ತುಮಕೂರು: ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಗಸ್ಟ್ ೧೫ರಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಾವೆಲ್ಲರೂ ಸಂತಸದಿAದ ಭಾಗವಹಿಸಿ ಅರ್ಥಪೂರ್ಣವಾಗಿ ಹಬ್ಬದ ರೀತಿಯಲ್ಲಿ ಆಚರಿಸಬೇಕು. ಅದಕ್ಕೆ ಪೂರಕ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು. ವಿವಿಧ ಶಾಲಾ-ಕಾಲೇಜು, ವಸತಿ ನಿಲಯಗಳ ಮಕ್ಕಳಿಂದ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮವು ಸ್ವಚ್ಛತೆ, ಪರಿಸರ ಸಂರಕ್ಷಣೆ, ರಸ್ತೆ ಸುರಕ್ಷತೆ, ಜೀವಜಲ ಸಂರಕ್ಷಣೆಯAತಹ ವಿಷಯಾಧಾರಿತವಾಗಿರಬೇಕು ಸೂಚಿಸಿದರು. ಬೆಳಿಗ್ಗೆ ೯ ಗಂಟೆಗೆ ಉಪ ಮುಖ್ಯಮಂತ್ರಿಗಳಿAದ ಧ್ವಜಾರೋಹಣ: ಜಿಲ್ಲಾಡಳಿತ ವಿವಿಧ ಇಲಾಖೆ ಹಾಗೂ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ ೧೫ರಂದು ಬೆಳಿಗ್ಗೆ ೯ ಗಂಟೆಗೆ ಉಪ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ, ಗೌರವ ರಕ್ಷೆ ಸ್ವೀಕಾರ, ಸ್ವಾತಂತ್ರೊö್ಯÃತ್ಸವದ ಸಂದೇಶ ನೀಡುವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ನಡೆಯಲಿರುವ ಜಿಲ್ಲಾ…
Author: News Desk Benkiyabale
ತುಮಕೂರು: ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಿ ೪೫ ದಿನಗಳಾದರೂ ಶಾಲೆಯಲ್ಲಿ ಕ್ರೀಡಾ ಚಟುವಟಿಕೆ ಆರಂಭವಾಗಿಲ್ಲ, ೧೪ ವಯೋಮಾನ ಹಾಗೂ ೧೭ ವಯೋಮಾನದ ಕ್ರೀಡಾಕೂಟ ನಡೆಸಲು ಸಾರ್ವಜನಿಕ ಇಲಾಖೆ ಮೀನಾಮೇಷ ಎಣಿಸುತ್ತಿರುವುದು ಮಕ್ಕಳ ಬಾಲ್ಯವನ್ನೇ ಮಸುಕಾಗಿಸಿದೆ. ಜೂನ್ ತಿಂಗಳಲ್ಲಿಯೇ ಹೊರಬೀಳಬೇಕಿರುವ ಸುತ್ತೋಮೆ ಜುಲೈ ಅರ್ಧ ಮುಗಿದರೂ ಪ್ರಕಟವಾಗಿಲ್ಲ, ರಾಜ್ಯಾದ್ಯಂತ ೪೮೫೨೭ ಶಾಲೆಗಳಲ್ಲಿ ಕ್ರೀಡಾ ಚಟುವಟಿಕೆ ಇನ್ನೂ ಆರಂಭವಾಗದ ಪರಿಣಾಮ ವಿದ್ಯಾರ್ಥಿಗಳಲ್ಲಿದ್ದ ಕ್ರೀಡಾ ಆಸಕ್ತಿ ಹಾಗೂ ಉತ್ಸಾಹ ಕುಗ್ಗುವಂತಾಗಿದೆ. ಕ್ರೀಡಾಕೂಟ ಆಯೋಜಿಸಲು ಬೇಗಾದ ಪೂರ್ವಸಿದ್ಧತೆಯೂ ಇಲ್ಲದಂತಾಗಿದೆ. ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಉಸ್ತುವಾರಿ ಹೊಣೆ ಹೊತ್ತಿರುವ ಅಧಿಕಾರಿಗಳ ಜತೆ ಕಳೆದ ಜೂ.೧೧ರಂದು ದೈಹಿಕ ಶಿಕ್ಷಣ ವಿಭಾಗದ ಜಂಟಿ ನಿರ್ದೇಶಕ ನರಸಿಂಹಯ್ಯ ಅವರು ಸಭೆ ನಡೆಸಿದ್ದಾರೆ ಆದರೂ, ಒಂದು ತಿಂಗಳಾದರೂ ಮಾರ್ಗಸೂಚಿ ಹೊರಡಿಸದಿರುವುದು ಮಕ್ಕಳ ನವಿರಾದ ಬಾಲ್ಯ ಕಿತ್ತುಕೊಳ್ಳುವಂತಾಗಿದೆ. ಪ್ರತಿ ಶೈಕ್ಷಣಿಕ ವರ್ಷದ ಆರಂಭದಿAದಲೇ ಕ್ರೀಡಾ ಚಟುವಟಿಕೆಗೆ ಆದ್ಯತೆ ನೀಡುವುದು ವಾಡಿಕೆ ಆದರೆ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ ತಾಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳಿಗೆ…
