BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
  • ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ
  • ೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ
  • ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆರ್ಥಿಕ ಹಿಂಜರಿತ ಕೇವಲ ನಮ್ಮ ರಾಷ್ಟ್ರಕ್ಕೆ ಮಾತ್ರ ಆಗಿಲ್ಲ -ಸಚಿವ ಜಗದೀಶ್ ಶೆಟ್ಟರ್
Trending

ಆರ್ಥಿಕ ಹಿಂಜರಿತ ಕೇವಲ ನಮ್ಮ ರಾಷ್ಟ್ರಕ್ಕೆ ಮಾತ್ರ ಆಗಿಲ್ಲ -ಸಚಿವ ಜಗದೀಶ್ ಶೆಟ್ಟರ್

By News Desk BenkiyabaleUpdated:September 17, 2019 6:54 pm

ತುಮಕೂರು:

      ಕೈಗಾರಿಕಾ ವಲಯದಲ್ಲಿ ಉದ್ಯೋಗಾವಕಾಶ ಸೃಷ್ಠಿ ಹಾಗೂ ಆರ್ಥಿಕ ಮಟ್ಟ ಚೇತರಿಕೆಗೆ ಕ್ರಮ ಕೈಗೊಳ್ಳುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‍ಶೆಟ್ಟರ್ ಇಂದಿಲ್ಲಿ ತಿಳಿಸಿದರು.

      ಆರ್ಥಿಕ ಹಿಂಜರಿತ ಕೇವಲ ನಮ್ಮ ರಾಜ್ಯ, ರಾಷ್ಟ್ರಕ್ಕೆ ಮಾತ್ರ ಆಗಿಲ್ಲ. ಇಡೀ ಜಗತ್ತಿನಲ್ಲೇ ಇದೆ. ಆದರೆ ಇದರಿಂದ ಆಟೋ ಮೊಬೈಲ್ ಕ್ಷೇತ್ರಕ್ಕೆ ಭಾರೀ ಹಿನ್ನಡೆಯಾಗಿರುವುದು ಸತ್ಯ. ಈ ಎಲ್ಲದರ ಬಗ್ಗೆ ಅಧ್ಯಯನ ನಡೆಸಿ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

      ನಗರದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡುವ ಮುನ್ನ ಸಿದ್ದಗಂಗಾ ಮಠಕ್ಕೆ ತೆರಳಿ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗಾರಿಕಾ ಕ್ಷೇತ್ರದಲ್ಲಿ ಕೆಲವು ವಲಯಗಳಿಗೆ ಆರ್ಥಿಕ ಹಿಂಜರಿತ ಪರಿಣಾಮ ಬೀರಿದೆ. ಇಡೀ ಜಗತ್ತಿಲ್ಲೇ ಆಟೋಮೊಬೈಲ್ ಕ್ಷೇತ್ರದ ಮೇಲೆ ಇದರ ಪರಿಣಾಮ ಬೀರಿದೆ ಎಂದರು.

      ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ಅಧ್ಯಯನ ನಡೆಸುತ್ತಿದ್ದು, ಆದಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವಲ್ಲಿ ಆದ್ಯತೆ ನೀಡುವಂತೆ ಕೈಗಾರಿಕೋದ್ಯಮಿಗಳಿಗೆ ಒತ್ತಾಯ ಮಾಡಲಾಗುವುದು ಎಂದರು.

      ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ಶ್ರೀಮಠಕ್ಕೆ ಭೇಟಿ ನೀಡಿದ್ದು, ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದಾರೆ. ಹಾಗೆಯೇ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದವನ್ನು ಪಡೆದಿದ್ದೇನೆ. ಇನ್ನು ಮುಂದೆ ಎಲ್ಲ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸುವುದಾಗಿ ಅವರು ಹೇಳಿದರು.

      ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಇರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಆ ಬಗ್ಗೆ ಯಾರೂ ಸಹ ಹೇಳಿಕೆಯನ್ನೂ ಕೊಟ್ಟಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

     ಜಗತ್ತು ಬದಲಾವಣೆಯಾಗತ್ತಿರುವಾಗ ಇಂತಹ ಮೌಢ್ಯತೆಗಳು ಜೀವಂತವಾಗಿರುವುದು ದುರ್ದೈವ. 12ನೇ ಶತಮಾನದಲ್ಲಿ ಬಸವಣ್ಣನವರು ಅಸ್ಪೃಶ್ಯತೆಯ ವಿರುದ್ಧ ಹೋರಾಟ ನಡೆಸಿದ್ದರು. ಬಸವಣ್ಣನವರ ಮಾದರಿಯಲ್ಲೇ ಅಂಬೇಡ್ಕರ್, ಮಹಾತ್ಮಗಾಂಧೀಜಿಯವರು ಸಹ ತಮ್ಮ ಹೋರಾಟವನ್ನು ಮುಂದುವರೆಸಿದ್ದರು. ಆದರೂ ಸಹ 21ನೇ ಶತಮಾನದಲ್ಲೂ ಈ ಅಸ್ಪೃಶ್ಯತೆ ಜೀವಂತವಾಗಿರುವುದು ತಲೆತಗ್ಗಿಸುವಂತಹ ಸಂಗತಿ, ಇದು ಖಂಡನೀಯ ಎಂದರು.

