BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ
  • ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ
  • ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ
  • ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ
  • ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ
  • ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
  • ಶಾಲಾ ಅವರಣದಲ್ಲಿ ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ: ಸಧಿಕಾರಿಗಳಿಗೆ ಡಾ: ತಿಪ್ಪೇಸ್ವಾಮಿ ಕೆ.ಟಿ.
  • ‘ಯುವ ಪೀಳಿಗೆಯ ಕೈಯಲ್ಲಿ ಸಂವಿಧಾನದ ಭವಿಷ್ಯ’
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಜ್ಞಾನದ ಆವಿಷ್ಕಾರಗಳು ಅಭಿವೃದ್ಧಿಗೆ ಪೂರಕವಾಗಿರಬೇಕು – ಶ್ರೀ ಸಿದ್ಧಲಿಂಗಸ್ವಾಮೀಜಿಗಳು
Trending

ವಿಜ್ಞಾನದ ಆವಿಷ್ಕಾರಗಳು ಅಭಿವೃದ್ಧಿಗೆ ಪೂರಕವಾಗಿರಬೇಕು – ಶ್ರೀ ಸಿದ್ಧಲಿಂಗಸ್ವಾಮೀಜಿಗಳು

By News Desk BenkiyabaleUpdated:December 30, 2019 7:17 pm

ತುಮಕೂರು:

      ವಿಜ್ಞಾನದ ಆವಿಷ್ಕಾರಗಳು ಮನುಷ್ಯ ಹಾಗೂ ಸಮಾಜದ ಬೆಳವಣಿಗೆಗೆ ಪೂರಕವಾಗಬೇಕೇ ಹೊರತು ಮಾರಕವಾಗಬಾರದು ಎಂದು ಶ್ರೀ ಸಿದ್ಧಗಂಗಾ ಮಠದ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮೀಜಿಗಳು ಅಭಿಪ್ರಾಯಪಟ್ಟರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ತುಮಕೂರು(ದ)ಜಿಲ್ಲೆ ಇವರ ಸಹಯೋಗದಲ್ಲಿಂದು ಶ್ರೀ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ 2019-20 ನೇ ಸಾಲಿನ “ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ” ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಅವರು, ವಿಜ್ಞಾನವೆಂಬುದು ಸತ್ಯದ ಅನ್ವೇಷಣೆಯಾಗಿದ್ದು, ವಿಜ್ಞಾನದ ನೂತನ ಆವಿಷ್ಕಾರಗಳು ಮನುಷ್ಯನ ಯೋಗಕ್ಷೇಮಕ್ಕೆ ಅನುಗುಣವಾಗಿರಬೇಕು ಎಂದು ಅವರು ತಿಳಿಸಿದರು.

      ವಿಜ್ಞಾನದ ಆವಿಷ್ಕಾರಗಳಿಂದ ಸೌಲಭ್ಯಗಳು ಹೆಚ್ಚಾದಂತೆ ಮನುಷ್ಯ ಸೋಮಾರಿತನ ಬೆಳೆಸಿಕೊಂಡು ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾನೆ. ವಿಜ್ಞಾನದ ಆವಿಷ್ಕಾರಗಳು ನಮಗೆ ಬೇಕು ಆದರೆ ಎಷ್ಟು ಬೇಕು ಅಷ್ಟನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

      ಮಕ್ಕಳಲ್ಲಿ ಶಾಸ್ತ್ರೀಯ ವಿಜ್ಣಾನ ಅಭ್ಯಸಿಸುವ ಗುಣವನ್ನು ಬೆಳೆಸಬೇಕು. ಮಕ್ಕಳಲ್ಲಿ ಉತ್ತಮ ವಿಜ್ಣಾನಿಯಾಗಬೇಕೆಂಬ ಆಸಕ್ತಿ ಕುಂದುತ್ತಿದೆ. ಆದ್ದರಿಂದ ಶಿಕ್ಷಕರು, ಪೋಷಕರು ವಿಜ್ಞಾನಿಯಾಗುವ ಆಸಕ್ತಿಯ ಬೀಜವನ್ನು ಮಕ್ಕಳ ಮನಸ್ಸಲ್ಲಿ ಬಿತ್ತಬೇಕು ಎಂದು ಹೇಳಿದರು.

      ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಮಾತನಾಡಿ, ಜೀವನದಲ್ಲಿ ನೈಜ ದೇವರ ನೋಡಲು ಸಾಧ್ಯವಿಲ್ಲ. ಆದರೆ, ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಕ್ಷಾಂತರ ಭಕ್ತಗಣಕ್ಕೆ ಮಾರ್ಗದರ್ಶನ ನೀಡುತ್ತಾ ನಡೆದಾಡುವ ದೇವರ ಸ್ವರೂಪರಾಗಿದ್ದರು ಎಂದು ಅಭಿಪ್ರಾಯಪಟ್ಟರು.

      ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಕಾರ್ಯಕ್ರಮ ರೂಪಿಸುವುದಕ್ಕೂ ಮುನ್ನ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಚರ್ಚೆ ನಡೆಸಬೇಕು ಎಂದರಲ್ಲದೆ ವಸ್ತು ಪ್ರದರ್ಶನದಲ್ಲಿ ಮಕ್ಕಳ ಶ್ರಮ ಅತ್ಯುನ್ನತವಾದುದ್ದಾಗಿದೆ. ಶಿಕ್ಷಕರು, ಪೋಷಕರು ಮಕ್ಕಳಿಗೆ ಸದಾ ಪ್ರೋತ್ಸಾಹ ನೀಡಬೇಕು ಎಂದು ಅವರು ಸ್ಫೂರ್ತಿದಾಯಕ ಮಾತುಗಳನ್ನಾಡಿದರು.

      ಪ್ರಸ್ತುತವಿರುವ ಸ್ವರ್ಧಾತ್ಮಕ ಯುಗದಲ್ಲಿ ಖಾಸಗಿ ಶಾಲೆಯ ಮಕ್ಕಳು ವಿಜ್ಞಾನ ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಸರ್ಕಾರಿ ಶಾಲೆಯ ಮಕ್ಕಳು ವಿಜ್ಞಾನ ಅಭ್ಯಸಿಸಲು ಹಿಂಜರಿಯುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಸರ್ಕಾರ ಮಕ್ಕಳಿಗೆ ಇಲಾಖೆಯಿಂದ ಜಾಗೃತಿ ಮೂಡಿಸಬೇಕಾಗಿದೆ ಎಂದು ಅವರು ಸಲಹೆ ನೀಡಿದರು.

      ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾ ಪಂಚಾಯತ್ ಸದಸ್ಯ ನರಸಿಂಹಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಂ.ಆರ್. ಕಾಮಾಕ್ಷಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಅಧ್ಯಕ್ಷ ಷಣ್ಮುಖಯ್ಯ, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಶ್, ಸೇರಿದಂತೆ ಜಿಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪನ್ಯಾಸಕರು, ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಶಿಕ್ಷಕರು ಮಕ್ಕಳು ಸೇರಿದಂತೆ ಮತ್ತಿತರರು ಉಪಸ್ಥಿತಿತರಿದ್ದರು.

  ಕಣ್ಮನ ಸೆಳೆದ ವಸ್ತುಪ್ರದರ್ಶನ:

      ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನಾನಾ ಶಾಲಾ ವಿದ್ಯಾರ್ಥಿಗಳು ಮೂಡಿಸಿದ್ದ ವಸ್ತು ಪ್ರದರ್ಶನ ಕಣ್ಮನಸೆಳೆಯಿತು. 

      ಸುಸ್ಥಿರ ಕೃಷಿ ಪದ್ದತಿ, ಭವಿಷ್ಯದಲ್ಲಿ ಸಾರಿಗೆ ಮತ್ತು ಸಂಪರ್ಕ, ಭವಿಷ್ಯದ ಸಾರಿಗೆ ಮತ್ತು ಸಂವಹನ, ಕೈಗಾರಿಕಾ ಅಭಿವೃದ್ಧಿ, ನೈಸರ್ಗಿಕ ಸಂಪನ್ಮೂಲ ನಿರ್ವಹಣೆ, ಗಣಿತದ ಮಾದರಿಗಳು, ಸೋಲಾರ್ ಆಧಾರಿತ ಬಸ್, ಏರ್ ಪೆÇರ್ಟ್, ಮೆಟ್ರೋರೈಲು, ಸ್ಮಾರ್ಟ್ ಸಿಟಿ, ಸಮರ್ಥನೀಯ ಕೃಷಿ ಆಚರಣೆ ಸೇರಿದಂತೆ ವಿವಿಧ ಪ್ರದರ್ಶನಗಳು ಆಕರ್ಷಿಸಿಸುತ್ತಿದ್ದವು.

(Visited 41 times, 1 visits today)
Previous Articleಕೃಷಿ ಸಮ್ಮಾನ್‍ಗೆ 1 ಲಕ್ಷ ರೈತರು ಸೇರುವ ಸಾಧ್ಯತೆ!
Next Article 10 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಮಂದಗತಿಯಲ್ಲಿ!!
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

November 28, 2025 3:51 pm
ಇತರೆ ಸುದ್ಧಿಗಳು

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm
ಇತರೆ ಸುದ್ಧಿಗಳು

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm
ಇತರೆ ಸುದ್ಧಿಗಳು

ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ

November 28, 2025 3:45 pm
ಇತರೆ ಸುದ್ಧಿಗಳು

ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ

November 28, 2025 3:43 pm
ಇತರೆ ಸುದ್ಧಿಗಳು

ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

November 28, 2025 3:42 pm
Our Youtube Channel
Our Picks

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

November 28, 2025 3:51 pm

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm

ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ

November 28, 2025 3:45 pm

ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ

November 28, 2025 3:43 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

By News Desk BenkiyabaleNovember 28, 2025 3:51 pm

ತುಮಕೂರು: ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಬಿಸಿಯೂಟ ಅಕ್ಷರದಾಸೋಹ ನೌಕರರನ್ನು ಸ್ಕಿಂ ನೌಕರರೆಂದು ಪರಿಗಣಿಸದೆ ಸರಕಾರದ…

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm

ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ

November 28, 2025 3:45 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.