BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಒಕ್ಕಲಿಗ ಸಮುದಾಯವನ್ನು ಮುಗಿಸುವ ಯತ್ನ-ಮಾಜಿ ಸಚಿವ ಶ್ರೀನಿವಾಸ್
Trending

ಒಕ್ಕಲಿಗ ಸಮುದಾಯವನ್ನು ಮುಗಿಸುವ ಯತ್ನ-ಮಾಜಿ ಸಚಿವ ಶ್ರೀನಿವಾಸ್

By News Desk BenkiyabaleUpdated:September 10, 2019 7:32 pm

ತುಮಕೂರು:

      ಒಕ್ಕಲಿಗ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯ ಬೇರೆ ಸಮುದಾಯದವರಿಗೆ ಆಗಿದ್ದರೆ, ಸಂಘಟಿತರಾಗಿ ಹೋರಾಡುತ್ತಿದ್ದರು, ಆದರೆ ಒಕ್ಕಲಿಗ ಸಮುದಾಯವನ್ನು ತುಳಿಯುವ ಯತ್ನ ಮಾಡುತ್ತಿದ್ದರು, ಒಕ್ಕಲಿಗ ಸಮುದಾಯವು ಮಲಗಿದೆ, ಇದೇ ಮನೋಸ್ಥಿತಿ ಮುಂದುವರೆದರೆ ಸಮಾಜ ಕೆಟ್ಟ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಎಚ್ಚರಿಕೆ ನೀಡಿದರು.

      ನಗರದ ಕುಂಚಿಟಿಗರ ಸಮುದಾಯಭವನದಲ್ಲಿ ನಡೆದ ತುಮಕೂರು ಜಿಲ್ಲಾ ಒಕ್ಕಲಿಗ ನೌಕರರ ವೇದಿಕೆ ಏರ್ಪಡಿಸಿದ್ದ 11ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

      ಕುಮಾರಸ್ವಾಮಿ ಮುಖ್ಯಮಂತ್ರಿ ಪದವಿಯಿಂದ ಕೆಳಗೆ ಇಳಿದ ಕ್ಷಣದಿಂದ ವಿಧಾನಸೌಧದಲ್ಲಿ ಒಕ್ಕಲಿಗ ಸಮುದಾಯದ ನೌಕರರಿಗೆ ಆಗಿರುವ ತೊಂದರೆಯನ್ನು ಅರಿತುಕೊಳ್ಳಬೇಕಿದೆ, ದೇಶದಲ್ಲಿ ಯಾರು ಮಾಡದೇ ಇರುವುದನ್ನು ಡಿ.ಕೆ.ಶಿವಕುಮಾರ್ ಅವರು ಮಾಡಿದ್ದಾರೆಯೇ? ವೀರಶೈವ-ಲಿಂಗಾಯತ ಸಮುದಾಯದ ಯಡಿಯೂರಪ್ಪ ಅವರಿಗೆ ಸಿಎಂ ಪದವಿ ತಪ್ಪಿದ ತಕ್ಷಣವೇ ರಾಜ್ಯದಲ್ಲಿ ಹೋರಾಟ ಶುರುವಾದವು, ಆದರೆ ಜಿಲ್ಲೆಯಲ್ಲಿ ದೇವೇಗೌಡರು ಸೋತರು, ಕುಮಾರಸ್ವಾಮಿ ಅವರನ್ನು ಕುತಂತ್ರದಿಂದ ಅಧಿಕಾರದಿಂದ ಕೆಳಗಿಸಿದರೂ, ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದರು ಅವರ ಪರವಾಗಿ ಸಮುದಾಯದವರು ಯಾರು ಮಾತನಾಡಲಿಲ್ಲ, ಇದು ನಮ್ಮಲ್ಲಿರುವ ಒಡಕನ್ನು ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟರು.

      ಒಕ್ಕಲಿಗ ಸಮುದಾಯವನ್ನು ಸದೃಢವಾಗಿ ಕಟ್ಟುವ ನಿಟ್ಟಿನಲ್ಲಿ ನಿವೃತ್ತರು ಹಾಗೂ ಅಧಿಕಾರಿಗಳು ಮುಂದಾಗಬೇಕಿದೆ, ಸಮಾಜವನ್ನು ಒಗ್ಗೂಡಿಸುವ ಕೆಲಸವನ್ನು ಮಾಡಬೇಕು, ಸಮಾಜದ ಹಿತ ಕಾಯಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದ್ದು, ಸಮಾಜದ ಋಣವನ್ನು ತೀರಿಸುವ ನಿಟ್ಟಿನಲ್ಲಿ ಸಮಾಜದ ಕೆಲಸವನ್ನು ಮಾಡಬೇಕೆಂದ ಅವರು, ಇಂದು ಸಮಾಜ ಕಲುಷಿತವಾಗಿದ್ದು, ವಿಧಾನಸೌಧದಲ್ಲಿ ಕುಳಿತು ಸಮಾಜಕ್ಕೆ ಉತ್ತಮವಾದ ಸಂದೇಶವನ್ನು ನೀಡುತ್ತಿಲ್ಲ, ಶಾಸಕನೆಂದು ಹೇಳಿಕೊಳ್ಳಲು ಮುಜುಗರವಾಗುತ್ತದೆ ಎಂದರು.

