BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
  • ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್
  • ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ
  • ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ
  • ಗ್ರಾ.ಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ: ಅಧಿಸೂಚನೆ
  • ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಉದಾಸೀನವೇ ಡೆಂಗ್ಯು ಪ್ರಕರಣ ಹೆಚ್ಚಾಗಲು ಕಾರಣ
Trending

ಉದಾಸೀನವೇ ಡೆಂಗ್ಯು ಪ್ರಕರಣ ಹೆಚ್ಚಾಗಲು ಕಾರಣ

By News Desk BenkiyabaleUpdated:July 31, 2019 6:19 pm

ತುಮಕೂರು:

      ಡೆಂಗ್ಯು, ಚಿಕುನ್‍ಗುನ್ಯಾ, ಮಲೇರಿಯಾ, ನಿಫಾ ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗಲು ನಮ್ಮಲ್ಲಿರುವ ಉದಾಸೀನ ಮನೋಭಾವವೇ ಕಾರಣ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ|| ಸಿದ್ದೇಗೌಡ ಬೇಸರ ವ್ಯಕ್ತಪಡಿಸಿದರು.

       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನರ್ಸಿಂಗ್ ಕಾಲೇಜ್, ಎನ್‍ಸಿಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಗಳ ಸಂಯುಕ್ತಾಶ್ರಯದಲ್ಲಿ ಮಹಾನಗರ ಪಾಲಿಕೆ ಆವರಣದಲ್ಲಿಂದು ಹಮ್ಮಿಕೊಂಡಿದ್ದ “ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮ”ವನ್ನುದ್ದೇಶಿಸಿ ಅವರು ಮಾತನಾಡಿದರು.

      ಡೆಂಗ್ಯು ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ರೋಗ ಹರಡದಂತೆ ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜನಸಾಮಾನ್ಯರಿಗೆ ತಿಳುವಳಿಕೆ ಇದ್ದರೂ ಸಹ ಉದಾಸೀನ ನಡವಳಿಕೆ ತೋರುತ್ತಿದ್ದಾರೆ. ರೋಗ ತಗುಲಿದಾಗ ವಾಸಿ ಮಾಡುವುದಕ್ಕಿಂತ ರೋಗ ಹರಡದಂತೆ ನಿಯಂತ್ರಿಸುವುದೇ ಬಹುಪಾಲು ಮೇಲು. ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಲ್ಲಿ ಯಾವುದೇ ಸಾಂಕ್ರಾಮಿಕ ರೋಗಗಳು ಹರಡುವುದಿಲ್ಲ. ಆರೋಗ್ಯವಿರದ ಸಂಪತ್ತಿಗೆ ಯಾವುದೇ ಕಿಮ್ಮತ್ತಿರುವುದಿಲ್ಲ. ಈ ನಿಟ್ಟಿನಲ್ಲಿ ಸ್ವಇಚ್ಚಾಶಕ್ತಿಯಿಂದ ಆರೋಗ್ಯಕರ ಸಮಾಜ ನಿರ್ಮಾಣದ ಜವಾಬ್ದಾರಿಯನ್ನು ಅರಿತು ನಾವೆಲ್ಲರೂ ನೈತಿಕ ಹೊಣೆ ಹೊರುವ ಮೂಲಕ ತುಮಕೂರನ್ನು ಡೆಂಗ್ಯು ಮುಕ್ತ ಜಿಲ್ಲೆಯನ್ನಾಗಿ ಮಾಡುವಲ್ಲಿ ಸಹಕರಿಸೋಣ ಎಂದು ತಿಳಿಸಿದರು.

      ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಾನಗರಪಾಲಿಕೆ ಆಯುಕ್ತ ಭೂಬಾಲನ್ ತುಮಕೂರು ನಗರವನ್ನು ಸೊಳ್ಳೆ ಮುಕ್ತ ಹಾಗೂ ಡೆಂಗ್ಯು ಮುಕ್ತವನ್ನಾಗಿ ಮಾಡುವಲ್ಲಿ ಪಾಲಿಕೆಯು ದಿಟ್ಟ ಹೆಜ್ಜೆ ಇಟ್ಟಿದ್ದು, ನಾಗರಿಕರು ಅಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಡೆಂಗೀ ಜ್ವರವು ಸೊಳ್ಳೆಗಳಿಂದ ಹರಡುವ ಖಾಯಿಲೆಯಾಗಿದ್ದು, ಸೊಳ್ಳೆಗಳ ನಿಯಂತ್ರಣದಿಂದ ಡೆಂಗೀಯನ್ನು ತಡೆಗಟ್ಟೆಬಹುದು. ಮನೆಯ ಒಳಗಿನ ಹಾಗೂ ಮನೆಯ ಸುತ್ತಮುತ್ತಲಿರುವ ನೀರಿನ ಶೇಖರಣೆ ಹಾಗೂ ಘನತ್ಯಾಜ್ಯ ವಸ್ತುಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗೀಜ್ವರ ಹರಡುತ್ತದೆ. ಪಟ್ಟಣ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದ್ದ ಈ ಜ್ವರ ಗ್ರಾಮಾಂತರ ಪ್ರದೇಶಗಳಲ್ಲಿಯೂ ಕಂಡು ಬರುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ತಿಳಿಸಿದರು.

