BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆನ್‍ಲೈನ್ ಬೆಟ್ಟಿಂಗ್ : 6 ಜನರ ಬಂಧನ, 7.15 ಲಕ್ಷ ವಶ!
Trending

ಆನ್‍ಲೈನ್ ಬೆಟ್ಟಿಂಗ್ : 6 ಜನರ ಬಂಧನ, 7.15 ಲಕ್ಷ ವಶ!

By News Desk BenkiyabaleUpdated:February 11, 2020 6:42 pm

ತುಮಕೂರು :   

      ಆನ್ ಲೈನ್ ಮೂಲಕ ಕ್ರಿಕೆಟ್ ಮತ್ತು ಕುದುರೆ ರೇಸ್ ಬೆಟ್ಟಿಂಗ್ ನಡೆಸುತ್ತಿದ್ದ 6 ಜನರ ತಂಡವನ್ನು ಬಂಧಿಸಿರುವ  ಪೊಲೀಸರು, ಬಂಧಿತರಿಂದ ಒಟ್ಟು 7.15 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

      ಮೊಬೈಲ್ ಮೂಲಕ ಲೋಟಸ್ ಮತ್ತು ಸ್ಪೆಕ್ಟ್ಟಿಕ್ಯುಲರ್ ಎಂಬ ಆಪ್ ಮೂಲಕ ಕುದುರೆ ರೇಸ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ಮಾಡಿ ತುಮಕೂರು ನಗರದ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಳ್ಳುವ ಮೂಲಕ ಅನಧಿಕೃತ ಜೂಜಾಟ ನಡೆಯುತ್ತಿದೆಯೆಂಬ ಮಾಹಿತಿ ಇತ್ತೀಚೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ವಂಶಿಕೃಷ್ಣ ಅವರಿಗೆ ಲಭಿಸಿತು. ಈ ಹಿನ್ನೆಲೆಯಲ್ಲಿ ಪ್ರಕರಣ ಭೇದಿಸಲು ಅವರು ಸಿ.ಇ.ಎನ್. ಠಾಣೆಯ ಪೊಲೀಸರ ತಂಡವೊಂದನ್ನು ರಚಿಸಿದ್ದರು.

      ಈ ತಂಡವು ತನಿಖೆ ಆರಂಭಿಸಿತು. ಫೆ.9 ರಂದು ಮಧ್ಯಾಹ್ನ 1-30 ರಲ್ಲಿ ಈ ತಂಡವು ನಗರದ ಐಶ್ವರ್ಯ ಲಾಡ್ಜ್‍ನ ಕೊಠಡಿ ಸಂಖ್ಯೆ 7 ರಮೇಲೆ ದಾಳಿ ನಡೆಸಿದಾಗ ಆರೋಪಿಗಳಾದ 1)ರಾಜೇಶ್ (27 ವರ್ಷ, ಖಾಸಗಿ ಕಂಪನಿಯಲ್ಲಿ ಉದ್ಯೋಗ, ಎಸ್.ಐ.ಟಿ. ಬಡಾವಣೆ, ತುಮಕೂರು), 2)ದಿಲೀಪ್ ಕುಮಾರ್ (23 ವರ್ಷ, ಖಾಸಗಿ ಕಂಪನಿಯಲ್ಲಿ ಉದ್ಯೋಗ, ಉಪ್ಪಾರಹಳ್ಳಿ, ತುಮಕೂರು), 3)ಮಹಂತೇಶ್ (34 ವರ್ಷ, ಶ್ರೀದೇವಿ ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕ, ತುಮಕೂರು), 4)ಅರ್ಜುನ್ (23 ವರ್ಷ, ವಿದ್ಯಾರ್ಥಿ, ಎಸ್.ಎಸ್. ಪುರಂ, ತುಮಕೂರು), 5)ಅಶ್ವಿನ್ (22 ವರ್ಷ, ಹಿಂದುಜಾ ಫೈನಾನ್ಸ್ ಉದ್ಯೋಗಿ, ಕೆ.ಆರ್.ಬಡಾವಣೆ, ತುಮಕೂರು), 6)ಧನುಷ್ (21 ವರ್ಷ, ಚಾಲಕ ವೃತ್ತಿ, ಶ್ರೀನಗರ, ಬೆಂಗಳೂರು) ಎಂಬುವವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಇಡೀ ಹಗರಣ ಬೆಳಕಿಗೆ ಬಂದಿದೆ.

