Author: News Desk Benkiyabale

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಗುರುವಾರ ಪರಿಶೀಲಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ, ವಸತಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಇಂಧನ ಇಲಾಖೆ, ಕಾರ್ಮಿಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಶುಸಂಗೋಪನೆ, ಮೀನುಗಾರಿಕೆ, ಸಮಾಜ ಕಲ್ಯಾಣ, ಗೃಹ ಇಲಾಖೆ, ಸಹಕಾರ, ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪ್ರಜಾ ಸೇವಾ ಇಲಾಖೆ, ಲೋಕೋಪಯೋಗಿಮತ್ತು ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ ಬರುವ 789 ಅರ್ಜಿಗಳು ಬಾಕಿ ಇದ್ದು, ಇಲಾಖಾವಾರು ಪರಿಶೀಲನೆ ಕೈಗೊಳ್ಳಲಾಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಅಹವಾಲುಗಳ ಸ್ಥಿತಿ, ಕೈಗೊಂಡ ಕ್ರಮಗಳು ಹಾಗೂ ಬಾಕಿ ಇರುವ ಅರ್ಜಿಗಳ ಕುರಿತು ಮಾಹಿತಿ ಪಡೆದ…

Read More

ತುಮಕೂರು ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಶ್ರೀ ಸಿದ್ಧಿವಿನಾಯಕ ಸೇವಾ ಮಂಡಳಿಯು 50ನೇ ವರ್ಷದ ಗಣೇಶೋತ್ಸವಕ್ಕೆ ವೈಭವಪೂರ್ಣ ಸಿದ್ಧತೆಗಳೊಂದಿಗೆ ಸಜ್ಜಾಗಿದ್ದು, ಈ ಬಾರಿ ಘೋರ ರಕ್ಕಸ ಮೀರಜಾ ರಾಕ್ಷಸಿ ಸಂಹಾರ ಅಥವಾ ಶ್ರೀ ಬಾಲಗಣಪತಿ ವಿಜಯ ಎಂಬ ದೃಶ್ಯಾವಳಿಯೊಂದಿಗೆ ಗಣೇಶಮೂರ್ತಿ ಪ್ರತಿಷ್ಠಾಪಿಸಲಿದೆ. ಸೆ. 14 ರ ಗಣೇಶ ಚತುರ್ಥಿಯಂದು 50ನೇ ವರ್ಷದ ಗಣೇಶ ಮೂರ್ತಿಯ ಪ್ರತಿಷ್ಠಾಪನಾ ಕಾರ್ಯಗಳು ನೆರವೇರಲಿದ್ದು, 31ದಿನಗಳ ಕಾಲ ಪೂಜಾ ಕಾರ್ಯಗಳು, ವೈವಿಧ್ಯ ಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಂಡಳಿಯ ಅಧ್ಯಕ್ಷ ಪ್ರಭು ಎಸ್.ಬಿ. ಹಾಗೂ ಉಪಾಧ್ಯಕ್ಷ ಟಿ.ಹೆಚ್. ಪ್ರಸನ್ನಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸೆ. 14 ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಸಿದ್ದಿವಿನಾಯಕಸ್ವಾಮಿ ಪ್ರತಿಷ್ಠಾಪನಾ ಪೂಜಾ ಕೈಂಕರ್ಯಗಳು ನೆರವೇರಲಿವೆ. ಸಂಜೆ 6ಕ್ಕೆ ಗಣೇಶೋತ್ಸವ, ಘೋರ ರಕ್ಕಸ ಮೀರಜಾ ರಾಕ್ಷಸಿ ಸಂಹಾರ ಅಥವಾ ಶ್ರೀ ಬಾಲಗಣಪತಿ ವಿಜಯ ದೃಶ್ಯಾವಳಿ ಉದ್ಘಾಟನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ ಎಂದು ಹೇಳಿದರು. ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಲಿರುವ ಸಿದ್ಧಗಂಗಾ ಮಠಾಧ್ಯಕ್ಷರಾದ…

