BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ
  • ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ
  • ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ
  • ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ
  • ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
  • ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
  • ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
  • ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎರಡ್ಮೂರು ವರ್ಷದಲ್ಲಿ ಜಿಲ್ಲೆಯ ಗ್ರಾಮೀಣ ಭಾಗ ಬದಲಾಗಲಿದೆ
ಇತರೆ ಸುದ್ಧಿಗಳು

ಎರಡ್ಮೂರು ವರ್ಷದಲ್ಲಿ ಜಿಲ್ಲೆಯ ಗ್ರಾಮೀಣ ಭಾಗ ಬದಲಾಗಲಿದೆ

By News Desk BenkiyabaleUpdated:August 15, 2020 6:26 pm

 ತುಮಕೂರು:

      ತುಮಕೂರು ಜಿಲ್ಲೆಯ ಗ್ರಾಮೀಣ ಪ್ರದೇಶವು ಎರಡ್ಮೂರು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿಯ ಬದಲಾವಣೆಯನ್ನು ಕಾಣಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದ್ದಾರೆ.

      ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ದ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

      ಆರ್ಥಿಕ ವಿಚಾರದಲ್ಲಿ ಸ್ವಲ್ಪ ಮಟ್ಟಿನ ಸಮಾನತೆ ಸಾಧಿಸಿದ್ದರೂ, ಸಾಮಾಜಿಕವಾಗಿ ಸಮಾಜ ನಿರ್ಮಾಣಕ್ಕೆ ಇನ್ನೂ ಬಹುದೂರ ಸಾಗಬೇಕಾಗಿದೆ. ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ಕೆಲಸ ಆಗಬೇಕಾಗಿದೆ ಎಂದರು.

      ಸ್ವಾತಂತ್ರ ಬಂದು 73ವರ್ಷಗಳು ಕಳೆದಿದ್ದರೂ ಜಾತಿ ರಹಿತ ಸಮಾಜ ನಿರ್ಮಾಣದತ್ತ ಕೊಂಚ ಕೆಲಸಗಳಾಗಿದ್ದರೂ, ವರ್ಗರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ಹಿಂದೆ ಬಿದ್ದಿದ್ದೇವೆ. ಬಡವ, ಬಲ್ಲಿದ, ಮೇಲು, ಕೀಳು ಎಂಬ ಭಾವನೆ ಜನರಿಂದ ಇನ್ನೂ ದೂರವಾಗಿಲ್ಲ.ವೃತ್ತಿಗೌರವ ದೊರೆಯುವ ಜೊತೆಗೆ, ಶ್ರಮಕ್ಕೆ ತಕ್ಕ ಬೆಲೆ ದೊರೆಯುವಂತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಇದುವರೆಗೂ ಆಡಳಿತ ನಡೆಸಿದ ಎಲ್ಲಾ ರಾಜಕೀಯ ಪಕ್ಷಗಳು ನಿರಂತರವಾಗಿ ಪ್ರಯತ್ನ ನಡೆಸಿವೆ. ದೇಶವನ್ನು ಅಭಿವೃದ್ದಿಯತ್ತ ತೆಗೆದುಕೊಂಡು ಹೋಗಲು ನಿರಂತರ ಪ್ರಯತ್ನ ನಡೆಸಿವೆ ಎಂದು ಅವರು ಹೇಳಿದರು.

      ಕರ್ನಾಟಕ ಇಂದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಇದಕ್ಕೆ ಕಾರಣ ಕಳೆದ ಎರಡು ವರ್ಷಗಳ ಹಿಂದೆ ಪಾವಗಡ ಸೇರಿದಂತೆ ರಾಜ್ಯದ ವಿವಿಧೆಡೆ ನಿರ್ಮಾಣವಾಗಿರುವ ಸೋಲಾರ್ ಪಾರ್ಕ್‍ಗಳೇ ಕಾರಣ. ಇದೇ ನಿಟ್ಟಿನಲ್ಲಿ ರೈತ ಪಂಪ್‍ಸೆಟ್‍ಗಳಿಗೂ ಸೋಲಾರ್ ಅಳವಡಿಸುವ ಪ್ರಕ್ರಿಯೆ ಬಹಳ ವೇಗವಾಗಿ ನಡೆದಿದೆ. ಸ್ವಚ್ಚತೆ, ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹೇಮಾವತಿ, ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಮೂಲಕ ಜಿಲ್ಲೆಯ ಎಲ್ಲಾ ಕೆರೆಗಳಿಗೆ ಕುಡಿಯುವ ನೀರು ಒದಗಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಮುಂದಿನ ಮೂರು ವರ್ಷಗಳಲ್ಲಿ ಜಿಲ್ಲೆ ಹಸಿರುಮಯವಾಗಲಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಲಿದೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.

      ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯ ಇತರೆ ಜಿಲ್ಲೆಗಳನ್ನು ಬಿ ಮತ್ತು ಸಿ ವಲಯಗಳನ್ನಾಗಿ ವಿಂಗಡಿಸಿದ್ದು, ಸ್ಥಳೀಯ ಕಚ್ಚಾ ವಸ್ತುಗಳ ಲಭ್ಯತೆಯನ್ನಾಧರಿಸಿ ಕೈಗಾರಿಕೆಗಳನ್ನು ಆರಂಭಿಸಲು ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಅದೇ ರೀತಿ ತುಮಕೂರು ಜಿಲ್ಲೆಯಲ್ಲಿ ತೆಂಗು ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಕೇರಳದ ಹಣಕಾಸು ಸಚಿವರು ಹಾಗೂ ತೆಂಗು ಸಚಿವರ ಸಂಪರ್ಕದಲ್ಲಿದ್ದು, ವಿಭಿನ್ನ ರೀತಿಯ ತೆಂಗು ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

      ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ನಿವೇಶನಗಳು ಖಾಲಿ ಇದ್ದು, ಕೈಗಾರಿಕ ಪ್ರದೇಶಕ್ಕೆ ಪಿಪಿ ಮಾಡೆಲ್‍ನಲ್ಲಿ ನೀರು ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಅಲ್ಲದೆ ಕುಡಿಯುವ ನೀರು ಕೂಡ ಪೂರೈಸಲಾಗುವುದು. ಒಟ್ಟಾರೆ ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತನ್ನು ನೀಡಲಿದೆ ಎಂದರು.

      ಸ್ಮಾರ್ಟ್‍ಸಿಟಿ ತುಮಕೂರು ನಗರ ಹಾಗೂ ಜಿಲ್ಲೆಯಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಾಕಷ್ಟು ಒತ್ತು ನೀಡಲಾಗಿದೆ. ತುಮಕೂರು ನಗರಕ್ಕೆ ಬುಗುಡನಹಳ್ಳಿ ಕೆರೆಯಿಂದ ಮಾತ್ರ ನೀರು ಪೂರೈಸಲಾಗುತ್ತಿದೆ. ಇನ್ನು 2 ಕೆರೆಗಳಿಂದ ತುಮಕೂರು ನಗರಕ್ಕೆ ನೀರು ಪೂರೈಸಲು ಚಿಂತಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಮರ್ಪಕವಾದ ನೀರು ತುಮಕೂರು ನಗರಕ್ಕೆ ಪೂರೈಕೆಯಾಗಲಿದೆ ಎಂದು ಅವರು ತಿಳಿಸಿದರು.

      ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಸತಿ ರಹಿತರಿಗೆ ನಿವೇಶನ, ವಸತಿ, ಕುಡಿಯುವ ನೀರು, ನರೇಗಾ ಯೋಜನೆಯಡಿ ದುಡಿಯುವ ಕೈಗಳಿಗೆ ಕೆಲಸ ಹೀಗೆ, ಹತ್ತಾರು ಕಾರ್ಯಕ್ರಮಗಳನ್ನು ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿದೆ. ಈ ಮೂಲಕ ಗ್ರಾಮೀಣ ಜನರು ಸ್ವಾಲಂಭನೆಯಿಂದ ಬದುಕವಂತಾಗಬೇಕು ಎಂದು ಅವರು ತಿಳಿಸಿದರು.

      ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳು ಮೊದಲು ನಿವೇಶನ ರಹಿತರನ್ನು ಹುಡುಕಿ ಅವರಿಗೆ ನಿವೇಶನ ನೀಡಬೇಕು. ನಿವೇಶನ ಇಲ್ಲದವರಿಗೆ ವಸತಿ ನೀಡಿದರೆ ವಸತಿ ಯೋಜನೆ ಸಫಲವಾಗುವುದಿಲ್ಲ. ಬರುವ 3-4 ತಿಂಗಳಲ್ಲಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇವೆ ಎಂದು ಅವರು ತಿಳಿಸಿದರು.

