BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವ
  • ಲಂಚ ಪಡೆಯುತ್ತಿದ್ದ ವೇಳೆ ಡಿಐಸಿ ಜಂಟಿ ನಿರ್ದೇಶಕ ಲೋಲೋಕಾಯಕ್ತರ ಬಲೆಗೆ
  • ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ
  • ಸವಿತಾ ಸಮಾಜದಿಂದ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ
  • ದೇಶದ ಭದ್ರತೆ, ಭವಿಷ್ಯಕ್ಕಾಗಿ ಇಂದಿನ ವಿದ್ಯಾರ್ಥಿಗಳು ಸಂಶೋಧನೆಗಳನ್ನು ನಡೆಸಬೇಕಿದೆ: ತಜ್ಞರ ಅಭಿಮತ
  • ಸಿದ್ಧಲಿ0ಗೇಶ್ವರ ಸಮಗ್ರವಚನ ಸಾಹಿತ್ಯ ಲೋಕಾರ್ಪಣೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ
  • ಮಾನವೀಯ ಮೌಲ್ಯ ಎತ್ತಿ ಹಿಡಿದ ಸಂವಿಧಾನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಕಲ ರೋಗಗಳಿಗೂ ಪ್ರಕೃತಿಯಲ್ಲಿ ಔಷಧವಿದೆ: ಸಚಿವ ಮಾಧುಸ್ವಾಮಿ
Trending

ಸಕಲ ರೋಗಗಳಿಗೂ ಪ್ರಕೃತಿಯಲ್ಲಿ ಔಷಧವಿದೆ: ಸಚಿವ ಮಾಧುಸ್ವಾಮಿ

By News Desk BenkiyabaleUpdated:September 18, 2019 7:13 pm

 ತುಮಕೂರು:

      ಪ್ರಕೃತಿಯಲ್ಲಿ ಪ್ರತಿ ರೋಗಕ್ಕೂ, ರೋಗನಿರೋಧಕ ಶಕ್ತಿ ಇರುತ್ತದೆ, ಅದನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸಬೇಕಾದ ಹಾಗೂ ಬೆಳೆಸುವ ಮೂಲಕ ಎಲ್ಲ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಕಾನೂನು ಸಂಸದೀಯ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಭಿಪ್ರಾಯಪಟ್ಟರು.

      ನಗರದ ಸಿದ್ಧಾರ್ಥ ತಾಂತ್ರಿಕ ಕಾಲೇಜಿನಲ್ಲಿ ಕರ್ನಾಟಕ ಪಶುವೈದ್ಯಕೀಯ ಸಂಘ ಮತ್ತು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಪ್ರದಾಯಿಕ ಪಶುಚಿಕಿತ್ಸೆ ವಿಷಯದ ಕುರಿತ ವಿಚಾರ ಸಂಕಿರಣ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಹಾಲು ಉತ್ಪಾದನೆ ರೈತರ ಉಪಕಸಬಾಗಿದ್ದು, ಪ್ರಮುಖ ಕಸುಬಿನಲ್ಲಿ ಹೂಡುತ್ತಿದ್ದ ಬಂಡವಾಳವನ್ನು ಕಡಿಮೆ ಮಾಡುತ್ತಿತ್ತು, ಗರಿಷ್ಠ ಬೆಲೆಯನ್ನು ಉಪಕಸುಬು ದೊರೆಕಿಸಿಕೊಡುತ್ತದೆ. ಹಾಗಾಗಿ ರೈತರಿಗೆ ಉಪಕಸುಬು ನೆಚ್ಚಿಕೊಂಡಿದ್ದಾರೆ, ತುಮಕೂರು ಜಿಲ್ಲೆ ಯಂತಹ ಅರೆ ಬರಪೀಡಿತ ಜಿಲ್ಲೆ 75 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿರುವುದು ಸಂತಸದ ವಿಚಾರವಾಗಿದ್ದು, ಹೈನು ಗಾರಿಕೆ ಲಾಭದಾಯಕವಾಗಬೇಕಾದರೆ, ಕೃತಕ ಗರ್ಭಧಾರಣೆಯಾಗಬೇಕು, ತಳಿ ಉನ್ನತೀಕರಣ ಮಾಡಬೇಕು ಎಂದು ಹೇಳಿದರು.