Read More

ಪಾವಗಡ: ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಮತ್ತು ದುರ್ಗದ ಅಭಿಮಾನಿಗಳ ವತಿಯಿಂದ ೧೦ನೇ ವರ್ಷದ ನಿಡಗಲ್ಲು ಉತ್ಸವ-೨೦೨೬ ಅನ್ನು ನಿಡಗಲ್ಲು ದುರ್ಗದ ರಾಮತೀರ್ಥ ಬಳಿ ಅದ್ದೂರಿಯಾಗಿ ಆಚರಿಸಲಾಯಿತು. ಡೋಲು ಬಾರಿಸುವ ಮೂಲಕ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿ.ಪಂ ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ, ಸರ್ಕಾರವೇ ಪ್ರತಿ ವರ್ಷ ನಿಡಗಲ್ಲು ಉತ್ಸವ ಆಚರಿಸಬೇಕು ಮತ್ತು ನಿಡಗಲ್ಲು ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದರು. ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಮಾತನಾಡಿ, ತಮ್ಮ ಶಾಸಕಾವಧಿಯಲ್ಲಿ ದುರ್ಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದು, ವಾಲ್ಮೀಕಿ ಆಶ್ರಮದ ಅಭಿವೃದ್ಧಿಗೆ ಸಂಸದರ ನಿಧಿಯಿಂದ ಸಹಕಾರ ಕೊಡಿಸುವುದಾಗಿ ಭರವಸೆ ನೀಡಿದರು. ತುಮಕೂರು ನಗರಸಭೆ ಮಾಜಿ ಮಹಾಪೌರ, ವಾಲ್ಮೀಕಿ ಬ್ಯಾಂಕ್ ಅಧ್ಯಕ್ಷ ಬಿ.ಜಿ. ಕೃಷ್ಣಪ್ಪ ಮಾತನಾಡಿ, ಆಶ್ರಮದ ಭವನದ ಮುಂದುವರಿದ ಕಾಮಗಾರಿಗೆ ವೈಯಕ್ತಿಕವಾಗಿ ಮತ್ತು ಬ್ಯಾಂಕ್ ವತಿಯಿಂದ ಸಹಾಯ ಮಾಡುವುದಾಗಿ ತಿಳಿಸಿದರು. ದಿವ್ಯ ಸಾನಿಧ್ಯ ವಹಿಸಿದ್ದ ವಾಲ್ಮೀಕಿ ಸಂಜಯಕುಮಾರಾನAದ ಸ್ವಾಮೀಜಿ ಮಾತನಾಡಿ, ೧೦…

Read More

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಬಂಧನಕ್ಕೊಳಗಾಗಿರುವ ಆರೋಪ ಎದುರಿಸುತ್ತಿರುವ ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಟೌನ್‌ಹಾಲ್ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಕನ್ನಾಳೆ ಅವರನ್ನು ಕೂಡಲೇ ಸ್ಥಾನದಿಂದ ವಜಗೊಳಿಸುವಂತೆ ಒತ್ತಾಯಿಸಿದರು. ಕನ್ನಾಳೆ ಬಂಧನವಾಗಿ ಒಂದು ವಾರ ಕಳೆದಿದ್ದರೂ ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸದಿರುವುದಕ್ಕೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಟೌನ್‌ಹಾಲ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಕೆಲಕಾಲ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಬಳಿಕ ಮಾನವ ಸರಪಳಿ ನಿರ್ಮಿಸಿ ರಾಜ್ಯಪಾಲರು ಹಾಗೂ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆ ತಡೆಯಿಂದ ಸಂಚಾರಕ್ಕೆ ತೊಂದರೆಯಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ತುಮಕೂರು ನಗರ ಸಂಘಟನಾ ಕಾರ್ಯದರ್ಶಿ ಸಮನ್ವಿತ್ ಮಾತನಾಡಿ ವಿಶ್ವವಿದ್ಯಾಲಯದಿಂದ ಕನ್ನಾಳೆ ಅವರನ್ನು ವಜಾಗೊಳಿಸುವಂತೆ…

