BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಕಟ್ಟಾ ಬೆಂಬಲಿಗನ ಆಕ್ರೋಶ!!
Trending

ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಕಟ್ಟಾ ಬೆಂಬಲಿಗನ ಆಕ್ರೋಶ!!

By News Desk BenkiyabaleUpdated:September 02, 2020 6:36 pm

ಚಿಕ್ಕನಾಯಕನಹಳ್ಳಿ:

      ದೊಡ್ಡವರ ಬಾಯಿಯ ಮಾತು, ಹುಚ್ಚನ ಕೈನಲ್ಲಿರುವ ಕಲ್ಲು ಯಾರಿಗೆ ಬೇಕಾದರು ಬೀಸಬಹುದು ಎಂಬಂತಾಗಿದೆ ಇಂದು ಸಚಿವ ಜೆ.ಸಿ.ಮಾಧುಸ್ವಾಮಿಯವರ ಹೇಳಿಕೆ ಎಂದು ತಿಮ್ಲಾಪುರ-ಲಕ್ಷ್ಮಗೊಂಡನಹಳ್ಳಿ ಗ್ರಾಮದ ರೈತ ಗಂಗಾಧರಯ್ಯ ನುಡಿದರು.

      ತಾಲೂಕಿನ ಕುಡಿಯುವ ನೀರಿನ ಹೇಮಾವತಿ ಯೋಜನೆ ಕಾಮಗಾರಿಗೆ ಸ್ವಾಧೀನ ಪಡಿಸಿಕೊಂಡಿರುವ ಜಮೀನಿನ ಪರಿಹಾರ ಕೊಡುವಂತೆ ಒತ್ತಾಯಿಸಿ ಹೇಮಾವತಿ ನಾಲೆಯ ಹತ್ತಿರ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡುತ್ತಿದ್ದರು.

      ಈ ಬಗ್ಗೆ ಸಚಿವರನ್ನು ಕೇಳಲು ಸಂತ್ರಸ್ತ ರೈತರು ಅವರ ಮನೆಗೆ ಹೋದಾಗ ಬಾಯಿಗೆ ಬಂದಂತೆ ಬೈದು ಅಂದು ನೀವು ಎರಡು ಸಾವಿರ ರೂಪಾಯಿಗಳಿಗೆ ಹೇಸಿಗೆ ತಿಂದಿದ್ದೀರಿ, ಇಂದು ಅದರ ಪರಿಣಾಮವನ್ನು ಅನುಭವಿಸಿ. ಎಂದು ಹೀನಾಯವಾಗಿ ರೈತರನ್ನು ನಿಂದಿಸಿ ಮನೆಯಿಂದ ಹೊರಗೆ ಅಟ್ಟಿದರು ಎಂದು ಸುಮಾರು 40 ವರ್ಷಗಳಿಂದ ಜೆ.ಸಿ.ಮಾಧುಸ್ವಾಮಿಯವರ ಕಟ್ಟಾ ಬೆಂಬಲಿಗರಾಗಿದ್ದ ಗಂಗಾಧರಯ್ಯ ತಮ್ಮ ಆಕ್ರೋಶವನ್ನು ಹೊರಹಾಕಿದರು.

      2011 ರಲ್ಲಿ ಆರಂಭವಾದ ಹೇಮಾವತಿ ಕಾಮಗಾರಿಗೆ, ಮೊದಲು ಬಿಟ್ಟುಕೊಟ್ಟದ್ದೆ ನಮ್ಮ ಜಮೀನು, 34/2. ಇವತ್ತಿನ ಈ ಘಟನೆಗೆ ಕಾರಣ, ಮಾನ್ಯ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರ ಮನೆಗೆ ಹೋಗಿ 6 ತಿಂಗಳ ಮುಂಚೆಯೇ ನಾನು ಇನ್ನು ಸಹ 8-10 ಜನರ ಪರಿಹಾರದ ಹಣ ಬರಬೇಕಾಗಿದೆ, ಕೊಡಿಸಿ ಕಾಮಗಾರಿಯನ್ನು ಮುಂದುವರೆಸಿ ಎಂದಿದ್ದಕ್ಕೆ, ಕಾಮಗಾರಿ ನಡೆಸಲು ಬಿಡದಿದ್ದರೆ, ಪೊಲೀಸ್ ಕರೆಸಿ ಕೆಲಸ ಮಾಡಿಸುತ್ತೇವೆ, ಬಿಡದಿದ್ದರೆ ನಿಮ್ಮನ್ನು ಒದ್ದು ಒಳಗೆ ಹಾಕಿಸುತ್ತೇವೆ ಎಂದರು. ನಾವು ಇವರಿಗೆ ಅಧಿಕಾರ ಕೊಡುವುದು ಜನಗಳ ಮೇಲೆ ದಬ್ಬಾಳಿಕೆ ನಡೆಸಲು ಅಲ್ಲ ಎಂದು ಅವರು ಖಂಡಿಸಿದರು.

