ತುಮಕೂರು: ವಿವಿಧ ಅಂಗವೈಕಲ್ಯತೆಯಿ0ದ ಸಮಾಜದ ಮುಖ್ಯವಾಹಿನಿಗೆ ಬರದೆ ಸಮಾಜದ ಮುಖ್ಯವಾಹಿನಿಯಿಂದ ದೂರವಿರುವ ದಿವ್ಯಾಂಗರಿಗೂ ಭವ್ಯ ಭವಿಷ್ಯವಿದೆ ಎಂಬುದನ್ನು ತಾವು ಸಾಬೀತು ಮಾಡಿರುವುದಾಗಿ ಅಂಧ ಮಹಿಳೆಯರ ಭಾರತ ಕ್ರಿಕೆಟ್ ತಂಡದ ಆಟಗಾರ್ತಿ ತುಮಕೂರು ಜಿಲ್ಲೆಯ ಕಾವ್ಯ ಎನ್.ಆರ್. ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ತುಮಕೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಹುಟ್ಟಿನಿಂದ ಅಥವಾ ಬೇರೆ ಯಾವುದೇ ಸಂದರ್ಭದಲ್ಲಿ ಅಂಗವೈಕಲ್ಯ ರಾಗುವುದರಿಂದ ಧೃತಿಗೆಡುವ ಅವಶ್ಯಕತೆಯಿಲ್ಲ. ಅಂಗವೈಕಲ್ಯವನ್ನು ಮೆಟ್ಟಿನಿಂತು ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ ಎಂದು ಅವರು ಹೇಳಿದರು. ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಅಂಧ ಮಹಿಳೆಯರ ಟಿ-೨೦ ವಿಶ್ವಕಪ್ ಚಾಂಪಿಯನ್ ಶಿಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ ತಂಡದಲ್ಲಿದ್ದ ಕಾವ್ಯ ಅವರು, ಅಂತರರಾಷ್ಟ್ರೀಯ ಭಾರತ ಕ್ರಿಕೆಟ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮುನ್ನರಾಷ್ಟ್ರೀಯ ಮಟ್ಟದಲ್ಲಿಯೂ ಕೂಡ ಕ್ರಿಕೆಟ್ ಆಡಿದ್ದು, ಇದೀಗ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್…
Author: News Desk Benkiyabale
ತುಮಕೂರು: ಮಹಿಳೆಯರು ಸಂಘ,ಸ0ಸ್ಥೆಗಳನ್ನು ಆರಂಭಿಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು ಎಂದು ಮಹಿಳಾ ಮಕ್ಕಳ ಕಲ್ಯಾಣ ಅಭಿವೃದ್ಧಿ ನಿಗಮದ ಅಭಿವೃದ್ಧಿ ಅಧಿಕಾರಿ ಜಾನವಿ ತಿಳಿಸಿದರು. ಗ್ರಾಮಾಂತರದ ಕೋರ ಹೋಬಳಿಯ ಮೇಳೆಹಳ್ಳಿಯ ಆಹಾರೋತ್ಪನ್ನಗಳ ಮಾರಾಟ ಮಹಿಳಾ ಸಹಕಾರ ಸಂಘದ ಕಚೇರಿಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಆಹಾರೋತ್ಪನ್ನಗಳ ಮಾರಾಟ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರಸಭೆ ಹಾಗೂ ಫಲಾನುಭವಿಗಳಿಗೆ ಸಾಲ ನೀಡಲು ಅರ್ಜಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚೆಗೆ ಮಹಿಳೆಯರು ಸಂಘ ಸಂಸ್ಥೆಗಳನ್ನು ಕಟ್ಟಿಕೊಂಡು ಅದರಿಂದ ಸಾಲ ಸೌಲಭ್ಯ ಪಡೆದು ತಮ್ಮ ಕುಟುಂಬದ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ, ಮತ್ತು ಸಣ್ಣ,ಸಣ್ಣ ಉದ್ಯಮಗಳನ್ನು ಆರಂ ಭಿಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿದ್ದಾರೆ. ಇನ್ನು ಅನೇಕ ಮಹಿಳೆಯರು ಸಂಘ, ಸಂಸ್ಥೆಗಳಿ0ದ ದೂರ ಉಳಿದಿದ್ದಾರೆ. ಆರ್ಥಿ ಕವಾಗಿ ಸಂಕಷ್ಟವನ್ನು ಎದರಿಸುತ್ತಿರುವ ಮಹಿಳೆಯರು ಸಂಘ, ಸಂಸ್ಥೆಗಳನ್ನು ಆರಂಭಿಸಿ ಅದರಿಂದ ಬರುವ ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಕರೆ ನೀಡಿದರು. ಆಹಾರೋತ್ಪನ್ನಗಳ ಮಾರಾಟ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಚಂದ್ರಕಲಾ…