ಹುಳಿಯಾರು: ಸರ್ಕಾರ ಮದ್ಯ ಮಾರಾಟದ ಅಂಗಡಿಗಳನ್ನು ತೆರೆದಿದ್ದರೂ, ಅಲ್ಲಿಗೆ ಹೋಗದಿರುವ ನಿರ್ಧಾರ ನಮ್ಮದಾಗಬೇಕು ಎಂದು ಹುಳಿಯಾರು ಹೋಬಳಿಯ ತಿಮ್ಲಾಪುರ ಗ್ರಾಪಂ ಪಿಡಿಒ ರಮೇಶ್ ಅವರು ಕರೆ ನೀಡಿದರು. ಹುಳಿಯಾರಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಲಾಗಿದ್ದ ಮಧ್ಯ ವರ್ಜನ ಶಿಬಿರದ ಮಾಹಿತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಪ್ರಮುಖ ಉಪನ್ಯಾಸಕರಾಗಿ ಮಾತನಾಡುತ್ತಿದ್ದರು. ಕುಡಿತದ ಚಟಕ್ಕೆ ಬಿದ್ದ ವ್ಯಕ್ತಿ ಮೊದಮೊದಲು ಸ್ನೇಹಿತರ ಒತ್ತಾಯಕ್ಕೋ ಅಥವಾ ಚುನಾವಣೆಯ ಸಂದರ್ಭದಲ್ಲಿ ಸಿಗುವ ಉಚಿತ ಮದ್ಯಕ್ಕೋ ಮಾರುಹೋಗುತ್ತಾನೆ. ತದನಂತರ ಇದು ವ್ಯಸನವಾಗಿ ಬದಲಾಗಿ, ತಮಗಿರುವ ಜಮೀನನ್ನು ಅಡವಿಟ್ಟು ಕೊನೆಗೆ ಅದನ್ನು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೊನೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದಾಗ ಸಾಲದ ಹೊರೆ ಮತ್ತಷ್ಟು ಹೆಚ್ಚಾಗಿ ಇಡೀ ಕುಟುಂಬವೇ ಬೀದಿಗೆ ಬೀಳುತ್ತದೆ. ಕೊನೆಗೆ ಹೆಂಡತಿ-ಮಕ್ಕಳ ಭವಿಷ್ಯ ಅಂಧಕಾರವಾಗುತ್ತದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಎರಡು-ಮೂರು ವರ್ಷಗಳ ಕಾಲ ಮದ್ಯ ಸಿಗದೇ ಇದ್ದಾಗ ಎಷ್ಟೋ ಕುಡುಕರು ಅನಿವಾರ್ಯವಾಗಿ ಕುಡಿತವನ್ನು ಬಿಟ್ಟಿದ್ದರು. ಇಂದು ಅವರು ಉತ್ತಮ…
ತುಮಕೂರು: ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ನ ೭೫ ವರ್ಷಾಚರಣೆ ಅಂಗವಾಗಿ ಈ ತಿಂಗಳ ೨೭ರಿಂದ ಆರು ದಿನಗಳ ಕಾಲ ನಗರದಲ್ಲಿ ಯೋನೆಕ್ಸ್-ಸನ್ರೈಸ್ ರಾಜ್ಯ ರ್ಯಾಂಕಿAಗ್ ಬ್ಯಾಡ್ಮಿಂಟನ್ ಅಂಡರ್-೧೧ ಮತ್ತು ಅಂಡರ್-೧೩ ವಿಭಾಗಗಳ ಪಂದ್ಯಾವಳಿ ಏರ್ಪಾಟಾಗಿದೆ. ರಾಜ್ಯಾದ್ಯಂತ ಸುಮಾರು ೬೦೦ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು. ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಡ್ಮಿಂಟನ್ನಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯದ ಪ್ರತಿಭಾವಂತ ಬ್ಯಾಡ್ಮಿಂಟನ್ ಆಟಗಾರರು ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಮುಂಬರುವ ಒಲಂಪಿಕ್ ಗುರಿ ಇಟ್ಟುಕೊಂಡು ಪ್ರತಿಭಾನ್ವಿತ ಬ್ಯಾಡ್ಮಿಂಟನ್ ಆಟಗಾರರನ್ನು ಗುರುತಿಸಲು, ಸಿದ್ಧಪಡಿಸಲು ಈ ಟೂರ್ನಮೆಂಟ್ ಉತ್ತಮ ವೇದಿಕೆ ಆಗಲಿದೆ. ಆರು ಅಂಕಣಗಳಲ್ಲಿ ಆರು ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ. ಆಗಸ್ಟ್ ೧ರಂದು ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ೫೦೦ಕ್ಕೂ ಹೆಚ್ಚು ಪ್ರತಿಭಾವಂತ ಕಿರಿಯ ಬ್ಯಾಡ್ಮಿಂಟನ್ ಆಟಗಾರರು ಈ ಪಂದ್ಯಾವಳಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಇದು ಅಂಡರ್-೧೧…
