BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
  • ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ
  • ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ
  • ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಉದ್ದಿಮೆ ಪರವಾನಗಿ ಶೇ.5ರಷ್ಟು ಹೆಚ್ಚಳಕ್ಕೆ ಪಾಲಿಕೆ ಸದಸ್ಯರ ಸಹಮತ!
Trending

ಉದ್ದಿಮೆ ಪರವಾನಗಿ ಶೇ.5ರಷ್ಟು ಹೆಚ್ಚಳಕ್ಕೆ ಪಾಲಿಕೆ ಸದಸ್ಯರ ಸಹಮತ!

By News Desk BenkiyabaleUpdated:August 25, 2020 6:50 pm

ತುಮಕೂರು:

      ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರ ಉದ್ದಿಮೆ ಪರವಾನಗಿ ದರವನ್ನು ಶೇ.5ರಷ್ಟು ಹೆಚ್ಚಳ ಮಾಡಲು ಪಾಲಿಕೆ ಸದಸ್ಯರೆಲ್ಲರೂ ಸಹಮತ ನೀಡಿದರು.

      ಪಾಲಿಕೆ ಸಭಾಂಗಣದಲ್ಲಿ ನಡೆದ ಕೌನ್ಸಿಲ್ ವಿಶೇಷ ಸಾಮಾನ್ಯ ಸಭೆಯಲ್ಲಿ ಕೋವಿಡ್-19ನಿಂದಾಗಿ ಪಾಲಿಕೆ ವತಿಯಿಂದ ಉದ್ದಿಮೆ ದರಗಳನ್ನು ಶೇ.5ರಷ್ಟು ಹೆಚ್ಚಳ ಮಾಡುವಂತೆ ಆಗ್ರಹಿಸಿದರಲ್ಲದೇ ದಂಡ ಶುಲ್ಕ ಶೇ.30ರಷ್ಟು ಸೀಮಿತಗೊಳಿಸುವಂತೆ ಸದಸ್ಯರೆಲ್ಲರೂ ಒಮ್ಮತ ಸೂಚಿಸಿದರು.

      ಪಾಲಿಕೆ ವ್ಯಾಪ್ತಿಯಲ್ಲಿರುವ ಹಿಂದುಳಿದ ವರ್ಗಕ್ಕೆ ಸೇರಿದ ಮಡಿವಾಳ ಸಮಾಜ ಹಾಗೂ ಸವಿತಾ ಸಮಾಜ ಕಸುಬುಗಳಾದ ಕಟಿಂಗ್ ಶಾಪ್(ಹೇರ್ ಡ್ರೆಸೆಸ್) ಹಾಗೂ ಐರನ್ ಅಂಗಡಿಗಳಿಗೆ(ಲಾಂಡ್ರಿ ಡ್ರೈಕ್ಲಿಂಗ್ ಶಾಫ್) ಪಾಲಿಕೆ ನೀಡುವ ಪರವಾನಗಿ ದರವನ್ನು ಶೇ.50 ರಿಯಾಯಿತಿ ದರದಲ್ಲಿ ಅನ್ವಯವಾಗುವಂತೆ ಉದ್ದಿಮೆ ರಹದಾರಿಯನ್ನು ನೀಡಲು ಸಭೆ ತೀರ್ಮಾನಿಸಿತು. ಅಲ್ಲದೇ ಕಡಿಮೆ ಆದಾಯ ಹೊಂದಿರುವ ಇತರೆ ಸಮುದಾಯದವರಿಗೂ ಕೂಡ ಈ ದರ ಅನ್ವಯವಾಗುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಆಯುಕ್ತರಿಗೆ ಸದಸ್ಯರೆಲ್ಲರೂ ಆಗ್ರಹಿಸಿದರು.

        ಪಾಲಿಕೆ ವ್ಯಾಪ್ತಿಯ ಶಿಥಿಲಾವಸ್ಥೆಯಲ್ಲಿರುವ ಪಾಲಿಕೆ ಸದಸ್ಯ ಕುಮಾರ್ ಮಾತ ನಾಡಿ, ಸ್ಮಾರ್ಟ್‍ಸಿಟಿ, ಬೆಸ್ಕಾಂ ವಿವಿಧ ಇಲಾಖೆಗಳ ಯೋಜನೆಯಡಿಯಲ್ಲಿ ನಗರದಲ್ಲಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳಾದ ಗ್ಯಾಸ್‍ಲೈನ್, ಪೈಪ್‍ಲೈನ್, ವಿದ್ಯುತ್ ಪರಿವರ್ತಕಗಳ ಅಳವಡಿಕೆಗಾಗಿ ರಸ್ತೆಗಳನ್ನು ಅಗೆದು ದುರಸ್ಥಿಗೊಳಿಸಿದ್ದಾರೆ. ಇವರಿಂದ ಪಾಲಿಕೆ ತೆರಿಗೆ ಸಂಗ್ರಹಿಸಬೇಕು ಎಂದು ಆಯುಕ್ತರ ಗಮನಕ್ಕೆ ತಂದರು.

