BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ
  • ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ
  • ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ
  • ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ
  • ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
  • ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
  • ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
  • ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕನ್ನಡ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಶಾಸಕರ ಹಸ್ತಕ್ಷೇಪ : ಆರೋಪ
ತುಮಕೂರು ಜಿಲ್ಲಾ ಸುದ್ಧಿಗಳು

ಕನ್ನಡ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಶಾಸಕರ ಹಸ್ತಕ್ಷೇಪ : ಆರೋಪ

By News Desk BenkiyabaleUpdated:November 03, 2018 5:00 pm

ತಿಪಟೂರು :

      ತಾಲ್ಲೂಕು ಆಡಳಿತ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಲ್ಲಿನ ಶಾಸಕರು ಬಿಜೆಪಿ ಕಾರ್ಯಕರ್ತರಿಗೆ ಹಾಗೂ ತಮ್ಮ ಹಿಂಬಾಲಕರಿಗೆ ನೀಡಿದ್ದು, ಪ್ರಶಸ್ತಿ ಆಯ್ಕೆಯಲ್ಲಿ ಸರಿಯಾದ ಮಾನದಂಡ ಬಳಕೆಯಾಗಿಲ್ಲ ಎಂದು ಜಯ ಕರ್ನಾಟಕ ಸಂಘಟನೆ ತಾ. ಅಧ್ಯಕ್ಷ ಬಿ.ಟಿ. ಕುಮಾರ್ ಗಂಭೀರ ಆರೋಪ ಮಾಡಿದರು.

      ಈ ಸಂಬಂಧ ನಗರದಲ್ಲಿ ಗುರುವಾರ ಸಂಜೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಬಾರಿ ಎಲ್ಲಾ ಕ್ಷೇತ್ರಗಳನ್ನು ಗುರುತಿಸಿ ತಾಲ್ಲೂಕು ಆಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು. ಆದರೆ ಈ ಬಾರಿ ಕ್ರೀಡೆ, ಪತ್ರಿಕೋದ್ಯಮ, ವೈದ್ಯಕೀಯ, ಕನ್ನಡಪರ ಹೋರಾಟಗಾರ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಬಿಟ್ಟು ಕೇವಲ ಜಾತಿ ರಾಜಕಾರಣದ ಆಧಾರದ ಮೇಲೆ ತಾ. ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಆಯ್ಕೆ ಸಂದರ್ಭದಲ್ಲಿ ಶಾಸಕರು ತಮಗೆ ಬೇಕಾದವರ ಹೆಸರನ್ನು ಸೇರಿಸಿ ಪ್ರಶಸ್ತಿ ನೀಡಲು ಸಹಕರಿಸಿದ್ದಾರೆ. ಪ್ರಶಸ್ತಿ ಪಡೆದವರು ಬಹುತೇಕ ಶಾಸಕರ ಹಿಂಬಾಲಕರಾಗಿದ್ದಾರೆ. ಶಾಸಕರೇ ಸಾಧನೆ ಮಾಡದ ಹಾಗೂ ಜನರ ನಡುವೆ ಗುರ್ತಿಸಿಕೊಳ್ಳದ ವ್ಯಕ್ತಿಗಳಿಗೆ ಹೇಗೆ ಪ್ರಶಸ್ತಿ ನೀಡಿದ್ದೀರಿ?. ಇಂತಹ ಪ್ರಶಸ್ತಿಗಳನ್ನು ನೀಡುವಾಗ ನಿಮ್ಮ ಜಾತಿ ರಾಜಕೀಯವನ್ನು ಬೆರಸಬೇಡಿ. ತಾಲ್ಲೂಕಿನಲ್ಲಿ ಸಾಕಷ್ಟು ಮಂದಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸೇವೆ ಮಾಡಿದವರಿದ್ದಾರೆ. ಅವರನ್ನೆಲ್ಲ ಬಿಟ್ಟು ನಿಮಗೆ ಬೇಕಾದವರನ್ನು ಆಯ್ಕೆ ಮಾಡುವುದಕ್ಕೆ ಇದು ನಿಮ್ಮ ಪಕ್ಷದ ಕಾರ್ಯಕ್ರಮವಲ್ಲ. ಪ್ರಶಸ್ತಿಯ ಸಂಖ್ಯೆ ಕೂಡ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಕಡಿಮೆಯಾಗಿದೆ ಎಂದು ಪ್ರಶ್ನಿಸಿದರು. ಈ ಬಾರಿಯ ಆಯ್ಕೆಯ ಮಾನದಂಡ ಸರಿಯಾಗಿಲ್ಲ ಎಂಬುದು ಪ್ರತಿಯೊಬ್ಬರಿಗೂ ತಿಳಿಯುತ್ತದೆ. ನಮ್ಮ ಸಂಘಟನೆಯು ಕನ್ನಡ ರಾಜ್ಯೋತ್ಸವದಂದು ಕಪ್ಪು ಬಾವುಟ ಪ್ರದರ್ಶನ ಮಾಡಿ ಶಾಸಕರ ಆಯ್ಕೆ ಪಟ್ಟಿ ವಿರುದ್ದ ಪ್ರತಿಭಟನೆ ಮಾಡಬೇಕೆಂಬ ತೀರ್ಮಾನ ಮಾಡಿದ್ದೇವು. ಆದರೆ ಕನ್ನಡಾಂಬೆಗೆ ಅಗೌರವ ತೋರಿಸಬಾರದೆಂಬ ಉದ್ದೇಶಕ್ಕಾಗಿ ಪ್ರತಿಭಟನೆ ಮಾಡಲಿಲ್ಲ. ಆಯ್ಕೆ ಮಾಡಿರುವ ಸಾಧಕರ ಸಾಧನೆಯ ವಿವರವನ್ನು ಶಾಸಕರು ಮತ್ತು ತಾಲ್ಲೂಕು ಆಡಳಿತ ಬಹಿರಂಗ ಪಡಿಸಲಿ. ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದೆಂದು ಎಚ್ಚರಿಕೆ ನೀಡಿದರು.

