BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ
  • ಮಾದಾವರದಿ0ದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ
  • ಗೂಳೂರು ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ
  • ವಾಣಿಜ್ಯ ಮಳಿಗೆಗಳೆ ಈ ಕಳ್ಳರ ಟಾರ್ಗೆಟ್
  • ಪ್ರಶಸ್ತಿ ಮುಖ್ಯವಲ್ಲ ಪಾಲ್ಗೊಳ್ಳುವಿಕೆಯೇ ಭಾಗ್ಯ: ಬಿ.ಆರ್ ಮಂಜುನಾಥ್
  • ಕಲ್ಪತರು ಉತ್ಸವ-ಪ್ರಗತಿಪರ ರೈತರಿಗೆ ಗೌರವಾರ್ಪಣೆ
  • ಭೂಮಿಯು ವ್ಯಾಪಾರದ ವಸ್ತುವಲ್ಲ: ಪ್ರೊ. ರಾಜೇಂದ್ರ ಚೆನ್ನಿ
  • ನಾನು ಎನ್ನುವ ಸ್ವಾರ್ಥ ಬಿಟ್ಟು ನಾವು ಎನ್ನುವ ನಿಸ್ವಾರ್ಥತೆ ಬೆಳಸಿಕೊಳ್ಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದೇವರಾಯನದುರ್ಗದ ಕುಂಭಾಭಿಷೇಕ : ಟ್ರಾಫಿಕ್ ಸಮಸ್ಯೆಯಾಗದಂತೆ ಡಿಸಿ ಸೂಚನೆ!!
Trending

ದೇವರಾಯನದುರ್ಗದ ಕುಂಭಾಭಿಷೇಕ : ಟ್ರಾಫಿಕ್ ಸಮಸ್ಯೆಯಾಗದಂತೆ ಡಿಸಿ ಸೂಚನೆ!!

By News Desk BenkiyabaleUpdated:November 16, 2019 6:29 pm

ತುಮಕೂರು:

      ದೇವರಾಯನದುರ್ಗ ಗ್ರಾಮದಲ್ಲಿ ಫೆಬ್ರವರಿ ಮಾಹೆಯ 13, 14 ಮತ್ತು 15ರಂದು ನಡೆಯುವ ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ಕುಂಭಾಭಿಷೇಕ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನಾನುಕೂಲವಾಗದಂತೆ ಮುಂಜಾಗ್ರತಾ ಕ್ರಮವಾಗಿ ಟ್ರಾಫಿಕ್ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

     ದೇವರಾಯನದುರ್ಗ ಗ್ರಾಮದ ಯಾತ್ರಿ ನಿವಾಸದಲ್ಲಿಂದು 12 ವರ್ಷಗಳಿಗೊಮ್ಮೆ ನಡೆಯುವ ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ “ಕುಂಭಾಭಿಷೇಕ” ಮಹೋತ್ಸವದ ಹಿನ್ನೆಲೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕುಂಭಾಭಿಷೇಕಕ್ಕೂ ಮುನ್ನ ರಥ ಬೀದಿ ಹಾಗೂ ಇತರೆ ರಸ್ತೆಗಳನ್ನು ದುರಸ್ತಿಪಡಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಈ ಹಿಂದೆ ಕುಂಭಾಭಿಷೇಕ ಕಾರ್ಯಗಳನ್ನು ನಿರ್ವಹಿಸುತ್ತಿದ್ದ ರೀತಿಯಲ್ಲಿಯೇ ಈ ಬಾರಿಯೂ ನೆರವೇರಿಸಬೇಕು. ಅದರಲ್ಲಿ ಯಾವುದೇ ಬದಲಾವಣೆಗಳು ಬೇಡ. ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ ಕಾರ್ಯಕ್ರಮವನ್ನು ನೆರವೇರಿಸಲು ದಾನಿಗಳಿಂದ ನಿರ್ವಹಿಸುವ ಕಾಮಗಾರಿಗಳಿಗೆ ಹೊಸ ಮುಚ್ಚಳಿಕೆ ಪತ್ರ ತೆಗೆದುಕೊಳ್ಳುವುದು ಬೇಡ. ಈ ಹಿಂದೆ ದಾನಿಗಳು ಹೇಗೆ ಮಾಡುತ್ತಿದ್ದರೋ ಅಥವಾ ಯಾರಿಗೆ ದೇವರ ಕಾರ್ಯ ಮಾಡಬೇಕೆನ್ನುವ ಆಸಕ್ತಿ ಇರುತ್ತದೋ ಅವರಿಗೆ ಅವಕಾಶ ನೀಡಬೇಕೆಂದು ದೇವಾಲಯದ ಕಾರ್ಯನಿರ್ವಾಕ ಅಧಿಕಾರಿ ಸವಿತಾ ಅವರಿಗೆ ನಿರ್ದೇಶನ ನೀಡಿದರು.