      ಅಸ್ಪೃಶ್ಯತೆ, ಮೂಢನಂಬಿಕೆಗಳ ಬಗ್ಗೆ ಗ್ರಾಮಸ್ಥರು ವಿಚಾರ ಮಾಡಿಕೊಳ್ಳಬೇಕು. ಇದರಿಂದ ದೂರಗಾಮಿ ಪರಿಣಾಮಗಳು ಆಗುತ್ತವೆ. ಆದ್ದರಿಂದ ಗ್ರಾಮಸ್ಥರೆಲ್ಲಾ ಒಂದೆಡೆ ಕುಳಿತು ಈ ಆಚರಣೆಗೆ ಅಂತ್ಯ ಹಾಡಬೇಕು ಎಂದರು. ಸಂಸದ ನಾರಾಯಣಸ್ವಾಮಿ ಅವರನ್ನು ಗ್ರಾಮಕ್ಕೆ ಕರೆದುಕೊಂಡು ಹೋಗಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಅವರು ಹೇಳಿದರು.

      ಓರ್ವ ಲೋಕಸಭಾ ಸದಸ್ಯನಿಗೆ ಈ ಗತಿ ಬಂದರೆ ಇನ್ನು ಸಾಮಾನ್ಯರ ಪರಿಸ್ಥಿತಿ ಏನು ಎಂದು ಆತಂಕ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಈ ಮೌಢ್ಯ ಆಚರಣೆ ವಿರುದ್ಧ ಗ್ರಾಮಸ್ಥರಲ್ಲಿ ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು. ಒಂದು ವೇಳೆ ಅಧಿಕಾರಿಗಳ ಸಲಹೆ-ಸೂಚನೆ, ಜನಜಾಗೃತಿ ಮೂಡಿಸುವ ಕಾರ್ಯ ಇದ್ಯಾವುದಕ್ಕೂ ಸ್ಪಂದಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಅವರು ಎಚ್ಚರಿಸಿದರು.

 

      ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ಮುಖಂಡರಾದ ಶಿವಪ್ರಸಾದ್, ರವಿ ಹೆಬ್ಬಾಕ, ಕೊಪ್ಪಲ್ ನಾಗರಾಜು, ಪಾಲಿಕೆ ಸದಸ್ಯ ಮಲ್ಲಿಕಾರ್ಜುನ್, ರುದ್ರೇಶ್, ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ, ಕೆಐಎಡಿಬಿ ಸಿಇಓ ಬಸವರಾಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.

(Visited 23 times, 1 visits today)
Previous Articleತುಮಕೂರಿನಲ್ಲಿ ಕ್ರೀಡಾ ಹಬ್ ನಿರ್ಮಾಣಕ್ಕೆ ಚಿಂತನೆ
Next Article ಸಕಲ ರೋಗಗಳಿಗೂ ಪ್ರಕೃತಿಯಲ್ಲಿ ಔಷಧವಿದೆ: ಸಚಿವ ಮಾಧುಸ್ವಾಮಿ
News Desk Benkiyabale

Related Posts

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm news

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm news

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm news
ತಾಜಾ ಸುದ್ಧಿಗಳು
news

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm
news

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm
news

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm
news

೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ

August 27, 2026 5:50 pm
news

ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!

August 27, 2026 5:48 pm
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
Our Youtube Channel
Our Picks

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm

೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ

August 27, 2026 5:50 pm

ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!

August 27, 2026 5:48 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

By News Desk BenkiyabaleAugust 27, 2026 5:55 pm

ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಜೋಡಿ ಹಚ್ಚಮ್ಮನಹಳ್ಳಿ ಸರ್ವೆ ನಂಬರ್ ೮/೧ರ ವ್ಯಾಪ್ತಿಯ ಮೇಗಳಪಾಳ್ಯ ಗ್ರಾಮದ ಸಮೀಪ, ಆಂಜನೇಯ ದೇವಸ್ಥಾನದ…

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm

೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ

August 27, 2026 5:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.