BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
  • ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ
  • ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು
  • ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ
  • ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ
  • ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ
  • ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಕೋವಿಡ್-೧೯ ನಿಯಂತ್ರಿಸಲು 4 ಚೆಕ್‍ಪೋಸ್ಟ್ ಗಳ ನಿರ್ಮಾಣ
Trending

ತುಮಕೂರು : ಕೋವಿಡ್-೧೯ ನಿಯಂತ್ರಿಸಲು 4 ಚೆಕ್‍ಪೋಸ್ಟ್ ಗಳ ನಿರ್ಮಾಣ

By News Desk BenkiyabaleUpdated:May 11, 2020 6:59 pm

ತುಮಕೂರು:

       ನಗರದಲ್ಲಿ ಕೊರೋನಾ ಕೊವಿಡ್-19 ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ವೈರಾಣು ಹರಡದಂತೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ತುಮಕೂರು ನಗರಕ್ಕೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾವಹಿಸಲು ಮತ್ತು ತಪಾಸಣೆಗಾಗಿ ನಾಲ್ಕು ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದೆ.

      ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ತುಮಕೂರು ನಗರಕ್ಕೆ ಬರುವ 4 ಪ್ರಮುಖ ರಸ್ತೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಈ ಚೆಕ್‍ಪೋಸ್ಟ್‍ಗಳಲ್ಲಿ ಕಂದಾಯ ಇಲಾಖೆ, ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ತಲಾ ಇಬ್ಬರು ಸಿಬ್ಬಂದಿಗಳು 24×7 ಗಂಟೆಯೂ ಮೂರು ಪಾಳಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಹೊರಗಡೆಯಿಂದ ತುಮಕೂರು ನಗರಕ್ಕೆ ಪ್ರವೇಶಿಸುವ ವಾಹನ/ವ್ಯಕ್ತಿಗಳನ್ನು ತೀವ್ರ ತಪಾಸಣೆ ಮಾಡಲಾಗುವುದು. ತಪಾಸಣೆ ಮಾಡಿದ ನಂತರ ಅವರ ಆರೋಗ್ಯ ಪರಿಸ್ಥಿತಿಯನ್ನು ಆಧರಿಸಿ ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್‍ಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

      ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೊನ ವಂಶಿಕೃಷ್ಣ ಚೆಕ್‍ಪೋಸ್ಟ್‍ಗಳ ಸ್ಥಾಪನೆ ಮತ್ತು ಕಾರ್ಯವೈಖರಿಗಳ ಪರಿಶೀಲನೆ ನಡೆಸಿ ತುಮಕೂರು ನಗರಕ್ಕೆ ಬರುವ ಎಲ್ಲಾ ವ್ಯಕ್ತಿಗಳನ್ನು ಮತ್ತು ವಾಹನಗಳನ್ನು ಕಠಿಣ ತಪಾಸಣೆ ನಡೆಸಿ ಎಂದು ಚೆಕ್‍ಪೋಸ್ಟ್ ಕಾರ್ಯನಿರತ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

      ನಗರಕ್ಕೆ ಸಂಪರ್ಕವಿದ್ದ ಕೆಲವೊಂದು ರಸ್ತೆಗಳನ್ನು ತಾತ್ಕಾಲಿಕವಾಗಿ ಮುಚ್ಚಿ ಸಲಾಗಿದ್ದು, ಸಿಟಿ ಸುತ್ತಲೂ 4 ಚೆಕ್‍ಪೋಸ್ಟ್‍ಗಳನ್ನು ತೆರೆಯಲಾಗಿದೆ. ಈ ಮುಖಾಂತರ ತುಮಕೂರು ನಗರಕ್ಕೆ ಜನ/ವಾಹನಗಳು ಪ್ರವೇಶ ಮಾಡಬೇಕು ಎಂದು ಅವರು ತಿಳಿಸಿದರು.

  ತುಮಕೂರು ನಗರದಲ್ಲಿ ನಾಲ್ಕು ಚೆಕ್‍ಪೋಸ್ಟ್ :

      1) ಶಿರಾಗೇಟ್, ಕನಕದಾಸ ಸರ್ಕಲ್. 2) ಗುಬ್ಬಿ ರಿಂಗ್ ರಸ್ತೆ ಜಂಕ್ಷನ್. 3) ಕುಣಿಗಲ್ ರಿಂಗ್ ರಸ್ತೆ ಜಂಕ್ಷನ್. 4) ಜಾಸ್‍ಟೋಲ್‍ಗೇಟ್ ಕ್ಯಾತ್ಸಂದ್ರ ಪೊಲೀಸ್ ಠಾಣೆ ಮುಂಭಾಗ.