     ಉತ್ಪಾದನಾ ವೆಚ್ಚ ಕಡಿಮೆಯಾದರೆ, ಲಾಭ ಹೆಚ್ಚಳವಾಗುತ್ತದೆ, ಅದಕ್ಕಾಗಿಯೇ ತುಮುಲ್‍ನಿಂದಾಗಿ ತಳಿಗಳನ್ನು ಸಾಕಲು ಅಗತ್ಯ ಔಷಧ ಮತ್ತು ಆಹಾರವನ್ನು ನೀಡಲಾಗುತ್ತಿತ್ತು, ಸೇವೆಯನ್ನು ಬಿಟ್ಟು ವ್ಯವಹಾರವಾದ ನಂತರ ಎಲ್ಲ ಉಚಿತ ಸೇವೆಗಳನ್ನು ನಿಲ್ಲಿಸಲಾಯಿತು, ದೇಶದ ಅಭಿವೃದ್ಧಿಗೆ ನಮ್ಮ ಸಂಸ್ಕøತಿಯನ್ನು ಉಳಿಸಿಕೊಳ್ಳಬೇಕಿತ್ತು, ಆದರೆ ನಾವು ಅನುಕರಣೆಯಿಂದ ನಮ್ಮ ಮೂಲ ಉತ್ಪಾದಕರು ನಶಿಸಿದರು, ಅದು ನೇಯ್ಗೆ, ಹೈನುಗಾರಿಕೆಯನ್ನು ಅಪೋಶನ ತೆಗೆದುಕೊಂಡಿತು ಎಂದರು. 

      ಇಂಗ್ಲೀಷ್ ಔಷಧ ಮೊರೆ ಹೋಗುವ ಮೂಲಕ ನಮ್ಮ ಮೂಲವನ್ನು ನಾವೆಲ್ಲರೂ ಮರೆಯುತ್ತಿದ್ದೇವೆ, ರೋಗಕ್ಕೆ ಪ್ರತಿಯಾಗಿ ಔಷಧವೂ ಪ್ರಕೃತಿಯಲ್ಲಿ ದೊರೆಯುತ್ತದೆ ಹಾಗಾಗಿ ಹಿಂದಿನ ಕಾಲಘಟ್ಟಕ್ಕೆ ಮರಳಬೇಕಾದ ಸ್ಥಿತಿಯಲ್ಲಿದ್ದೇವೆ, ನಮ್ಮ ನಡುವೆ ಅನುಕರಣೆಯ ಮನೋಸ್ಥಿತಿಯಿಂದಾಗಿ ಇಂದು ಇಂಗ್ಲೀಷ್ ಔಷಧಕ್ಕೆ ಒತ್ತು ನೀಡುತ್ತಿದ್ದು, ಭಾರತೀಯ ಪರಂಪರೆಯಲ್ಲಿಯೇ ಸಿಗುವ ಪ್ರಕೃತಿ ದತ್ತವಾದ ಔಷಧಗಳನ್ನು ಕಂಡುಕೊಳ್ಳುವಲ್ಲಿ ವಿಫಲವಾಗಿದ್ದೇವೆ ಎಂದು ಅಭಿಪ್ರಾಯಪಟ್ಟರು.