      ಹಿಂದಿನ ಶಾಸಕರಾದ ಸಿ.ಬಿ.ಸುರೇಶ್ ಬಾಬುರನ್ನು ಸಹ ಭೇಟಿ ಮಾಡಿ ವಿನಂತಿಸಿದ್ದೆವು, ಅವರು ಪರಿಹಾರ ಕೊಡಿಸುವ ಭರವಸೆ ಕೊಟ್ಟಿದ್ದರು. ನಾವು ನಮ್ಮ ಸ್ವಂತ ಪರಿಶ್ರಮದಿಂದ ಪರಿಹಾರ ಪಡೆದುಕೊಂಡಿದ್ದೇವೆಯೇ ಹೊರತು ಇದು ಮಾಧುಸ್ವಾಮಿಯವರ ಭಿಕ್ಷೆಯಲ್ಲ. ಇನ್ನು ಉಳಿದಿರುವ ನಮ್ಮ ರೈತ ಬಂಧುಗಳ ಪರಿಹಾರದ ಹಣಕ್ಕಾಗಿ ಈ ಹೋರಾಟ ಎಂದರು. ಈ ವಿಷಯವಾಗಿ ಸಚಿವರನ್ನು ಭೇಟಿ ಮಾಡಿದರೆ, ಅಂದು 2 ಸಾವಿರ ರೂಪಾಯಿಗೆ ಹೇಸಿಗೆ ತಿಂದ ನೀವು ಇಂದು ನನ್ನ ಬಳಿ ಹಣಕ್ಕಾಗಿ ಬಂದಿದ್ದೀರಿ ಎಂದು ಹೀಯಾಳಿಸಿದರು.

      ನಾವು ಪ್ರಾಮಾಣಿಕ ರೈತರು, ಸ್ವಾಭಿಮಾನಕ್ಕೆ ಧಕ್ಕೆಯಾದರೆ, ಕುತ್ತಿಗೆ ಕತ್ತರಿಸಿಕೊಂಡು ಸಾಯುತ್ತೇವೆ, ಹೊರತು ಸಚಿವರು ಹೇಳಿದ ಹಾಗೆ ಬೇರೆಯವರ ದುಡ್ಡಿಗೆ ಆಸೆ ಪಡುವುದಿಲ್ಲ. ಕಾಮಗಾರಿಗಾಗಿ ಬಿಟ್ಟುಕೊಟ್ಟಿರುವ ಜಮೀನುಗಳು ನಮ್ಮ ರೈತರದ್ದು, ಪರಿಹಾರದ ಹಣ ಸರ್ಕಾರದ್ದು, ಯಾರಪ್ಪನ ಮನೆಯ ಹಣವನ್ನೇನು ನಾವು ಕೇಳುತ್ತಿಲ್ಲ. ಶಾಸಕರು ಇದನ್ನು ವೈಭವೀಕರಿಸಿ ಹೇಳುವ ಅಗತ್ಯವೇನಿದೆ?
ನಮ್ಮ ರೈತರ ಪರಿಹಾರದ ಸಮಸ್ಯೆ ಇನ್ನು ಬಗೆಹರಿದಿಲ್ಲ, ರೈತರ ಜಮಿನನ್ನು ತೆಗೆದುಕೊಂಡು ಹೋಗಿದ್ದಾರೆ. ವಾಪಸ್ ಕೊಡಿಸಿ ಎಂದು ಕೇಳಿಕೊಂಡಿದ್ದಕ್ಕೆ, ನಮಗೆ ಅದು ಗೊತ್ತಿಲ್ಲ, ಇದು ಗೊತ್ತಿಲ್ಲ ಎಂದು ಹಾರಿಕೆ ಉತ್ತರ ನೀಡಿದರು. ಅವರು ಜಮೀನು ತೆಗೆದುಕೋಂಡಾಗ ನೀವೂ ಕೂಡ ಹಣತಿಂತಿದ್ದೀರಿ ಎಂದು ನಿಯತ್ತಾಗಿರುವ ನಮಗೆ ಹೇಳಿದರೆ ನಮ್ಮನ್ನೇನು ಇವರು ನಾಯಿಗಳನ್ನಾಗಿ ಮಾಡಿಕೊಂಡಿದ್ದಾರೆಯೇ?

