BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾರ್ಮಿಕ ಇಲಾಖೆಯಲ್ಲಿ ಬೀದಿಬದಿ ವ್ಯಾಪಾರಿಗಳು ನೋಂದಾಯಿಸಿಕೊಳ್ಳಿ: ದೊಡ್ಡ ಅವಲಪ್ಪ ಸಲಹೆ
  • ಅನರ್ಹ ಬಿಪಿಎಲ್ ಕಾರ್ಡುದಾರರು ಎಪಿಎಲ್‌ಗೆ ಬದಲಾಯಿಸಿಕೊಳ್ಳಲು ಎಡಿಸಿ ತಿಪ್ಪೇಸ್ವಾಮಿ ಸಲಹೆ
  • ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ
  • ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ
  • ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಿ
  • ಪೋಷಕರ ಆದರ್ಶಗಳು, ಮೌಲ್ಯಗಳನ್ನು ಮುಂದುವರೆಸಿ: ಸ್ವಾಮೀಜಿ
  • ಹಮಾಲಿ ಕಲ್ಯಾಣ ಮಂಡಳಿಗೆ ೫೦೦ ಕೋಟಿ ಮೀಸಲಿಡಲು ಒತ್ತಾಯ
  • ಸಮಾಜದಲ್ಲಿ ಜನರಿಗೆ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಬೇಕಿದೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲೆಗೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ
ತುಮಕೂರು ಜಿಲ್ಲಾ ಸುದ್ಧಿಗಳು

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲೆಗೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ

By News Desk BenkiyabaleUpdated:December 10, 2019 6:52 pm

ತುಮಕೂರು :

      ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿದ್ದು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿರುವ ತಲಾ 11 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಕಂಪ್ಯೂಟರ್ ಆಪರೇಟರ್‍ಗಳನ್ನು ಸನ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್ ತಿಳಿಸಿದರು.

      ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಲ್ಲಿ ನಡೆದ ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಪ್ರತಿಯೊಬ್ಬ ಗರ್ಭಿಣಿ, ಬಾಣಂತಿಯರ ಮನೆಗೆ ಭೇಟಿ ನೀಡಿ ಈ ಯೋಜನೆಯಡಿ ಸೌಲಭ್ಯ ಕಲ್ಪಿಸಲು ಶ್ರಮಿಸಿರುವುದು ಶ್ಲಾಘನೀಯ ಎಂದರಲ್ಲದೆ ಮುಂದೆಯೂ ಸಹ ಇದೇ ರೀತಿ ಉತ್ತಮ ಸೇವೆ ಸಲ್ಲಿಸಿ ಎಲ್ಲಾ ಅರ್ಹ ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯುವಂತೆ ಮಾಡಬೇಕು ಎಂದು ಕರೆ ನೀಡಿದರು.

      ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಬಿ.ಎಸ್.ನಂದಕುಮಾರ್ ಮಾತನಾಡಿ, 6 ವರ್ಷದೊಳಗಿನ ಸಣ್ಣ ಮಕ್ಕಳು, ಗರ್ಭಿಣಿ ಮತ್ತು ಬಾಣಂತಿಯರಿಗೆ ವಿವಿಧ ಸೌಲಭ್ಯವನ್ನು ನೀಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಸ್ಮರಣೀಯ. ಇಂತಹ ಕಾರ್ಯಕರ್ತೆಯರನ್ನು ಗುರುತಿಸಿ ಅವರಿಗೆ ಸನ್ಮಾನಿಸುತ್ತಿರುವುದು ಅರ್ಥಪೂರ್ಣ ಎಂದು ನುಡಿದರು.

      ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಎಸ್ ಶ್ರೀಧರ್ ಮಾತನಾಡಿ ಡಿಸೆಂಬರ್ 2 ರಿಂದ ಡಿಸೆಂಬರ್ 9 ರವರೆಗೆ ಒಂದು ವಾರಗಳ ಕಾಲ ನಡೆದ ಮಾತೃವಂದನಾ ಸಪ್ತಾಹದಲ್ಲಿ ಹೆಚ್ಚು ಕ್ರಿಯಾಶೀಲವಾಗಿ ಹಾಗೂ ಯಾವೊಬ್ಬ ಅರ್ಹ ಫಲಾನುಭವಿ ಬಿಟ್ಟು ಹೋಗದ ಹಾಗೆ ಶ್ರಮಿಸಿರುವ ಕಾರ್ಯಕರ್ತೆಯರು ಮತ್ತು ಎಲ್ಲಾ ಅರ್ಜಿಗಳನ್ನು ಸಕಾಲದಲ್ಲಿ ಗಣಕೀಕರಣ ಮಾಡಿದ ಕಂಪ್ಯೂಟರ್ ಆಪರೇಟರ್‍ಗಳಿಗೆ ಸನ್ಮಾನಿಸುವ ಕಾರ್ಯಕ್ರಮ ಇದಾಗಿದೆ ಎಂದರು.

      ಸಮಾರಂಭದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಪಾಲಾಕ್ಷಮ್ಮ, ಕಂಪ್ಯೂಟರ್ ಆಪರೇಟರ್ ಮಾನಸ, ಗುಬ್ಬಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಕಮಲ, ಕಂಪ್ಯೂಟರ್ ಆಪರೇಟರ್ ಭಾಗ್ಯ, ಕೊರಟಗೆರೆ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ವಿಜಯಲಕ್ಷ್ಮಮ್ಮ, ಕಂಪ್ಯೂಟರ್ ಆಪರೇಟರ್ ನಂದಿನಿ, ಕುಣಿಗಲ್ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ನಾಜೀಯ ಬಾನು, ಕಂಪ್ಯೂಟರ್ ಆಪರೇಟರ್ ರಶ್ಮಿ, ಮಧುಗಿರಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಎನ್.ಆರ್ ರೂಪಾ, ಕಂಪ್ಯೂಟರ್ ಆಪರೇಟರ್ ರಂಜಿತಾ, ಪಾವಗಡ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಯಶೋಧ, ಕಂಪ್ಯೂಟರ್ ಆಪರೇಟರ್ ಮಂಜುಳ, ಶಿರಾ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮಂಜೂರ್ ಉನ್ನೀಸ, ಕಂಪ್ಯೂಟರ್ ಆಪರೇಟರ್ ಕೃಷ್ಣಮೂರ್ತಿ, ತಿಪಟೂರು ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮಂಜುಳ ಕಂಪ್ಯೂಟರ್ ಆಪರೇಟರ್ ಕವಿತ, ತುಮಕೂರು ಗ್ರಾಮಾಂತರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಇಂದ್ರಮ್ಮ, ಕಂಪ್ಯೂಟರ್ ಆಪರೇಟರ್ ಎಸ್.ರೂಪಕುಮಾರಿ, ತುಮಕೂರು ನಗರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮಂಜುಳ, ಕಂಪ್ಯೂಟರ್ ಆಪರೇಟರ್ ಪವಿತ್ರ, ತುರುವೇಕೆರೆ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಚಿಕ್ಕಮ್ಮ, ಕಂಪ್ಯೂಟರ್ ಆಪರೇಟರ್ ಮಹಾಲಕ್ಷ್ಮಮ್ಮ ಇವರನ್ನು ಸನ್ಮಾನಿಸಲಾಯಿತು.

      ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಿಬ್ಬಂದಿ ಹೆಚ್.ಜಿ.ಶಶಿಧರ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಎನ್.ಆರ್.ರಂಗರಾಜು, ಜಿಲ್ಲಾ ಕಾರ್ಯಕ್ರಮ ಸಹಾಯಕರು ಸೇರಿದಂತೆ ಮಹಿಳಾ ಮೇಲ್ವಿಚಾರಕಿಯರು ಉಪಸ್ಥಿತರಿದ್ದರು.

