BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತಿಪಟೂರಿನಲ್ಲಿ ವಿವಿಧ ಕಡೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ: ಅಧಿಕಾರಿಗಳಿಗೆ ಕಡಕ್ ಸೂಚನೆ
  • ಗಾಂಧೀ ವಿಚಾರಧಾರೆ ಎಂದಿಗೂ ಪ್ರಸ್ತುತ
  • ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ
  • ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ
  • ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ
  • ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ
  • ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ
  • ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆಟೋ ಚಾಲಕರು ಸಹಕಾರ ಸಂಘ ಸ್ಥಾಪಿಸಿ-ಡಾ||ಶಾಲಿನಿ ರಜನೀಶ್
Trending

ಆಟೋ ಚಾಲಕರು ಸಹಕಾರ ಸಂಘ ಸ್ಥಾಪಿಸಿ-ಡಾ||ಶಾಲಿನಿ ರಜನೀಶ್

By News Desk BenkiyabaleUpdated:December 05, 2019 6:31 pm

ತುಮಕೂರು:

      ನಗರದಲ್ಲಿ ಪರಿಸರ ಸಂರಕ್ಷಣೆಯ ಜೊತೆಗೆ ಆಟೋ ಚಾಲಕರ ಜೀವನಮಟ್ಟ ಸುಧಾರಿಸಲು ಆಟೋ ಚಾಲಕರ ಸಹಕಾರ ಸಂಘ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಅಧಿಕಾರಿಗಳಿಗೆ ಹಾಗೂ ಆಟೋ ಚಾಲಕರಿಗೆ ತಿಳಿಸಿದರು.

      ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಆಟೋರೀಕ್ಷಾ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಅವರ ಆಧುನೀಕರಣ ಹಾಗೂ ಸಬಲೀಕರಣ ಬಗ್ಗೆ ಚರ್ಚಿಸಲು ಕರೆದಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಸಹಕಾರ ಸಂಘ ಸ್ಥಾಪಿಸಿ ನಗರದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಆಟೋ ಚಾಲಕರನ್ನು ಈ ಸಂಘದಲ್ಲಿ ಮೊದಲ ಆದ್ಯತೆ ನೀಡಿ ಸದಸ್ಯತ್ವ ನೀಡಿದಲ್ಲಿ ಹೆಚ್ಚಿನ ಅನುಕೂಲವಾಗಲಿದೆ ಎಂದರು.

      ನಗರದಲ್ಲಿ ಚಾಲ್ತಿಯಲ್ಲಿರುವ ಆಟೋ ಚಾಲಕರ ಪರವಾನಗಿಯ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಸಹಕಾರ ಸಂಘಗಳ ಉಪ ನಿಭಂಧಕರ ಸಹಕಾರದೊಂದಿಗೆ ಸಹಕಾರ ಸಂಘವನ್ನು ಸ್ಥಾಪಿಸಿ ಇದರಿಂದ ಆಟೋ ಚಾಲಕರಿಗೆ ಪರಿಸರ ಸ್ನೇಹಿ ಆಟೋ ಖರೀದಿಸಲು ಹಾಗೂ ಸಾಲಸೌಲಭ್ಯ ಪಡೆಯಲು ಸಹಾಯವಾಗಲಿದೆ ಎಂದು ಅವರು ತಿಳಿಸಿದರು.

      ನಗರದಲ್ಲಿ ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ತುಮಕೂರು ನಗರವನ್ನು ಪ್ರದೂಷಣ ರಹಿತ ಸ್ಮಾರ್ಟ್ ನಗರವನ್ನಾಗಿ ಮಾಡಲು ನಗರದಲ್ಲಿರುವ ಹೆಚ್ಚು ಹೊಗೆ ಸೂಸುವ ಹಳೆಯ ಆಟೋಗಳನ್ನು ಬದಲಾಯಿಸಬೇಕಿದೆ ಅಶಕ್ತರಿರುವವರು ಹಾಗೂ ಇ-ಆಟೋ ಖರೀದಿ ಮಾಡಲು ಆರ್ಥಿಕವಾಗಿ ಹಿಂದುಳಿದಿರುವ ಆಟೋ ಚಾಲಕರನ್ನು ಆಯ್ಕೆ ಮಾಡಿ ಮೊದಲ ಆದ್ಯತೆ ನೀಡಿ ಅಂತವರಿಗೆ ನೆರವಾಗುವುದು ಹಾಗೂ ಬಿಎಸ್-4, ಬಿಎಸ್-5 ಆಟೋ ಹೊಂದಿರುವ ಚಾಲಕರನ್ನು ಕೂಡ ಈ ಸಂಘದಲ್ಲಿ ಸದಸ್ಯತ್ವ ಕೊಡುವುದು ಈ ಸಂಘದ ಮುಖ್ಯ ಉದ್ದೇಶವಾಗಿರಬೇಕು ಎಂದರು.