      ಅಟಲ್ ಭೂಜಲ ಯೋಜನೆಯ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರೂಪಿಸಿರುವ ಮಾದರಿಯು ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. ಈ ಯೋಜನೆಯ ಅನುಷ್ಠಾನಕ್ಕೆ ವಿಶ್ವಬ್ಯಾಂಕ್ 2 ಬಾರಿ ರಾಜ್ಯವನ್ನು ಶ್ಲಾಘಿಸಿದೆ ಎಂದ ಅವರು, ಪ್ರಧಾನ ಮಂತ್ರಿಗಳ ಆಶಯದಂತೆ ಮನೆ-ಮನೆಗೆ ನೀರು ನೀಡುವ ಜಲಜೀವನ್ ಮಿಷನ್ ಮುಂದಿನ 3 ವರ್ಷಗಳಲ್ಲಿ ಅನುಷ್ಠಾನಗೊಂಡು, ಗ್ರಾಮೀಣ ಪ್ರದೇಶಗಳಲ್ಲಿ ಪರಿಶುದ್ಧ ಕುಡಿಯುವ ನೀರು ದೊರೆಯಲಿದೆ. ತುಮಕೂರು ಜಿಲ್ಲೆಯ ಗ್ರಾಮೀಣ ಭಾಗವು 2-3 ವರ್ಷಗಳಲ್ಲಿ ಸಂಪೂರ್ಣ ಬದಲಾಗಲಿದೆ ಎಂದರು.

      ಜಿಲ್ಲೆಯಲ್ಲಿ ಹೆದ್ದಾರಿ ಕಾಮಗಾರಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕೈಗೊಳ್ಳಲಾಗಿದೆ. ಶಿರಾ-ಮೂಡಿಗೆರೆ(ರಾ.ಹೆ.234), ಬೆಂಗಳೂರು-ಶಿವಮೊಗ್ಗ(ರಾ.ಹೆ.206), ಬೀದರ್-ಶ್ರೀರಂಗಪಟ್ಟಣ(ರಾ.ಹೆ.158) ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಬೆಂಗಳೂರು-ಶಿವಮೊಗ್ಗ ರಾ.ಹೆ.206ರ ಚತುಷ್ಪಥರಸ್ತೆ ಕಾಮಗಾರಿ ಮುಂದಿನ 6 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು.

      ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ದಾದಿಯರು ಹಾಗೂ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ದುಡಿದ್ದಾರೆ. ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಭಿನಂದನೆ ಸಲ್ಲಿಸುತ್ತೇನೆ. ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ 400 ಹಾಸಿಗೆಗಳ ಜಿಲ್ಲಾ ಕೊವಿಡ್ ಆಸ್ಪತ್ರೆ, ಪ್ರತಿ ತಾಲೂಕಿನಲ್ಲಿ ಹೈಪ್ಲೋ ಆಕ್ಸಿಜನ್ ಇರುವ 50 ಹಾಸಿಗೆಗಳು, ಹೆಚ್ಚುವರಿ 2 ವೆಂಟಿಲೇಟರ್ ಹಾಗೂ 6 ಐಸಿಯು ಹಾಸಿಗೆಗಳನ್ನು ಮೀಸಲಿಡಲಾಗಿದೆ. ಕೋವಿಡ್ ಕೇರ್ ಕೇಂದ್ರ ಹಾಗೂ ವೈರಾಲಜಿ ಲ್ಯಾಬ್‍ಗಳು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸಿದ್ದು, ತಿಪಟೂರಿನಲ್ಲಿ ವೈರಾಲಜಿ ಲ್ಯಾಬ್‍ನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.

