BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
  • ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ
  • “ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ
  • ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ
  • ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು: ಮತ ಎಣಿಕೆಗೆ ಸಕಲ ಸಿದ್ಧತೆ!
Trending

ತುಮಕೂರು: ಮತ ಎಣಿಕೆಗೆ ಸಕಲ ಸಿದ್ಧತೆ!

By News Desk BenkiyabaleUpdated:May 22, 2019 10:14 pm

ತುಮಕೂರು:

      ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯು ಇಂದು ಬೆಳಿಗ್ಗೆ 8 ಗಂಟೆಯಿಂದ ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದಲ್ಲಿ ನಡೆಯಲಿದೆ.

      ಇದಕ್ಕೂ ಮುನ್ನ 7.30 ಗಂಟೆಗೆ ಚುನಾವಣೆ ವೀಕ್ಷಕರು ಹಾಗೂ ರಾಜಕೀಯ ಪಕ್ಷಗಳ ಏಜೆಂಟರ ಸಮಕ್ಷಮದಲ್ಲಿ ಮತ ಯಂತ್ರಗಳನ್ನು ಇರಿಸಿರುವ ಭದ್ರತಾ ಕೊಠಡಿಯನ್ನು ತೆರೆಯಲಾಗುವುದು. ತುಮಕೂರು ಲೋಕಸಭಾ ಕ್ಷೇತ್ರಕ್ಕೊಳಪಡುವ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಮಧುಗಿರಿ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತ ಎಣಿಕೆಯನ್ನು ವಿಜ್ಞಾನ ಕಾಲೇಜಿನಲ್ಲಿ ಹಾಗೂ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ ಮತ್ತು ಗುಬ್ಬಿ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತ ಎಣಿಕೆಯು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬಿಗಿ ಭದ್ರತೆಯಲ್ಲಿ ನಡೆಯಲಿದೆ.

      ಮತ ಎಣಿಕೆಗಾಗಿ ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ 13 ಟೇಬಲ್ ಹಾಗೂ ಉಳಿದಂತೆ 7 ವಿಧಾನಸಭಾ ಕ್ಷೇತ್ರಗಳಿಗೆ ಪ್ರತಿ ಕ್ಷೇತ್ರಕ್ಕೆ ತಲಾ 14 ಟೇಬಲ್‍ಗಳಂತೆ ಒಟ್ಟು 111 ಟೇಬಲ್‍ಗಳನ್ನು ವ್ಯವಸ್ಥೆ ಮಾಡಲಾಗಿದೆ. ಚಿಕ್ಕನಾಯಕನಹಳ್ಳಿ(262 ಮತಗಟ್ಟೆ), ತುಮಕೂರು ನಗರ(254 ಮತಗಟ್ಟೆ), ಹಾಗೂ ಕೊರಟಗೆರೆ(242 ಮತಗಟ್ಟೆ) ಕ್ಷೇತ್ರದ ಮತ ಎಣಿಕೆಯನ್ನು 19 ಸುತ್ತಿನಲ್ಲಿ, ಮಧುಗಿರಿ(248 ಮತಗಟ್ಟೆ)ಕ್ಷೇತ್ರದ ಎಣಿಕೆಯನ್ನು 18 ಸುತ್ತಿನಲ್ಲಿ, ತಿಪಟೂರು(233 ಮತಗಟ್ಟೆ), ತುರುವೇಕೆರೆ (229 ಮತಗಟ್ಟೆ) ಹಾಗೂ ತುಮಕೂರು ಗ್ರಾಮಾಂತರ (226 ಮತಗಟ್ಟೆ) ಮತ ಎಣಿಕೆಯನ್ನು 17 ಸುತ್ತಿನಲ್ಲಿ, ಗುಬ್ಬಿ(213 ಮತಗಟ್ಟೆ) ಕ್ಷೇತ್ರದ ಎಣಿಕೆಯನ್ನು 16 ಸುತ್ತಿನಲ್ಲಿ ನಡೆಯಲಿದೆ. ಪ್ರತಿ ಟೇಬಲ್‍ಗೆ ಒಬ್ಬ ಎಣಿಕೆ ಸೂಪರ್‍ವೈಸರ್, ಒಬ್ಬ ಎಣಿಕೆ ಸಹಾಯಕ ಹಾಗೂ ಮೈಕ್ರೋ ಅಬ್ಸರ್ವರ್‍ಗಳನ್ನು ನಿಯೋಜಿಸಲಾಗಿದೆ.