      ಈಗಾಗಲೇ ಬೆಂಗಳೂರಿನಲ್ಲಿ ಆರಂಭವಾಗಿರುವ ನಮ್ಮ ಆಟೋ ಚಾಲಕರ ಸಹಕಾರ ಸಂಘವು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, 2500 ಸದಸ್ಯರಿದ್ದಾರೆ. ಈ ಸಂಘದವರಿಂದ ಅಗತ್ಯ ಮಾಹಿತಿಯನ್ನು ಪಡೆದು ತುಮಕೂರಿನಲ್ಲಿ ಶೀಘ್ರವಾಗಿ ಸಂಘ ಸ್ಥಾಪನೆ ಮಾಡಬೇಕು ಎಂದು ಅವರು ತಿಳಿಸಿದರು.

      ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿಗಳು ನಗರದಲ್ಲಿರುವ ಆಟೋಗಳ ಮೀಟರನ್ನು ಶೀಘ್ರವೇ ಪರಿಶೀಲಿಸಬೇಕು ಎಂದು ತಾಕೀತು ಮಾಡಿದರು.

      ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆಯ ಬಗ್ಗೆ ಕಾಳಜಿ ಇರುವ ಆಟೋ ಚಾಲಕರಿಗೆ ಸಹಕಾರ ಸಂಘಗಳ ಉಪ ನಿಭಂಧಕರು ಸಹಕಾರ ಸಂಘ ಸ್ಥಾಪಿಸಲು ನೆರವು ನೀಡುತ್ತಾರೆ ಅಲ್ಲದೇ ಆಟೋಗಳ ಮೇಲೆ ಜಾಹೀರಾತು ಪ್ರಕಟಿಸಲು ಸಹಕಾರ ನೀಡುತ್ತೇವೆ ಹಾಗೂ ಸಂಘದಲ್ಲಿ ಏನಾದರೂ ಗೊಂದಲಗಳುಂಟಾದಲ್ಲಿ ಬಗೆಹರಿಸುವ ಭರವಸೆಯನ್ನು ಅವರು ನೀಡಿದರು.

      ಇಸ್ರೋದ ಅಧಿಕಾರಿ ದಿವಾಕರ್ ಅವರು ಸಭೆಯಲ್ಲಿ ಮಾತನಾಡಿ ಆಟೋಗಳಿಗೆ ನಾವಿಕ್ ಡಿವೈಜ್ ಅಳವಡಿಸಿದರೆ ಆಟೋ ಚಾಲಕರಿಗೆ ಇದರಿಂದ ಅನೇಕ ಅನುಕೂಲತೆಗಳಿದ್ದು, ಆಟೋ ಎಲ್ಲಿ ಹಾಗೂ ಎಷ್ಟು ಕಿಲೋಮೀಟರ್ ಕ್ರಮಿಸಿದೆ ಎಂಬ ಸಂಪೂರ್ಣ ಮಾಹಿತಿಯು ಇದರಿಂದ ಲಭ್ಯವಾಗಲಿದೆ. ಜಾಹೀರಾತು ಏಜೆನ್ಸಿಗಳು ಇದನ್ನನುಸರಿಸಿ ಜಾಹೀರಾತು ನೀಡಲು ಮುಂದೆ ಬರುತ್ತವೆ ಅಲ್ಲದೆ ಇದರ ಬೆಲೆ 5 ಸಾವಿರ ರೂ. ಆಗಲಿದೆ ಎಂದರು.

      ಸಭೆಯಲ್ಲಿ VST mobility solutions ಕಂಪನಿಯವರು ಆಟೋ ಚಾಲಕರಿಗೆ ಮತ್ತು ಪ್ರಯಾಣಿಕರು ಅನುಕೂಲವಾಗುವ ಆನ್‍ಲೈನ್ ಪ್ಲಾಟ್‍ಫಾರಂ ತಂತ್ರಜ್ಞಾನದ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನೀಡಿದರು. ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ರಾಜು, ಡಿವೈಎಸ್‍ಪಿ ತಿಪ್ಪೇಸ್ವಾಮಿ, ಜೆಲ್ಲೆಯಲ್ಲಿರುವ ವಿವಿಧ ಆಟೋಚಾಲಕ ಸಂಘಗಳು ಹಾಗೂ ಒಕ್ಕೂಟಗಳ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