      ಡೆಂಗ್ಯು ಹರಡದಂತೆ ತಡೆಗಟ್ಟಲು ಸೊಳ್ಳೆಗಳ ಕಚ್ಚುವಿಕೆಯಿಂದ ರಕ್ಷಿಸಿಕೊಳ್ಳುವುದು ಸುಲಭೋಪಾಯವಾಗಿದೆ. ಸಂಜೆ ಹೊತ್ತು ಮನೆಯ ಕಿಟಕಿ-ಬಾಗಿಲುಗಳನ್ನು ಮುಚ್ಚುವುದರಿಂದ ಸೊಳ್ಳೆಗಳು ಮನೆಯೊಳಗೆ ಪ್ರವೇಶಿಸುವುದಿಲ್ಲ. ಇಂದಿನ ದಿನದಲ್ಲಿಯೂ ಸಂಜೆ ವೇಳೆ ಬಾಗಿಲು ತೆರೆದಿಟ್ಟರೆ ಲಕ್ಷ್ಮಿ ಬರುವಳೆಂಬ ಮೌಢ್ಯತೆ ಜನರಲ್ಲಿದೆ. ಕಿಟಕಿ-ಬಾಗಿಲು ತೆರೆದಿಡುವುದರಿಂದ ಲಕ್ಷ್ಮಿಯೊಂದಿಗೆ ಸೊಳ್ಳೆಗಳೂ ಬಂದು ಇನ್ನಿತರ ರೋಗಗಳು ಬರುವ ಸಾಧ್ಯತೆ ಇರುವುದರಿಂದ ನಾಗರಿಕರು ಎಚ್ಚರಿಕೆಯಿಂದ ಇರಬೇಕೆಂದು ಸಲಹೆ ನೀಡಿದರು.

      ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ: ಟಿ.ಎನ್.ಪುರುಷೋತ್ತಮ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ 2019ರ ಜನವರಿಯಿಂದ ಈವರೆಗೂ ತುಮಕೂರು ತಾಲ್ಲೂಕು-14, ಕೊರಟಗೆರೆ-5, ಪಾವಗಡ-2, ಗುಬ್ಬಿ-2, ತಿಪಟೂರು-4, ಇತರೆ ಜಿಲ್ಲೆಯ 3 ಪ್ರಕರಣ ಸೇರಿದಂತೆ 30 ಡೆಂಗ್ಯು ಪ್ರಕರಣಗಳು ವರದಿಯಾಗಿವೆ. ಡೆಂಗ್ಯು ನಿಯಂತ್ರಣಕ್ಕಾಗಿ ಇಲಾಖೆಯಿಂದ ಲಾರ್ವಾ ಸಮೀಕ್ಷೆ ಹಾಗೂ ಇತರೆ ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದು, ಸೊಳ್ಳೆ ಉತ್ಪತ್ತಿಯಾಗದಂತೆ ತಡೆಗಟ್ಟಲು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರಲ್ಲದೆ, ಇತ್ತೀಚಿನ ದಿನಗಳಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವುದರಿಂದ ಸಾರ್ವಜನಿಕ ಅರಿವು ಮೂಡಿಸಲು ಡೆಂಗ್ಯು ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

     ಡೆಂಗ್ಯು, ಚಿಕುನ್‍ಗುನ್ಯಾ ಅಪಾಯಕಾರಿ ಖಾಯಿಲೆಗಳಾಗಿದ್ದು, ಪ್ರಪಂಚದಾದ್ಯಂತ ಬಹುವೇಗವಾಗಿ ಸೊಳ್ಳೆಯಿಂದ ಹರಡುತ್ತಿದೆ. ಈ ಡೆಂಗೀ ಜ್ವರವು 150 ವರ್ಷದ ಹಳೆಯ ಖಾಯಿಲೆಯಾಗಿದ್ದರೂ ಕಳೆದ 50 ವರ್ಷಗಳಲ್ಲಿ 30ಪಟ್ಟು ಜಾಸ್ತಿಯಾಗಿರುವುದು ಅಪಾಯಕಾರಿ ಸಂಗತಿ. ಅಭಿವೃದ್ಧಿಶೀಲ ರಾಷ್ಟಗಳಲ್ಲಿ ಹೆಚ್ಚಾಗಿ ಕಂಡುಬರುವ ಈ ರೋಗವು ಸಾವು-ನೋವುಗಳನ್ನು ಉಂಟು ಮಾಡುತ್ತದೆ.

     ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಬಿ.ಆರ್.ಚಂದ್ರಿಕಾ, ಆರೋಗ್ಯಾಧಿಕಾರಿ ಡಾ: ಟಿ.ನಾಗೇಶ್ ಕುಮಾರ್, ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ: ಮೋಹನ್‍ದಾಸ್ ಆರ್.ವಿ., ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ವೀರಭದ್ರಯ್ಯ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲೆ ಡಾ: ರಜನಿ ಎಂ., ಆಯುಷ್ ಅಧಿಕಾರಿ ಡಾ: ಸಂಜೀವ್ ಮೂರ್ತಿ, ನರ್ಸಿಂಗ್ ಶಾಲೆ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಎಎನ್‍ಎಂಗಳು, ಎನ್‍ಎಸ್‍ಎಸ್ ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಡೆಂಗ್ಯು ಮತ್ತು ಚಿಕುನ್‍ಗುನ್ಯಾ ರೋಗಗಳನ್ನು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳು, ಸ್ವಚ್ಛತೆ ಕಾಪಾಡುವಿಕೆ, ಪರಿಸರ ನೈರ್ಮಲ್ಯ, ಡೆಂಗ್ಯು ರೋಗವನ್ನು ಹರಡುವ ಈಡೀಸ್ ಸೊಳ್ಳೆಯ ಜೀವನ ಕ್ರಮ, ಮನೆಯಲ್ಲಿ ಸೊಳ್ಳೆ ನಿಯಂತ್ರಣ ಕುರಿತಂತೆ ವಿವಿಧ ಶಾಲಾ ಮಕ್ಕಳು ವಸ್ತುಪ್ರದರ್ಶನ ಏರ್ಪಡಿಸಿದ್ದರು. ವಸ್ತುಪ್ರದರ್ಶನದಲ್ಲಿ ಸದಾಶಿವ ನಗರದ ಶ್ರೀ ಭೈರವೇಶ್ವರ ಪ್ರೌಢಶಾಲೆ, ರಾಘವೇಂದ್ರ ನಗರದ ನಳಂದ ಶಾಲೆ, ವಿದ್ಯಾನಿಕೇತನ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ, ಅತ್ತಿಮಬ್ಬೆ ವಿದ್ಯಾಮಂದಿರ, ವಾಸವಿ ವಿದ್ಯಾಪೀಠ, ಭಾರತ್ ಮಾತ ಆಂಗ್ಲ ಮಾಧ್ಯಮ ಶಾಲೆಗಳು ಪಾಲ್ಗೊಂಡಿದ್ದವು.

      ಇದಕ್ಕೂ ಮುನ್ನ ವಿಶ್ವವಿದ್ಯಾನಿಲಯದಿಂದ ಏರ್ಪಡಿಸಲಾಗಿದ್ದ ಡೆಂಗ್ಯು ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪ್ರೊ.ಸಿದ್ದೇಗೌಡ ಚಾಲನೆ ನೀಡಿದರು. ಜಾಥಾ ಕಾರ್ಯಕ್ರಮವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನಜಾಗೃತಿ ಮೂಡಿಸಿತು. ನರ್ಸಿಂಗ್ ವಿದ್ಯಾರ್ಥಿಗಳು ಆಶಾ ಕಾರ್ಯಕರ್ತೆಯರು, ಅಧಿಕಾರಿಗಳು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

(Visited 38 times, 1 visits today)
Previous Articleಮಳೆನೀರುಗಾಲುವೆಗಳಿಗೆ ಪರಿಸರಸ್ನೇಹಿ ರೂಪಕ್ಕೆ ಮುಂದಾದ ಸ್ಮಾರ್ಟ್‍ಸಿಟಿ
Next Article ಇಂದಿರಾ ಕ್ಯಾಂಟೀನ್‍ಗೆ ಪಾಲಿಕೆ ಆಯುಕ್ತರ ದಿಢೀರ್ ಭೇಟಿ
News Desk Benkiyabale

Related Posts

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm news

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm news
ತಾಜಾ ಸುದ್ಧಿಗಳು
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
news

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm
news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm
news

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm
news

ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ

August 01, 2026 2:34 pm
news

ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ

August 01, 2026 2:32 pm
Our Youtube Channel
Our Picks

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm

ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ

August 01, 2026 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

By News Desk BenkiyabaleAugust 01, 2026 2:41 pm

ತುಮಕೂರು: ತಮಿಳುನಾಡಿಗೆ ಪ್ರತಿದಿನ ೩,೫೦೦ ಕ್ಯೂಸೆಕ್ಸ್ ನೀರು ಬಿಡಬೇಕೆಂದುಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿರುವ ಶಿಫಾರಸ್ಸಿಗೆ ಕನ್ನಡಪರ ಸಂಘಟನೆಗಳ ಒಕ್ಕೂಟ…

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.