ತುಮಕೂರು: ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಎಸ್.ಐ.ಆರ್.ನಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಚುನಾವಣಾ ಆಯೋಗದ ಸಹಕಾರದಿಂದ ಉತ್ತಮವಾಗಿ ಮತದಾರರ ನೊಂದಣಿ ನಡೆದಿದ್ದು, ಶೇ೯೯.೭೨ರಷ್ಟು ಮತದಾರರಿಗೆ ಎನ್ಮರೇಷನ್ ಫಾರಂ ಹಂಚುವ ಮೂಲಕ ಬಿಎಲ್ಓಗಳು ಉತ್ತಮ ಕೆಲಸ ಮಾಡಿದ್ದಾರೆ ಎಂದು ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮದ್ ಶ್ಲಾಘೀಸಿದ್ದಾರೆ. ನಗರದ ೭ನೇ ವಾರ್ಡಿನ ಜಿ.ಸಿ.ಆರ್. ಕಾಲೋನಿಯ ಕೆಲ ಬಡಾವಣೆಗಳಿಗೆ ಭೇಟಿ ನೀಡಿ,ಎಸ್.ಐ.ಆರ್. ಪ್ರಕ್ರಿಯೆ ಕಾರ್ಯವನ್ನು ವೀಕ್ಷಿಸಿದ ನಂತರ,ಅಲ್ಲಿನ ಮತದಾರರು ಮತ್ತು ಬಿ.ಎಲ್.ಓ ಗಳಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚುನಾವಣಾ ಆಯೋಗದಿಂದ ನೇಮಕ ವಾಗಿರುವ ಬಿಎಲ್ಓಗಳು ಪ್ರತಿ ಮನೆ ಮನೆಗೆ ಭೇಟಿ ನೀಡಿ ಫಾರಂ ನೀಡುವ ಮೂಲಕ ಎಸ್ಐಆರ್ ಪ್ರಕ್ರಿಯೆಗೆ ಒಳ್ಳೆಯ ಸಾಥ್ ನೀಡಿದ್ದಾರೆ ಎಂದರು. ಕಳೆದ ೨೯ ರಿಂದ ಎಸ್.ಐ.ಆರ್.ಪ್ರಕ್ರಿಯೆ ರಾಜ್ಯದಲ್ಲಿ ಆರಂಭವಾಗಿದ್ದು, ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಸ್.ಐ.ಆರ್. ಬಹಳ ತ್ವರಿತಗತಿಯಲ್ಲಿ ನಡೆಯುತ್ತಿದೆ.ತುಮಕೂರು ನಗರ ೧೩೨ನೇ ವಿಧಾನಸಭಾ ಕ್ಷೇತ್ರದಲ್ಲಿ ೨೪೭ಬೂತ್ ಗಳಿದ್ದು, ೨,೮೩,೮೦೦ ಮತದಾರರಿದ್ದು,ಈಗಾಗಲೇ ಬಿಎಲ್ಓಗಳು ೨,೭೩ಲಕ್ಷ ಎನ್ಮರೇಷನ್…
ಶಿರಾ: ನಗರದ ಅಮರಾಪುರ ರಸ್ತೆಯ ಪ್ರೆಸಿಡೆನ್ಸಿ ಕಾಲೇಜು ಸಮೀಪದ ‘ಬೇಕ್ ಪಾಯಿಂಟ್’ ರಸ್ತೆ ತಿರುವಿನಲ್ಲಿ ಬುಧವಾರ ರಾತ್ರಿ ಸುಮಾರು ೯.೩೦ಕ್ಕೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಶಿವಕುಮಾರ್ (೫೦) ಮೃತಪಟ್ಟಿದ್ದಾರೆ. ಶಿವಕುಮಾರ್ ಅವರು ರಸ್ತೆ ದಾಟುತ್ತಿದ್ದ ವೇಳೆ ಎದುರಿನಿಂದ ಶಿರಾ ಕಡೆಗೆ ವೇಗವಾಗಿ ಬರುತ್ತಿದ್ದ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ಶಿವಕುಮಾರ್ ಅವರು ಮೊಟ್ಟೆ ವ್ಯಾಪಾರ ಮಾಡುತ್ತಿದ್ದರು. ಎಂದಿನAತೆ ರಾತ್ರಿ ವ್ಯಾಪಾರ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಂಬುಲೆನ್ಸ್ ಡ್ರೆöÊವರ್ ವಾಹನ ನಿಲ್ಲಿಸದೆ ಪರಾರಿಯಾಗಿರುತ್ತಾನೆ. ಮೃತರಿಗೆ ಮೂವರು ಪುತ್ರರು ಇದ್ದು, ಅಂತ್ಯಕ್ರಿಯೆಯನ್ನು ಚನ್ನನಕುಂಟೆಯಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಯಿತು. ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು…