Read More

ತುರುವೇಕೆರೆ: ತಾಲೂಕಿನಲ್ಲಿ ಹಲವಾರು ಕಾಮಗಾರಿಗಳು ಕಳಪೆಯಾಗಿದ್ದರೂ ಬಿಲ್ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಬಿ.ಎಸ್.ವಸಂತಕುಮಾರ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ಮುಖಂಡ ಬಿ.ಎಸ್.ವಸಂತ ಕುಮಾರ್ ಮಾತನಾಡಿ, ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ನೂರಾರು ಕಾಮಗಾರಿಗಳು ನಡೆದಿದ್ದು, ಬಹುಪಾಲು ಕಳಪೆಯಾಗಿವೆ. ಇಲಾಖೆ ಮಾಡಬೇಕಾದ ಕಾಮಗಾರಿಗಳನ್ನು ಶಾಸಕರ ಶಿಫಾರಸು ಪಡೆದಿರುವ ಕಾರ್ಯಕರ್ತರು ಮಾಡುತ್ತಿದ್ದಾರೆ. ಅರ್ಹತೆ ಇಲ್ಲದಿರುವವರೂ ಗುತ್ತಿಗೆದಾರರಾಗಿದ್ದಾರೆ. ಕಾಮಗಾರಿಯಲ್ಲಿ ಸಾಕಷ್ಟು ಕಳಪೆಯಾಗಿದ್ದರೂ ಸಹ ಶಾಸಕರು ಮೌನದಿಂದ ಇರುವ ಉದ್ದೇಶವಾದರೂ ಏನು?. ತಾಲೂಕಿನಲ್ಲಿ ನಡೆದಿರುವ ಜಲ ಜೀವನ್ ಯೋಜನೆಯಲ್ಲೂ ಸಾಕಷ್ಟು ಅವ್ಯವಹಾರವಾಗಿದೆ ಎಂದು ಆರೋಪಿಸಿದರು. ಉಪವಾಸ ಅಂತ್ಯ: ಸತ್ಯಾಗ್ರಹ ಸ್ಥಳಕ್ಕೆ ತಹಸೀಲ್ದರ್ ಕುಂ.ಇ..ಅಹಮದ್ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿ, ನಮ್ಮ ತಾಲೂಕು ಆಡಳಿತ ವ್ಯಾಪ್ತಿಯಲ್ಲಿ ಬರದ ಕಾರಣ ಜಿಲ್ಲಾಧಿಕಾರಿಗಳಿಗೆ ಮನವಿ ಕಳಿಸಿಕೊಡಲಾಗುವುದು ಎಂದರು. ಇದಕ್ಕೆ ಪ್ರತಿಕ್ರಿಯೆಸಿದ್ದ ವಸಂತ ಕುಮಾರ್, ೨೦ ದಿನಗಳ ಕಾಲಾವಕಾಶ ನೀಡುತ್ತಿದ್ದು, ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.…