(Visited 34 times, 1 visits today)
Previous Articleತಿಂಗಳೊಳಗಾಗಿ ಪಿಎಫ್, ಇಎಸ್‍ಐ ಹಣ ಖಾತೆಗೆ ಜಮೆ ಮಾಡಲು ಸೂಚನೆ
Next Article ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಒತ್ತಾಯಿಸಿ ಸಿಪಿಎಂ, ಸಿಐಟಿಯು ಪ್ರತಿಭಟನೆ
News Desk Benkiyabale

Related Posts

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು

ರಾತ್ರಿ 8 ರವರೆಗೂ ಪಡಿತರ ವಿತರಣೆ

December 08, 2025 4:18 pm ತುಮಕೂರು

ಅಂಬೇಡ್ಕರ್ ವಿಚಾರಧಾರೆಗಳನ್ನು ಅನುಸರಿಸಿ

December 08, 2025 4:12 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕಾರ್ಮಿಕ ಇಲಾಖೆಯಲ್ಲಿ ಬೀದಿಬದಿ ವ್ಯಾಪಾರಿಗಳು ನೋಂದಾಯಿಸಿಕೊಳ್ಳಿ: ದೊಡ್ಡ ಅವಲಪ್ಪ ಸಲಹೆ

December 11, 2025 4:24 pm
ಇತರೆ ಸುದ್ಧಿಗಳು

ಅನರ್ಹ ಬಿಪಿಎಲ್ ಕಾರ್ಡುದಾರರು ಎಪಿಎಲ್‌ಗೆ ಬದಲಾಯಿಸಿಕೊಳ್ಳಲು ಎಡಿಸಿ ತಿಪ್ಪೇಸ್ವಾಮಿ ಸಲಹೆ

December 11, 2025 4:23 pm
ಇತರೆ ಸುದ್ಧಿಗಳು

ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ

December 11, 2025 4:22 pm
ಇತರೆ ಸುದ್ಧಿಗಳು

ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ

December 11, 2025 4:21 pm
ಇತರೆ ಸುದ್ಧಿಗಳು

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಿ

December 11, 2025 4:19 pm
ಇತರೆ ಸುದ್ಧಿಗಳು

ಪೋಷಕರ ಆದರ್ಶಗಳು, ಮೌಲ್ಯಗಳನ್ನು ಮುಂದುವರೆಸಿ: ಸ್ವಾಮೀಜಿ

December 10, 2025 3:55 pm
Our Youtube Channel
Our Picks

ಕಾರ್ಮಿಕ ಇಲಾಖೆಯಲ್ಲಿ ಬೀದಿಬದಿ ವ್ಯಾಪಾರಿಗಳು ನೋಂದಾಯಿಸಿಕೊಳ್ಳಿ: ದೊಡ್ಡ ಅವಲಪ್ಪ ಸಲಹೆ

December 11, 2025 4:24 pm

ಅನರ್ಹ ಬಿಪಿಎಲ್ ಕಾರ್ಡುದಾರರು ಎಪಿಎಲ್‌ಗೆ ಬದಲಾಯಿಸಿಕೊಳ್ಳಲು ಎಡಿಸಿ ತಿಪ್ಪೇಸ್ವಾಮಿ ಸಲಹೆ

December 11, 2025 4:23 pm

ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ

December 11, 2025 4:22 pm

ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ

December 11, 2025 4:21 pm

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಿ

December 11, 2025 4:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕಾರ್ಮಿಕ ಇಲಾಖೆಯಲ್ಲಿ ಬೀದಿಬದಿ ವ್ಯಾಪಾರಿಗಳು ನೋಂದಾಯಿಸಿಕೊಳ್ಳಿ: ದೊಡ್ಡ ಅವಲಪ್ಪ ಸಲಹೆ

By News Desk BenkiyabaleDecember 11, 2025 4:24 pm

ಪಾವಗಡ: ಪ್ರಧಾನ ಮಂತ್ರಿಗಳ ಆತ್ಮ ನಿರ್ಭರ ಯೋಜನೆಯನ್ನು ಪಿ.ಎಂ.ಸ್ವ ನಿಧಿ ಯೋಜನೆ ಅಡಿಯಲ್ಲಿ ಹಂತ ಹಂತವಾಗಿ ಸಾಲ ಸೌಲಭ್ಯ ನೀಡಲಾಗುತ್ತದೆ…

ಅನರ್ಹ ಬಿಪಿಎಲ್ ಕಾರ್ಡುದಾರರು ಎಪಿಎಲ್‌ಗೆ ಬದಲಾಯಿಸಿಕೊಳ್ಳಲು ಎಡಿಸಿ ತಿಪ್ಪೇಸ್ವಾಮಿ ಸಲಹೆ

December 11, 2025 4:23 pm

ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ

December 11, 2025 4:22 pm

ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ

December 11, 2025 4:21 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.