BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ
  • ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ
  • ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ
  • ೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ
  • ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
  • ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೀಸಲಾತಿ ನಮ್ಮ ಹಕ್ಕು, ಯಾರಪ್ಪನ ಮನೆಯ ಸ್ವತ್ತಲ್ಲ – ಪ್ರಸನ್ನಾನಂದ ಸ್ವಾಮೀಜಿ
ತುಮಕೂರು ಜಿಲ್ಲಾ ಸುದ್ಧಿಗಳು

ಮೀಸಲಾತಿ ನಮ್ಮ ಹಕ್ಕು, ಯಾರಪ್ಪನ ಮನೆಯ ಸ್ವತ್ತಲ್ಲ – ಪ್ರಸನ್ನಾನಂದ ಸ್ವಾಮೀಜಿ

By News Desk BenkiyabaleUpdated:November 06, 2019 6:16 pm

ಗುಬ್ಬಿ :

     ಜನಸಂಖ್ಯಾ ಅನುಗುಣವಾಗಿ ಪರಿಶಿಷ್ಟ ಪಂಗಡಕ್ಕೆ ನೀಡಬೇಕಾದ ಮೀಸಲಾತಿಯನ್ನು ಶೇ.೭.೫ ಕ್ಕೆ ಏರಿಸಬೇಕು. ಈ ಬಗ್ಗೆ ದೊಡ್ಡ ಹೋರಾಟ ನಡೆಸಿ ಹಕ್ಕೋತ್ತಾಯ ಮಂಡಿಸಲಾಗಿದೆ. ಆದರೂ ಸರ್ಕಾರ ನಿರ್ಲಕ್ಷ್ಯ ತೋರಿದಂತೆ ಕಾಣುತ್ತಿದೆ. ಮೀಸಲಾತಿ ನಮ್ಮ ಹಕ್ಕು ಯಾರಪ್ಪನ ಮನೆಯ ಸ್ವತ್ತಲ್ಲ ಎಂದು ರಾಜನಹಳ್ಳಿ ವಾಲ್ಮೀಕಿ ಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಗುಡುಗಿದರು.

       ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ವಾಲ್ಮೀಕಿ ನಾಯಕರ ಸಮಾಜ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬುಡಕಟ್ಟು ಜನಾಂಗವಾಗಿ ತನ್ನದೇ ಆದ ವೈಶಿಷ್ಟ ಬೆಳೆಸಿಕೊಂಡು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಎಲ್ಲಾ ರಂಗದಲ್ಲೂ ಮೀಸಲಾತಿ ಪಡೆದಲ್ಲಿ ನಮ್ಮ ಸಮುದಾಯ ಮುಖ್ಯವಾಹಿನಿಗೆ ಬರಲಿದೆ. ಈ ನಿಟ್ಟಿನಲ್ಲಿ ನಿಗದಿಯಾಗಿರುವ ಶೇ.೩ ರ ಮೀಸಲಾತಿಯನ್ನು ಶೇ.೭.೫ ಕ್ಕೆ ಏರಿಕೆ ಮಾಡಬೇಕಿದೆ ಎಂದರು.