      ನಮ್ಮ ಜೀವನ ಪದ್ಧತಿಯಲ್ಲಿಯೇ ಎಲ್ಲ ರೋಗಗಳಿಗೂ ಔಷಧವಿದ್ದರೂ, ಇಂದು ಅನುಕರಣೆಯಿಂದಾಗಿ ಅನಗತ್ಯ ತೊಂದರೆ ಗಳನ್ನು ತಂದುಕೊಂಡಿದ್ದೇವೆ, ಇದು ನಿರ್ದಿಷ್ಠ ರೋಗ ತನಿಖೆಯಲ್ಲ, ನಿರ್ದಿಷ್ಠ ರೋಗವನ್ನು ಪತ್ತೆ ಹಚ್ಚದ ಮೇಲೆ ಅದು ಹೋಮಿಯೋಪತಿಯೇ ಅಲ್ಲ ಎಂದರು, ಅನುಕರಣೆಯಿಂದಾಗಿ ನಶಿಸಿರುವ ಪದ್ಧತಿಯನ್ನು ಮತ್ತೆ ಪುನರುಜ್ಜೀನವನ್ನುಗೊಳಿಸಿ ಚಿಕಿತ್ಸೆಯನ್ನು ಪಡೆಯಲು ಮುಂದಾಗಿರುವುದು ಉತ್ತಮ ಕಾರ್ಯ ಎಂದು ಶ್ಲಾಘಿಸಿದರು.
ಶಾಸಕ ಜ್ಯೋತಿಗಣೇಶ್ ಮಾತನಾಡಿ ಈಗಿರುವ ಚಿಕಿತ್ಸಾ ಪದ್ಧತಿಯನ್ನು ಬದಲಾಯಿಸಬೇಕಾದ ಅನಿವಾರ್ಯತೆ ಇದೆ, ನಮ್ಮ ಸಾಂಪ್ರದಾಯಿಕ ಚಿಕಿತ್ಸ ಪದ್ಧತಿಯಲ್ಲಿಯೇ ಚಿಕಿತ್ಸೆ ನೀಡಲು ಅಗತ್ಯವಾದ ಸಂಶೋಧನೆಯನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.

      ಕರ್ನಾಟಕ ಪಶುವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವಿ.ಸಿ.ರುದ್ರಪ್ರಸಾದ್ ಅವರು, ನಗರದ ಶಿರಾಗೇಟ್‍ನಲ್ಲಿ 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಂಡು 2 ವರ್ಷ ಕಳೆದರೂ ಉದ್ಘಾಟನೆಯಾಗದೇ ನೆನೆಗುಂದಿಗೆ ಬಿದ್ದಿದೆ, ಜಿಲ್ಲೆಯಲ್ಲಿ ತಜ್ಞ ವೈದ್ಯರಿದ್ದು, ಆಸ್ಪತ್ರೆಯನ್ನು ಶೀಘ್ರವಾಗಿ ಉದ್ಘಾಟಿಸುವ ಮೂಲಕ ರೈತರಿಗೆ ಉಪಯೋಗವಾಗುವಂತೆ ಮಾಡಬೇಕೆಂದು ಮನವಿ ಮಾಡಿದರು.

       ಕಾರ್ಯಾಗಾರದಲ್ಲಿ ಪಶು ವೈದ್ಯಕೀಯ ತಜ್ಞ ಡಾ.ಪಿ.ಮನೋಹರ್ ಉಪಾಧ್ಯ ಅವರು ಉಪನ್ಯಾಸ ನೀಡಿದರು, ಪಶುಇಲಾಖೆ ಉಪನಿರ್ದೇಶಕ ಡಾ.ಎಲ್.ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಶುವೈದ್ಯಕೀಯ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಆರ್.ಎಂ.ನಾಗಭೂಷಣ, ಉಪಾಧ್ಯಕ್ಷ ಡಾ.ಎ.ಸಿ.ದಿವಾಕರ್, ಡಾ.ಮಹದೇವಯ್ಯ, ಡಾ.ಬಿ.ಆರ್.ನಂಜೇಗೌಡ, ಡಾ.ಶಶಿಕಲಾ ಎಚ್, ಡಾ.ಶಶಿಕಾಂತ್ ಬೂದಿಹಾಳ್ ಸೇರಿದಂತೆ ಜಿಲ್ಲೆಯ ಪಶು ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.