      ಬೆಂಗಳೂರು ಕಡೆಯಿಂದ ತುಮಕೂರು ನಗರದ ಒಳಗಡೆ ಬರುವ ಎಲ್ಲಾ ವಾಹನ ಸವಾರರು ಕ್ಯಾತ್ಸಂದ್ರ ಜಾಸ್‍ಟೋಲ್‍ಗೇಟ್‍ನಿಂದ ಗುಬ್ಬಿ ರಿಂಗ್ ರಸ್ತೆ ಮೂಲಕವೇ ಪ್ರವೇಶಿಸತಕ್ಕದ್ದು. ಕ್ಯಾತ್ಸಂದ್ರ ಸಿ.ಎಂ. ಬಡಾವಣೆ ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳು ಮಾಜಿ ಎಂ.ಎಲ್.ಎ.ರಾಜಣ್ಣ ಅವರ ಮನೆಯ ಮುಂದಿನ ಸರ್ವಿಸ್ ರಸ್ತೆಯಿಂದ ಅಗ್ನಿಶಾಮಕ ಠಾಣೆ ಮೂಲಕ ಬಟವಾಡಿ ಪ್ರವೇಶಿಸಿ ತುಮಕೂರು ನಗರಕ್ಕೆ ಪ್ರವೇಶಿಸಬಹುದು. ಬೆಂಗಳೂರು ಕಡೆಯಿಂದ ಗುಬ್ಬಿ-ತಿಪಟೂರು-ಚಿಕ್ಕನಾಯಕನಹಳ್ಳಿ-ಶಿವಮೊಗ್ಗ ಕಡೆಗೆ ಹೋಗುವ ವಾಹನ ಸವಾರರು ಕ್ಯಾತ್ಸಂದ್ರ ಜಾಸ್‍ಟೋಲ್‍ಗೇಟ್ ಬಳಿಯ ಗುಬ್ಬಿ ರಿಂಗ್ ರಸ್ತೆ ಮೂಲಕ ಹೋಗತಕ್ಕದ್ದು. ಮೈಸೂರು-ಕುಣಿಗಲ್ ಕಡೆಯಿಂದ ಬರುವವರು ಕುಣಿಗಲ್ ಜಂಕ್ಷನ್ ಮೂಲಕ ತುಮಕೂರು ನಗರದ ಒಳಗಡೆ ಬರತಕ್ಕದ್ದು. ಗುಬ್ಬಿ-ತಿಪಟೂರು-ಚಿಕ್ಕನಾಯಕನಹಳ್ಳಿ-ಶಿವಮೊಗ್ಗ ಕಡೆಯಿಂದ ತುಮಕೂರು ನಗರದ ಒಳಗಡೆ ಬರುವವರು ಗುಬ್ಬಿ ರ್ರಿಂಗ್ ರಸ್ತೆ ಜಂಕ್ಷನ್ ಮೂಲಕ ಬರತಕ್ಕದ್ದು. ಶಿರಾ-ಚಿತ್ರದುರ್ಗ-ದಾವಣಗೆರೆ ಕಡೆಯಿಂದ ಬರುವವರು ಲಿಂಗಾಪುರ ಅಂಡರ್ ಪಾಸ್-ಹಳೇ ಎನ್‍ಹೆಚ್-4 ರಸ್ತೆ ಮೂಲಕ ಶಿರಾಗೇಟ್‍ಗೆ ತಲುಪಬಹುದು ಅಥವಾ ಅಂತರಸನಹಳ್ಳಿ ಬ್ರಿಡ್ಜ್ ಸರ್ವೀಸ್ ರಸ್ತೆ ಮುಖಾಂತರ ಶಿರಾಗೇಟ್‍ಗೆ ಪ್ರವೇಶಿಸಬಹುದು.

      ಗುಬ್ಬಿ-ತಿಪಟೂರು-ಚಿಕ್ಕನಾಯಕನಹಳ್ಳಿ-ಶಿವಮೊಗ್ಗ ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ವಾಹನ ಸವಾರರು ಗುಬ್ಬಿ ರಿಂಗ್ ರಸ್ತೆ ಜಂಕ್ಷನ್- ರಿಂಗ್ ರಸ್ತೆ ಮೂಲಕ ಕ್ಯಾತ್ಸಂದ್ರ ಜಾಸ್‍ಟೋಲ್‍ಗೇಟ್ ಮೂಲಕ ಹೋಗತಕ್ಕದ್ದು. ತುಮಕೂರು ನಗರದಿಂದ ಬೆಂಗಳೂರು ಕಡೆಗೆ ಹೋಗುವವರು ಬಟವಾಡಿ ಬ್ರಿಡ್ಜ್ ಮೂಲಕ ರಾಷ್ಟ್ರೀಯ ಹೆದ್ದಾರಿ-48 ರಸ್ತೆ ಮೂಲಕ ಮತ್ತು ಗುಬ್ಬಿ ರಿಂಗ್ ರಸ್ತೆ ಮೂಲಕ ಹೋಗಬಹುದಾಗಿದೆ.

