ತುಮಕೂರು: ಜನ ಐದು ವರ್ಷಕ್ಕೊಮ್ಮೆ ನಮ್ಮನ್ನು ಆರಿಸಿ ಕಳಿಸುತ್ತಾರೆ ನಾವು ಮಾಡಿದ ಕೆಲಸ ಅವರಿಗೆ ಇಷ್ಟವಾದರೆ ಮತ್ತೊಮ್ಮೆ ನಮ್ಮನ್ನು ರಿನಿವಲ್ ಮಾಡಿಕೊಳ್ಳುತ್ತಾರೆ ಇಲ್ಲದಿದ್ದರೆ ತಿರಸ್ಕರಿಸುತ್ತಾರೆ ಎಂದು ಶಾಸಕ ಸಿ ಬಿ ಸುರೇಶ್ ಬಾಬು ರವರು ಅಭಿಪ್ರಾಯಪಟ್ಟರು ಶಿರಾ ತಾಲೂಕು, ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬನ್ನಿ ನಗರದ ಬಳಿ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಿದ್ದ ವಾಣಿಜ್ಯ ಮಳಿಗೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು ಜನ ಕೊಟ್ಟ ಅಧಿಕಾರ ಶಾಶ್ವತವಲ್ಲ ಅಧಿಕಾರವಧಿಯಲ್ಲಿ ನಾವು ಮಾಡಿದ ಕೆಲಸಗಳೇ ಶಾಶ್ವತವಾಗಿ ನಮ್ಮ ಹೆಸರನ್ನು ಉಳಿಸುತ್ತವೆ. ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರು ಅಂತಹ ಒಂದು ಉತ್ತಮ ಕಾರ್ಯಕ್ಕೆ ಮುಂದಾಗಿದ್ದಾರೆ ತಮ್ಮ ಅನುದಾನದ ಅಡಿಯಲ್ಲಿ ನರೇಗಾ ಕಾಮಗಾರಿ ಅಡಿಯಲ್ಲಿ ಹಾಗೂ ೧೫ನೇ ಹಣಕಾಸು ಯೋಜನೆ ಅಡಿಯಲ್ಲಿ ಸಂಪನ್ಮೂಲಗಳನ್ನು ಬಳಸಿಕೊಂಡು ವಾಣಿಜ್ಯ ಮಳಿಗೆಗಳನ್ನು ನೂತನವಾಗಿ ನಿರ್ಮಿಸಿ ಪಂಚಾಯಿತಿಗೆ ಶಾಶ್ವತವಾಗಿ ಆದಾಯ ಬರುವಂತೆ ಮಾಡುವ ಉತ್ತಮ ಕಾರ್ಯ ಮಾಡಿದ್ದಾರೆ ಕಟ್ಟಡದ ಮೇಲ್ಭಾಗದಲ್ಲಿ ಮತ್ತಷ್ಟು ಮಳಿಗೆಗಳನ್ನು ನಿರ್ಮಿಸಲು…
Author: News Desk Benkiyabale
ತುಮಕೂರು: ನಗರದ ಕ್ಯಾತ್ಸಂದ್ರ ಸಮೀಪ ಮೈದಾಳ ರಸ್ತೆಯಲ್ಲಿ ಪರಿಶಿಷ್ಟ ಪಂಗಡಗಳ ಹಾಗೂ ಇತರೆ ಸಮುದಾಯಗಳ ವಿದ್ಯಾರ್ಥಿನಿಲಯಗಳಲ್ಲಿ ಸುಮಾರು ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರು ನಿತ್ಯ ತುಮಕೂರಿಗೆ ಕಾಲೇಜಿಗೆ ಹೋಗಿ ಬರಲು ಸಾರಿಗೆ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿ ಸುತ್ತಿದ್ದಾರೆ. ಸಾರಿಗೆ ಸಂಸ್ಥೆ ಹಾಗೂ ಜಿಲ್ಲಾಡಳಿತ ತಕ್ಷಣ ಕ್ರಮ ತೆಗೆದುಕೊಂಡು ಈ ಮಾರ್ಗದಲ್ಲಿ ಬಸ್ ಸೇವೆ ಒದಗಿಸಬೇಕು ಎಂದು ಕ್ಯಾತ್ಸಂದ್ರದ ಡಾ. ಪುನಿತ್ ರಾಜ್ಕುಮಾರ್ ಬಡಾ ವಣೆ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪ್ರತಾಪ್ ಮದಕರಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಹಲವಾರು ಬಾರಿ ಸಾರಿಗೆ ಸಂಸ್ಥೆಗೆ ಮನವಿ ಮಾಡಿದರೂ ಸ್ಪಂದಿಸಿ ಬಸ್ ವ್ಯವಸ್ಥೆ ಮಾಡಿಲ್ಲ. ನಿತ್ಯ ೩೦೦ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಿಬರಲು ದೂರದ ಕ್ಯಾತ್ಸಂದ್ರ ನಿಲ್ದಾಣಕ್ಕೆ ಬರುವಂತಾಗಿದೆ. ಕ್ಯಾತ್ಸಂದ್ರವರೆಗಿನ ನಗರ ಸಾರಿಗೆ ಬಸ್ ಸೇವೆಯನ್ನು ಡಾ.