BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ
  • ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ ಸಲ್ಲಿಕೆ
  • ನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಮನವಿ
  • ನಾಲಾ ಭಾಗದ ರೈತರಿಂದ ಪೂರ್ವಬಾವಿ ಸಭೆ
  • ಕನ್ನಡದ ಸಾಹಿತಿ, ಕವಿಗಳಿಗೆ ಪ್ರೋತ್ಸಾಹ ಅಗತ್ಯ
  • ಪ್ರಾಣ ಹಾನಿ ತಪ್ಪಿಸಲು ಕಾರ್ಯಕರ್ತರಿಂದ ಒತ್ತಾಯ
  • ಮೊಬೈಲ್ ಡಿಜಿಟಲ್ ವಾಹನಕ್ಕೆ ಚಾಲನೆ
  • ರಾಷ್ಟçಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ ಹೇಳಿಕೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೀಕ್ ಕ್ಯಾಂಡಿಡೇಟ್ ಹಾಕಿದ್ದೇ ಗುಬ್ಬಿಯಲ್ಲಿ ಶ್ರೀನಿವಾಸ್ ಗೆಲುವಿಗೆ ಕಾರಣ-ಸಂಸದ
Trending

ವೀಕ್ ಕ್ಯಾಂಡಿಡೇಟ್ ಹಾಕಿದ್ದೇ ಗುಬ್ಬಿಯಲ್ಲಿ ಶ್ರೀನಿವಾಸ್ ಗೆಲುವಿಗೆ ಕಾರಣ-ಸಂಸದ

By News Desk BenkiyabaleUpdated:November 08, 2019 7:01 pm

ಗುಬ್ಬಿ :

      ವೀಕ್ ಕ್ಯಾಂಡಿಡೇಟ್ ಹಾಕಿದ್ದೆ ಗುಬ್ಬಿಯಲ್ಲಿ ಶ್ರೀನಿವಾಸ್ ಸತತವಾಗಿ ಗೆಲುವು ಸಾಧಿಸಲು ಕಾರಣವಾಯಿತು ಎಂದು ಸಂಸದ ಹಾಗೂ ದಿಶಾ ಉಪಸಮಿತಿ ಅಧ್ಯಕ್ಷ ಜಿ.ಎಸ್.ಬಸವರಾಜು ಅಚ್ಚರಿಯ ಮಾತುಗಳನ್ನಾಡಿದರು.

      ತಾಲ್ಲೂಕಿನ ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ದಿಶಾ ಉಪಸಮಿತಿ ಪ್ರಗತಿ ಪರಿಶೀಲನೆ ಸಭೆ ಹಾಗೂ ಸಂಸದ ಆದರ್ಶ ಗ್ರಾಮ ಯೋಜನೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಈಚೆಗೆ ಗುಬ್ಬಿ ಶಾಸಕರು ನೀಡಿರುವ ಟೀಕಾ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಕಿಡಿಕಾರುತ್ತಲೇ ಗುಬ್ಬಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ದಿ ಆಗಿಲ್ಲ. ಅಸಮರ್ಥರನ್ನು ಆಯ್ಕೆ ಮಾಡುತ್ತೀರಿ. ಶ್ರೀನಿವಾಸ್ ಶಾಸಕನಾಗುವಂತಿಲ್ಲ. ಆತನ ವಿರುದ್ದ ವೀಕ್ ಕ್ಯಾಂಡಿಡೇಟ್ ಹಾಕಿ ತಪ್ಪಾಯ್ತು ಎಂದು ಬೆಟ್ಟಸ್ವಾಮಿ ಅವರನ್ನು ಅಸಮರ್ಥ ಎಂದು ಪರೋಕ್ಷವಾಗಿ ಹೇಳಿ ಸಭಿಕರಲ್ಲಿ ಅಚ್ಚರಿ ತಂದರು.

      ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನನ್ನ ಮೇಲೆ ಟೀಕೆ ಮಾಡಿರುವ ಗುಬ್ಬಿ ಶಾಸಕರು ಅಭಿವೃದ್ದಿ ವಿಚಾರದಲ್ಲಿ ಶ್ವೇತಪತ್ರ ಹೊರಡಿಸಲಿ. ನಾನು ಕೂಡಾ ನನ್ನ ಕೊಡುಗೆಯನ್ನು ಶ್ವೇತಪತ್ರ ಸಿದ್ದಗೊಳಿಸುತ್ತೇನೆ ಎಂದು ಸವಾಲೆಸೆದ ಸಂಸದರು ಗುಬ್ಬಿ ಕ್ಷೇತ್ರದಲ್ಲಿ ನಡೆದ ಅಭಿವೃದ್ದಿ ಕೆಲಸವನ್ನೆಲ್ಲಾ ನನ್ನದು ಎಂದು ಹೇಳಿಕೊಂಡು ಓಡಾಡುತ್ತಾರೆ. ನೀರಾವರಿ ವಿಚಾರದಲ್ಲಿ ಕಿಂಚಿತ್ತೂ ಕಾಳಜಿ ತೋರದ ಶಾಸಕರು ಬರೀ ಸುಳ್ಳು ಭರವಸೆ ನೀಡುತ್ತಾ ನನ್ನನ್ನು ಟೀಕೆ ಮಾಡುವುದೇ ಕೆಲಸ ಮಾಡಿಕೊಂಡಿದ್ದಾರೆ. ನಾನು ಎಂದೂ ತಾರತಮ್ಯ ನೀತಿ ಅನುಸರಿಸಿಲ್ಲ. ಅಭಿವೃದ್ದಿ ಕೆಲಸ ಹಂಚಿಕೆ ವಿಚಾರದಲ್ಲೂ ಅರ್ಹರಿಗೆ ತಲುಪಿಸಿದ್ದೇನೆ ಎಂದ ಅವರು ಸಂಸದ ಆದರ್ಶ ಗ್ರಾಮವನ್ನು ನನ್ನ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದಲ್ಲಿ ಒಂದೊಂದು ಗ್ರಾಮ ಆಯ್ಕೆ ಮಾಡಿಕೊಂಡಿದ್ದೇನೆ. ಈ ನಿಟ್ಟಿನಲ್ಲಿ ಗುಬ್ಬಿಯ ಮಾರಶೆಟ್ಟಿಹಳ್ಳಿ ಪಂಚಾಯಿತಿಯ ಜತೆಗೆ ಎಚ್‍ಎಎಲ್ ಘಟಕ ಸುತ್ತುವರಿದ 5 ಗ್ರಾಮ ಪಂಚಾಯಿತಿಗಳ 18 ಗ್ರಾಮವನ್ನು ಆಯ್ಕೆ ಮಾಡಿಕೊಂಡು ಅಭಿವೃದ್ದಿ ಕೆಲಸ ಮಾಡಲಾಗುವುದು ಎಂದರು.

      ದಿಶಾ ಸಮಿತಿ ಮೂಲಕ ಎಲ್ಲಾ ಇಲಾಖೆಯ ಸವಲತ್ತುಗಳನ್ನು ಅರ್ಹರಿಗೆ ತಲುಪಿಸಲು ಸಜ್ಜಾಗಿದ್ದು, ಮುಂದಿನ ವರ್ಷದಲ್ಲಿ ದಿಶಾ ಸಮಿತಿಯ 142 ಅಂಶಗಳನ್ನು ಸಾರ್ಥಕಗೊಳಿಸಿ ಜಾರಿ ಮಾಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಪ್ರತಿ ಮನೆಗೆ ತಲುಪಿಸುವ ಮೋದಿ ಅವರ ಕನಸು ನನಸು ಮಾಡಲು ಕ್ರಮವಹಿಸಲಾಗಿದೆ. ಸ್ಥಳೀಯವಾಗಿ ಅಧಿಕಾರಿಗಳು ವಾಸ್ತವ್ಯ ಹೂಡುವ ಜತೆಗೆ ಪ್ರಾಮಾಣಿಕ ಕರ್ತವ್ಯ ನಡೆಸಲು ದಿಶಾ ಮಾರ್ಗದರ್ಶನ ನೀಡಲಿದೆ. ವೆಬ್‍ಸೈಟ್‍ನಲ್ಲಿ ಎಲ್ಲಾ ಇಲಾಖೆಯ ಮಾಹಿತಿ, ಅಂಕಿಅಂಶವನ್ನು ನಮೂದಿಸಬೇಕು. ಪ್ರಗತಿಯ ವರದಿ ಸಹ ನೀಡಬೇಕು. ಸುಳ್ಳು ಮಾಹಿತಿ ನೀಡಿದ್ದಲ್ಲಿ ಅಧಿಕಾರಿಗಳ ವಿರುದ್ದ ಕ್ರಮವಹಿಸಲು ದಿಶಾ ಸಮಿತಿ ಶಿಫಾರಸ್ಸು ಮಾಡಲಿದೆ ಎಂದ ಅವರು ಎತ್ತಿನಹೊಳೆ ನೀರಾವರಿ ಯೋಜನೆಗೆ ಪೂಕರವಾಗಿ ಕುಮಾರಧಾರೆ ನೀರನ್ನು ಮಳೆಗಾಲದಲ್ಲಿ ಈ ಭಾಗಕ್ಕೆ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸಿಕೊಂಡಲ್ಲಿ 8 ಸಾವಿರ ಕೆರೆಗಳಿಗೆ ನೀರು ಹರಿಸಿಕೊಳ್ಳಬಹುದು ಎಂದರು.