      ಸ್ವಹಿತಕ್ಕಾಗಿ ಜನರು ನೀಡಿದ ಹುದ್ದೆಯನ್ನು ಮಾರಾಟ ಮಾಡಿದರು, ದುಡ್ಡಿದ್ದವರು ಇಂದು ವಿಧಾನಸೌಧಕ್ಕೆ ಹೋಗುತ್ತಿದ್ದಾರೆ, ಲಾಭದ ಆಸೆಯಿಂದ ಅಧಿಕಾರವನ್ನು ಹಿಡಿಯುವ ಪ್ರಯತ್ನವನ್ನು ಮಾಡುತ್ತಿದ್ದಾರೆ, ರಾಜಕಾರಣಿಗಳು ಕೀಳಾಗಿ ನಡೆದುಕೊಳ್ಳುವ ಮೂಲಕ ಸಮಾಜಕ್ಕೆ ಕೆಟ್ಟದ್ದನ್ನು ತೋರಿಸುತ್ತಿದ್ದೇವೆ, ಸಮಾಜ ಮುಖಿ ಕೆಲಸ ನಮ್ಮ ಜವಾಬ್ದಾರಿ ಎನ್ನುವುದನ್ನು ಮರೆತು ವರ್ತಿಸುತ್ತಿದ್ದೇವೆ, ನಮ್ಮ ಜವಾಬ್ದಾರಿಯನ್ನು ಮರೆತಿರುವುದರಿಂದಲೇ ಕೆಟ್ಟ ಸಮಾಜ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.

      ವಿದ್ಯಾರ್ಥಿಗಳು ವಿದ್ಯೆಯಿಂದ ಮಾತ್ರ ಸ್ವಾವಲಂಬನೆ ಸಾಧಿಸಬಹುದು, ವಿದ್ಯೆಯಿಂದ ಮಾತ್ರ ಉನ್ನತ ಅಧಿಕಾರವನ್ನು ಪಡೆಯಬಹುದು ಎಂಬ ಗುರಿಯನ್ನು ಹೊಂದಿ ವ್ಯಾಸಂಗ ಮಾಡಬೇಕೆಂದ ಅವರು, ಮಾಧ್ಯಮಗಳು ಇಂದು ಭ್ರಷ್ಟಗೊಂಡಿವೆ, ಸಮಾಜದಲ್ಲಿ ನಡೆಯುತ್ತಿರುವ ಸತ್ಯವನ್ನು ತೋರಿಸುತ್ತಿಲ್ಲ, ದೇಶದ ಆರ್ಥಿಕತೆ ಕುರಿತು ಮಾಜಿ ಪಿಎಂ ಮನಮೋಹನ್ ಸಿಂಗ್ ಮಾತನಾಡಿದರು, ಅದನ್ನು ಮಾಧ್ಯಮಗಳು ಪ್ರಕಟಿಸುತ್ತಿಲ್ಲ ಎಂದರೆ ದೇಶ ಎತ್ತ ಸಾಗುತ್ತಿದೆ ಎನ್ನುವುದನ್ನು ಅರಿತುಕೊಳ್ಳಬೇಕು ಎಂದರು.

      ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ ಸಮುದಾಯಕ್ಕೆ ಎದುರಾಗಿರುವ ಗಂಡಾಂತರದಿಂದ ಪಾರಾಗಬೇಕಾದರೆ, ಪಂಗಡಗಳನ್ನು ಮರೆತು ಒಂದಾಗಬೇಕಿದೆ, ವಿದ್ಯಾರ್ಥಿಗಳು ಉನ್ನತ ಆಡಳಿತಾಧಿಕಾರ ಪಡೆಯುವ ನಿಟ್ಟಿನಲ್ಲಿ ಅಗತ್ಯ ತರಬೇತಿಯನ್ನು ಪಡೆಯುವ ಮೂಲಕ ಅಧಿಕಾರಿಗಳಾಗುವ ಗುರಿಯನ್ನು ಹೊಂದಬೇಕಿದ್ದು, ಒಕ್ಕಲಿಗ ಸಮುದಾಯದ ಸಹ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಅಗತ್ಯ ಸಹಕಾರ ನೀಡುತ್ತಿದ್ದು, ದೆಹಲಿಯಲ್ಲಿ ವ್ಯಾಸಂಗ ಮಾಡಲು ಹೋಗುವ ವಿದ್ಯಾರ್ಥಿಗಳಿಗೆ ಆದಿಚುಂಚನಗಿರಿ ಮಠದಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುವ ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

