BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೀಕ್ ಕ್ಯಾಂಡಿಡೇಟ್ ಹಾಕಿದ್ದೇ ಗುಬ್ಬಿಯಲ್ಲಿ ಶ್ರೀನಿವಾಸ್ ಗೆಲುವಿಗೆ ಕಾರಣ-ಸಂಸದ
Trending

ವೀಕ್ ಕ್ಯಾಂಡಿಡೇಟ್ ಹಾಕಿದ್ದೇ ಗುಬ್ಬಿಯಲ್ಲಿ ಶ್ರೀನಿವಾಸ್ ಗೆಲುವಿಗೆ ಕಾರಣ-ಸಂಸದ

By News Desk BenkiyabaleUpdated:November 08, 2019 7:01 pm

ಗುಬ್ಬಿ :

      ವೀಕ್ ಕ್ಯಾಂಡಿಡೇಟ್ ಹಾಕಿದ್ದೆ ಗುಬ್ಬಿಯಲ್ಲಿ ಶ್ರೀನಿವಾಸ್ ಸತತವಾಗಿ ಗೆಲುವು ಸಾಧಿಸಲು ಕಾರಣವಾಯಿತು ಎಂದು ಸಂಸದ ಹಾಗೂ ದಿಶಾ ಉಪಸಮಿತಿ ಅಧ್ಯಕ್ಷ ಜಿ.ಎಸ್.ಬಸವರಾಜು ಅಚ್ಚರಿಯ ಮಾತುಗಳನ್ನಾಡಿದರು.

      ತಾಲ್ಲೂಕಿನ ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ದಿಶಾ ಉಪಸಮಿತಿ ಪ್ರಗತಿ ಪರಿಶೀಲನೆ ಸಭೆ ಹಾಗೂ ಸಂಸದ ಆದರ್ಶ ಗ್ರಾಮ ಯೋಜನೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಈಚೆಗೆ ಗುಬ್ಬಿ ಶಾಸಕರು ನೀಡಿರುವ ಟೀಕಾ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಕಿಡಿಕಾರುತ್ತಲೇ ಗುಬ್ಬಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ದಿ ಆಗಿಲ್ಲ. ಅಸಮರ್ಥರನ್ನು ಆಯ್ಕೆ ಮಾಡುತ್ತೀರಿ. ಶ್ರೀನಿವಾಸ್ ಶಾಸಕನಾಗುವಂತಿಲ್ಲ. ಆತನ ವಿರುದ್ದ ವೀಕ್ ಕ್ಯಾಂಡಿಡೇಟ್ ಹಾಕಿ ತಪ್ಪಾಯ್ತು ಎಂದು ಬೆಟ್ಟಸ್ವಾಮಿ ಅವರನ್ನು ಅಸಮರ್ಥ ಎಂದು ಪರೋಕ್ಷವಾಗಿ ಹೇಳಿ ಸಭಿಕರಲ್ಲಿ ಅಚ್ಚರಿ ತಂದರು.

      ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನನ್ನ ಮೇಲೆ ಟೀಕೆ ಮಾಡಿರುವ ಗುಬ್ಬಿ ಶಾಸಕರು ಅಭಿವೃದ್ದಿ ವಿಚಾರದಲ್ಲಿ ಶ್ವೇತಪತ್ರ ಹೊರಡಿಸಲಿ. ನಾನು ಕೂಡಾ ನನ್ನ ಕೊಡುಗೆಯನ್ನು ಶ್ವೇತಪತ್ರ ಸಿದ್ದಗೊಳಿಸುತ್ತೇನೆ ಎಂದು ಸವಾಲೆಸೆದ ಸಂಸದರು ಗುಬ್ಬಿ ಕ್ಷೇತ್ರದಲ್ಲಿ ನಡೆದ ಅಭಿವೃದ್ದಿ ಕೆಲಸವನ್ನೆಲ್ಲಾ ನನ್ನದು ಎಂದು ಹೇಳಿಕೊಂಡು ಓಡಾಡುತ್ತಾರೆ. ನೀರಾವರಿ ವಿಚಾರದಲ್ಲಿ ಕಿಂಚಿತ್ತೂ ಕಾಳಜಿ ತೋರದ ಶಾಸಕರು ಬರೀ ಸುಳ್ಳು ಭರವಸೆ ನೀಡುತ್ತಾ ನನ್ನನ್ನು ಟೀಕೆ ಮಾಡುವುದೇ ಕೆಲಸ ಮಾಡಿಕೊಂಡಿದ್ದಾರೆ. ನಾನು ಎಂದೂ ತಾರತಮ್ಯ ನೀತಿ ಅನುಸರಿಸಿಲ್ಲ. ಅಭಿವೃದ್ದಿ ಕೆಲಸ ಹಂಚಿಕೆ ವಿಚಾರದಲ್ಲೂ ಅರ್ಹರಿಗೆ ತಲುಪಿಸಿದ್ದೇನೆ ಎಂದ ಅವರು ಸಂಸದ ಆದರ್ಶ ಗ್ರಾಮವನ್ನು ನನ್ನ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದಲ್ಲಿ ಒಂದೊಂದು ಗ್ರಾಮ ಆಯ್ಕೆ ಮಾಡಿಕೊಂಡಿದ್ದೇನೆ. ಈ ನಿಟ್ಟಿನಲ್ಲಿ ಗುಬ್ಬಿಯ ಮಾರಶೆಟ್ಟಿಹಳ್ಳಿ ಪಂಚಾಯಿತಿಯ ಜತೆಗೆ ಎಚ್‍ಎಎಲ್ ಘಟಕ ಸುತ್ತುವರಿದ 5 ಗ್ರಾಮ ಪಂಚಾಯಿತಿಗಳ 18 ಗ್ರಾಮವನ್ನು ಆಯ್ಕೆ ಮಾಡಿಕೊಂಡು ಅಭಿವೃದ್ದಿ ಕೆಲಸ ಮಾಡಲಾಗುವುದು ಎಂದರು.

      ದಿಶಾ ಸಮಿತಿ ಮೂಲಕ ಎಲ್ಲಾ ಇಲಾಖೆಯ ಸವಲತ್ತುಗಳನ್ನು ಅರ್ಹರಿಗೆ ತಲುಪಿಸಲು ಸಜ್ಜಾಗಿದ್ದು, ಮುಂದಿನ ವರ್ಷದಲ್ಲಿ ದಿಶಾ ಸಮಿತಿಯ 142 ಅಂಶಗಳನ್ನು ಸಾರ್ಥಕಗೊಳಿಸಿ ಜಾರಿ ಮಾಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಪ್ರತಿ ಮನೆಗೆ ತಲುಪಿಸುವ ಮೋದಿ ಅವರ ಕನಸು ನನಸು ಮಾಡಲು ಕ್ರಮವಹಿಸಲಾಗಿದೆ. ಸ್ಥಳೀಯವಾಗಿ ಅಧಿಕಾರಿಗಳು ವಾಸ್ತವ್ಯ ಹೂಡುವ ಜತೆಗೆ ಪ್ರಾಮಾಣಿಕ ಕರ್ತವ್ಯ ನಡೆಸಲು ದಿಶಾ ಮಾರ್ಗದರ್ಶನ ನೀಡಲಿದೆ. ವೆಬ್‍ಸೈಟ್‍ನಲ್ಲಿ ಎಲ್ಲಾ ಇಲಾಖೆಯ ಮಾಹಿತಿ, ಅಂಕಿಅಂಶವನ್ನು ನಮೂದಿಸಬೇಕು. ಪ್ರಗತಿಯ ವರದಿ ಸಹ ನೀಡಬೇಕು. ಸುಳ್ಳು ಮಾಹಿತಿ ನೀಡಿದ್ದಲ್ಲಿ ಅಧಿಕಾರಿಗಳ ವಿರುದ್ದ ಕ್ರಮವಹಿಸಲು ದಿಶಾ ಸಮಿತಿ ಶಿಫಾರಸ್ಸು ಮಾಡಲಿದೆ ಎಂದ ಅವರು ಎತ್ತಿನಹೊಳೆ ನೀರಾವರಿ ಯೋಜನೆಗೆ ಪೂಕರವಾಗಿ ಕುಮಾರಧಾರೆ ನೀರನ್ನು ಮಳೆಗಾಲದಲ್ಲಿ ಈ ಭಾಗಕ್ಕೆ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸಿಕೊಂಡಲ್ಲಿ 8 ಸಾವಿರ ಕೆರೆಗಳಿಗೆ ನೀರು ಹರಿಸಿಕೊಳ್ಳಬಹುದು ಎಂದರು.