Read More

ಪಾವಗಡ: ತಾಲೂಕಿನಲ್ಲಿ ನೆಲೆಸಿರುವ ನಾಗಲಮಡಿಕೆಯ ಅಂತ್ಯ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಜೀಣೋರ್ದಾ್ಧರಕ್ಕೆ ಶಕ್ತಿ ಮೀರಿ ಅನುದಾನ ನೀಡಲಾಗುವುದು ಮತ್ತು ಜೀಣೋರ್ದಾ್ಧರದ ಭೂಮಿ ಪೂಜೆಗೆ ಆಗಮಿಸುತ್ತೇನೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು. ತಾಲೂಕಿನ ಬೆಳ್ಳಿಬಟ್ಲು ಗ್ರಾಮದಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ ಸಚಿವರು ಅರಣ್ಯ ಇಲಾಖೆಯಿಂದ ನಿಮಾರ್ಣ ಮಾಡಿರುವ ಸಾಲುಮರದ ತಿಮ್ಮಕ್ಕ ಸಸ್ಯೋಧ್ಯಾನ ವೀಕ್ಷಿಸಿ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಮಾನವ ವನ್ಯಜಿವಿ ಪ್ರಕರಣಗಳಲ್ಲಿ ರೈತರಿಗೆ ಸಮರ್ಪಕವಾಗಿ ಸ್ಪಂದಿಸಬೇಕು. ವನ್ಯಜಿವಿಗಳು ನಾಡಿನತ್ತ ಬರದಂತೆ ಅಗತ್ಯವಿರುವ ಎಲ್ಲ ಸೌಲಭ್ಯಗಳಿಗೆ ಸಂಬAಧಿಸಿದ ಕಾಮಗಾರಿಗಳನ್ನು ಅರಣ್ಯ ಪ್ರದೇಶಗಳಲ್ಲಿ ನಿರ್ವಹಿಸಬೇಕು ಎಂದು ಸೂಚಿಸಿದರು. ಬರಪೀಡಿತ ಪಾವಗಡ ತಾಲೂಕನ್ನು ಹಸಿರೀಕರಣ ಮಾಡುವ ಉದ್ದೇಶದಿಂದ ತಾಲೂಕಿನ ಕೆರೆಗಳಿಗೆ ನೀರು ಹರಿಸುವ ಯೋಜನೆಯಾದ ತುಂಗಭದ್ರಾ ಎಡದಂಡ ಕಾಲುವೆಯ ಯೋಜನೆಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ, ಮುಂದಿನ ವರ್ಷದ ಒಳಗೆ ನೀರನ್ನು ಹರಿಸಲಾಗುವುದು. ಈಗಾಗಲೇ ತುಮಕೂರು ಮತ್ತು ಚಿತ್ರದುರ್ಗದವರೆಗೂ ನೀರು ಹರಿಸಿದ್ದು, ಮುಂದಿನ ವರ್ಷದ ಒಳಗಡೆ ತಾಲೂಕಿನ ಎಲ್ಲ ಕೆರೆಗಳಿಗೆ ನೀರು ಹರಿಸಲು…

Read More

ತಿಪಟೂರು: ಹಲವು ದಶಕಗಳಿಂದ ಬಗರ್ ಹುಕುಂ ಅಡಿಯಲ್ಲಿ ರೈತರು ಸಾಗುವಳಿ ಮಾಡುತ್ತಿದ್ದ ಜಮೀನನ್ನು ತಾಲೂಕು ಆಡಳಿತ ಏಕಾಏಕಿ ಅರಣ್ಯ ಹಾಗೂ ಸರ್ಕಾರಿ ಜಮೀನು ಎಂದು ದಾಖಲಿಸಿ ವಶಪಡಿಸಿಕೊಳ್ಳುತ್ತಿರುವ ಕ್ರಮ ಖಂಡಿಸಿ, ತಾಲೂಕಿನ ಹೊನ್ನವಳ್ಳಿ ಹೋಬಳಿಯ ರುದ್ರಾಪುರದಲ್ಲಿ ಬೃಹತ್ ಪ್ರತಿರೋಧ ಸಮಾವೇಶ ಹಾಗೂ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಈ ಸಮಾವೇಶದಲ್ಲಿ ೫೦೦ಕ್ಕೂ ಹೆಚ್ಚು ರೈತರು ಭಾಗವಹಿಸಿ, ಭೂಮಿ ಹಕ್ಕಿಗಾಗಿ ಹೋರಾಟದ ಸಂಕಲ್ಪ ಮಾಡಿದರು. ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಮಾತನಾಡಿ, ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದು ಅಕ್ಷಮ್ಯ ಅಪರಾಧ. ಕಂದಾಯ ಸಚಿವರು ಒಕ್ಕಲೆಬ್ಬಿಸುವುದಿಲ್ಲ ಎಂದು ಹೇಳುತ್ತಿದ್ದರೂ, ಸ್ಥಳಿಯ ಮಟ್ಟದಲ್ಲಿ ಪಹಣಿಯಿಂದ ರೈತರ ಹೆಸರು ತೆಗೆದು ಹಾಕಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಕಲ್ಲು-ಮಣ್ಣಿನ ಪ್ರದೇಶವನ್ನು ಭಾವಿತ ಅರಣ್ಯವೆಂದು ಗುರುತಿಸಿ ಜಮೀನು ಕಸಿಯಲು…