ಪುನಿತ್ ರಾಜ್ಕುಮಾರ್ ಬಡಾವಣೆವರೆಗೂ ವಿಸ್ತರಿಸಿದರೆ ಹಾಸ್ಟೆಲ್ ವಿದ್ಯಾ ರ್ಥಿಗಳಿಗೆ ಅನುಕೂಲವಾಗುತ್ತದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳದಿದ್ದರೆ ವಿದ್ಯಾರ್ಥಿಗಳೊಂದಿಗೆ, ನಾಗರೀಕರು, ಕನ್ನಡಪರ ಸಂಘಟನೆಗಳು, ದಲಿ ತಪರ ಸಂಘಟನೆಗಳೊ0ದಿಗೆ ಉಗ್ರ ಹೋರಾಟ…
ತುಮಕೂರು: ಭವಿಷ್ಯದಲ್ಲಿ ನೀವು ಏನಾಗಬೇಕು ಎಂಬು ದನ್ನು ಎಸ್ಎಸ್ಎಲ್ಸಿ ಪರೀಕ್ಷೆಗೆ ಮೊದಲೇ ನಿರ್ಧಾರ ಮಾಡಬೇಕು. ಶ್ರದ್ಧೆಯಿಂದ ಓದಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಬೇಕು. ಸಂಸ್ಕಾರ ರೂಢಿಸಿಕೊಂಡು ಶಿಸ್ತು, ಶ್ರದ್ಧೆ, ಆತ್ಮ ವಿಶ್ವಾಸ ಅಳವಡಿಸಿಕೊಂಡರೆ ಗುರಿ ಸಾಧನೆ ಮಾಡುವಲ್ಲಿ ಯಶಸ್ವಿಯಾಗಬಹುದು ಎಂದು ಶಾಸಕ ಬಿ.ಸುರೇಶ್ಗೌಡರು ವಿದ್ಯಾರ್ಥಿಗಳಿಗೆ ತಿಳಿಸಿದರು. ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿ ಕೆಪಿಎಸ್ ಶಾಲೆಯಲ್ಲಿ ವಿದ್ಯಾ ರ್ಥಿಗಳಿಗೆ ಶೂ ಹಾಗೂ ಸಾಕ್ಸ್ ವಿತರಣೆ ಮಾಡಿ ಮಾತನಾಡಿದ ಶಾಸಕರು, ಸರ್ಕಾರ ಸಮವಸ್ತç, ಬಿಸಿಯೂಟ, ಪಠ್ಯಪುಸ್ತಕ, ಉತ್ತ ಮವಾದ ಶಾಲಾ ಕ್ಯಾಂಪಸ್, ಉತ್ತಮ ಶಿಕ್ಷಕರು ಎಲ್ಲವನ್ನೂ ಕೊಟ್ಟಿದೆ. ಈಗಿನ ಶಿಕ್ಷಣ ಪದ್ದತಿಯೂ ಉತ್ತಮವಾಗಿದೆ. ಎಲ್ಲವ ನ್ನೂ ಬಳಸಿಕೊಂಡು ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉನ್ನತ ಸ್ಥಾನಕ್ಕೆ ಹೋಗಬೇಕು ಎಂದರು. ವಿದ್ಯಾರ್ಥಿಗಳ ಪಾಲಿಗೆ ಎಸ್ಎಸ್ಎಸ್ಸಿ ಪರೀಕ್ಷೆ ಪ್ರಮುಖ ಘಟ್ಟ. ಈ ಹಂತದಲ್ಲಿ ಒಳ್ಳೆಯ ಅಂಕ ಪಡೆಯಬೇಕು. ಶಿಕ್ಷಕರ ಮಾರ್ಗದರ್ಶನ ಪಡೆದು ಒಳ್ಳೆಯ ಸಾಧನೆ ಮಾಡಿ ಶಾಲೆಗೆ, ಪೋಷಕರಿಗೆ ಕೀರ್ತಿ ತರಬೇಕು. ಮಕ್ಕಳಲ್ಲಿ ಜ್ಞಾನವಿದೆ. ಅವರಿಗೆ ಮಾರ್ಗದರ್ಶನ ನೀಡಿ ಆತ್ಮವಿಶ್ವಾಸ…