      ಶ್ರೀ ಭೋಗನರಸಿಂಹಸ್ವಾಮಿ ದೇವಾಲಯದ ಪಕ್ಕದಲ್ಲಿರುವ ಪ್ರಸಾದ ನಿಲಯವನ್ನು ಕಲ್ಯಾಣ ಮಂಟಪವನ್ನಾಗಿ ನಿರ್ಮಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಕುರಿತು ಸವಿತಾ ಪ್ರಸ್ತಾಪಿಸಿದಾಗ, ಕುಂಭಾಭಿಷೇಕದ ಸಮಯಕ್ಕೆ ಕಾಮಗಾರಿ ಪೂರ್ಣಗೊಳ್ಳದೆ ಇದ್ದರೆ ಪ್ರಸಾದ ನಿಲಯವನ್ನೇ ವ್ಯವಸ್ಥಿತವಾಗಿ ಸರಿಪಡಿಸಬೇಕೆಂದರು.

      ದೇವಾಲಯಕ್ಕೆ ಸೇರಿದ ಕಾಟೇಜಿನಲ್ಲಿ ನಡೆಸಲಾಗುತ್ತಿರುವ ಅಂಗನವಾಡಿ ಹಿಂಭಾಗ ಸ್ನಾನದ ಗೃಹ ಮತ್ತು ಶೌಚಾಲಯವನ್ನು ನಿರ್ಮಿಸಲು ಅನುಮತಿ ನೀಡಬೇಕೆಂದು ಕಾಟೇಜಿನ ದಾನಿ ಮನವಿ ಮಾಡಿದಾಗ, ಅಂಗನವಾಡಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮವಹಿಸಿ ಎಂದು ಡಿಸಿ ಸೂಚಿಸಿದರು.

      ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ರಾಜಗೋಪುರ ಕಳಾಕರ್ಷಣೆಯನ್ನು ನವೆಂಬರ್ 22ರಂದು ನಡೆಸುವ, ಶ್ರೀ ಕ್ಷೇತ್ರದ ಬ್ರಹ್ಮರಥೋತ್ಸವ ರಥದ ನಿಲುಗಡೆ ಸ್ಥಳವನ್ನು ತಗ್ಗಿಸಿ ಸಮತಟ್ಟು ಮಾಡಿಸಿ ಸುಭದ್ರತೆ ಮಾಡುವ, ಶ್ರೀ ಭೋಗನರಸಿಂಹಸ್ವಾಮಿ ದೇವಾಲಯದ ಪ್ರಾಕಾರದಲ್ಲಿ ಗ್ರಿಲ್ ಅಳವಡಿಸುವ, ದೇವಾಲಯದಲ್ಲಿರುವ ಅನುಪಯುಕ್ತ ಸಾಮಗ್ರಿಗಳನ್ನು ವಿಲೇವಾರಿ ಮಾಡುವ, ನೂತನ ನಿತ್ಯ ಅನ್ನಸಂತರ್ಪಣಾ ಭವನದ ಮೇಲ್ಭಾಗದ ಕೊಠಡಿಗಳಿಗೆ ಪೀಠೋಪಕರಣಗಳನ್ನು ಹಾಗೂ ಇತರೆ ಅವಶ್ಯಕ ವಸ್ತುಗಳನ್ನು ಖರೀದಿ ಸೇರಿದಂತೆ ಹಲವಾರು ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಿ ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯಲಾಯಿತು.