      ಬಂಧಿತರಿಂದ 4 ಎ.ಟಿ.ಎಂ. ಕಾರ್ಡ್‍ಗಳು, 6 ಮೊಬೈಲ್ ಫೋನ್‍ಗಳು, 68,730 ರೂ. ನಗದು, ವಹಿವಾಟಿನ ವಿವರ ಬರೆದುಕೊಳ್ಳುತ್ತಿದ್ದ ಪುಸ್ತಕಗಳನ್ನು ಪೆÇಲೀಸರು ವಶಪಡಿಸಿಕೊಂಡಿದ್ದಾರೆ.

      ಇದಲ್ಲದೆ ಈ ಆರೋಪಿಗಳು ನಗರದ ಶಿರಾಗೇಟ್‍ನ ಅಕ್ಸಿಸ್ ಬ್ಯಾಂಕ್‍ನಲ್ಲಿ ಬಸವರಾಜು, ರಂಜಿತ್, ನಿತಿನ್ ಎಂಬುವವರ ಹೆಸರಿನಲ್ಲಿ 3 ಖಾತೆಗಳನ್ನು ತೆರೆದು ಬೆಟ್ಟಿಂಗ್ ಹಣವನ್ನು ಆ ಖಾತೆಗಳಿಗೆ ಜಮಾ ಮಾಡುತ್ತಿದ್ದರೆಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸದರಿ ಖಾತೆಗಳಲ್ಲಿ ಜೂಜಾಟಕ್ಕೆ ಬಳಸಿದ್ದ ಒಟ್ಟು 6,47,132 ರೂ.ಗಳನ್ನು ಬ್ಯಾಂಕ್‍ಗೆ ಪತ್ರ ಬರೆದು, ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.

      ಈ ಪ್ರಕರಣದಲ್ಲಿ ಬಂಧಿತ ರಾಜೇಶ್ ತಂಡದ ಪ್ರಮುಖನಾಗಿದ್ದು, ಬಂದ ಹಣದಲ್ಲಿ ಶೇ.40 ರಷ್ಟು ಭಾಗವನ್ನು ಆಪ್‍ಗಳನ್ನು ಸರಬರಾಜು ಮಾಡುತ್ತಿದ್ದ ಗಿರಿ ಅಲಿಯಾಸ್ ಯಲ್ಲಾಪುರ ಗಿರಿ, ದಯಾನಂದ, ಹುಲಿಯೂರು ದುರ್ಗ ಮತ್ತು ಶಿರಾದ ಹರಿ ಎಂಬುವವರಿಗೆ ಸಂದಾಯ ಮಾಡಿತ್ತಿದ್ದನೆಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಈ ಮೂರು ಜನರನ್ನು ಮತ್ತು ರಾಕಿ ಅಲಿಯಾಸ್ ರಾಕೇಶ್ ಎಂಬಾತನ ಪತ್ತೆಗೆ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

      ಎಸ್ಪಿ ಡಾ.ಕೆ. ವಂಶಿಕೃಷ್ಣ, ಅಡಿಷನಲ್ ಎಸ್ಪಿ ಉದೇಶ್ ಅವರ ಮಾರ್ಗದರ್ಶನದಲ್ಲಿ ಸಿ.ಇ.ಎನ್. ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಎಂ.ವಿ.ಶೇಷಾದ್ರಿ, ತಿಲಕ್ ಪಾರ್ಕ್ ಸರ್ಕಲ್ ಇನ್ಸ್‍ಪೆಕ್ಟರ್ ಪಾರ್ವತಮ್ಮ, ಎನ್.ಇ.ಪಿ.ಎಸ್. ಸಬ್‍ಇನ್ಸ್‍ಪೆಕ್ಟರ್ ಮಂಜುಳ ಹಾಗೂ ಸಿಬ್ಬಂದಿಗಳಾದ ಅಯೂಬ್ ಖಾನ್. ರಮೇಶ್, ಶಿವಶಂಕರ್, ಪರಮೇಶ್, ಹರೀಶ್, ರಂಗನಾಥ್ ಅವರು ಈ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅಧಿಕಾರಿಗಳ ಈ ಪ್ರಯತ್ನವನ್ನು ಎಸ್ಪಿ ಪ್ರಶಂಸಿಸಿದ್ದಾರೆ.

(Visited 18 times, 1 visits today)
Previous Articleಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ – ಜಿ.ಪಂ.ಅಧ್ಯಕ್ಷೆ
Next Article ಟಿಎಂಸಿಸಿ ಎಟಿಎಂ ಕೇಂದ್ರಕ್ಕೆ ಸಚಿವ ಜೆಸಿಎಂ ಚಾಲನೆ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.