Read More

ಪಾವಗಡ ಮುಂಬರುವ ಶ್ರೀ ಗಣೇಶ ಚತುರ್ಥಿ ಸೇರಿದಂತೆ ಯಾವುದೇ ಸಾರ್ವಜನಿಕ ಹಬ್ಬ ಹರಿದಿನಗಳು ಹಾಗೂ ಸಮಾರಂಭಗಳಲ್ಲಿ ಧ್ವನಿವರ್ಧಕ ಡಿಜೆ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕರಾದ ಸುರೇಶ್ ರವರು ತಿಳಿಸಿದ್ದಾರೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಾವಗಡ ವೃತ್ತದ ವ್ಯಾಪ್ತಿಗೆ ಬರುವ ಎಲ್ಲಾ ಡಿಜೆ ಮಾಲೀಕರ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಉಚ್ಚ ನ್ಯಾಯಾಲಯ ಹಾಗೂ ಸರ್ಕಾರದ ಮಾರ್ಗದರ್ಶನದಂತೆ ಶಬ್ದ ಮಾಲಿನ್ಯ ನಿಯಂತ್ರಣಕ್ಕಾಗಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಹಬ್ಬದ ಆಚರಣೆಗಳಲ್ಲಿ ಅಥವಾ ಮೆರವಣಿಗೆಗಳಲ್ಲಿ ಅಧಿಕ ಶಬ್ದ ತರಂಗಗಳನ್ನು ಹೊರಹೊಮ್ಮಿಸುವ ಡಿಜೆ ಸಿಸ್ಟಮ್‌ಗಳನ್ನು ಬಳಸಲು ಅವಕಾಶವಿಲ್ಲ, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಾವಗಡ ವೃತ್ತದ ವ್ಯಾಪ್ತಿಗೆ ಬರುವ ಎಲ್ಲಾ ಡಿಜೆ ಮಾಲೀಕರ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಉಚ್ಚ ನ್ಯಾಯಾಲಯ ಹಾಗೂ ಸರ್ಕಾರದ ಮಾರ್ಗದರ್ಶನದಂತೆ ಶಬ್ದ ಮಾಲಿನ್ಯ ನಿಯಂತ್ರಣಕ್ಕಾಗಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಹಬ್ಬದ ಆಚರಣೆಗಳಲ್ಲಿ ಅಥವಾ ಮೆರವಣಿಗೆಗಳಲ್ಲಿ ಅಧಿಕ ಶಬ್ದ…