ಅಂಚೆ ಮತ ಪತ್ರ ಎಣಿಕೆ :-

       ಸೇವೆಯಲ್ಲಿರುವವರ ETPBS (Electronically transmitted postal ballot system)  ಮತ ಪತ್ರ ಹಾಗೂ ಅಂಚೆ ಮತ ಪತ್ರಗಳ ಎಣಿಕೆಯನ್ನು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನಲ್ಲಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಇಟಿಪಿಬಿಎಸ್‍ಗಾಗಿ 2 ಟೇಬಲ್, ಅಂಚೆ ಮತ ಪತ್ರಗಳ ಮತ ಎಣಿಕೆಗಾಗಿ 4 ಟೇಬಲ್‍ಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್‍ಗೆ ಒಬ್ಬರು ಸೂಪರ್‍ವೈಸರ್ ಹಾಗೂ ಇಬ್ಬರು ಸಹಾಯಕರನ್ನು ನೇಮಕ ಮಾಡಲಾಗಿದೆ. ಅಂಚೆ ಮತ ಪತ್ರ ಸ್ವೀಕರಿಸಲು ಮೇ 23ರ ಬೆಳಿಗ್ಗೆ 7.59 ಗಂಟೆಯವರೆಗೂ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.

ವೀಕ್ಷಕರ ವೀಕ್ಷಣೆಯಲ್ಲಿ ಮತ ಎಣಿಕೆ :-

      ತುಮಕೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯದ ವೀಕ್ಷಣೆಗಾಗಿ 4 ಮಂದಿ ವೀಕ್ಷಕರನ್ನು ನಿಯೋಜಿಸಲಾಗಿದ್ದು, ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರು ಕ್ಷೇತ್ರಗಳಿಗೆ ಹೇಮಂತಕುಮಾರ್ ಪಧಿ, ತುರುವೇಕೆರೆ ಹಾಗೂ ತುಮಕೂರು ನಗರ ಕ್ಷೇತ್ರಕ್ಕೆ ರೀನಾಸಿಂಗ್, ತುಮಕೂರು ಗ್ರಾಮಾಂತರ ಹಾಗೂ ಕೊರಟಗೆರೆ ಕ್ಷೇತ್ರಕ್ಕೆ ಬನ್ಷ್ ಬಹಾದೂರ್ ವರ್ಮ, ಗುಬ್ಬಿ ಹಾಗೂ ಮಧುಗಿರಿ ಕ್ಷೇತ್ರಕ್ಕೆ ಶೀಲ್‍ಧರ್ ಸಿಂಗ್ ಯಾದವ್ ಇವರ ವೀಕ್ಷಣೆಯಲ್ಲಿ ಮತ ಎಣಿಕೆ ನಡೆಯಲಿದೆ.

      ಎನ್‍ಐಸಿ ಸಾಫ್ಟ್‍ವೇರ್ ಮತ್ತು ಸುವಿಧ ಸಾಫ್ಟ್‍ವೇರ್‍ನಲ್ಲಿ ಮತದಾನದ ಅಂಕಿ-ಅಂಶಗಳನ್ನು ಎಂಟ್ರಿ ಮಾಡಿ ಅಪ್‍ಲೋಡ್ ಮಾಡಲಾಗುವುದು. ಪ್ರತಿ ರೌಂಡ್‍ನ ಪ್ರಗತಿಯನ್ನು ಮೈಕ್ ಮೂಲಕ ಪ್ರಕಟಿಸಲು ಕ್ರಮವಹಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಮಾಹಿತಿಯನ್ನು ಸುವಿಧ ಸಾಫ್ಟ್‍ವೇರ್‍ನಲ್ಲಿ ಅಪ್ ಲೋಡ್ ಮಾಡಿದ ನಂತರ ಸಾರ್ವಜನಿಕರು ವೀಕ್ಷಿಸಬಹುದಾಗಿದೆ.

       ಮತ ಎಣಿಕೆ ಏಜೆಂಟರ್‍ಗಳಿಗೆ ಪಾಸ್‍ಗಳನ್ನು ಈಗಾಗಲೇ ವಿತರಿಸಲಾಗಿದ್ದು, ಪಾಸ್‍ಗಳನ್ನು ತಂದವರಿಗೆ ಮಾತ್ರ ನಿಗಧಿತ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಟೇಬಲ್‍ಗಳಿಗೆ ಪ್ರವೇಶ ನೀಡಲಾಗುವುದು. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರುಗಳಿಗೆ ಎಣಿಕಾ ಕೇಂದ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು. ಮತ ಎಣಿಕಾ ಕೇಂದ್ರಕ್ಕೆ ಎಣಿಕೆ ಏಜೆಂಟರುಗಳು ಮೊಬೈಲ್, ಕ್ಯಾಮೆರಾ, ಕ್ಯಾಲಿಕ್ಯುಲೇಟರ್, ಸಿಗರೇಟ್, ಬೀಡಿ, ಮದ್ಯ, ನೀರು, ನೀರಿನ ಬಾಟಲ್, ಇಂಕ್‍ಪೆನ್, ತಂಬಾಕು ವಸ್ತುಗಳು, ಯಾವುದೇ ರೀತಿಯ ಆಯುಧಗಳನ್ನು ಮತ ಎಣಿಕಾ ಕೇಂದ್ರದೊಳಗೆ ತರುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಮೇ 23ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ತುಮಕೂರಿನಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಬಿಗಿಭದ್ರತೆ :-