ತುಮಕೂರು: ಅಬಕಾರಿ ಅಧಿಕಾರಿಗಳು ತುಮಕೂರು ತಾಲ್ಲೂಕಿನಲ್ಲಿ ಕಾನೂನು ಬಾಹೀರವಾಗಿ ೨೯ ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಶಾಸಕ ಬಿ.ಸುರೇಶ್ಗೌಡರು ಒತ್ತಾಯಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತುಮಕೂರು ತಾಲ್ಲೂಕು ಮಟ್ಟದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕರು, ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವಲ್ಲಿ ಅಕ್ರಮ ನಡೆದಿದೆ. ಯಾವ ನಿಯಮದಡಿಯಲ್ಲಿ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡಿದಿರಿ ಎಂದು ಅಬಕಾರಿ ಅಧಿಕಾರಿಗಳ ವಿರುದ್ಧ ಶಾಸಕರು ಗರಂ ಆದರು. ತಾಲ್ಲೂಕಿನಲ್ಲಿ ಈಗಾಗಲೇ ೯೦ ಮದ್ಯದ ಅಂಗಡಿಗಳಿವೆ. ಅವುಗಳ ಜೊತೆಗೆ ಹೊಸದಾಗಿ ೨೯ ಅಂಗಡಿಗಳಿಗೆ ಕಾನೂನುಬಾಹೀರವಾಗಿ ಲೈಸೆನ್ಸ್ ನೀಡಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಸಭೆಯಲ್ಲಿ ನಿರ್ಣಯ ಮಾಡಿದರು. ತಾಲ್ಲೂಕಿನ ವಿವಿಧ ವಿದ್ಯಾರ್ಥಿನಿಲಯಗಳಲ್ಲಿ ೩ ಸಾವಿರ ಹೆಣ್ಣುಮಕ್ಕಳು, ೨ ಸಾವಿರ ಬಾಲಕರಿದ್ದಾರೆ. ಪ್ರತಿ ತಿಂಗಳೂ ತಜ್ಞವೈದ್ಯರು ಹಾಸ್ಟೆಲ್ಗಳಿಗೆ ಹೋಗಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಮಾಡಬೇಕು. ಆದರೆ…
ತುಮಕೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮೈಕ್ರೋ ಪ್ಲಾನ್ ಸಿದ್ಧಪಡಿಸಬೇಕೆಂದು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ. ಯೋಗೀಶ್ ತಿಳಿಸಿದರು. ಬುಧವಾರ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಲ್ಸ್ ಪೋಲಿಯೋ ಕಾರ್ಯಕ್ರಮವು ಡಿಸೆಂಬರ್ ೨೧ರಿಂದ ೨೪ರವರೆಗೆ ನಡೆಯಲಿದ್ದು, ಡಿಸೆಂಬರ್ ೨೨ ರಿಂದ ಡಿ.೨೪ರವರೆಗೆ ಮನೆ-ಮನೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು. ನವಜಾತ ಶಿಶುವಿನಿಂದ ೫ ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೊ ಲಸಿಕೆ ನೀಡಬೇಕೆಂದರಲ್ಲದೆ, ಗುರುತಿಸಿರುವ ಪೋಲಿಯೋ ಬೂತ್, ನಮ್ಮ ಕ್ಲಿನಿಕ್, ಪ್ರಾಥಮಿಕ ಆರೋಗ್ಯ ಕೇಂದ್ರ, ಹೆರಿಗೆ ಆಸ್ಪತ್ರೆ, ರೆಫರಲ್ ಆಸ್ಪತ್ರೆ, ಖಾಸಗಿ ಆಸ್ಪತ್ರೆ, ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ ಎಂದು ಅವರು ಹೇಳಿದರು. ಪಾಲಿಕೆ ವ್ಯಾಪ್ತಿಯ ೩೫ ವಾರ್ಡುಗಳಲ್ಲಿ ಪಲ್ಸ್ ಫೋಲಿಯೊ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸ ಬೇಕು. ಕಾರ್ಯಕ್ರಮದ ಗುರಿ ಸಾಧಿಸಲು ಆರೋಗ್ಯ ಇಲಾಖೆ, ರೋಟರಿ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನರ್ಸಿಂಗ್ ಕಾಲೇಜು, ವೈದ್ಯಕೀಯ ಕಾಲೇಜು, ಪ್ಯಾರಾಮೆಡಿಕಲ್…
