BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
  • ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ
  • ರೈಲುಗಳು ನಮ್ಮ ಜೀವನಾಡಿಗಳಾಗಿವೆ
  • ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
  • ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಲ್ಲ ಆಟೋ ರಿಕ್ಷಾಗಳಿಗೆ ಟಿಟಿಪಿ ಸಂಖ್ಯೆ ಕಡ್ಡಾಯ!
Trending

ಎಲ್ಲ ಆಟೋ ರಿಕ್ಷಾಗಳಿಗೆ ಟಿಟಿಪಿ ಸಂಖ್ಯೆ ಕಡ್ಡಾಯ!

By News Desk BenkiyabaleUpdated:September 03, 2019 6:42 pm

ತುಮಕೂರು:

      ಜಿಲ್ಲೆಯಲ್ಲಿರುವ ಎಲ್ಲ ಆಟೋ ರಿಕ್ಷಾಗಳಿಗೆ ಕಡ್ಡಾಯವಾಗಿ ಸಂಚಾರಿ ಪೊಲೀಸ್ ಠಾಣೆಯಿಂದ ನೀಡಲಾಗುವ ಟಿಟಿಪಿ(ತುಮಕೂರು ಟ್ರಾಫಿಕ್ ಪೊಲೀಸ್) ಸಂಖ್ಯೆಯನ್ನು ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅವರು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ತಮ್ಮ ಕಚೇರಿಯಲ್ಲಿಂದು ಜರುಗಿದ ಇ-ಆಟೋ ರಿಕ್ಷಾ ವಿತರಣೆ ಕುರಿತ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಟಿಟಿಪಿ ಸಂಖ್ಯೆ ಅಳವಡಿಸದ ಆಟೋ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದ ಅವರು ಟಿಟಿಪಿ ಸಂಖ್ಯೆಯನ್ನು ಅಳವಡಿಸುವುದರಿಂದ ಜಿಲ್ಲೆಯಲ್ಲಿ ಚಾಲನೆಯಲ್ಲಿರುವ ಆಟೋರಿಕ್ಷಾಗಳ ನಿಖರ ಅಂಕಿ-ಅಂಶ ದೊರೆಯಲಿದೆ ಎಂದು ತಿಳಿಸಿದರು.

      ಜಿಲ್ಲೆಯ ಎಲ್ಲ ಆಟೋ ರಿಕ್ಷಾ ಚಾಲಕರ ಚಾಲನಾ ಪರವಾನಗಿಯನ್ನು ಕೂಡಲೇ ಆಧಾರ್‍ಲಿಂಕ್ ಮಾಡಬೇಕೆಂದು ಆರ್‍ಟಿಓಗೆ ಸೂಚಿಸಿದರು. ಪ್ರಾದೇಶಿಕ ಸಾರಿಗೆ ಇಲಾಖೆಗೆ ನಿಗಧಿತ ಶುಲ್ಕ ಪಾವತಿಸಿ ಆಟೋಗಳ ಹಿಂದೆ ವಿವಿಧ ಕಂಪನಿಗಳ ಎಲ್‍ಇಡಿ ಜಾಹೀರಾತು ಫಲಕಗಳನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುವ ಬಗ್ಗೆ ಚಿಂತಿಸಲಾಗಿದೆ. ಜಾಹೀರಾತು ನೀಡಿದ ಕಂಪನಿಗಳು ಜಾಹೀರಾತು ಫಲಕ ಅಳವಡಿಕೆಗಾಗಿ ಹಣ ಪಾವತಿ ಮಾಡುವುದರಿಂದ ಆಟೋ ಚಾಲಕರ ಆದಾಯ ಹೆಚ್ಚಾಗುತ್ತದೆ. ಜಾಹೀರಾತು ಅಳವಡಿಕೆಗೂ ಮುನ್ನ ಆಟೋ ಮಾಲೀಕರ/ಚಾಲಕರ ಚಾಲನಾ ಪರವಾನಗಿ, ವಾಹನದ ದಾಖಲೆಗಳು, ಮಾಲೀಕರ ಆಧಾರ್ ಕಾರ್ಡನ್ನು ತಪ್ಪದೇ ಪರಿಶೀಲಿಸಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜು ಅವರಿಗೆ ನಿರ್ದೇಶನ ನೀಡಿದರು.

      ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಸಹಾಯಧನ ಆಧಾರದ ಮೇಲೆ 20 ಇ-ರಿಕ್ಷಾಗಳನ್ನು ವಿತರಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ನಿಯಮಗಳನ್ನು ಪಾಲಿಸಬೇಕು. ಇ-ರಿಕ್ಷಾ ವಿತರಣೆಯಲ್ಲಿ ಮಹಿಳೆಯರಿಗೆ ಮೊದಲ ಆದ್ಯತೆ ನೀಡಬೇಕು.