      ಛಲವಾದಿ ಮಹಾಸಭಾದ ತಾ. ಅಧ್ಯಕ್ಷ ಬಜಗೂರು ಮಂಜುನಾಥ್ ಮಾತನಾಡಿ, ತಾಲ್ಲೂಕಿನಲ್ಲಿ ಅನೇಕರು ಸಾಧಕರು ಇದ್ದರೂ ಕೂಡ ಶಾಸಕರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದ್ದು, ತಾಲ್ಲೂಕಿಗೆ ಮಾಡಿದ ಅವಮಾನ ಎಂದರು.

      ಸುದ್ದಿಗೋಷ್ಠಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಂಚಿತ ಕ್ರೀಡಾಪಟು ಜಗದೀಶ್, ಸಂಘಟನೆಯ ಪದಾಧಿಕಾರಿಗಳಾದ ಮೋಹನ್‍ಬಾಬು, ಖಲಂದರ್, ಕಾಂತರಾಜ್, ದೇವರಾಜು, ರಾಜೇಶ್, ಸೋಮಶೇಖರ್, ಕುಮಾರಯ್ಯ, ಯೋಗೀಶ್, ರಾಕೇಶ್, ಪ್ರಶಾಂತ್ ಮತ್ತಿತರರಿದ್ದರು.

(Visited 25 times, 1 visits today)
Previous Articleಡಾ.ರಾಜ್‍ಕುಮಾರ್ ಹೆಬ್ಬಾಗಿಲು ಉದ್ಘಾಟನೆ
Next Article ಶ್ರೀರಾಮ ಪ್ರತಿಮೆ ಸ್ಥಾಪನೆಗೆ ಮುಂದಾದ ಯೋಗಿ ಸರ್ಕಾರ
News Desk Benkiyabale

Related Posts

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm news

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm news

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm news
ತಾಜಾ ಸುದ್ಧಿಗಳು

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm
Our Youtube Channel
Our Picks

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

By News Desk BenkiyabaleJuly 06, 2026 5:50 pm

ತುಮಕೂರು: ಹಸಿರು ಕ್ರಾಂತಿಯ ಹರಿಕಾರ, ರಾಷ್ಟçನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ…

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.