BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವೃಕ್ಷಮಾತೆ ಅಜಾರಾಮರ
  • ಕನ್ನಡ ಜೀವಂತ ಭಾಷೆ: ಡಾ. ಕರಿಗೌಡ
  • ಸುಸ್ಥಿರ ಸಂಶೋಧನೆಗಳತ್ತ ಗಮನಹರಿಸಿ: ರಾಜಾಸಾಬ್
  • ನರೇಗಾ ಯೋಜನೆಯ ಬಿಲ್ ನೀಡಲು ಅಧ್ಯಕ್ಷನ ವಿರೋಧ ಗ್ರಾಮ ಪಂಚಾಯ್ತಿಗೆ ಬೀಗ ಜಡಿದ ಸದಸ್ಯರು ಮತ್ತು ರೈತರು
  • ವಾರದ ಸಂತೆ ಎಪಿಎಂಸಿಗೆ ಬದಲಾಗೋದು ಅನುಮಾನ
  • ವಿಶೇಷ ಚೇತನರ, ವೃದ್ದರ, ಮಕ್ಕಳ ಸೇವೆ ಮಾಡುವಂತಹ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ಸಿ.ಬಿ.ಸುರೇಶ್ಬಾಬು
  • ಬಡವರ್ಗದವರ ಏಳ್ಗೆಗಾಗಿ ಶ್ರಮಿಸುತ್ತೆನೆ: ಕೆಎನ್‌ಆರ್
  • ನ.೧೬ರಿಂದ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ಉಪನ್ಯಾಸಕರ ಅವಶ್ಯಕತೆಯಿದೆ-ಸಚಿವ
Trending

ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ಉಪನ್ಯಾಸಕರ ಅವಶ್ಯಕತೆಯಿದೆ-ಸಚಿವ

By News Desk BenkiyabaleUpdated:September 27, 2019 6:49 pm

ತುಮಕೂರು:

      ಶಾಲಾ ಶಿಕ್ಷಣದಿಂದ ಬಂದ ವಿದ್ಯಾರ್ಥಿಗಳಿಗೆ ಉತ್ತಮವಾದ ಮಾರ್ಗದರ್ಶನವನ್ನು ಮಾಡುವ ಮೂಲಕ ಉತ್ತಮ ಭವಿಷ್ಯ ಕಲ್ಪಿಸಿಕೊಡುವ ಅವಕಾಶ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರಾಚಾರ್ಯರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾನೂನು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

      ನಗರದ ಕನ್ನಡ ಭವನದಲ್ಲಿ ನಡೆದ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಶಕ್ತಿ ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡುವ ಉಪನ್ಯಾಸಕರೇ ನಿಜವಾದ ಗುರುಗಳು, ವಿದ್ಯಾರ್ಥಿಗಳಲ್ಲಿ ಜಾನದ ಹಸಿವು ಹೆಚ್ಚಿಸುವ ಕೆಲಸ ಮಾಡುವ, ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ಉಪನ್ಯಾಸಕರ ಅವಶ್ಯಕತೆ ಇದೆ ಎಂದರು.
ಬೋಧನೆ ಮಾಡುವವರೆಲ್ಲ ಗುರುಗಳಲ್ಲ, ವಿದ್ಯಾರ್ಥಿಗಳನ್ನು ತಿದ್ದಿತೀಡಿ, ಪ್ರೋತ್ಸಾಹಿಸುವವರನ್ನು ಮಾತ್ರ ಗುರುಗಳು ಎನ್ನುತ್ತಾರೆ, ವಿದ್ಯಾರ್ಥಿಗಳ ಭವಿಷ್ಯದ ಜವಾಬ್ದಾರಿ ಉಪನ್ಯಾಸಕರ ಮೇಲಿದೆ ಎಂದ ಅವರು, ಪದವಿ ಪೂರ್ವ ಶಿಕ್ಷಣದಿಂದ ಪಡೆಯುವ ಅಂಕಗಳಿಗೆ ಯಾವುದೇ ಮಾನ್ಯತೆ ಇಲ್ಲದಂತಾಗಿದ್ದು, ಸಿಇಟಿ ಅಂಕಗಳಿಕೆಯೇ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ವಿಗೊಳ್ಳುವಂತೆ ರೂಪುಗೊಳಿಸಬೇಕು ಎಂದು ಉಪನ್ಯಾಸಕರಿಗೆ ಸಲಹೆ ನೀಡಿದರು.