      ದೇಶದಲ್ಲಿ ಬಹುಸಂಖ್ಯೆಯಲ್ಲಿರುವ ವಾಲ್ಮೀಕಿ ಸಮುದಾಯ ಚುನಾವಣೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ. ಇದೇ ಮಾದರಿಯಲ್ಲಿ ಉತ್ತರ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶವೇ ಉದಾಹಣೆಯಾಗಿದೆ. ಮೀಸಲಾತಿಗಾಗಿ ಪಾದಯಾತ್ರೆ ಮೂಲಕ ಹೋರಾಟ ಮಾಡಲಾಗಿದೆ. ಬೆಂಗಳೂರಿನಲ್ಲಿ ಪಾದಯಾತ್ರ ನಡೆಸಿ ನಮ್ಮ ಹಕ್ಕು ಪ್ರತಿಪಾದಿಸಿದ್ದೇವೆ. ಸರ್ಕಾರ ಪಡೆದ ಮೂರು ತಿಂಗಳ ಗಡುವು ತೀರಿದೆ. ಮೈತ್ರಿ ಸರ್ಕಾರವಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರಲ್ಲಿ ಒತ್ತಡ ಹೇರಲಾಗಿತ್ತು. ಈಗಿನ ಬಿಜೆಪಿ ಸರ್ಕಾರ ನಮ್ಮ ಮೀಸಲಾತಿಯ ಬಗ್ಗೆ ಕೂಡಲೇ ಪರಾಮರ್ಶಿಸಿ ಶೇ.೭.೫ ಕ್ಕೆ ಮೀಸಲಾತಿ ನಿಗದಿ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೂ ಸಮುದಾಯ ಸಿದ್ದವಿದೆ ಎಂದು ಎಚ್ಚರಿಕೆ ನೀಡಿದರು.

      ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ ಗಣ್ಯರು ಹಾಗೂ ದಾರ್ಶನಿಕರನ್ನು ಒಂದು ಜಾತಿಗೆ ಸೀಮಿತ ಮಾಡದೇ ಅವರ ತತ್ವಾದರ್ಶವನ್ನು ಎಲ್ಲಾ ವರ್ಗದವರೊಟ್ಟಿಗೆ ಪಾಲಿಸಬೇಕು. ರಾಜಕೀಯ ಪ್ರೌಢಿಮೆ ಬೆಳೆಸಿಕೊಳ್ಳಲು ಶಿಕ್ಷಣ ಮಾರ್ಗ ಅನುಸರಿಸಬೇಕು. ಜತೆಗೆ ಜಾತಿಯ ನಾಯಕನಾಗಿ ಗುರುತಿಸಿಕೊಳ್ಳದೇ ಜನನಾಯಕನಾಗಿ ಬೆಳೆದಲ್ಲಿ ಮಾತ್ರ ರಾಜಕೀಯ ಶಕ್ತಿ ತಾನಾಗಿಯೇ ಬೆಳೆಯುತ್ತದೆ. ಎಲ್ಲಾ ವರ್ಗದವರೊಂದಿಗೆ ಬದುಕು ಕಟ್ಟಿಕೊಳ್ಳುವ ನಮ್ಮ ವಾಲ್ಮೀಕಿ ಜನಾಂಗ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಾಥ್ ನೀಡಬೇಕು ಎಂದರು.

      ಮಾಜಿ ಸಚಿವ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ ಶೋಷಿತವರ್ಗಕ್ಕೆ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸಾಧಿಸಲು ಪ್ರೇರಣೆ ನೀಡಿದ್ದ ವಾಲ್ಮೀಕಿ ಗ್ರಂಥ ರಾಮಾಯಣ ಪುರಾತನ ಸಂವಿಧಾನ ಎಂದು ಎನಿಸಿದೆ. ರಾಜಕಾರಣಕ್ಕೆ ಬರಲು ಪ್ರೇರಣೆಯಾಗಿದ್ದು ಸಂಸದ ಬಸವರಾಜು ಅವರ ತಂತ್ರಗಾರಿಕೆ ಕಾರಣವಾಗಿದೆ. ನಗರಸಭೆ ಟಿಕೆಟ್‌ಗಾಗಿ ಕೇಳಿಕೊಂಡರೂ ನನ್ನ ತಾತ್ಸರ ಮಾಡಿದ್ದ ಪರಿಣಾಮ ರಾಜಕಾರಣಕ್ಕೆ ಬಂದು ಸತತ ನಾಲ್ಕು ಬಾರಿ ಶಾಸಕನಾಗಿ ಎಲ್ಲಾ ವರ್ಗದವರ ಜತೆ ಕೆಲಸ ಮಾಡಿದ್ದೇನೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಲ್ಲಾ ವರ್ಗದ ಜನರನ್ನೂ ಬೆಳೆಸಿದ್ದೇನೆ. ಶೋಷಿತರ ದನಿಯಾಗಿ ಕೆಲಸ ಮಾಡಿದ್ದೇನೆ ಎಂದರು.

      ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು. ಜತೆಗೆ ವಾಲ್ಮೀಕಿ ಸಮುದಾಯದ ನಿವೃತ್ತ ನೌಕರರಿಗೂ ಗೌರವಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ಚನ್ನಬಸವೇಶ್ವರಸ್ವಾಮಿ ದೇವಾಲಯದಿಂದ ನಡೆಸಲಾಯಿತು. ಮೆರವಣಿಗೆಯನ್ನು ಸಂಸದ ಜಿ.ಎಸ್.ಬಸವರಾಜು ಚಾಲನೆ ನೀಡಿದರು.

      ಕಾರ್ಯಕ್ರಮದಲ್ಲಿ ಶಿಡ್ಲೆಕೋಣ ಮಠದ ಶ್ರೀ ಸಂಜಯಕುಮಾರ ಸ್ವಾಮೀಜಿ, ಮುಖಂಡರಾದ ಜಿ.ಎನ್.ಬೆಟ್ಟಸ್ವಾಮಿ, ಎಸ್.ಡಿ.ದಿಲೀಪ್‌ಕುಮಾರ್, ಜಿಪಂ ಸದಸ್ಯರಾದ ಜಿ.ರಾಮಾಂಜಿನಪ್ಪ, ಜಿ.ಎಚ್.ಜಗನ್ನಾಥ್, ಡಾ.ನವ್ಯಾಬಾಬು, ಕೆ.ಆರ್.ಭಾರತಿ, ಕೆ.ಯಶೋಧಮ್ಮ, ತಾಪಂ ಅಧ್ಯಕ್ಷೆ ಅನುಸೂಯ, ತಾಪಂ ಸದಸ್ಯರಾದ ಕರಿಯಮ್ಮ, ಅ.ನ.ಲಿಂಗಪ್ಪ, ಪಪಂ ಸದಸ್ಯರಾದ ಜಿ.ಎನ್.ಅಣ್ಣಪ್ಪಸ್ವಾಮಿ, ಜಿ.ಸಿ.ಕೃಷ್ಣಮೂರ್ತಿ, ಸಾದಿಕ್, ಶೌಕತ್‌ಆಲಿ, ರೇಣುಕಾಪ್ರಸಾದ್, ಶಶಿಕುಮಾರ್, ವಾಲ್ಮೀಕಿ ಜಯಂತಿ ಆಚರಣಾ ಸಮಿತಿಯ ಪುಟ್ಟರಾಜು, ಎ.ನರಸಿಂಹಮೂರ್ತಿ, ಎಚ್.ಡಿ.ಯಲ್ಲಪ್ಪ, ಸಾಕಸಂದ್ರ ದೇವರಾಜು ಇತರರು ಇದ್ದರು.

(Visited 29 times, 1 visits today)
Previous Articleತುಮಕೂರು : ಕಸ ಸ್ಥಳಾಂತರಿಸಲು ಪಾಲಿಕೆ ಅಧಿಕಾರಿಗಳಿಗೆ ಮನವಿ!
Next Article ಕೈ ಚಾಚಿ ಬೆಲೆ ಕಳೆದುಕೊಂಡಿತೇ ಖಾಕಿ..!
News Desk Benkiyabale

Related Posts

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm ಇತರೆ ಸುದ್ಧಿಗಳು

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm news

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm news
ತಾಜಾ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm
Our Youtube Channel
Our Picks

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

By News Desk BenkiyabaleJune 11, 2026 5:15 pm

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ, ತುಮಕೂರು ಹಾಗೂ ನಿಟ್ಟೂರು…

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.