      ದಿಶಾ ಉಪಸಮಿತಿಯ ಸದಸ್ಯ ಕುಂದರನಹಳ್ಳಿ ರಮೇಶ್ ಮಾತನಾಡಿ 321 ಗ್ರಾಮ ಪಂಚಾಯಿತಿ ಸೇರಿದಂತೆ 11 ನಗರಸಂಸ್ಥೆಗಳು ದಿಶಾ ಸಮಿತಿಯ ವ್ಯಾಪ್ತಿಗೆ ಬರಲಿದೆ. ಯಾವುದೇ ಸಮಸ್ಯೆಗಳನ್ನು 30 ದಿನದಲ್ಲಿ ಕ್ರಮವಹಿಸಬೇಕು. ಸಮಸ್ಯೆ ಜತೆಗೆ ಹೊಸ ಯೋಜನೆಗಳು, ಸಲಹೆಗಳನ್ನು ದಿಶಾ ಸಮಿತಿಗೆ ಸಾರ್ವಜನಿಕರು ತಿಳಿಸಬಹುದಾಗಿದೆ. ಸಂಸದ ಆದರ್ಶ ಗ್ರಾಮ ಯೋಜನೆಯಲ್ಲಿ ಸಂಸದರ ನಿಧಿ ಜತೆಗೆ ಸರ್ಕಾರದ ಎಲ್ಲಾ ಯೋಜನೆಗಳನ್ನು ಸಾಕಾರಗೊಳಿಸಲು ಸೂಚಿಸಲಾಗಿದೆ.

      ಮೊದಲ ಆದ್ಯತೆಯಲ್ಲಿ ಅನುದಾನಗಳು ದೊರೆಯಲಿದೆ. ಮುಂದಿನ 5 ವರ್ಷದಲ್ಲಿ 8 ಗ್ರಾಮ ಪಂಚಾಯಿತಿ ಬಹುತೇಕ ಅಭಿವೃದ್ದಿ ಕಾಣಲು ಈ ಯೋಜನೆ ಸಹಕಾರಿಯಾಗಿದೆ ಎಂದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಎಂ.ಮಮತಾ, ತಾಪಂ ಇಒ ನರಸಿಂಹಯ್ಯ ಮಾರಶೆಟ್ಟಿಹಳ್ಳಿ ಗ್ರಾಪಂ ಅಧ್ಯಕ್ಷೆ ಲತಾ ಗುರುಸಿದ್ದಯ್ಯ, ನಿಟ್ಟೂರು ಗ್ರಾಪಂ ಅಧ್ಯಕ್ಷೆ ಜಯಮ್ಮ ಇತರರು ಇದ್ದರು.

(Visited 40 times, 1 visits today)
Previous Articleಆರ್ಥಿಕತೆ ಕುಸಿತದಿಂದ ದುಡಿಯುವ ವರ್ಗ ತತ್ತರ : ತಪನ್ ಸೇನ್ ಆತಂಕ
Next Article ತುಮಕೂರು : ಕೊಲೆ ನಡೆದ 24 ಗಂಟೆಗಳಲ್ಲಿ ಆರೋಪಿಗಳ ಸೆರೆ
News Desk Benkiyabale

Related Posts

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm news
ತಾಜಾ ಸುದ್ಧಿಗಳು
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
Our Youtube Channel
Our Picks

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

By News Desk BenkiyabaleAugust 08, 2026 4:30 pm

ಹುಳಿಯಾರು: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಜಾಗದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ…

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.