     ಮತ ಎಣಿಕಾ ಕಾರ್ಯವನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ 7 ಡಿಎಸ್‍ಪಿ, 12 ಸಿಪಿಐ, 28 ಪಿಎಸ್‍ಐ, 47 ಎಎಸ್‍ಐ, 174 ಹೆಚ್‍ಸಿ/ಟಿಸಿ, 37 ಡಬ್ಲ್ಯೂಪಿಸಿ ಸಿಬ್ಬಂದಿಗಳನ್ನು ಹಾಗೂ 6 ಕೆಎಸ್‍ಆರ್‍ಪಿ(210 ಮಂದಿ) ತುಕಡಿ, 1 ಬಿ.ಎಸ್.ಎಫ್(100 ಮಂದಿ), 1 ಸಿಎಪಿಎಫ್ (50 ಮಂದಿ) ಸೇರಿದಂತೆ 600 ಅರೆ ಸೇನಾ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಸಂಚಾರ ಬದಲು :-

      ಬಿ.ಹೆಚ್.ರಸ್ತೆಯ ವಿವಿ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿರುವುದರಿಂದ ಬೆಂಗಳೂರು ಕಡೆ ಹೋಗುವ ಭಾರಿ ವಾಹನಗಳ ಸಂಚಾರವನ್ನು ಕೆಎಸ್‍ಆರ್‍ಟಿಸಿ ಬಸ್‍ನಿಲ್ದಾಣದಿಂದ ಕೋತಿತೋಪು, ಹನುಮಂತಪುರ ಮಾರ್ಗ ಹಾಗೂ ಒಳ ಬರಲು ಹನುಮಂತಪುರ, ಕೋತಿತೋಪು ಮೂಲಕ ಸಂಚರಿಸಲು ಮಾರ್ಗ ಬದಲಾವಣೆ ವ್ಯವಸ್ಥೆ ಮಾಡಲಾಗಿದೆ. ಲಘು ವಾಹನಗಳು ಎಸ್.ಐ.ಟಿ., ಗಂಗೋತ್ರಿ ನಗರ, ಎಸ್.ಎಸ್.ಪುರಂ, ಭದ್ರಮ್ಮ ವೃತ್ತದಿಂದ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ ಹಾಗೂ ಬಿ.ಹೆಚ್.ರಸ್ತೆಯ 9ನೇ ಕ್ರಾಸ್‍ನಿಂದ ಶಿವಕುಮಾರ ಸ್ವಾಮೀಜಿ ಸರ್ಕಲ್‍ವರೆಗೂ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಸುಸಜ್ಜಿತ ಮಾಧ್ಯಮ ಕೇಂದ್ರ :-

      ಮಾಧ್ಯಮ ಪ್ರತಿನಿಧಿಗಳ ಅನುಕೂಲಕ್ಕಾಗಿ ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನಲ್ಲಿ ಮಾಧ್ಯಮ ಕೇಂದ್ರ ತೆರೆಯಲಾಗಿದೆ. ಮತ ಎಣಿಕಾ ಫಲಿತಾಂಶವನ್ನು ವೀಕ್ಷಿಸಲು ಡಿಸ್‍ಪ್ಲೇ ಪರದೆ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಸುತ್ತಿನ ಎಣಿಕೆ ಮಾಹಿತಿಯನ್ನು ಪ್ರದರ್ಶಿಸಲಾಗುವುದು. ಮಾಧ್ಯಮದವರ ಮಾಹಿತಿ ರವಾನೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

      ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ರಾಕೇಶ್ ಕುಮಾರ್ ಹಾಗೂ ಚುನಾವಣಾ ವೀಕ್ಷಕರು ಇಂದು ತುಮಕೂರು ವಿವಿ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಮತ ಎಣಿಕೆಯನ್ನು ಸುಗಮವಾಗಿ ನಡೆಸಲು ಸಿದ್ಧತೆಗಳನ್ನು ಅಂತಿಮವಾಗಿ ಪರಿಶೀಲಿಸಿದರು.

 

(Visited 16 times, 1 visits today)
Previous Articleಜಿಲ್ಲಾಸ್ಪತ್ರೆಯಲ್ಲಿ ಉಚಿತ ಸಿಟಿ ಮತ್ತು ಎಂಆರ್ ಐ ಸ್ಕ್ಯಾನ್ ಸೌಲಭ್ಯ
Next Article ದೊಡ್ಡಗೌಡರ ರಾಜಕೀಯ ಅಧ್ಯಾಯಕ್ಕೆ ಚರಮಗೀತೆ
News Desk Benkiyabale

Related Posts

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm news
ತಾಜಾ ಸುದ್ಧಿಗಳು
news

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm
news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm
news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm
news

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm
news

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
news

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm
Our Youtube Channel
Our Picks

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

By News Desk BenkiyabaleSeptember 05, 2026 4:13 pm

ತುಮಕೂರು: ಸರ್ಕಾರದ ಆಡಳಿತ ವ್ಯವಸ್ಥಿತವಾಗಿ ನಡೆಯಬೇಕು. ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ…

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.