ತುಮಕೂರು: ರಾಜ್ಯ ಗೃಹ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೇನೆ ವತಿಯಿಂದ ನಗರದಲ್ಲಿ ರಕ್ತದಲ್ಲಿ ನೂರಾರು ಸಹಿ ಸಂಗ್ರಹಿಸಿ ಎಐಸಿಸಿಗೆ ಕಳುಹಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದ್ದಾರೆ. ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ಯುವ ಸೇನೆ(ರಿ),ಇದರ ರಾಜ್ಯಾಧ್ಯಕ್ಷ ನಗುತಾರಂಗನಾಥ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಹಿತೈಷಿಗಳು ನಗರದ ಟೌನ್ಹಾಲ್ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಮುಂಭಾಗದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿ, ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ತದ ನಂತರರಕ್ತದಲ್ಲಿ ಸಹಿ ಸಂಗ್ರಹಿಸುವ ಮೂಲಕ ಎಐಸಿಸಿಗೆ ಮನವಿ ಪತ್ರವನ್ನು ರವಾನಿಸಿದರು. ಈ ವೇಳೆ ಮಾತನಾಡಿದ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ಯುವ ಸೇನೆಯ ರಾಜ್ಯಾಧ್ಯಕ್ಷ ನಗುತಾರಂಗನಾಥ್, ಪ್ರಸ್ತುತ ಗೃಹ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ೮ ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿಎರಡು ಬಾರಿಯೂ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತಂದಿದ್ದಾರೆ. ಅಲ್ಲದೆ ಉಪಮುಖ್ಯಮಂತ್ರಿ ಯಾಗಿ, ಗೃಹ, ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ, ರೇಷ್ಮೆ ಇನ್ನಿತರ ಇಲಾಖೆಗಳಲ್ಲಿ ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ಸಜ್ಜನ…
ತುಮಕೂರು: ನಿರ್ಲಕ್ಷಕ್ಕೆ ಒಳಗಾದ ವಿಕಲಚೇತನರಿಗೆ ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ನೀಡಿ ಉತ್ತಮ ರೀತಿಯಲ್ಲಿ ಜೀವನ ನೆಡೆಸುವ ಹಾದಿಯನ್ನು ಕಲ್ಪಿಸುವ ಸಲುವಾಗಿ ವಿಕಲಚೇತನರ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದೇವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ನೂರುನ್ನೀಸ ರವರು ತಿಳಿಸಿದರು. ಮಂಗಳವಾರ ನಗರದ ಕೆ ಆರ್ ಬಡಾವಣೆಯಲ್ಲಿ ದಿಯಾ ಚಾರಿಟಬಲ್ ಟ್ರಸ್ಟ್ ಇಂಡಿಯಾ ಹಾಗೂ ದಿಯಾ ಚಾರಿಟಬಲ್ ಟ್ರಸ್ಟ್ ಇಂಡಿಯಾ ವೃದ್ಧಾಶ್ರಮ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು.ಇವರ ಸಹಯೋಗದೊಂದಿಗೆ ವಿಶ್ವ ವಿಕಲಚೇತನರ ದಿನಾಚರಣೆ-೨೦೨೫ ಕಾರ್ಯಕ್ರಮದ ಅಂಗವಾಗಿ ವಿಶೇಷ ಚೇತನರಿಗೆ ಮತ್ತು ಹಿರಿಯ ನಾಗರೀಕರಿಗೆ ವೀಲ್ಚೇರ್, ಕಮೋಡ್ ಚೇರ್, ವಾಕರ್, ವಾಕಿಂಗ್ ಸ್ಟಿಕ್ ಕ್ರಚ್ಚಸ್, ಬ್ರೆಂಡ್ಸ್ಟಿಕ್ ಮತ್ತು ಕಂಬಳಿಗಳನ್ನು ೩೦೦ಕ್ಕೂ ಫಲಾನುಭವಿಗಳಿಗೆ ಉಚಿತವಾಗಿ ನೀಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಳೆದ ನಾಲ್ಕು ವರ್ಷಗಳಿಂದ ದಿಯಾ ಸಂಸ್ಥೆಯು ಸಾಮಾಜಿಕ ಕಾರ್ಯಕ್ರಮಗಳನ್ನು ಗಮನಿಸುತ್ತಾ ಬಂದಿದ್ದೇನೆ, ವಿಕಲಚೇತನರು,ಮಕ್ಕಳು, ಹಿರಿಯ ನಾಗರೀಕರಿಕರು ಹಾಗೂ ಸಮಾಜದಿಂದ ತುಳಿತಕ್ಕೆ ಒಳಗಾದವರಿಗೆ ತಮ್ಮ ಸ್ವಂತ ದುಡಿಮೆಯಲ್ಲಿ ಉಚಿತ ಸಲ್ಲಿಸುತ್ತಿರುವುದು ಶ್ಲಾಘನೆ ಎಂದುರು. ಹೆಚ್ಚುವರಿ…
ತುಮಕೂರು: ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳ, ಶ್ರೀರಾಮ ಸೇನೆವತಿಯಿಂದ ಆಯೋಜಿಸಿರುವ ದತ್ತ ಜಯಂತಿಯಲ್ಲಿ ಪಾಲ್ಗೊಳ್ಳಲು ಗುರುವಾರ ನಗರದಿಂದ ನೂರಾರು ದತ್ತ ಮಾಲಾಧಾರಿ ಭಕ್ತರು ತೆರಳಿದರು. ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮಾಲಾಧಾರಿಗಳು ಗುಬ್ಬಿ ವೃತ್ತದ ಕುಂಟಮ್ಮನ ತೋಟದ ಆಂಜನೇಯ ದೇವಸ್ಥಾನದವರೆಗೆ ಪಾದಯತ್ರೆ ಸಾಗಿ, ಅಲ್ಲಿ ಪೂಜೆ ಸಲ್ಲಿಸಿ ನಂತರ ಆರು ಬಸ್ಗಳಲ್ಲಿ ದತ್ತಪೀಠದತ್ತ ಪ್ರಯಾಣ ಬೆಳೆಸಿದರು. ನಾಗರಕಟ್ಟೆ ಗಣಪತಿ ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೊರಟಗೆರೆ ತಾಲ್ಲೂಕು ತಂಗನಹಳ್ಳಿ ಕಾಶಿ ಅನ್ನಪೂರ್ಣೇಶ್ವರಿ ಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ದತ್ತಪೀಠ ಹಿಂದೂಗಳ ಪವಿತ್ರ ಧಾರ್ಮಿಕ ಕೇಂದ್ರ, ಇದಕ್ಕೆ ಪೌರಾಣಿಕ ಹಿನ್ನೆಲೆ ಇದೆ. ಅನೇಕ ಋಷಿಮುನಿಗಳು ತಪಸ್ಸು, ಧಾನ್ಯ ಮಾಡಿದ್ದ ಶ್ರದ್ಧಾ ಕೇಂದ್ರ. ಭಕ್ತರು ಪ್ರತಿ ವರ್ಷ ಮಾಲೆ ಧರಿಸಿ ದತ್ತ ಪೀಠಕ್ಕೆ ಯಾತ್ರೆ ತೆರಳಿ ದತ್ತತ್ರೇಯರ ಪಾದುಕೆ ದರ್ಶನ, ಸ್ಪರ್ಶ ಮಾಡಿ ಭಕ್ತಿ ಸಮರ್ಪಿಸುವ ಆಚರಣೆ ಅನಾದಿ ಕಾಲದಿಂದಲೂ ನಡೆದುಬರುತ್ತಿದೆ ಎಂದು ಹೇಳಿದರು.…
ತುಮಕೂರು: ಸಮಾಜದಲ್ಲಿ ವಿಕಲಚೇತನರಿಗೆ ಬೇಕಾದುದು ಕೇವಲ ಸಹಾನುಭೂತಿ ಅಲ್ಲ. ಬದಲಾಗಿ ಎಲ್ಲ ಸಮಾನ ಅವಕಾಶಗಳು ಸಿಗಬೇಕು. ಅವಕಾಶಗಳು ನೀಡಿದರೆ ಅವರಲ್ಲಿರುವ ಪ್ರತಿಭೆಯನ್ನು ಹೊರತರಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅಭಿಪ್ರಾಯ ವ್ಯಕ್ತಪಡಿಸಿದರು. ಬುಧವಾರ ನಗರದ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರ ಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿದ ಅವರು, ವಿಕಲಚೇತನರು ವಿಶೇಷ ಚೇತನರು. ಸಮಾಜ ದಲ್ಲಿ ಅವರಿಗೆ ಸಮಾನವಾಗಿ ಅವಕಾಶಗಳು ತಲುಪಿದ್ದಲ್ಲಿ, ಅವರು ಇನ್ನಷ್ಟು ಉನ್ನತ ಮಟ್ಟಕ್ಕೆ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಮನೆ, ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ವಿಕಲಚೇತನರು ಅಥವಾ ಬುದ್ಧಿಮಾಂದ್ಯತೆ ಹೊಂದಿರುವವರನ್ನು ಮೂಢನಂಬಿಕೆಗಳ ಕಾರಣದಿಂದ ಸಂಕೋಲೆಗಳಲ್ಲಿ ಸಿಲುಕಿಸಿ ಹಿಂಸೆ ನೀಡುವುದು…