      ವಿದ್ಯಾರ್ಥಿಗಳನ್ನು ಅಂಕಗಳಿಕೆಗೆ ಸೀಮಿತಗೊಳಿಸದೇ, ವಿಷಯವನ್ನು ಅರ್ಥ ಮಾಡಿಸುವ ಕಡೆ ಗಮನ ಹರಿಸಬೇಕು, ವಿದ್ಯಾರ್ಥಿಗಳಿಗೆ ಯೋಚನೆ ಮಾಡಿ, ಅರ್ಥ ಮಾಡಿಕೊಳ್ಳುವಂತಹ ಶಿಕ್ಷಣವನ್ನು ಕಲಿಸಿ ಎಂದ ಅವರು, ವಿದ್ಯಾರ್ಥಿಗಳಲ್ಲಿ ಓದುವ ಕುತೂಹಲವನ್ನು ಮೂಡಿಸಬೇಕು, ಅಧ್ಯಯನಕ್ಕೆ ಹೆಚ್ಚಿನ ವಿಷಯಗಳನ್ನು ಒದಗಿಸಬೇಕಾದ ಜವಾಬ್ದಾರಿ ಇದೆ, ಯಾವುದೇ ಸಂಶಯವನ್ನು ವಿದ್ಯಾರ್ಥಿಗಳು ಉಳಿಸಿಕೊಳ್ಳಬಾರದು ಎಂದು ಹೇಳಿದರು.

      ಜಿಲ್ಲೆಯ ವಿದ್ಯಾರ್ಥಿಗಳು ನೀಟ್, ಜೆಇಇ, ಮೆಡಿಕಲ್ ಸೀಟುಗಳನ್ನು ಪಡೆಯುವಂತಾಗಬೇಕು, ಆಡಳಿತಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಹುದ್ದೆಗಳನ್ನು ಗಳಿಸುವಂತಾಗಬೇಕು ಆ ನಿಟ್ಟಿನಲ್ಲಿ ಉಪನ್ಯಾಸಕರು ವಿದ್ಯಾರ್ಥಿಗಳನ್ನು ರೂಪಿಸಬೇಕು ಎಂದ ಅವರು, ವಿದ್ಯಾರ್ಥಿಗಳ ಶಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ವಿದ್ಯಾರ್ಥಿಯನ್ನು ಶಕ್ತನಾಗಿಸುವ ಕೆಲಸವನ್ನು ಮಾಡುವುದೇ ಶಿಕ್ಷಣ ಎಂದ ಅವರು, ಆ ನಿಟ್ಟಿನಲ್ಲಿ ಉಪನ್ಯಾಸಕರು ಚಿಂತಿಸಬೇಕು ಎಂದು ಕಿವಿಮಾತು ಹೇಳಿದರು.ತುಮಕೂರು ಶಾಸಕ ಜ್ಯೋತಿಗಣೇಶ್ ಮಾತನಾಡಿ ತಜ್ಞರಿಂದಲೇ ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿಕೊಳ್ಳಬಹುದು, ಉಪನ್ಯಾಸಕರು ತಯಾರಿಲ್ಲದೆ ಪಾಠ ಮಾಡದೇ ಹೋದರೆ, ವಿದ್ಯಾರ್ಥಿಗಳು ವಿಷಯವನ್ನು ಅರ್ಥ ಮಾಡಿಕೊಳ್ಳುವುದಿಲ್ಲ, ಓದುವಾಗಲೇ ವಿಷಯವನ್ನು ಅರ್ಥಮಾಡಿಕೊಳ್ಳುವಂತಹ ಸ್ಥಿತಿಯನ್ನು ನಿರ್ಮಿಸಬೇಕಾಗಿದೆ. ಮಕ್ಕಳಿಗೆ ಬೇಕಿರುವುದು ಪ್ರೋತ್ಸಾಹ ಅದನ್ನು ಉಪನ್ಯಾಸಕರು ಮಾಡಿದರೆ ಉತ್ತಮ ಪ್ರಜೆಗುವುದಷ್ಟೇ ಅಲ್ಲದೇ, ಉತ್ತಮ ಸ್ಥಾನವನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.