Read More

ಕೊರಟಗೆರೆ: ಬೇಸಿಗೆ ಇನ್ನೂ ಆರಂಭವಾಗಿಲ್ಲ. ಆದರೆ ಕೊರಟಗೆರೆ ಪುರಸಭೆ ವ್ಯಾಪ್ತಿಯ ಕಲ್ಲುಗುಟ್ಟರಹಳ್ಳಿ ಹಾಗೂ ಕೃಷ್ಣರಾಜಪುರ-೨ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಎರಡೂ ಗ್ರಾಮಗಳಲ್ಲಿ ಸುಮಾರು ೧೬೫ ಮನೆಗಳಿದ್ದು, ೭೦೦ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಎರಡೂ ಗ್ರಾಮಗಳಿಗೆ ಒಂದೇ ಬೋರ್‌ವೆಲ್‌ನಿಂದ ನೀರು ಪೂರೈಕೆ ಮಾಡಲಾಗುತ್ತಿತ್ತು. ಇದೀಗ ಬೋರ್‌ವೆಲ್‌ನಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಮಳೆ ಕೊರತೆಯಿಂದ ಬರಪೀಡಿತ ಪ್ರದೇಶ ಎಂದು ಘೋಷಣೆಯಾಗಿದ್ದ ತಾಲೂಕಿನಲ್ಲೇ, ಮಳೆಗಾಲದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಜಲಜೀವನ್ ಮಿಷನ್ ಪಂಪ್-ಮೋಟರ್ ಎಲ್ಲಿದೆ?: ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಬೋರ್‌ವೆಲ್ ಕೊರೆಸಲಾಗಿತ್ತು. ಆದರೆ ಬೋರ್‌ವೆಲ್‌ಗೆ ಅಳವಡಿಸಲು ತಂದಿದ್ದ ಪಂಪ್ ಮತ್ತು ಮೋಟರ್ ಇದೀಗ ಗ್ರಾಮದ ಸದಸ್ಯರೊಬ್ಬರ ಮನೆಯಲ್ಲಿ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸರ್ಕಾರಿ ಯೋಜನೆಯಡಿ ತಂದಿರುವ ಪಂಪ್-ಮೋಟರ್ ಮನೆಯಲ್ಲಿ…

Read More

ತುಮಕೂರು: ಗಣೇಶ ಚತುರ್ಥಿ ಹಬ್ಬ ಎಂದರೆ ಸಂಭ್ರಮ, ಸಡಗರ, ಭಕ್ತಿ. ಆದರೆ ಈ ಸಂಭ್ರಮದ ಜೊತೆಗೆ ಪರಿಸರ ಸಂರಕ್ಷಣೆಯ ಕಾಳಜಿಯನ್ನೂ ಬೆಳೆಸಬಹುದು ಎಂಬುದನ್ನು ತುಮಕೂರಿನ ಪುಟಾಣಿಗಳು ತಮ್ಮ ಕೈಚಳಕದ ಮೂಲಕ ಸಾರಿದರು. ನಗರದ ಪ್ರೆಸ್ ಕ್ಲಬ್ ಆವರಣದಲ್ಲಿ ಆಲದ ಮರದ ನೆರಳಿನಲ್ಲಿ ಮಕ್ಕಳು ಜೇಡಿ ಮಣ್ಣನ್ನು ಕೈಯಲ್ಲಿ ಹಿಡಿದುಕೊಂಡು ಗಣೇಶ ಮೂರ್ತಿಗಳಿಗೆ ರೂಪ ನೀಡುತ್ತಿದ್ದ ದೃಶ್ಯ ಎಲ್ಲರ ಗಮನ ಸೆಳೆಯಿತು. ಪುಟ್ಟ ಕೈಗಳಲ್ಲಿ ಅರಳಿದ ಗಣೇಶನ ವಿವಿಧ ರೂಪಗಳು ಮಕ್ಕಳ ಸೃಜನಶೀಲತೆಗೆ ಸಾಕ್ಷಿಯಾದವು. ಪ್ರೆಸ್ ಕ್ಲಬ್ ತುಮಕೂರು ಹಾಗೂ ವರ್ಣೋದಯ ಆರ್ಟ್ ಗ್ರೂಪ್ ವತಿಯಿಂದ ಆಯೋಜಿಸಲಾಗಿದ್ದ **ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕಾ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ತಮ್ಮ ಕಲ್ಪನೆಗೆ ತಕ್ಕಂತೆ ಜೇಡಿ ಮಣ್ಣಿನಿಂದ ಬಗೆಬಗೆಯ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಮಕ್ಕಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಮಕ್ಕಳಿಗೆ ಸಾಥ್ ನೀಡಿದ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುಟಾಣಿಗಳ ಉತ್ಸಾಹವನ್ನು ಹೆಚ್ಚಿಸಿದರು. ಮಣ್ಣನ್ನು ಹದಗೊಳಿಸಿ, ಅದಕ್ಕೆ ಆಕಾರ ನೀಡಿ,…

Read More