ತುಮಕೂರು: ಕರ್ನಾಟಕ ಸಾಹಿತ್ಯ ಅಕಾಡೆ ಮಿಯ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ ೫ರಂದು ಸಂಜೆ ೪ ಗಂಟೆಗೆ ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿರುವ ಡಾ. ಗುಬ್ಬಿ ವೀರಣ್ಣ ರಂಗಮ0ದಿರದಲ್ಲಿ ನಡೆಯಲಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ಅವರು ಹೇಳಿದರು. ಬುಧವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ೨೦೨೪ನೇ ಸಾಲಿನ ಗೌರವ ಪ್ರಶಸ್ತಿ, ಸಾಹಿತ್ಯಶ್ರೀ ಪ್ರಶಸ್ತಿ ಹಾಗೂ ೨೦೨೩ನೇ ಸಾಲಿನ ಪುಸ್ತಕ ಬಹುಮಾನ ಮತ್ತು ದತ್ತಿ ಬಹುಮಾನ ಪ್ರದಾನ ನಡೆಯಲಿದೆ. ಡಾ. ಎಂ. ಬಸವಣ್ಣ, ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್, ಡಾ. ಡಿ.ಬಿ. ನಾಯಕ ಹಾಗೂ ಡಾ: ವಿಶ್ವನಾಥ್ ಕಾರ್ನಾಡ್ ಸೇರಿದಂತೆ ೪೧ ಜನರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು. ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರ ಉಪಸ್ಥಿ ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ…
ತುಮಕೂರು: ಜಿಲ್ಲೆಯ ತೆಂಗು ಬೆಳೆಗೆ ತಗುಲಿರುವ ನುಸಿಪೀಡೆ ಹಾಗೂ ಬಿಳತಲೆ ಹುಳು ನಿಯಂತ್ರಣದಲ್ಲಿ ಕೃಷಿ ಹಾಗು ತೊಟಗಾರಿಕೆ ಇಲಾಖೆ ವೈಫಲ್ಯವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ನಿವಾರಣೆ ಮಾಡುವಲ್ಲಿ ನಿರ್ಲಕ್ಷö್ಯವಹಿಸಿದೆ ಎಂದು ಆಪಾದಿಸಿ ಜಿಲ್ಲಾ ಬಿಜೆಪಿ ಮುಖಂಡರು ಬುಧವಾರ ನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ನುಸಿಪೀಡಿತ ತೆಂಗು ಹಿಡಿದು ಸ್ವಾತಂತ್ರö್ಯ ಚೌಕದಿಂದ ಕೃಷಿ ಇಲಾಖೆ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ಮುಖಂಡರು ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯಿಂದ ರೈತರು ಜೀವನ ಅರಸಿ ಗುಳೆ ಹೋಗುವ ಪರಿಸ್ಥಿತಿ ಬಂದಿದೆ. ಅನ್ನಭಾಗ್ಯ ಕೊಡುತ್ತೇವೆ, ಅಕ್ಕಿ, ಸಕ್ಕರೆ ಕೊಡುತ್ತೇವೆ ಎನ್ನುವ ಕಾಂಗ್ರೆಸ್ ನಾಯಕರು, ಅದನ್ನು ಬೆಳೆಯುವ ರೈತರ ಕಷ್ಟವನ್ನು ಕೇಳುತ್ತಿಲ್ಲ. ಯಾವುದೇ ನೀರಾವರಿ ಯೋಜನೆಗೆ ಹಣ ನೀಡಿಲ್ಲ, ರಸ್ತೆಗಳ ಗುಂಡಿ ಮುಚ್ಚಲೂ ದುಡ್ಡು ಕೊಟ್ಟಿಲ್ಲ. ಬಿಜೆಪಿ ಸರ್ಕಾರದ ಅನೇಕ…