      ಸಭೆಯಲ್ಲಿ ಜಿಲ್ಲಾ ಉಪವಿಭಾಗಾಧಿಕಾರಿ ಸಿ.ಎಲ್. ಶಿವಕುಮಾರ್, ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ವ್ಯವಸ್ಥಾಪನ, ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಎನ್.ನರಸಿಂಹಭಟ್ಟರ್, ಶ್ರೀ ಭೋಗನರಸಿಂಹಸ್ವಾಮಿ ದೇವಾಲಯದ ವೆಂಕಟರಾಜಭಟ್ಟರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಕುಂಭಾಭಿಷೇಕ ಮಹೋತ್ಸವದ ದಾನಿಗಳು, ಮತ್ತಿತರರು, ಉಪಸ್ಥಿತರಿದ್ದರು.

(Visited 24 times, 1 visits today)
Previous Articleಮಧುಗಿರಿ : ಹೆಣ್ಣು ಚಿರತೆ ಸೆರೆ!!
Next Article ಬಡಾವಣೆವಾರು ನಾಗರಿಕ ಸಮಿತಿಗಳನ್ನು ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಣಯ
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ

November 21, 2025 3:27 pm
ಇತರೆ ಸುದ್ಧಿಗಳು

ಮಾದಾವರದಿ0ದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ

November 21, 2025 3:10 pm
ಇತರೆ ಸುದ್ಧಿಗಳು

ಗೂಳೂರು ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ

November 21, 2025 3:08 pm
ಇತರೆ ಸುದ್ಧಿಗಳು

ವಾಣಿಜ್ಯ ಮಳಿಗೆಗಳೆ ಈ ಕಳ್ಳರ ಟಾರ್ಗೆಟ್

November 21, 2025 2:40 pm
ಇತರೆ ಸುದ್ಧಿಗಳು

ಪ್ರಶಸ್ತಿ ಮುಖ್ಯವಲ್ಲ ಪಾಲ್ಗೊಳ್ಳುವಿಕೆಯೇ ಭಾಗ್ಯ: ಬಿ.ಆರ್ ಮಂಜುನಾಥ್

November 20, 2025 3:09 pm
ಇತರೆ ಸುದ್ಧಿಗಳು

ಕಲ್ಪತರು ಉತ್ಸವ-ಪ್ರಗತಿಪರ ರೈತರಿಗೆ ಗೌರವಾರ್ಪಣೆ

November 20, 2025 3:08 pm
Our Youtube Channel
Our Picks

ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ

November 21, 2025 3:27 pm

ಮಾದಾವರದಿ0ದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ

November 21, 2025 3:10 pm

ಗೂಳೂರು ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ

November 21, 2025 3:08 pm

ವಾಣಿಜ್ಯ ಮಳಿಗೆಗಳೆ ಈ ಕಳ್ಳರ ಟಾರ್ಗೆಟ್

November 21, 2025 2:40 pm

ಪ್ರಶಸ್ತಿ ಮುಖ್ಯವಲ್ಲ ಪಾಲ್ಗೊಳ್ಳುವಿಕೆಯೇ ಭಾಗ್ಯ: ಬಿ.ಆರ್ ಮಂಜುನಾಥ್

November 20, 2025 3:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ

By News Desk BenkiyabaleNovember 21, 2025 3:27 pm

ತುಮಕೂರು: ಗುಬ್ಬಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಅನುಮೋದನೆ…

ಮಾದಾವರದಿ0ದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ

November 21, 2025 3:10 pm

ಗೂಳೂರು ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ

November 21, 2025 3:08 pm

ವಾಣಿಜ್ಯ ಮಳಿಗೆಗಳೆ ಈ ಕಳ್ಳರ ಟಾರ್ಗೆಟ್

November 21, 2025 2:40 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.