(Visited 43 times, 1 visits today)
Previous Articleಆರ್ಥಿಕ ಹಿಂಜರಿತ ಕೇವಲ ನಮ್ಮ ರಾಷ್ಟ್ರಕ್ಕೆ ಮಾತ್ರ ಆಗಿಲ್ಲ -ಸಚಿವ ಜಗದೀಶ್ ಶೆಟ್ಟರ್
Next Article ಕುಖ್ಯಾತ ಮನೆ ದೇವಸ್ಥಾನಗಳ ಕಳ್ಳನ ಬಂಧನ : 3,70,000 ಬೆಲೆ ಬಾಳುವ ಆಭರಣ ವಶ!!
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವ

December 12, 2025 3:51 pm
ಇತರೆ ಸುದ್ಧಿಗಳು

ಲಂಚ ಪಡೆಯುತ್ತಿದ್ದ ವೇಳೆ ಡಿಐಸಿ ಜಂಟಿ ನಿರ್ದೇಶಕ ಲೋಲೋಕಾಯಕ್ತರ ಬಲೆಗೆ

December 12, 2025 3:50 pm
ತುಮಕೂರು

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm
ಇತರೆ ಸುದ್ಧಿಗಳು

ಸವಿತಾ ಸಮಾಜದಿಂದ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ

December 12, 2025 3:30 pm
ಇತರೆ ಸುದ್ಧಿಗಳು

ದೇಶದ ಭದ್ರತೆ, ಭವಿಷ್ಯಕ್ಕಾಗಿ ಇಂದಿನ ವಿದ್ಯಾರ್ಥಿಗಳು ಸಂಶೋಧನೆಗಳನ್ನು ನಡೆಸಬೇಕಿದೆ: ತಜ್ಞರ ಅಭಿಮತ

December 12, 2025 3:29 pm
ಇತರೆ ಸುದ್ಧಿಗಳು

ಸಿದ್ಧಲಿ0ಗೇಶ್ವರ ಸಮಗ್ರವಚನ ಸಾಹಿತ್ಯ ಲೋಕಾರ್ಪಣೆ

December 12, 2025 3:27 pm
Our Youtube Channel
Our Picks

ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವ

December 12, 2025 3:51 pm

ಲಂಚ ಪಡೆಯುತ್ತಿದ್ದ ವೇಳೆ ಡಿಐಸಿ ಜಂಟಿ ನಿರ್ದೇಶಕ ಲೋಲೋಕಾಯಕ್ತರ ಬಲೆಗೆ

December 12, 2025 3:50 pm

ಸವಿತಾ ಸಮಾಜದಿಂದ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ

December 12, 2025 3:30 pm

ದೇಶದ ಭದ್ರತೆ, ಭವಿಷ್ಯಕ್ಕಾಗಿ ಇಂದಿನ ವಿದ್ಯಾರ್ಥಿಗಳು ಸಂಶೋಧನೆಗಳನ್ನು ನಡೆಸಬೇಕಿದೆ: ತಜ್ಞರ ಅಭಿಮತ

December 12, 2025 3:29 pm

ಸಿದ್ಧಲಿ0ಗೇಶ್ವರ ಸಮಗ್ರವಚನ ಸಾಹಿತ್ಯ ಲೋಕಾರ್ಪಣೆ

December 12, 2025 3:27 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವ

By News Desk BenkiyabaleDecember 12, 2025 3:51 pm

ಪಾವಗಡ: ಪಟ್ಟಣದ ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವದ ಅಂಗವಾಗಿ ಏರ್ಪ ಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪ್ರಸಿದ್ದ ನಂಜನಗೂಡು…

ಲಂಚ ಪಡೆಯುತ್ತಿದ್ದ ವೇಳೆ ಡಿಐಸಿ ಜಂಟಿ ನಿರ್ದೇಶಕ ಲೋಲೋಕಾಯಕ್ತರ ಬಲೆಗೆ

December 12, 2025 3:50 pm

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm

ಸವಿತಾ ಸಮಾಜದಿಂದ ವಧು-ವರರ ಅನ್ವೇಷಣಾ ಕೇಂದ್ರ ಉದ್ಘಾಟನೆ

December 12, 2025 3:30 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.