   ಸ್ಮಾರ್ಟ್‍ಸಿಟಿ ಕಾಮಗಾರಿಗಳ ವೀಕ್ಷಣೆ:

      ಸಭೆಯ ನಂತರ ತುಮಕೂರು ಸ್ಮಾರ್ಟ್‍ಸಿಟಿ ವತಿಯಿಂದ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ವೀಕ್ಷಣೆಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನಡೆಸಿದರು. ನಗರದ ರೈಲು ನಿಲ್ದಾಣ, ಬಿ.ಎಚ್. ರಸ್ತೆ, ವಿವೇಕಾನಂದ ರಸ್ತೆ, ಎಂ.ಜಿ. ರಸ್ತೆ, ಹೊರಪೇಟೆ ರಸ್ತೆ, ಗುಂಚಿ ವೃತ್ತ, ಸರ್ಕಾರಿ ಬಸ್‍ನಿಲ್ದಾಣ, ಚರ್ಚ್ ಸರ್ಕಲ್, ಮಂಡಿಪೇಟೆ ಮುಖ್ಯರಸ್ತೆ, ಗುಬ್ಬಿಗೇಟ್, ಡಾ. ರಾಧಾಕೃಷ್ಣ ರಸ್ತೆ, ಗೆದ್ದಲಹಳ್ಳಿ ಸರ್ಕಲ್, ಉಪ್ಪಾರಹಳ್ಳಿ ಮುಖ್ಯರಸ್ತೆ, ಭದ್ರಮ್ಮ ಸರ್ಕಲ್‍ನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿ ಗುತ್ತಿಗೆದಾರರು ಮತ್ತು ಅಭಿಯಂತರರಿಗೆ ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಮತ್ತು ಉಪವಿಭಾಗಾಧಿಕಾರಿ ಶಿವಕುಮಾರ್ ಹಾಜರಿದ್ದರು.

(Visited 22 times, 1 visits today)
Previous Articleನಮ್ಮ ಸಮಸ್ಯೆಗಳನ್ನು ಕಡೆಗಣಿಸದಿರಿ : ದಲಿತ ಮುಖಂಡರ ಒತ್ತಾಯ
Next Article ಅಮಲಾಪುರದಲ್ಲಿ MSME ಟೆಕ್ನಾಲಜಿ ಸೆಂಟರ್ ಸ್ಥಾಪನೆಗೆ 100 ಕೋಟಿ.ರೂ ಮಂಜೂರು
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ತಿಪಟೂರಿನಲ್ಲಿ ವಿವಿಧ ಕಡೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ: ಅಧಿಕಾರಿಗಳಿಗೆ ಕಡಕ್ ಸೂಚನೆ

December 01, 2025 2:52 pm
ಇತರೆ ಸುದ್ಧಿಗಳು

ಗಾಂಧೀ ವಿಚಾರಧಾರೆ ಎಂದಿಗೂ ಪ್ರಸ್ತುತ

December 01, 2025 1:42 pm
ಇತರೆ ಸುದ್ಧಿಗಳು

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

November 28, 2025 3:51 pm
ಇತರೆ ಸುದ್ಧಿಗಳು

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm
ಇತರೆ ಸುದ್ಧಿಗಳು

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm
ಇತರೆ ಸುದ್ಧಿಗಳು

ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ

November 28, 2025 3:45 pm
Our Youtube Channel
Our Picks

ತಿಪಟೂರಿನಲ್ಲಿ ವಿವಿಧ ಕಡೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ: ಅಧಿಕಾರಿಗಳಿಗೆ ಕಡಕ್ ಸೂಚನೆ

December 01, 2025 2:52 pm

ಗಾಂಧೀ ವಿಚಾರಧಾರೆ ಎಂದಿಗೂ ಪ್ರಸ್ತುತ

December 01, 2025 1:42 pm

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

November 28, 2025 3:51 pm

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ತಿಪಟೂರಿನಲ್ಲಿ ವಿವಿಧ ಕಡೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ: ಅಧಿಕಾರಿಗಳಿಗೆ ಕಡಕ್ ಸೂಚನೆ

By News Desk BenkiyabaleDecember 01, 2025 2:52 pm

ತುಮಕೂರು: ಶನಿವಾರ ಬೆಳ್ಳಂ ಬೆಳಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಿಪಟೂರು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ, ಕೆ.ಎಸ್.ಆರ್.ಟಿ.ಸಿ…

ಗಾಂಧೀ ವಿಚಾರಧಾರೆ ಎಂದಿಗೂ ಪ್ರಸ್ತುತ

December 01, 2025 1:42 pm

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

November 28, 2025 3:51 pm

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.