BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್
  • ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ
  • ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ
  • ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ
  • ತುಮಕೂರು ವಿವಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ
  • ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ ಸ್ಥಾಪನೆ ಕೈಬಿಡುವಂತೆ ಸಿಪಿಐ ಆಗ್ರಹ
  • ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ
  • ‘ಸ್ಥಳೀಯ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಉಜ್ವಲ ಭವಿಷ್ಯ’
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿ.ಎಸ್.ಬಿ. ಗೆಲುವು ನನ್ನ ಸೋಲನ್ನು ಮರೆಸಿತು – ಕೆ.ಎನ್.ರಾಜಣ್ಣ
Trending

ಜಿ.ಎಸ್.ಬಿ. ಗೆಲುವು ನನ್ನ ಸೋಲನ್ನು ಮರೆಸಿತು – ಕೆ.ಎನ್.ರಾಜಣ್ಣ

By News Desk BenkiyabaleUpdated:December 16, 2019 6:28 pm

ಮಧುಗಿರಿ :

      ಲೋಕಸಭಾ ಚುನಾವಣೆಯಲ್ಲಿ ಜಿ.ಎಸ್.ಬಿ.ಗೆಲುವು ನನ್ನ ಸೋಲನ್ನು ಮರೆಸಿ ಮತ್ತೆ ಜನ ಸೇವೆ ಮಾಡಲು ಪುಷ್ಟಿ ನೀಡಿತು. ಈ ಬಾರಿ ಕ್ಷೇತ್ರಕ್ಕೆ ಯಾವ ಪಕ್ಷದಿಂದ ಬರುತ್ತೇನೆ ಎಂದು ತೀರ್ಮಾನಿಸಿಲ್ಲ. ನಾನು ಯಾವುದೇ ಪಕ್ಷದಿಂದ ನಿಂತರೂ ನಿಮ್ಮ ಸಹಕಾರ ಹಾಗೂ ಆಶಿರ್ವಾದವೇ ಮುಖ್ಯ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.

      ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನೂತನ ಟಿಡಿಸಿಸಿ ಬ್ಯಾಂಕಿನ 31ನೇ ಶಾಖೆಯ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದು ಕಡೆ ಅಭಿಮಾನಿಗಳ ಅಭಿಮಾನ ಇನ್ನೊಂದು ಕಡೆ ಮುಖಂಡರ ಒತ್ತಾಯ ಮಧುಗಿರಿಗೆ ಬರಬೇಕೆಂದು ನನ್ನ ಮೆಚ್ಚಿನ ಜನತೆ ಇರುವ ಈ ಕ್ಷೇತ್ರಕ್ಕೆ ಬರುತ್ತೇನೆ. ಆದರೆ ಕಾಂಗ್ರೆಸ್ಸಾ , ಬಿಜೆಪಿನಾ, ಬಿಎಸ್‍ಪಿ ನಾ ಅಥವಾ ಜೆಡಿಎಸ್ ಈ ಪಕ್ಷಗಳಲ್ಲಿ ಯಾವುದರಲ್ಲಿಯಾಗಲಿ ಸ್ಪರ್ಧಿಸಬಹುದು. ನಿಮ್ಮ ಅಭಿಮಾನ, ಪ್ರೀತಿಯ ಮುಂದೆ ಯಾವ ಪಕ್ಷವೆನ್ನುವುದು ಮುಖ್ಯವಲ್ಲ ಎಂದು ಮುಂದಿನ ತಮ್ಮ ಸ್ಪರ್ಧೆಯ ಬಗ್ಗೆ ರಾಜಕಾರಣದ ಗುಟ್ಟು ಬಿಡದೆ ಅಭಿಮಾನದ ಮಾತುಗಳನ್ನಾಡಿದರು.