      ತುಮಕೂರು ನಗರದಿಂದ ಶಿರಾ ಕಡೆಗೆ ಮತ್ತು ವಸಂತನರಸಾಪುರದ ಕಡೆಗೆ ಹೋಗುವವರು ಶಿರಾಗೇಟ್ ಮೂಲಕ ಶ್ರೀದೇವಿ ಮೆಡಿಕಲ್ ಕಾಲೇಜ್ ಮುಂದಿನ ಹಳೇ ಎನ್.ಹೆಚ್.-4 ರಸ್ತೆ ಮೂಲಕ ರಾಷ್ಟ್ರೀಯ ಹೆದ್ದಾರಿ-48 ರಸ್ತೆಯಲ್ಲಿ ಹೋಗಬಹುದಾಗಿದೆ. ಅಂತರಸನಹಳ್ಳಿ ಇಂಡಸ್ಟ್ರೀಯಲ್ ಏರಿಯಾ, ಕೊರಟಗೆರೆ, ಮಧುಗಿರಿ ಕಡೆಗೆ ಹೋಗುವವರು ಶಿರಾಗೇಟ್-ಅಂತರಸನಹಳ್ಳಿ ಅಂಡರ್‍ಪಾಸ್ ಮೂಲಕ ಹೋಗಬಹುದಾಗಿರುತ್ತದೆ.

      ಒಟ್ಟಾರೆ ರಾಷ್ಟ್ರೀಯ ಹೆದ್ದಾರಿಯಿಂದ ಬರುವವರು ಲಿಂಗಾಪುರ ಬ್ರಿಡ್ಜ್ ಮುಖಾಂತರ ಶಿರಾಗೇಟ್/ ಅಂತರಸನಹಳ್ಳಿ ಬ್ರಿಡ್ಜ್ ಮುಖಾಂತರ ಶಿರಾಗೇಟ್‍ಗೆ ಹಾಗೂ ಗುಬ್ಬಿ ರಿಂಗ್ ರಸ್ತೆ ಮುಖಾಂತರ ತುಮಕೂರು ನಗರಕ್ಕೆ ಪ್ರವೇಶ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು.

      ತುಮಕೂರು ನಗರದೊಳಗೆ ಸಾರ್ವಜನಿಕರಿಗೆ ಯಾವುದೇ ನಿಯಂತ್ರಣವಿರುವುದಿಲ್ಲ. ತುಮಕೂರು ನಗರದೊಳಗೆ ಬರುವವರು ಈ ಮಾರ್ಗಗಳಲ್ಲಿಯೇ ಸಂಚರಿಸಲು ಸೂಚಿಸಿದ್ದು, ಅನಾವಶ್ಯಕವಾಗಿ ಬೇರೆಕಡೆಯಿಂದ ತುಮಕೂರು ನಗರಕ್ಕೆ ಪ್ರವೇಶಿಸುವವರಿಗೆ ಮಾತ್ರ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುವುದು. ಸಾರ್ವಜನಿಕರು ಇದಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮನವಿ ಮಾಡಿದ್ದಾರೆ.

      ಈ ಸಂದರ್ಭದಲ್ಲಿ ಪಾಲಿಕೆಯ ಆಯುಕ್ತ ಟಿ.ಭೂಬಾಲನ್, ಹೆಚ್ಚುವರಿ ಎಸ್.ಪಿ. ಉದೇಶ್, ಉಪವಿಭಾಗಾಧಿಕಾರಿ ಅಜಯ್, ಡಿ.ವೈ.ಎಸ್.ಪಿ. ತಿಪ್ಪೆಸ್ವಾಮಿ, ತಹಶೀಲ್ದಾರ್ ಮೋಹನ್, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಶೇಷಾದ್ರಿ, ನವೀನ್ ಇದ್ದರು.

(Visited 13 times, 1 visits today)
Previous Articleಹೊರ ರಾಜ್ಯದಿಂದ ಜಿಲ್ಲೆಗೆ ಬಂದವರಿಗೆ ನಗರದ ಕೆಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಸೆಲ್ಫ್ ರಿಪೋರ್ಟಿಂಗ್ ಸೆಂಟರ್ ಸ್ಥಾಪನೆ
Next Article ಲಾಕ್‍ಡೌನ್ ಸಂದರ್ಭದಲ್ಲಿ ಅಕುಶಲ ಕಾರ್ಮಿಕರ ಕೈ ಹಿಡಿದ ನರೇಗಾ
News Desk Benkiyabale

Related Posts

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm news

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm news

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm news
ತಾಜಾ ಸುದ್ಧಿಗಳು
news

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm
news

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm
news

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm
news

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm
news

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm
news

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm
Our Youtube Channel
Our Picks

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

By News Desk BenkiyabaleAugust 06, 2026 6:24 pm

ಕೊರಟಗೆರೆ: ತಾಲೂಕಿನ ಸಿದ್ದರ ಬೆಟ್ಟದ ಅರಣ್ಯ ಇಲಾಖೆ ನರ್ಸರಿ ತಿರುವಿನಲ್ಲಿ ಭೀಕರ ಅಪಘಾತದಲ್ಲಿ ಪಟ್ಟಣದ ಅಂಬೇಡ್ಕರ್ ವಸತಿ ಶಾಲೆಯ ಕಾಲೇಜು…

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.