲ್ಕು ಬಾರೀ ಸಂಸದರಾದವರು ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಹೇಳಲಿ, ನೇತ್ರಾವತಿ ತಿರುವು ಯೋಜನೆ ಹೆಸರಲ್ಲಿ ನಾಲ್ಕು ಬಾರಿ ಅಧಿಕಾರಕ್ಕೆ ಬಂದ ಬಸವರಾಜು ಹಾಗೂ ಬಿಜೆಪಿ ಪಕ್ಷಕ್ಕೆ ಚುನಾವಣೆ ಬಂದ ತಕ್ಷಣ ಹೇಮಾವತಿ ನೆನಪಿಗೆ ಬರುತ್ತದೆ ಎಂದು ಲೇವಡಿ ಮಾಡಿದರು.

       ಮಾಜಿ ಪ್ರಧಾನಿ ಗೆಲ್ಲಿಸಿದ ಕೀರ್ತಿ ತುಮಕೂರು ಜಿಲ್ಲೆಯ ಜನರು ಪಡೆದುಕೊಳ್ಳಬೇಕಿದೆ. ಮೈತ್ರಿ ಪಕ್ಷದ ಮುಖಂಡರು ಸಣ್ಣ ಸಣ್ಣ ಮನಸ್ತಾಪಗಳನ್ನು ಬಿಟ್ಟು ನಾನೇ ದೇವೇಗೌಡ ಎನ್ನುವಂತೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದ್ದು, ಜಿಲ್ಲೆಯ ಅಭಿವೃದ್ಧಿಗೆ ಮೈತ್ರಿ ಸರ್ಕಾರ ಬದ್ಧವಾಗಿದೆ ಮಹತ್ವದ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಬೇಕಾದ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದು ಹೇಳಿದರು.

      ಜೆಡಿಎಸ್ ಮುಖಂಡ ಗೋವಿಂದರಾಜು ಮಾತನಾಡಿ ಮೈತ್ರಿ ಧರ್ಮದಂತೆ ತುಮಕೂರು ನಗರದಲ್ಲಿ ಜೆಡಿಎಸ್-ಕಾಂಗ್ರೆಸ್ ಒಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಶ್ರಮಿಸಬೇಕಿದ್ದು, ಎಲ್ಲ ಮುಖಂಡರು ಸಹಕಾರ ನೀಡುವಂತೆ ಕೋರಿದರು.

       ಮಾಜಿ ಶಾಸಕ ರಫೀಕ್ ಅಹ್ಮದ್, ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್‍ಬಾಬು ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ವೇಣುಗೋಪಾಲ್ ಬೆಮಲ್ ಕಾಂತರಾಜು, ಚೌಡರೆಡ್ಡಿ ತೂಪಲ್ಲಿ ಜಿ.ಪಂಅಧ್ಯಕ್ಷೆ ಲತಾ, ಮೇಯರ್ ಲಲಿತಾ, ಉಪ ಮೇಯರ್ ರೂಪ, ಮಾಜಿ ಶಾಸಕ ಶಫೀ ಅಹ್ಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಗೀತಾರುದ್ರೇಶ್, ಪ್ರೊ.ರಾಧಾಕೃಷ್ಣ, ಸಚಿವ ಶ್ರೀನಿವಾಸ್, ತು.ಬಿ.ಮಲ್ಲೇಶ್, ನರಸೀಯಪ್ಪ, ನಯಾಜ್ ಅಹ್ಮದ್ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

(Visited 16 times, 1 visits today)
Previous Articleಜನಪ್ರತಿನಿಧಿಗಳು ಬರಗಾಲವನ್ನು ಎದುರಿಸಲು ವಿಫಲವಾಗಿದ್ದಾರೆ-ಕೆಎನ್‍ಆರ್
Next Article ಹಿಂದುಳಿದವರ ಬಗ್ಗೆ ದೇವೇಗೌಡರ ಮೊಸಳೆ ಕಣ್ಣೀರು-ಶಾಸಕ ಜೆ.ಸಿ ಮಾಧುಸ್ವಾಮಿ
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

January 02, 2026 3:50 pm
ಇತರೆ ಸುದ್ಧಿಗಳು

ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ

January 02, 2026 3:20 pm
ಇತರೆ ಸುದ್ಧಿಗಳು

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

January 02, 2026 2:54 pm
ಇತರೆ ಸುದ್ಧಿಗಳು

ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್

January 02, 2026 2:46 pm
ಇತರೆ ಸುದ್ಧಿಗಳು

ಉತ್ತಮ ಆಡಳಿತ ವಾರ ಕಾರ್ಯಕ್ರಮ

January 02, 2026 2:19 pm
ಇತರೆ ಸುದ್ಧಿಗಳು

ರಾಜ್ಯ ಮಟ್ಟದ ಅಂತರ ಕಾಲೇಜು ಸ್ಪರ್ಧೆ ಉದ್ಘಾಟನೆ

January 02, 2026 1:53 pm
Our Youtube Channel
Our Picks

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

January 02, 2026 3:50 pm

ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ

January 02, 2026 3:20 pm

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

January 02, 2026 2:54 pm

ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್

January 02, 2026 2:46 pm

ಉತ್ತಮ ಆಡಳಿತ ವಾರ ಕಾರ್ಯಕ್ರಮ

January 02, 2026 2:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

By News Desk BenkiyabaleJanuary 02, 2026 3:50 pm

ತುಮಕೂರು: ದೇಶಕ್ಕೆ ಸ್ವಾತಂತ್ರ ಬಂದು ೭೮ ವರ್ಷ ಕಳೆದರು ಸಂವಿಧಾನದ ಅರ್ಟಿಕಲ್ ೨೧(ಎ)ಅಡಿಯಲ್ಲಿ ದೇಶದ ಮಕ್ಕಳಿಗೆ ಉಚಿತ ಗುಣಮಟ್ಟದ ಶಿಕ್ಷಣ…

ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ

January 02, 2026 3:20 pm

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

January 02, 2026 2:54 pm

ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್

January 02, 2026 2:46 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.