      ನಿರುದ್ಯೋಗಿ ಫಲಾನುಭವಿಗಳಿಗೆ ಮಾತ್ರ ಇ-ರಿಕ್ಷಾ ವಿತರಣೆಯಾಗಬೇಕು. ಫಲಾನುಭವಿಗಳ ಆಯ್ಕೆಯಲ್ಲಿ ಲೋಪದೋಷಗಳಾಗಬಾರದು ಎಂದು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರು.

      ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ. ಅಜಯ್ ಮಾತನಾಡಿ ಇ-ರಿಕ್ಷಾ ಕೋರಿ ಇಬ್ಬರು ಮಹಿಳೆಯರು ಸೇರಿದಂತೆ 45 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿ ತ್ರಿಚಕ್ರ ವಾಹನ ನಡೆಸುವ ಸಾಮಥ್ರ್ಯವುಳ್ಳ ಚಾಲನಾ ಪರವಾನಗಿ(ಡಿಎಲ್) ಹೊಂದಿರುವ, ಕನಿಷ್ಠ 21 ರಿಂದ 45 ವರ್ಷ ವಯೋಮಿತಿಯೊಳಗಿನ, 8ನೇ ತರಗತಿಯಲ್ಲಿ ಉತ್ತೀರ್ಣರಾಗಿರುವವರನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುವುದು. ವಿಳಾಸ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬಿ.ಪಿ.ಎಲ್ ಕಾರ್ಡ್, ಜನನ ಪ್ರಮಾಣ ಪತ್ರ ಹಾಗೂ ಎರಡು ಭಾವಚಿತ್ರ, ಮತ್ತಿತರ ದಾಖಲೆಗಳನ್ನು ಪರಿಶೀಲಿಸಿದ ನಂತರವೇ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.

      ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಆಯ್ಕೆಯಾದ ಸಾಮಾನ್ಯ ವರ್ಗದ ಫಲಾನುಭವಿಗೆ ಇ-ರಿಕ್ಷಾ ದರದಲ್ಲಿ ಶೇ. 50ರಷ್ಟು ಹಾಗೂ ಮಹಿಳೆ/ತೃತೀಯ ಲಿಂಗತ್ವ ಅಲ್ಪಸಂಖ್ಯಾತರು/ ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗದವರಿಗೆ ಶೇ. 25ರಷ್ಟು ದರವನ್ನು ಮಾತ್ರ ಭರಿಸುವ ಅವಕಾಶವನ್ನು ಕಲ್ಪಿಸಲಾಗಿದೆ.

      ಫಲಾನುಭವಿಗಳಿಗೆ ಇ-ರಿಕ್ಷಾ ಪಡೆದ ನಂತರ ಸ್ವತಃ ತಾವೇ ಚಾಲನೆ ಮಾಡಬೇಕು ಹಾಗೂ ಪರಭಾರ/ವರ್ಗಾವಣೆಗೆ ಅವಕಾಶವಿರುವುದಿಲ್ಲವೆಂಬ ನಿಯಮವನ್ನು ವಿಧಿಸಲಾಗುವುದು ಎಂದರಲ್ಲದೆ ಇ-ರಿಕ್ಷಾ ವಿತರಣೆ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗದವರಿಗೆ ಶೇ. 24ರಷ್ಟು, ಅಲ್ಪಸಂಖ್ಯಾತರಿಗೆ ಶೇ. 15ರಷ್ಟು, ಮಹಿಳೆಯರಿಗೆ ಶೇ.30ರ ಪ್ರಮಾಣದಲ್ಲಿ ಹಾಗೂ 3 ಇ-ರಿಕ್ಷಾಗಳನ್ನು ತೃತೀಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಮೀಸಲಿಡಲಾಗುವುದು.

     ಮೀಸಲಿರಿಸಿದ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಾಗ ಇತರೆ ವರ್ಗದ ಫಲಾನುಭವಿಗಳನ್ನು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಬಿ.ಟಿ. ರಂಗಸ್ವಾಮಿ, ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ಅಧಿಕಾರಿಗಳು, ವಿವಿಧ ಆಟೋ ಚಾಲಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

(Visited 219 times, 1 visits today)
Previous Articleತುಮಕೂರು: ಮತದಾರರ ಪಟ್ಟಿ ಪರಿಶೀಲನೆಗೆ ನಾಗರೀಕ ಸೇವಾ ಕೇಂದ್ರದಲ್ಲೂ ಅವಕಾಶ!!
Next Article ಉಪನಾಲೆಗೆ ನೀರು ಹರಿಸಲು ರೈತರ ಆಗ್ರಹ!
News Desk Benkiyabale

Related Posts

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm news

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm news
ತಾಜಾ ಸುದ್ಧಿಗಳು
news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm
news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm
news

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
news

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
news

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
Our Youtube Channel
Our Picks

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

By News Desk BenkiyabaleAugust 04, 2026 9:38 pm

ತುಮಕೂರು: ರಾಜ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಪರಿಸ್ಥಿತಿ ಇರುವಾಗ ಕಾವೇರಿ ನೀರು ಪ್ರಾಧಿಕಾರ ತಮಿಳು ನಾಡಿಗೆ ೧೫ ದಿನಗಳ ಕಾಲ…

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.