      ಅಧಿಕಾರ ಯಾರಿಗೂ ಶಾಶ್ವತವಲ್ಲ, ಅಧಿಕಾರ ಇದ್ದಾಗ ಜನರ ವಿಶ್ವಾಸ ಗಳಿಸುವುದು ಮುಖ್ಯ. ಬರುವ ದಾರಿಯಲ್ಲಿ ಎಲ್ಲಾ ಗ್ರಾಮಗಳಲ್ಲೂ ಅದ್ಭುತ ಸ್ವಾಗತ ಕೋರಿದ ಎಲ್ಲರಿಗೂ ಅಭಿನಂದನೆಗಳು. ಅಧಿಕಾರ ಇರಲಿ ಬಿಡಲಿ ನಿಮ್ಮ ಪ್ರೀತಿ ವಿಶ್ವಾಸ ಸದಾ ನಮ್ಮ ಮೇಲೆ ಇರಲಿ. ನನ್ನ ಅಧಿಕಾರಾವಧಿಯಲ್ಲಿ ಜಾತಿ ಹಾಗೂ ಪಕ್ಷಬೇದ ಮಾಡದೇ ಎಲ್ಲರಿಗೂ ಕೆಲಸ ಮಾಡಿದ್ದೇನೆ, ಎಲ್ಲರಿಗೂ ಸರಕಾರಿ ಸೌಲಭ್ಯ ಸಿಗುವಂತೆ ಕಾರ್ಯ ನಿರ್ವಹಿಸಿದ್ದೇನೆ. ಶಾಲಾ ವಿಧ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ನೀಡಿದ್ದೇವೆ. ಸುಮಾರು 25 ಸಾವಿರಕ್ಕೂ ಹೆಚ್ಚು ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಮನೆ ಮನೆಗೆ ತಲುಪಿಸಿದ್ದೇವೆ. ತಾಲೂಕಿನಲ್ಲಿ ಸುಮಾರು 164 ಕೋಟಿಗೂ ಹೆಚ್ಚು ಸಾಲ ಮನ್ನ ಆಗಿದೆ, ನಾನು ಬಡವರ ಪರ ಕೆಲಸ ಮಾಡುತ್ತಿದ್ದರೆ ಕೆಲವರು ನಮ್ಮ ಬ್ಯಾಂಕನ್ನು ಸೂಪರ್ ಸೀಡ್ ಮಾಡಲು ಯತ್ನಿಸಿದ್ದರು. ಆದರೆ ಇಂದು ಅವರೇ ಅಧಿಕಾರವು ಕಳೆದು ಜೀರೋ ಟ್ರಾಫಿಕು ಕಳೆದುಕೊಂಡು ಓಡಾಡುತ್ತಿದ್ದಾರೆ ಎಂದರು.
ನನ್ನ ಅಧಿಕಾರಾವದಿಯಲ್ಲಿ ಗೋಶಾಲೆಗಳನ್ನು ತೆರೆದು ಉಚಿತ ಮೇವು ನೀಡುವುದರ ಜೊತೆಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಈಗ ಮೇವು ವಿಚಾರವು ದೊಡ್ಡ ದಂದೆಯಾಗಿದ್ದು, ಕಳ್ಳ ಬಿಲ್ಲುಗಳ ಕಾಳಸಂತೆಯಾಗಿದೆ ಎಂದರು. ಜಿಲ್ಲೆಯಲ್ಲಿನ ನೀರಿನ ಸಮಸ್ಯೆ ಉಂಟಾಗಲು ದೇವೇಗೌಡರ ಕುಟುಂಬವೇ ಕಾರಣ ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ಉತ್ತಮ ತೀರ್ಪು ನೀಡಿದ್ದೀರ. ಮುಂದಿನ ದಿನಗಳಲ್ಲಿ ಮಧುಗಿರಿಯಲ್ಲಿ ಜಿಲ್ಲಾ ಕೇಂದ್ರವನ್ನಾಗಿಸಲು ಹಾಗೂ ತಾಲೂಕಿನ 54 ಕೆರೆಗಳಿಗೆ ನೀರು ತುಂಬಿಸಲು ನನಗೆ ಮತ್ತು ಸಂಸದರಿಗೆ ಸಹಕಾರ ನೀಡಬೇಕು ಎಂದರು.ಗ್ರಾಮೀಣ ಭಾಗದ ರೈತರ ಅನುಕೂಲಕ್ಕಾಗಿ ಪ್ರತಿ ಹೋಬಳಿಯಲ್ಲಿ ಡಿಸಿಸಿ ಬ್ಯಾಂಕ್ ತೆರೆಯಲಾಗುತ್ತಿದ್ದು, ನೂತನವಾಗಿ ಪ್ರಾರಂಭವಾಗುತ್ತಿರುವ ಬ್ಯಾಂಕ್ ನಿಮ್ಮೆಲ್ಲರ ಆಸ್ತಿ, ಇಲ್ಲಿ ಪ್ರತಿನಿತ್ಯದ ವ್ಯವಹಾರ ನಡೆಸುವುದರಿಂದ ನಿಮ್ಮ ಬ್ಯಾಂಕ್ ಅಭಿವೃದ್ಧಿ ಹೊಂದುತ್ತದೆ. ಬ್ಯಾಂಕಿನಲ್ಲಿ ಚಿನ್ನಾಭರಣಗಳ ಮೇಲೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದ ಅವರು ಗ್ರಾಮೀಣ ಮಕ್ಕಳಲ್ಲಿ ಉತ್ತಮ ಪ್ರತಿಭೆಯಿದ್ದು, ಅವರಿಗೆ ಉತ್ತಮ ವಿದ್ಯಾಭ್ಯಾಸ ನೀಡಿಸುವುದು ಪೋಷಕರ ಆದ್ಯ ಕರ್ತವ್ಯ ಎಂದರು.

      ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ಹೆಚ್ಚು ಕೆಲಸ ಮಾಡುವವರನ್ನು ಜನ ಸೋಲಿಸುತ್ತಾರೆ, ಆದರೆ ಬೆಂಗಳೂರಿನಲ್ಲಿ ಕುಳಿತುಕೊಂಡು ಆಡಳಿತ ನಡೆಸುವವರನ್ನು ಗೆಲ್ಲಿಸುತ್ತಾರೆ ಇದು ನಮ್ಮ ದುರ್ವಿಧಿ. ಮಧುಗಿರಿ ತಾಲೂಕು ಸಹಕಾರ ಕ್ಷೇತ್ರದಲ್ಲಿ ತುಂಬಾ ಮುಂದುವರೆದಿದೆ. ತಾಲೂಕಿನಲ್ಲಿ ಈಗಾಗಲೇ ಸುಮಾರು 160 ಕೋಟಿಗೂ ಹೆಚ್ಚು ಸಾಲ ಮನ್ನ ವಾಗಿದೆ. ಇದಕ್ಕೆ ಮೂಲಕಾರಣ ಕೆಎರ್ ಇಂತಹ ಅಭಿವೃದ್ಧಿಯ ಹರಿಕಾರನನ್ನು ಸೋಲಿಸಿ ಕ್ಷೇತ್ರದ ಜನತೆಯ ದೊಡ್ಡ ತಪ್ಪು ಮಾಡಿದ್ದಿರಾ, ಮುಂದಿನ ಸಲವಾದರೂ ಇಂತಹ ತಪ್ಪನ್ನೂ ಮಾಡದೆ ಅವರ ಕೈ ಬಲಪಡಿಸಿ ಎಂದ ಅವರು, 25 ನದಿಗಳ ನೀರು ಸಮುದ್ರದ ಪಾಲಾಗುತ್ತಿದ್ದು, ಅಂತಹ ನೀರನ್ನು ನಮ್ಮ ಜಿಲ್ಲೆಗೆ ತರುವುದು ನಮ್ಮ ಆದ್ಯ ಕರ್ತವ್ಯ. ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸುವುದೇ ನನ್ನ ಮೊದಲ ಗುರಿ ಎಂದರು.

 

(Visited 18 times, 1 visits today)
Previous Articleಎಸ್‍ಸಿಪಿ/ಟಿಎಸ್‍ಪಿಯ ಅನುದಾನವನ್ನು ಶೇ.100ರಷ್ಟು ಖರ್ಚು ಮಾಡಿ
Next Article ತುಮಕೂರನ್ನು ಅಪಘಾತರಹಿತ ಜಿಲ್ಲೆಯಾಗಿಸುವುದೇ ನಮ್ಮ ಉದ್ದೇಶ – ಡಿಸಿ
News Desk Benkiyabale

Related Posts

ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ

November 06, 2025 3:01 pm ತುಮಕೂರು

‘ಸ್ಥಳೀಯ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಉಜ್ವಲ ಭವಿಷ್ಯ’

November 06, 2025 2:49 pm ತುಮಕೂರು

ತುಮಕೂರು ವಿ.ವಿ.ಗೆ ಡಾ. ಶಿವಕುಮಾರ ಸ್ವಾಮಿಗಳ ಹೆಸರಿಡುವಂತೆ ಡಾ. ಡಿ.ಎನ್.ಯೋಗೀಶ್ವರಪ್ಪ ಆಗ್ರಹ

November 06, 2025 2:47 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

November 07, 2025 4:52 pm
ಇತರೆ ಸುದ್ಧಿಗಳು

ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ

November 07, 2025 4:14 pm
ಇತರೆ ಸುದ್ಧಿಗಳು

ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ

November 07, 2025 4:11 pm
ಇತರೆ ಸುದ್ಧಿಗಳು

ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ

November 07, 2025 4:08 pm
ಇತರೆ ಸುದ್ಧಿಗಳು

ತುಮಕೂರು ವಿವಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ

November 07, 2025 4:07 pm
ಇತರೆ ಸುದ್ಧಿಗಳು

ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ ಸ್ಥಾಪನೆ ಕೈಬಿಡುವಂತೆ ಸಿಪಿಐ ಆಗ್ರಹ

November 06, 2025 3:21 pm
Our Youtube Channel
Our Picks

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

November 07, 2025 4:52 pm

ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ

November 07, 2025 4:14 pm

ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ

November 07, 2025 4:11 pm

ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ

November 07, 2025 4:08 pm

ತುಮಕೂರು ವಿವಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ

November 07, 2025 4:07 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

By News Desk BenkiyabaleNovember 07, 2025 4:52 pm

ತುಮಕೂರು: ತುಮಕೂರು ವಿಶ್ವ ವಿದ್ಯಾನಿಲಯದ ನೂತನ ಕ್ಯಾಂಪಸ್ ಜ್ಞಾನ ಪ್ರವಾಹದ ಸಂಕೇತವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬಣ್ಣಿಸಿದ್ದಾರೆ. ತುಮಕೂರು…

ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ

November 07, 2025 4:14 pm

ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ

November 07, 2025 4:11 pm

ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ

November 07, 2025 4:08 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.