ಶಿರಾ: ಮದಲೂರು ಕೆರೆಗೆ ನೀರು ಹರಿಸಲು ದಿ. ಮುಖ್ಯಮಂತ್ರಿ ದೇವರಾಜ್ ಅರಸು ಅವರೇ ಮೂಲ ಕಾರಣ. ಅಂದು ಅವರು ತುಮಕೂರಿಗೆ ಹೇಮಾವತಿ ನೀರು ಹರಿಸಲು ಬಾಗೂರು ನವಿಲೆ ಸುರಂಗದ ಶಂಕುಸ್ಥಾಪನೆಗೆ ಬಂದಾಗ ತುಮಕೂರು ಜಿಲ್ಲೆಗೆ ನೀರು ಬರುತ್ತದೆ, ನೀನು ಅಧಿಕಾರ ಪಡೆದುಕೋ ಆಗ ಅಲ್ಲಿಂದ ಎಲ್ಲಿಗೆ ಬೇಕಾದರೂ ನೀರು ತೆಗೆದುಕೊಂಡು ಹೋಗಬಹುದು ಎಂದು ತಿಳಿಸಿದ್ದರು.ಶಿರಾ ತಾಲೂಕಿನಾದ್ಯಂತ ಹೇಮಾವತಿ ನೀರನ್ನು ಹರಿಸಿ ನನ್ನ ಕನಸನ್ನು ನನಸು ಮಾಡಿಕೊಂಡಿದ್ದೇನೆ ಎಂದು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ. ಜಯಚಂದ್ರ ತಿಳಿಸಿದರು. ಶಿರಾ ತಾಲೂಕಿನ ಮದಲೂರು ಕೆರೆಗೆ ದಂಪತಿ ಗಂಗಾ ಪೂಜೆಯೊಂದಿಗೆ , ಬಾಗಿನ ಅರ್ಪಿಸಿ ನಂತರ ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಭಿಮಾನಿಗಳು ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿದ ಮಾತನಾಡಿದರು. ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ನೀರಾವರಿ ಮಂತ್ರಿಯಾಗಿದ್ದಾಗ ನಾನು ಕಳ್ಳಂಬೆಳ್ಳ ಕ್ಷೇತ್ರದ ಶಾಸಕನಾಗಿದ್ದೆ, ಹೇಮಾವತಿ ನೀರು ಹರಿಸಲು ಅವರು ಒಪ್ಪಿಗೆ ಸೂಚಿಸಿದಾಗ ಸಾಕಷ್ಟು ವಿರೋಧಗಳು ಕೇಳಿ…
ಹುಳಿಯಾರು: ಹುಳಿಯಾರಿನಲ್ಲಿ ಭಗೀರಥ ಭವನ ನಿರ್ಮಾಣಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ. ನೀಡಲಾಗಿದ್ದು PWD ಅಥವಾ ಜಿಪಂಗೆ ಕಟ್ಟಣ ನಿರ್ಮಾಣದ ಏಜೆನ್ಸಿ ಕೊಟ್ಟು ಶೀಘ್ರದಲ್ಲೇ ಶಂಕುಸ್ಥಾಪನೆ ಮಾಡಲಾಗುವುದು ಎಂದು ಶಾಸಕರಾದ ಸಿ.ಬಿ.ಸುರೇಶ್ಬಾಬು ತಿಳಿಸಿದರು. ಹುಳಿಯಾರು ಸಮೀಪದ ಕೋಡಿಪಾಳ್ಯದ ಶ್ರೀ ಸೇವಾಲಾಲ್ ಸಾಂಸ್ಕöತಿಕ ಸದನದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕು ಭಗೀರಥ ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ಶ್ರೀ ಭಗೀರಥ ವಿದ್ಯಾನಿಧಿ ಸೇವಾ ಚರಿಟಬಲ್ ಟ್ರಸ್ಟ್ ಹಾಗೂ ತಾಲೂಕು ಭಗೀರಥ ಉಪ್ಪಾರ ಸಂಘದ ಸಂಯುಕ್ತ ಆಶಯದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರು ಮತ್ತು ನೂತನ ನೌಕರರು ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪೋಷಕರು ತಮ್ಮ ಮಕ್ಕಳನ್ನು ಶೈಕ್ಷಣಿಕವಾಗಿ ಬೆಳೆಸುವ ಜೊತೆಗೆ ಸಂಸ್ಕಾರ, ಸಂಸ್ಕೃತಿ ಕಲಿಸಬೇಕು. ಸಾಹಿತ್ಯ, ಸಂಗೀತ, ಕ್ರೀಡೆ, ಯೋಗಧ್ಯಾನದಲ್ಲಿ ತೊಡಗಿಕೊಳ್ಳುವಂತೆ ಮಾಡಬೇಕು. ಗುರುಹಿರಿಯರಲ್ಲಿ ಗೌರವಭಾವನೆ, ಸೇವಾಗುಣ ರೂಢಿಸಬೇಕು. ಒಟ್ಟಾರೆ ದೊಡ್ಡವರಾದ ಮೇಲೆ ನಮ್ಮವರು. ನಮ್ಮೂರು ಎಂಬ ಭಾವನೆಯಿಂದ ನಡೆದುಕೊಳ್ಳುವಂತೆ ಮಾಡಬೇಕು ಎಂದು ಕಿವಿ ಮಾತು…
ತುಮಕೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಸಮಗ್ರವಾಗಿ ಅನುಷ್ಠಾನ ಮಾಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ನೀಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಕಲ್ಯಾಣ ಯೋಜನೆಗಳ ಬಗ್ಗೆ ಅಲ್ಪಸಂಖ್ಯಾತರಲ್ಲಿ ಹೆಚ್ಚಿನ ಅರಿವು ಮೂಡಿಸಿ, ಕನಿಷ್ಠ ಶೇ.೭೫ರಷ್ಟು ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪುವಂತೆ ಮಾಡಿ ಇಲಾಖೆಯ ಗುರಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಅನೇಕ ಉರ್ದು ಶಾಲೆಗಳು ಇನ್ನೂ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಳೆದ ಆರು ವರ್ಷಗಳಿಂದ ಬಾಡಿಗೆ ಪಾವತಿಸದಿರುವುದು ಮಕ್ಕಳಿಗೆ ತೊಂದರೆ ಉಂಟುಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸ್ವಂತ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಹೇಳಿದರು. ಕೇಂದ್ರ ಸರ್ಕಾರದ ಪಿ.ಎಂ.ಇ.ಜಿ.ಪಿ ಯೋಜನೆಯಡಿ ಕೈಗಾರಿಕೆ ಅಥವಾ ಉದ್ದಿಮೆ ಆರಂಭಿಸಲು ೫೦ ಲಕ್ಷ…
ತುಮಕೂರು: ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಗಳನ್ನು ರಾತ್ರಿ 8 ಗಂಟೆಯವರೆಗೂ ತೆರೆದಿರಲು ಕ್ರಮ ಕೈಗೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯ ಅವರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು. ಜಿಲ್ಲೆಯ ಗುಬ್ಬಿ ತಾಲ್ಲೂಕು ಜಿ.ಹೊಸಹಳ್ಳಿ ಗ್ರಾಮದ ಸಮುದಾಯಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರ ಅದಾಲತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉದ್ಯೋಗಸ್ಥ ಮಹಿಳೆಯರು ಸಂಜೆ ೬ ಗಂಟೆಯೊಳಗೆ ಪಡಿತರ ಧಾನ್ಯವನ್ನು ಪಡೆಯಲು ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ರಾತ್ರಿ ೮ ಗಂಟೆಯವರೆಗೂ ತೆರೆದಿರಲು ಕ್ರಮ ಕೈಗೊಳ್ಳ ಲಾಗುವುದು ಎಂದು ತಿಳಿಸಿದರು. ಪಡಿತರ ಚೀಟಿ ಹೊಂದಿರುವ ಗ್ರಾಹಕರ ಕುಂದು-ಕೊರತೆಗಳನ್ನು ಬಗೆಹರಿಸಲು