ತುಮಕೂರು: ಜಿಲ್ಲೆಯಲ್ಲಿ ನಡೆದಿರುವಂತಹ ಕಳ್ಳತನ, ದರೋಡೆಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ವ್ಯಕ್ತಿಗಳು ಮತ್ತು ವಶಪಡಿಸಿಕೊಂಡ ವಸ್ತುಗಳ ವಿವರಗಳು. ದಾಖಲಾಗಿರುವಂತಹ ಪ್ರಕರಣಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್.ಕೆ.ವಿ ಅವರ ನೆತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಪೊಲೀಸ್ ಠಾಣಾವಾರು ಅರೋಪಿಗಳ ಹೆಸರು ಮತ್ತು ವಿಳಾಸ: ಮಹೇಶ ಎಂ.ಎ ಬಿನ್ ಅಶ್ವತ್ಥನಾರಾಯಣ, ೨೮ ವರ್ಷ, ಎಲೆಕ್ಟಿçಕಲ್ ಕೆಲಸ, ಸ್ವಂತ ಸ್ಥಳ: ಮರಿತಿಮ್ಮನಹಳ್ಳಿ ಗ್ರಾಮ, ಕಸಬಾ ಹೋಬಳಿ, ಮಧುಗಿರಿ ತಾಲ್ಲೂಕು, ಹಾಲಿ ವಾಸ: ಕರಡಿಪುರ, ಮಧುಗಿರಿ ಟೌನ್ ತುಮಕೂರು ಜಿಲ್ಲೆ.ಈ ಪ್ರಕರಣದಲ್ಲಿ ವಶಪಡಿಸಿಕೊಂಡ ಮಾಲುಗಳ ವಿವರ : ಜಮೀನುಗಳಲ್ಲಿ ಬೋರ್ ವೆಲ್ ಗೆ ಅಳವಡಿಸುವ ೬೬ ವಿವಿಧ ಕಂಪನಿಯ ಸ್ಟಾರ್ಟರ್ ಗಳು ಅಂದಾಜು ಬೆಲೆ ೯,೫೦,೦೦೦ ( ಒಂಬತ್ತುವರೆ ಲಕ್ಷ ) ರೂಗಳು, ಒಂದು ರೊಟೇಟಿಂಗ್ ಸಿ.ಸಿ ಕ್ಯಾಮೆರಾ ಅಂದಾಜು ಬೆಲೆ ೨೫,೦೦೦ ( ಇಪ್ಪತ್ತೆ0ದು ಸಾವಿರ ) ರೂಗಳು, ಅಂದಾಜು ಬೆಲೆ ೨,೦೦,೦೦೦ ( ಎರಡು ಲಕ್ಷ ) ರೂಗಳು, ಅಂದಾಜು ಬೆಲೆ ೫೦,೦೦೦ ರೂಗಳು. ಒಟ್ಟು…
ಬೆಂಗಳೂರು/ತುಮಕೂರು: “ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊAಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕರ್ನಾಟಕ ಅಪಾರ್ಟೆ್ಮಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ೨೦೨೬ ಕುರಿತು ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನೆಹರು ತಾರಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. “ಆಗಸ್ಟ್ ೬ ರವರೆಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು, ಸಲಹೆಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ನನಗೆ ಬರೆಯಬಹುದು. ಇದನ್ನು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಆಸ್ತಿ ಕೊಂಡವರಿಗೆ ಅನುಕೂಲವಾಗುವಂತೆ ಈ ವಿಧೇಯಕವನ್ನು ಜಾರಿಗೆ ತರಲಾಗುತ್ತಿದೆ. ಎಲ್ಲಾ ಪಕ್ಷದ ನಾಯಕರಿಗೂ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಅವಕಾಶ ನೀಡಲಾಗಿದೆ. ಶಾಸಕರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದು. ಏಕಪಕ್ಷೀಯವಾಗಿ ನಾನು ನಿರ್ಧಾರ ಮಾಡಲು ಸಾಧ್ಯವಿಲ್ಲ” ಎಂದರು. “ನಿಮ್ಮ ಯಾವುದೇ ಸಲಹೆ ಸೂಚನೆಗಳಿದ್ದರೂ…