      ಸೋಂಕಿನ ಲಕ್ಷಣಗಳು ಕಂಡು ಬಂದ ತಕ್ಷಣ ಆಸ್ಪತ್ರೆಗೆ ಬನ್ನಿ, ವಿಳಂಬವಾಗಿ ಆಸ್ಪತ್ರೆಗೆ ಬಂದರೆ ವೈದ್ಯರು ಚಿಕಿತ್ಸೆ ನೀಡಲು ಸಾಕಷ್ಟು ಶ್ರಮ ಪಡಬೇಕಾಗುತ್ತದೆ. ಜನರು ಭಯಪಡದೇ ಧೈರ್ಯದಿಂದ ಎದುರಿಸಬೇಕು. ಕೋವಿಡ್‍ಗೆ ಲಸಿಕೆಗಳು ಕಂಡು ಹಿಡಿಯಲಾಗುತ್ತಿದೆ ಎಂದು ಅವರು ತಿಳಿಸಿದರು.

      ಜಿಲ್ಲೆಯಲ್ಲಿ ಎಲ್ಲಾ ಸಮುದಾಯಗಳಿಗೆ ಸ್ಮಶಾನ ಭೂಮಿ ಇರಬೇಕು. ಜಿಲ್ಲೆಯಲ್ಲಿ ಸ್ಮಶಾನಗಳಿಗೆ ಕೊರತೆಯಾಗಬಾರದು. ಎಲ್ಲಾ ಸಮುದಾಯಗಳಿಗೆ ಸ್ಮಶಾನ ನೀಡುವಂತೆ ಜಿಲ್ಲಾಡಳಿತಕ್ಕೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಕೊರೊನಾ ಸೋಂಕಿನಿಂದಾಗಿ ಶಾಲಾ-ಕಾಲೇಜುಗಳನ್ನು ತೆರೆಯುತ್ತಿಲ್ಲ. ಶಾಲಾ ಕಾಲೇಜು ತೆರೆಯುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಮಹನೀಯರನ್ನು ಹಾಗೂ ಸಂಸ್ಥೆಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಸಚಿವರು ತಿಳಿಸಿದರು.

      ದೇಶದ ಇತರೆ ರಾಜ್ಯದವರು ಹಾಗೂ ವಿದೇಶಿಗರು ನೆಲಸಲು ಇಚ್ಛಿಸುತ್ತಿದ್ದ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಲ್ಲಿ ನಡೆದ ಘಟನೆ ಭಯ ಹುಟ್ಟಿಸುವಂತಿದೆ. ಸ್ವಾರ್ಥಕ್ಕಾಗಿ ಬೇರೊಬ್ಬರ ಮೇಲೆ ದಾಳಿ ಮಾಡಬಾರದು. ಅಸ್ತಿ-ಪಾಸ್ತಿ ನಷ್ಟ ಮಾಡಬಾರದು. ಇದರಿಂದಾಗಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎಂದು ಅವರು ತಿಳಿಸಿದರು.

     ಸಮಾರಂಭದ ನಂತರ ಮಾತನಾಡಿದ ಸಚಿವರು, ಬೆಂಗಳೂರು ನಗರದಲ್ಲಿ ನಡೆದಿರುವ ಘಟನೆಯ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ. ತನಿಖಾ ವರದಿ ಬಂದ ನಂತರ ವರದಿಯನ್ನು ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದ ಅವರು, ಆಸ್ತಿಗಳನ್ನು ನಾಶ ಮಾಡಿದವರಿಂದ ನಷ್ಟ ವಸೂಲಿ ಮಾಡುವ ಕುರಿತ 2001ರಲ್ಲಿ ರಾಜ್ಯದಲ್ಲಿ ಕಾನೂನು ಜಾರಿಯಲ್ಲಿದೆ. ಅದಕ್ಕೆ ಪ್ರಾಧಿಕಾರವನ್ನು ರಚನೆ ಮಾಡಿ, ಅಧಿಕಾರ ನೀಡಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದರು. 

      ಸಮಾರಂಭದಲ್ಲಿ ಜಿಲ್ಲೆಯ ವಸತಿ ಶಾಲೆಗಳಲ್ಲಿ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಶಿರಾ ತಾಲೂಕು ಭುವನಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಾದ ಬಿ.ಪುಪ್ಪಲತ(621-99.36%) ಹಾಗೂ ವೈ.ಆರ್. ಪ್ರಿಯದರ್ಶಿನಿ(615-98.40%); ಪಾವಗಡ ತಾಲೂಕು ಕೊಡಿಗೆಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಿ.ವೆಂಕಟೇಶ ಪ್ರಸನ್ನ ಕುಮಾರ್(618-98.88%) ತುರುವೇಕೆರೆ ತಾಲ್ಲೂಕಿನ ಗುಡ್ಡೇನಹಳ್ಳಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಡಿ.ಸಿಂಚನ(618-98.88%) ಹಾಗೂ ಹೆಚ್.ಆರ್ ಪ್ರಿಯಾಂಕ(615-98.40%) ಸನ್ಮಾಸಿಲಾಯಿತು.