      ಮೇಯರ್ ಫರೀದಾ ಬೇಗಂ ಮಾತನಾಡಿ, ಸದಸ್ಯರು ಪಾಲಿಕೆಗೆ ತರುವ ಎಲ್ಲಾ ಸಮಸ್ಯೆಗಳಿಗೆ ಆದ್ಯತೆ ಮೇಲೆ ಸ್ಪಂದಿಸಿ ಬಗೆಹರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಡ ಜನರಿಗೆ ಅನುಕೂಲವಾಗುವಂತಹ ಸೌಲಭ್ಯಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಂಡು ಕಾರ್ಯಗತಗೊಳಿಸಿದಾಗ ಮಾತ್ರ ಸಭೆಗಳಿಗೆ ಅರ್ಥ ಬರುತ್ತದೆ ಎಂದು ತಿಳಿಸಿದರು.

      ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ, ಪಾಲಿಕೆ ಕೆಲಸ ಕಾರ್ಯಗಳನ್ನು ಕಾನೂನು ಚೌಕಟ್ಟಿಯಲ್ಲಿಯೇ ನಿರ್ವಹಿಸಬೇಕಾಗುತ್ತದೆ. ಸಾರ್ವಜನಿಕರಿಗೆ ಅನುಕೂಲವಾಗು ವಂತಹ ಕಾರ್ಯಗಳನ್ನು ಮಾಡುವುದು ನಮ್ಮ ಜವಾಬ್ದಾರಿ. ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕು ಎಂದರು. ಪಾಲಿಕೆ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಸ್ಥಾಪಿಸುವಂತೆ ಸದಸ್ಯರು ಸರ್ವಾನುಮತದಿಂದ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು ಯಾವುದೇ ಪುತ್ಥಳಿಯನ್ನು ಸ್ಥಾಪಿಸುವ ಮುನ್ನಾ ಸರ್ಕಾರದ ಅನುಮತಿ ಪಡೆಯಬೇಕು. ಅದಕ್ಕಾಗಿ ಕೂಡಲೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಸಭೆಗೆ ತಿಳಿಸಿದರು.

      ಸಭೆಯಲ್ಲಿ ಉಪಮೇಯರ್ ಶಶಿಕಲಾ ಗಂಗಹನುಮಯ್ಯ, ತೆರಿಗೆ ನಿರ್ಧರಣೆ ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಸದಸ್ಯರು, ಪಾಲಿಕೆ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

      ಕಂಬಗಳನ್ನು ಕೂಡಲೇ ತೆರವುಗೊಳಿಸಿ ಹೊಸ ಕಂಬಗಳನ್ನು ನೆಡಬೇಕು. ಎಷ್ಟೋ ಕಡೆ ಕಂಬಗಳು ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿದ್ದರೂ ಬೆಸ್ಕಾಂ ಗಮನಹರಿಸುತ್ತಿಲ್ಲ. ವಿದ್ಯುತ್ ಅವಘಡಗಳಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಿ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸದಸ್ಯರೊಬ್ಬರು ತಿಳಿಸಿದರು.

(Visited 4 times, 1 visits today)
Previous Articleತುರುವೇಕೆರೆ : ಹಾಲಿ ಮಾಜಿ ಶಾಸಕರ ಕಿತ್ತಾಟ : ಕ್ಷೇತ್ರದ ಜನರ ಪರದಾಟ!!
Next Article ಅಂತರಸನಹಳ್ಳಿಯಲ್ಲಿ ರಾಶಿ ರಾಶಿ ಕೋಳಿ ಮಾಂಸದ ತ್ಯಾಜ್ಯ : ಸಾರ್ವಜನಿಕರ ಆಕ್ರೋಶ
News Desk Benkiyabale

Related Posts

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm news
ತಾಜಾ ಸುದ್ಧಿಗಳು
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm
news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm
news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm
Our Youtube Channel
Our Picks

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

By News Desk BenkiyabaleAugust 11, 2026 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು…

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.