ಜಿಲ್ಲೆಯ ಎಲ್ಲಾ ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ. ಆಹಾರ ಇಲಾಖೆ ಅಧಿಕಾರಿಗಳು ಪಡಿತರ ಗ್ರಾಹಕರು ಕುಂದು-ಕೊರತೆಗಳನ್ನು ಸಕಾಲದಲ್ಲಿ ಬಗೆಹರಿಸಬೇಕು. ಪಡಿತರ ಚೀಟಿದಾ ರರು ಕುಂದು-ಕೊರತೆಗಳ ನಿವಾರಣೆಗಾಗಿ ಜಿಲ್ಲಾ ಕೇಂದ್ರ ತುಮಕೂರಿಗೆ ಬರುವುದನ್ನು ತಪ್ಪಿಸಲು ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಅನ್ನು…
ತುಮಕೂರು: ಭಾರತ ದೇಶದಲ್ಲಿ ಎಲ್ಲರೂ ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎಂದರೆ ಅದಕ್ಕೆ ಮೂಲ ಕಾರಣ ಡಾ. ಬಿ.ಆರ್ ಅಂಬೇಡ್ಕರ್. ಭಾರತದ ಜನತೆ ಬಾಬಾ ಸಾಹೇಬರು ಹಾಕಿ ಕೊಟ್ಟಿರುವ ದಾರಿಯಲ್ಲಿ ಸಾಗೋಣ, ಬಾಬಾ ಸಾಹೇಬರು ತಾವು ವಿಷ ಉಂಡು ನಮಗೆ ಅಮೃತವನ್ನು ಉಣ್ಣಿಸಿದ್ದಾರೆ, ಅವರು ಭಾರತದ ಪ್ರತಿಯೊಬ್ಬ ಪ್ರಜೆಗೂ ಸರ್ವ ಸಮಾನತೆಯ ಬದುಕನ್ನು ಕಾಣಲು ಅನುಕೂಲವಾಗುವಂತಹ ಕಾರ್ಯವನ್ನು ಮಾಡಿದ್ದಾರೆಂದು ಅಖಿಲ ಭಾರತ ಡಾ ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್ ಅವರು ತಿಳಿಸಿದ್ದಾರೆ. ತುಮಕೂರು ನಗರದ ಅಮಾನಿಕೆರೆ ಆವರಣದಲ್ಲಿ ಡಿಸೆಂಬರ್ ೬ ಶನಿವಾರ ಸಂಜೆ ೫.೩೦ ಗಂಟೆಯಲ್ಲಿ ಏರ್ಪಡಿಸಲಾಗಿದ್ದ ಡಾ.ಬಿ.ಆರ್ ಅಂಬೇಡ್ಕರ್ ರವರ ೬೯ನೇ ಪರಿ ನಿರ್ವಾಣ ದಿನದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮತ್ತು ಸಂವಿಧಾನದ ಪೀಠಿಕೆಗೆ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಬಗೆಗೆ ಏನು ಹೇಳಿ ಬಣ್ಣಿಸಿದರು ಕಡಿಮೆಯೇ ವರ್ಷದ ೩೬೫ ದಿನವು ಅಂಬೇಡ್ಕರ್ ರವರ ವಿಚಾರಧಾರೆಗಳನ್ನು…
ತುಮಕೂರು: ವಿವಿಧ ಅಂಗವೈಕಲ್ಯತೆಯಿ0ದ ಸಮಾಜದ ಮುಖ್ಯವಾಹಿನಿಗೆ ಬರದೆ ಸಮಾಜದ ಮುಖ್ಯವಾಹಿನಿಯಿಂದ ದೂರವಿರುವ ದಿವ್ಯಾಂಗರಿಗೂ ಭವ್ಯ ಭವಿಷ್ಯವಿದೆ ಎಂಬುದನ್ನು ತಾವು ಸಾಬೀತು ಮಾಡಿರುವುದಾಗಿ ಅಂಧ ಮಹಿಳೆಯರ ಭಾರತ ಕ್ರಿಕೆಟ್ ತಂಡದ ಆಟಗಾರ್ತಿ ತುಮಕೂರು ಜಿಲ್ಲೆಯ ಕಾವ್ಯ ಎನ್.ಆರ್. ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ತುಮಕೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಹುಟ್ಟಿನಿಂದ ಅಥವಾ ಬೇರೆ ಯಾವುದೇ ಸಂದರ್ಭದಲ್ಲಿ ಅಂಗವೈಕಲ್ಯ ರಾಗುವುದರಿಂದ ಧೃತಿಗೆಡುವ ಅವಶ್ಯಕತೆಯಿಲ್ಲ. ಅಂಗವೈಕಲ್ಯವನ್ನು ಮೆಟ್ಟಿನಿಂತು ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ ಎಂದು ಅವರು ಹೇಳಿದರು. ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಅಂಧ ಮಹಿಳೆಯರ ಟಿ-೨೦ ವಿಶ್ವಕಪ್ ಚಾಂಪಿಯನ್ ಶಿಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ ತಂಡದಲ್ಲಿದ್ದ ಕಾವ್ಯ ಅವರು, ಅಂತರರಾಷ್ಟ್ರೀಯ ಭಾರತ ಕ್ರಿಕೆಟ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮುನ್ನರಾಷ್ಟ್ರೀಯ ಮಟ್ಟದಲ್ಲಿಯೂ ಕೂಡ ಕ್ರಿಕೆಟ್ ಆಡಿದ್ದು, ಇದೀಗ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್…
ತುಮಕೂರು: ಮಹಿಳೆಯರು ಸಂಘ,ಸ0ಸ್ಥೆಗಳನ್ನು ಆರಂಭಿಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು ಎಂದು ಮಹಿಳಾ ಮಕ್ಕಳ ಕಲ್ಯಾಣ ಅಭಿವೃದ್ಧಿ ನಿಗಮದ ಅಭಿವೃದ್ಧಿ ಅಧಿಕಾರಿ ಜಾನವಿ ತಿಳಿಸಿದರು. ಗ್ರಾಮಾಂತರದ ಕೋರ ಹೋಬಳಿಯ ಮೇಳೆಹಳ್ಳಿಯ ಆಹಾರೋತ್ಪನ್ನಗಳ ಮಾರಾಟ ಮಹಿಳಾ ಸಹಕಾರ ಸಂಘದ ಕಚೇರಿಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಆಹಾರೋತ್ಪನ್ನಗಳ ಮಾರಾಟ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರಸಭೆ ಹಾಗೂ ಫಲಾನುಭವಿಗಳಿಗೆ ಸಾಲ ನೀಡಲು ಅರ್ಜಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚೆಗೆ ಮಹಿಳೆಯರು ಸಂಘ ಸಂಸ್ಥೆಗಳನ್ನು ಕಟ್ಟಿಕೊಂಡು ಅದರಿಂದ ಸಾಲ ಸೌಲಭ್ಯ ಪಡೆದು ತಮ್ಮ ಕುಟುಂಬದ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ, ಮತ್ತು ಸಣ್ಣ,ಸಣ್ಣ ಉದ್ಯಮಗಳನ್ನು ಆರಂ ಭಿಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿದ್ದಾರೆ. ಇನ್ನು ಅನೇಕ ಮಹಿಳೆಯರು ಸಂಘ, ಸಂಸ್ಥೆಗಳಿ0ದ ದೂರ ಉಳಿದಿದ್ದಾರೆ. ಆರ್ಥಿ ಕವಾಗಿ ಸಂಕಷ್ಟವನ್ನು ಎದರಿಸುತ್ತಿರುವ ಮಹಿಳೆಯರು ಸಂಘ, ಸಂಸ್ಥೆಗಳನ್ನು ಆರಂಭಿಸಿ ಅದರಿಂದ ಬರುವ ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಕರೆ ನೀಡಿದರು. ಆಹಾರೋತ್ಪನ್ನಗಳ ಮಾರಾಟ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಚಂದ್ರಕಲಾ…