  ನರೇಗಾ ಯೋಜನೆಯಡಿ ಸಾಧಕರಿಗೆ ಪ್ರಶಸ್ತಿ:

      ನರೇಗಾ ಯೋಜನೆಯಡಿ ಸಾಧನೆ ಮಾಡಿ ಪ್ರಶಸ್ತಿಗೆ ಆಯ್ಕೆಯಾದ ಅಧಿಕಾರಿ ಸಿಬ್ಬಂದಿಗಳ ವಿವರ ಇಂತಿದೆ. ತಿಪಟೂರು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಸುದರ್ಶನ್, ಶಿರಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾದ ರಂಗನಾಥ್, ಮೂರ್ತಿ, ಹುಲಿಕುಂಟೆ ಗ್ರಾ.ಪಂ ಪಿಡಿಓ ಬಸವರಾಜು, ತಾಂತ್ರಿಕ ಸಹಾಯಕ ಅಮಿತ್, ಐಇಸಿ ಸಂಯೋಜಕ ಶಿವಕುಮಾರ್, ಬಿ.ಎಫ್.ಟಿ ಕೆ.ಹೆಚ್ ಗಂಗಾಧರಯ್ಯ, ಮಧುಗಿರಿ ತಾಲೂಕು ಆರ್‍ಎಫ್‍ಒ ತಾರಕೇಶ್ವರಿ, ಕುಣಿಗಲ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ನಾಗರಾಜು, ಮಧುಗಿರಿ ಸಹಾಯಕ ರೇಷ್ಮೆ ನಿರ್ದೇಶಕ ನಾಗರಾಜು, ಮಧುಗಿರಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಸುರೇಶ್, ಸಿಂಗನಹಳ್ಳಿ ಗ್ರಾ.ಪಂ ಪಿಡಿಓ ವೆಂಕಟಾಚಲಪತಿ, ತಾಂತ್ರಿಕ ಸಂಯೋಜಕ ಹರಿಪ್ರಸಾದ್, ತಿಪಟೂರು ತಾಂತ್ರಿಕ ಸಂಯೋಜಕ ಸುಜಯ್, ಬಲರಾಮ್, ಪ್ರಕಾಶ್ ಸನ್ಮಾನಿಸಲಾಯಿತು.

      ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ ಜ್ಯೋತಿಗಣೇಶ್, ವಿಧಾನ ಪರಿಷತ್ ಶಾಸಕ ಕಾಂತರಾಜು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಪಾಲಿಕೆ ಮೇಯರ್ ಫರೀದಾ ಬೇಗಂ, ಉಪಮೇಯರ್ ಶಶಿಕಲಾ ಗಂಗಹನುಮಯ್ಯ, ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಓ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ತಹಶೀಲ್ದಾರ್ ಮೋಹನ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 9 times, 1 visits today)
Previous Articleತುಮಕೂರು : 101 ಮಂದಿಗೆ ಕೋವಿಡ್-19 ಸೋಂಕು ದೃಢ!!
Next Article ಕೊರೊನಾ ವಾರಿಯರ್ಸ್ ಪೊಲೀಸರ ಕಾರ್ಯವೈಖರಿಗೆ ಶ್ಲಾಘನೀಯ : ಎಸ್ಪಿ ವಂಶಿಕೃಷ್ಣ
News Desk Benkiyabale

Related Posts

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm news

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm news

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm news
ತಾಜಾ ಸುದ್ಧಿಗಳು

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm
Our Youtube Channel
Our Picks

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

By News Desk BenkiyabaleJuly 06, 2026 5:50 pm

ತುಮಕೂರು: ಹಸಿರು ಕ್ರಾಂತಿಯ ಹರಿಕಾರ, ರಾಷ್ಟçನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ…

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.