      ದಾಖಲೆ ಎಲ್ಲವೂ ಸರಿ ಇದೆ, ಒಬ್ಬ ವ್ಯಕ್ತಿಯದ್ದು ನಾಲಕ್ಕು ಕುಂಟೆ ಇದೆ, ಪಶ್ಚಿಮ ಮತ್ತು ಉತ್ತರ ಎರಡಕ್ಕು ಅಕ್ವೈರ್ ಅಗಿದೆ. ಬ್ರಿಡ್ಜ್ ಹತ್ತಿರ ಇದೆ, ಒಂದೂವರೆ ಗುಂಟೆಯನ್ನು ಸೇರಿಸಿಕೊಳ್ಳಿ ಎಂದರೆ ಬೇಕಾದರೆ ಸೇರಿಸಿಕೊಳ್ಳುತ್ತೇವೆ, ಇಲ್ಲದಿದ್ದರೆ ಇಲ್ಲ. ನಮಗೆ ಕಿತ್ತುಕೊಳ್ಳುವ ಅಧಿಕಾರ ಕಾನೂನಿನಲ್ಲಿ ಇದೆ ಎಂದರು. ಅವರ ಮನೆಯಲ್ಲಿ ಕುಳಿತು ಕೇಳಿಸಿಕೊಂಡು ಬಂದಿರುವ ಮಾತಿದು. ಒಂದೂವರೆ ಗುಂಟೆ ಇಟ್ಟುಕೊಂಡು ಎಲ್ಲಿ ಹೋಗಬೇಕು ಆ ವ್ಯಕ್ತಿ. ನಿಮಗೆ ಬೇಕಿದ್ದರೆ ಕೋರ್ಟಿಗೆ ಹೋಗಿ, 20 ವರ್ಷವಾಗಲಿ, ನಾನು ಛಾಲೆಂಜ್ ಮಾಡುತ್ತೇನೆ, ನೀವು ಅದು ಹೇಗೆ ಹಣ ತಗೆದುಕೊಳ್ಳುತ್ತೀರೆಂದು. ನಾವು ಹಿಂದೆ ಒಂದು ಮುಂದೆ ಒಂದು ಮಾತನಾಡುವುದಿಲ್ಲ, ಮಾಧುಸ್ವಾಮಿಯವರನ್ನು ಕರೆಸಿ, ಅವರ ಮುಂದೆಯೇ ಈ ಮಾತನ್ನು ಹೇಳುತ್ತೇನೆ. ರೈತರ ಮೇಲಿನ ಈ ತರದ ಅತಿಕ್ರಮಣ ಸರಿಯೇ ಎಂದು ಪ್ರಶ್ನಿಸಿತ್ತೇವೆ ಎಂದರು.
     ಸೌಭಾಗ್ಯಮ್ಮ- 27 ಕುಂಟೆ (10 ಗುಂಟೆಗೆ ಮಾತ್ರಪರಿಹಾರ ಸಿಕ್ಕಿದೆ), ಚನ್ನಬಸವಯ್ಯ- 1.5 ಗುಂಟೆ,,ಜಯಾನಂದಯ್ಯ- 10
ಗುಂಟೆ (ನಿವೃತ್ತ ಪ್ರಾಧ್ಯಾಪಕರು):-
      ಹಳೆಯ ಪರಿಹಾರದ ಮೊತ್ತವನ್ನು ನಾವು ಒಪ್ಪುವುದಿಲ್ಲ, 2-3 ವರ್ಷಗಳಿಗೆ ಕಂಟ್ರಾಕ್ಟರ್‍ಗಳಿಗೆ ಕೊಡುವ ಹಣವನ್ನು ಹೆಚ್ಚುಮಾಡುತ್ತೀರಿ, ಮಾರ್ಕೆಟ್ ವ್ಯಾಲ್ಯೂ ಎಷ್ಟಿದೆಯೋ ನಮಗೆ ಅಷ್ಟೇ ಹಣ ನೀಡಬೇಕು, ನೇರ ಖರೀದಿ, ಮಾತುಕತೆಯ ಮೂಲಕ ಮಾಡುತ್ತೇವೆ ಎಂದಿದ್ದರು.
ಸದಾಶಿವಯ್ಯ- 22 ಗುಂಟೆ, ಟಿ.ಪಿ. ಶಂಕರಪ್ಪ- 5 ಗುಂಟೆ, ಸಿದ್ದಪ್ಪ- ನಿಂಗಣ್ಣ- 7 ಗುಂಟೆ, ಸಿದ್ದಬಸವಯ್ಯ- 18 ಗುಂಟೆ, ಶಂಕರಯ್ಯ- 2.5 ಗುಂಟೆ,ಗಂಗಾಧರಯ್ಯ ಪ್ರತಿಭಟನೆಯಲ್ಲಿ ಟಿ.ಪಿ.ಶಂಕರಲಿಂಗಯ್ಯ, ಚನ್ನಬಸವಯ್ಯ, ಗಂಗಾಧರಯ್ಯ, ಪಂಚಾಕ್ಷರಯ್ಯ, ಚಂದನ್, ದಿನೇಶ್, ಸೌಭಾಗ್ಯಮ್ಮ, ಪ್ರಭುಸ್ವಾಮಿ, ಆತ್ಮಾನಂದ ಜೆ.ಸಿ.ಪುರ, ಟಿ.ಶಂಕರಲಿಂಗಯ್ಯ ಮುಂತಾದವರಿದ್ದರು.

 

 

(Visited 8 times, 1 visits today)
Previous Articleಖಾಸಗಿ ಬಸ್ ನಿಲ್ದಾಣದ ವಾಣಿಜ್ಯ ಮಳಿಗೆಗಳ ಬಾಡಿಗೆ ಮನ್ನಾಕ್ಕೆ ಆಗ್ರಹ
Next Article ಪೆಟ್ಟಿಗೆ ಅಂಗಡಿ ತೆರವು : ಮಾಲೀಕರು-ಸಾರ್ವಜನಿಕರ ನಡುವೆ ಗಲಾಟೆ!!
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.