      ದಿಶಾ ಉಪಸಮಿತಿಯ ಸದಸ್ಯ ಕುಂದರನಹಳ್ಳಿ ರಮೇಶ್ ಮಾತನಾಡಿ 321 ಗ್ರಾಮ ಪಂಚಾಯಿತಿ ಸೇರಿದಂತೆ 11 ನಗರಸಂಸ್ಥೆಗಳು ದಿಶಾ ಸಮಿತಿಯ ವ್ಯಾಪ್ತಿಗೆ ಬರಲಿದೆ. ಯಾವುದೇ ಸಮಸ್ಯೆಗಳನ್ನು 30 ದಿನದಲ್ಲಿ ಕ್ರಮವಹಿಸಬೇಕು. ಸಮಸ್ಯೆ ಜತೆಗೆ ಹೊಸ ಯೋಜನೆಗಳು, ಸಲಹೆಗಳನ್ನು ದಿಶಾ ಸಮಿತಿಗೆ ಸಾರ್ವಜನಿಕರು ತಿಳಿಸಬಹುದಾಗಿದೆ. ಸಂಸದ ಆದರ್ಶ ಗ್ರಾಮ ಯೋಜನೆಯಲ್ಲಿ ಸಂಸದರ ನಿಧಿ ಜತೆಗೆ ಸರ್ಕಾರದ ಎಲ್ಲಾ ಯೋಜನೆಗಳನ್ನು ಸಾಕಾರಗೊಳಿಸಲು ಸೂಚಿಸಲಾಗಿದೆ.

      ಮೊದಲ ಆದ್ಯತೆಯಲ್ಲಿ ಅನುದಾನಗಳು ದೊರೆಯಲಿದೆ. ಮುಂದಿನ 5 ವರ್ಷದಲ್ಲಿ 8 ಗ್ರಾಮ ಪಂಚಾಯಿತಿ ಬಹುತೇಕ ಅಭಿವೃದ್ದಿ ಕಾಣಲು ಈ ಯೋಜನೆ ಸಹಕಾರಿಯಾಗಿದೆ ಎಂದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಎಂ.ಮಮತಾ, ತಾಪಂ ಇಒ ನರಸಿಂಹಯ್ಯ ಮಾರಶೆಟ್ಟಿಹಳ್ಳಿ ಗ್ರಾಪಂ ಅಧ್ಯಕ್ಷೆ ಲತಾ ಗುರುಸಿದ್ದಯ್ಯ, ನಿಟ್ಟೂರು ಗ್ರಾಪಂ ಅಧ್ಯಕ್ಷೆ ಜಯಮ್ಮ ಇತರರು ಇದ್ದರು.

(Visited 40 times, 1 visits today)
Previous Articleಆರ್ಥಿಕತೆ ಕುಸಿತದಿಂದ ದುಡಿಯುವ ವರ್ಗ ತತ್ತರ : ತಪನ್ ಸೇನ್ ಆತಂಕ
Next Article ತುಮಕೂರು : ಕೊಲೆ ನಡೆದ 24 ಗಂಟೆಗಳಲ್ಲಿ ಆರೋಪಿಗಳ ಸೆರೆ
News Desk Benkiyabale

Related Posts

ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ

July 01, 2025 3:01 pm ತುಮಕೂರು

ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ ಸಲ್ಲಿಕೆ

July 01, 2025 3:00 pm ತುಮಕೂರು

ನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಮನವಿ

July 01, 2025 2:58 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ

July 01, 2025 3:01 pm
ತುಮಕೂರು

ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ ಸಲ್ಲಿಕೆ

July 01, 2025 3:00 pm
ತುಮಕೂರು

ನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಮನವಿ

July 01, 2025 2:58 pm
ತುಮಕೂರು

ನಾಲಾ ಭಾಗದ ರೈತರಿಂದ ಪೂರ್ವಬಾವಿ ಸಭೆ

July 01, 2025 2:57 pm
ತುಮಕೂರು

ಕನ್ನಡದ ಸಾಹಿತಿ, ಕವಿಗಳಿಗೆ ಪ್ರೋತ್ಸಾಹ ಅಗತ್ಯ

July 01, 2025 2:55 pm
ತುಮಕೂರು

ಪ್ರಾಣ ಹಾನಿ ತಪ್ಪಿಸಲು ಕಾರ್ಯಕರ್ತರಿಂದ ಒತ್ತಾಯ

July 01, 2025 2:54 pm
Our Youtube Channel
Our Picks

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ

By News Desk BenkiyabaleJuly 01, 2025 3:01 pm

ಹುಳಿಯಾರು: ಹುಳಿಯಾರಿನ ಪರ್ತಕರ್ತ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿಬಿ ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.…

ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಲು ಮನವಿ ಸಲ್ಲಿಕೆ

July 01, 2025 3:00 pm

ನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಮನವಿ

July 01, 2025 2:58 pm

ನಾಲಾ ಭಾಗದ ರೈತರಿಂದ ಪೂರ್ವಬಾವಿ ಸಭೆ

July 01, 2025 2:57 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.