      ವಿಧಾನ ಪರಿಷತ್ ಸದಸ್ಯ ಚೌಡರೆಡ್ಡಿ ಮಾತನಾಡಿ, ಶಿಕ್ಷಕರ ಮಹತ್ವವನ್ನು ಅರಿತುಕೊಳ್ಳಬೇಕಿದೆ, ಶಿಕ್ಷಕರು ದೇವರಿಗೆ ಸಮಾನವಾದವರೂ, ಗುರುವಿನ ಮಾರ್ಗದರ್ಶನವಿಲ್ಲದೇ ಏನನ್ನು ಸಾಧಿಸಲು ಆಗುವುದಿಲ್ಲ, ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿದ್ದರೂ, ಅವೆಲ್ಲವನ್ನು ಬದಿಗೊತ್ತಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಶ್ರಮಿಸುತ್ತಾರೆ ಅಂತಹ ಶಿಕ್ಷಕರ ಮಹತ್ವವನ್ನು ವಿದ್ಯಾರ್ಥಿಗಳು ಹಾಗೂ ಸಮಾಜ ಅರಿಯಬೇಕಿದೆ ಎಂದರು.

     ದೇಶಕ್ಕೆ ಸಂಪತ್ತು ನೀಡಲು ಶ್ರಮಿಸುತ್ತಿರುವ ಶಿಕ್ಷಕರು ಎದುರಿಸುತ್ತಿರುವ ವೇತನ ಹಾಗೂ ಕಡ್ಡಾಯ ವರ್ಗಾವಣೆ ಸಂಬಂಧ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದ ಸದಸ್ಯರ ಸಭೆಯನ್ನು ಶಿಕ್ಷಣ ಸಚಿವರೊಂದಿಗೆ ಚರ್ಚಿಸಿದ್ದು, ಕಾನೂನಿಗೆ ತಿದ್ದುಪಡಿ ತಂದು ಉಪನ್ಯಾಸಕರು ಹಾಗೂ ಶಿಕ್ಷಕರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಶಿಕ್ಷಣ ಸಚಿವರು ಸಹಮತವನ್ನು ವ್ಯಕ್ತಪಡಿಸಿದ್ದಾರೆ ಎಂದರು.

      ಪ್ರಾಸ್ತಾವಿಕ ನುಡಿಗಳನ್ನಾಡಿದ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಎಸ್.ಸಿದ್ದಲಿಂಗಪ್ಪ ಅವರು, ಶಿಕ್ಷಕರ ದಿನಾಚರಣೆಯಂದು ಸರ್ಕಾರದ ವತಿಯಿಂದ ನಿವೃತ್ತ ಉಪನ್ಯಾಸಕರನ್ನಾಗಲಿ ಸನ್ಮಾನಿಸಲಾಗುವುದಿಲ್ಲ, ಕಾರ್ಯಕ್ರಮಕ್ಕೆ ಆಹ್ವಾನಿಸುವುದಿಲ್ಲ ಹಾಗಾಗಿ ಪ್ರಾಚಾರ್ಯರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸಚಿವರು ಎಷ್ಟು ಸರಿ ಶಿಕ್ಷಕರ ದಿನಾಚರಣೆ ಮಾಡುತ್ತೀರಿ ಎಂದು ಪ್ರಶ್ನಿಸುತ್ತಾರೆ, ಹಾಗಾಗಿ ಈ ವಿಚಾರವನ್ನು ಪ್ರಾಸ್ತಾವಿಕವಾಗಿ ಈ ವಿಷಯವನ್ನು ತಿಳಿಸಲಾಗುತ್ತಿದೆ ಎಂದರು.

       ಜಿಲ್ಲೆಯಲ್ಲಿ 240 ಸರ್ಕಾರಿ ಪದವಿಪೂರ್ವ ಕಾಲೇಜುಗಳಿವೆ, 50 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ, ಸಂಘದ ವತಿಯಿಂದ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಚಾರ್ಯರು, ಉಪನ್ಯಾಸಕರು, ಬೋಧಕೇತರಿಗೆ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಟಿ.ಎ.ಲತಾ, ಸಂಘದ ಅಧ್ಯಕ್ಷ ಶಂಕರ್, ರಾಜ್ಯ ಪ್ರತಿನಿಧಿ ಡಿ.ಕೆ.ಜಯರಾಮಯ್ಯ, ಸಂಘಟನಾ ಕಾರ್ಯದರ್ಶಿ ಎಸ್.ರಾಜಣ್ಣ, ಖಜಾಂಚಿ ಎಂ.ರಾಜಯ್ಯ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

(Visited 54 times, 1 visits today)
Previous Articleಪಾವಗಡ : ಶಾಲಾ ಸಂಪಿಗೆ ಬಿದ್ದು ವಿದ್ಯಾರ್ಥಿ ಸಾವು!!
Next Article ತುರುವೇಕೆರೆಗೆ ಆಗಮಿಸಿದ ಸಿಎಂ ಯಡಿಯೂರಪ್ಪಗೆ ಭರ್ಜರಿ ಸ್ವಾಗತ!!
News Desk Benkiyabale