     ಗೌರವಯುತವಾಗಿದ್ದ ಮಾಜಿ ಪ್ರಧಾನಿ ದೇವೇಗೌಡರನ್ನು ಜಿಲ್ಲೆಗೆ ಕರೆತಂದು ನಾವೆಲ್ಲರೂ ಒಟ್ಟಾಗಿ ಸೋಲಿಸಿದೆವು, ಸೋಲಿಸಿ ನಮ್ಮ ಮರ್ಯಾದೆಯನ್ನು ನಾವೇ ತೆಗೆದುಕೊಂಡೆವು, ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯದ ಅಧಿಕಾರಿಗಳಿಗೆ ಪ್ರಾತಿನಿಧ್ಯವಿಲ್ಲದಂತಹ ಸ್ಥಿತಿಯುಂಟಾಗಿದೆ, ಒಕ್ಕಲಿಗ ಸಮುದಾಯದವರಿಗೆ ಮೀಟರ್ ಇಲ್ಲ ಎಂದೇ ದೆಹಲಿಯಲ್ಲಿ ಕುಳಿತಿರುವವರು ನಮ್ಮ ಸಮಾಜವನ್ನು ತುಳಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

      ಆದಿಚುಂಚನಗಿರಿ ಶಾಖಾಮಠದ ಶ್ರೀ ಮಂಗಳನಾಥಸ್ವಾಮೀಜಿ ಮಾತನಾಡಿ ಸಮಾಜ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು, ಅಂಕಗಳನ್ನು ಪಡೆಯುವುದೇ ಮುಖ್ಯವಲ್ಲ, ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವ ಮೂಲಕ ಆತ್ಮಸ್ಥೈರ್ಯ ಪಡೆದುಕೊಳ್ಳಬೇಕು, ಉನ್ನತ ಅಧಿಕಾರ ಪಡೆದ ನಂತರವೂ ಆತ್ಮಸ್ಥೈರ್ಯವನ್ನು ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವುದು ಶೋಚನೀಯ ಎಂದು ಹೇಳಿದರು.ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಆತ್ಮಸೈರ್ಯವನ್ನು ಪಡೆದುಕೊಳ್ಳಬೇಕು, ಸಮಾಜವನ್ನು ಕಟ್ಟಬೇಕಾದರೆ ಸಮಾಜಮುಖಿಯಾಗಿ ಬದುಕುವುದು ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪೋಷಕರನ್ನು ನೋಡಿಕೊಳ್ಳುವ ಮೂಲಕ ಉತ್ತಮ ಕಾರ್ಯವನ್ನು ಮಾಡಬೇಕೆಂದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

      ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಒಕ್ಕಲಿಗರ ನೌಕರರ ವೇದಿಕೆಯ ಮುಖಂಡರಾದ ರಂಗಪ್ಪ, ಬೋರೇಗೌಡ ಸೇರಿದಂತೆ ಇತರರು ಮಾತನಾಡಿದರು, ಪಿಯುಸಿ ಮತ್ತು ಎಸ್ಸೆಸ್ಸಿಲ್ಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದವರನ್ನು ಸನ್ಮಾನಿಸಲಾಯಿತು.

      ಜಿಲ್ಲಾ ಒಕ್ಕಲಿಗರ ನೌಕರರ ವೇದಿಕೆಯ ಅಧ್ಯಕ್ಷ ಶಂಕರ್, ಆಡಿಟರ್ ನಾಗರಾಜ್, ವೃತ್ತ ನಿರೀಕ್ಷಕ ಚಂದ್ರಶೇಖರ್, ಪಾಲಿಕೆ ಸದಸ್ಯರಾದ ಶ್ರೀನಿವಾಸಮೂರ್ತಿ, ಸುಜಾತ ನಂಜೇಗೌಡ, ನರಸಿಂಹಮೂರ್ತಿ, ಗಿರೀಶ್, ವೈ.ಪಿ.ಲಕ್ಕಪ್ಪ, ದೇವೇಂದ್ರ, ಎಂ.ಸಿ.ವೀರಯ್ಯ, ಅಶ್ವತ್ಥ್ ಕುಮಾರ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

(Visited 27 times, 1 visits today)
Previous Articleಕೇಂದ್ರದ ಬಿಜೆಪಿ ಸರ್ಕಾರ ಒಕ್ಕಲಿಗರನ್ನು ತುಳಿಯುವ ಪ್ರಯತ್ನಕ್ಕೆ ಮುಂದಾಗಿದೆ – ಎಂ.ಟಿ.ಕೃಷ್ಣಪ್ಪ ಕಿಡಿ
Next Article ಜಿಲ್ಲೆಯಲ್ಲಿ ರಸ್ತೆ ಸುರಕ್ಷಾ ನಿಯಮ ಉಲ್ಲಂಘನೆ 257 ಚಾಲನ ಹಾಗೂ 45 ವಾಹನ ಪರವಾನಗಿ ಅಮಾನತ್ತು!
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.