Related Posts

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು

ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ

November 06, 2025 3:01 pm ತುಮಕೂರು
ತಾಜಾ ಸುದ್ಧಿಗಳು

ವೃಕ್ಷಮಾತೆ ಅಜಾರಾಮರ

November 15, 2025 4:23 pm
ಇತರೆ ಸುದ್ಧಿಗಳು

ಕನ್ನಡ ಜೀವಂತ ಭಾಷೆ: ಡಾ. ಕರಿಗೌಡ

November 14, 2025 2:43 pm
ಇತರೆ ಸುದ್ಧಿಗಳು

ಸುಸ್ಥಿರ ಸಂಶೋಧನೆಗಳತ್ತ ಗಮನಹರಿಸಿ: ರಾಜಾಸಾಬ್

November 14, 2025 2:41 pm
ಇತರೆ ಸುದ್ಧಿಗಳು

ನರೇಗಾ ಯೋಜನೆಯ ಬಿಲ್ ನೀಡಲು ಅಧ್ಯಕ್ಷನ ವಿರೋಧ ಗ್ರಾಮ ಪಂಚಾಯ್ತಿಗೆ ಬೀಗ ಜಡಿದ ಸದಸ್ಯರು ಮತ್ತು ರೈತರು

November 13, 2025 2:43 pm

ವಾರದ ಸಂತೆ ಎಪಿಎಂಸಿಗೆ ಬದಲಾಗೋದು ಅನುಮಾನ

November 13, 2025 2:33 pm
ಇತರೆ ಸುದ್ಧಿಗಳು

ವಿಶೇಷ ಚೇತನರ, ವೃದ್ದರ, ಮಕ್ಕಳ ಸೇವೆ ಮಾಡುವಂತಹ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ಸಿ.ಬಿ.ಸುರೇಶ್ಬಾಬು

November 13, 2025 2:29 pm
Our Youtube Channel
Our Picks

ವೃಕ್ಷಮಾತೆ ಅಜಾರಾಮರ

November 15, 2025 4:23 pm

ಕನ್ನಡ ಜೀವಂತ ಭಾಷೆ: ಡಾ. ಕರಿಗೌಡ

November 14, 2025 2:43 pm

ಸುಸ್ಥಿರ ಸಂಶೋಧನೆಗಳತ್ತ ಗಮನಹರಿಸಿ: ರಾಜಾಸಾಬ್

November 14, 2025 2:41 pm

ನರೇಗಾ ಯೋಜನೆಯ ಬಿಲ್ ನೀಡಲು ಅಧ್ಯಕ್ಷನ ವಿರೋಧ ಗ್ರಾಮ ಪಂಚಾಯ್ತಿಗೆ ಬೀಗ ಜಡಿದ ಸದಸ್ಯರು ಮತ್ತು ರೈತರು

November 13, 2025 2:43 pm

ವಾರದ ಸಂತೆ ಎಪಿಎಂಸಿಗೆ ಬದಲಾಗೋದು ಅನುಮಾನ

November 13, 2025 2:33 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ವೃಕ್ಷಮಾತೆ ಅಜಾರಾಮರ

By News Desk BenkiyabaleNovember 15, 2025 4:23 pm

ಪಾವಗಡ:ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಆಲದ ಮರದಂತೆ ರಾಜ್ಯದಲ್ಲಿ ದೊಡ್ಡ ಹೆಮ್ಮರವಾಗಿ ಬೆಳೆದು ಇಂದು ನಮ್ಮನ್ನು ಅಗಲಿರುವುದು ದುಃಖದ ಸಂಗತಿ…

ಕನ್ನಡ ಜೀವಂತ ಭಾಷೆ: ಡಾ. ಕರಿಗೌಡ

November 14, 2025 2:43 pm

ಸುಸ್ಥಿರ ಸಂಶೋಧನೆಗಳತ್ತ ಗಮನಹರಿಸಿ: ರಾಜಾಸಾಬ್

November 14, 2025 2:41 pm

ನರೇಗಾ ಯೋಜನೆಯ ಬಿಲ್ ನೀಡಲು ಅಧ್ಯಕ್ಷನ ವಿರೋಧ ಗ್ರಾಮ ಪಂಚಾಯ್ತಿಗೆ ಬೀಗ ಜಡಿದ ಸದಸ್ಯರು ಮತ್ತು ರೈತರು

November 13, 2025 2:43 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.