ತುಮಕೂರು: ರಾಷ್ಟಿಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಬಾಕಿ ಉಳಿದಿರುವ ಎಲ್ಲಾ ಅಡೆ-ತಡೆಗಳನ್ನು ತ್ವರಿತವಾಗಿ ನಿವಾರಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬA0ಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಎನ್ಎಚ್-೨೦೬ರ ಮಲ್ಲಸಂದ್ರ-ಕರಡಿ ಹಾಗೂ ಕರಡಿ-ಬಾಣಾವರ ವಿಭಾಗಗಳ ನಾಲ್ಕು ಪಥಗಳ ರಸ್ತೆ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರ ವಿರೋಧದಿಂದ ಉಂಟಾಗಿರುವ ಸಮಸ್ಯೆಗಳು, ಬಾಕಿ ಇರುವ ವಿದ್ಯುತ್ ಹಾಗೂ ಇತರೆ ಉಪಯುಕ್ತತಾ ಸೇವೆಗಳ ಸ್ಥಳಾಂತರ, ಕಾಲುವೆ ದಾಟುವ ಕಾಮಗಾರಿಗಳು ಮತ್ತು ಸಂಚಾರ ಸುರಕ್ಷತೆಗೆ ಸಂಬ0ಧಿಸಿದ ವಿಷಯಗಳನ್ನು ಸಭೆಯಲ್ಲಿ ಸವಿಸ್ತಾರವಾಗಿ ಅವರು ಪರಿಶೀಲಿಸಿದರು. ಕಾಮಗಾರಿಗಳ ಪ್ರಗತಿಗೆ ಯಾವುದೇ ರೀತಿಯ ವಿಳಂಬವಾಗದ0ತೆ ಸಂಬAಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಬಾಕಿ ಇರುವ ಎಲ್ಲ ಕೆಲಸಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಸಭೆಯಲ್ಲಿ ರಾಷ್ಟಿಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ, ಬೆಸ್ಕಾಂ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಸಂಬAಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹುಳಿಯಾರು: ಇಂದಿನ ಸಮಾಜದಲ್ಲಿ ಮಕ್ಕಳು ಹಠಕ್ಕೆ ಬಿದ್ದು ಪೋಷಕರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಪೋಷಕರು ದಿನಕ್ಕೆ ಕನಿಷ್ಠ ಹತ್ತು ನಿಮಿಷವಾದರೂ ದೇವರನ್ನು ಸ್ಮರಿಸುವುದರೊಂದಿಗೆ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ಕಲಿಸಬೇಕು ಎಂದು ಜ್ಞಾನಪ್ರಭು ಯಳನಾಡು ಮಠದ ಜ್ಞಾನಪ್ರಭು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ಹುಳಿಯಾರು ಹೋಬಳಿ ಯಳನಡು ಮಠದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ ‘ಹಳ್ಳಿಗೊಂದು ವಚನ ದೀಪ’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಸಂಸ್ಕಾರ ಮತ್ತು ಸಂಸ್ಕöÈತಿಯು ವ್ಯಕ್ತಿಯ ಜೀವನಕ್ಕೆ ಶಾಂತಿ, ನೆಮ್ಮದಿ ಹಾಗೂ ಸನ್ಮಾರ್ಗವನ್ನು ತೋರಿಸುತ್ತದೆ. ಮನೆಯಲ್ಲಿ ತಂದೆ-ತಾಯಿ ಪ್ರತಿನಿತ್ಯ ಮಾಡುವ ದೇವರ ಪೂಜೆ, ಗುರುವಿನ ಪೂಜೆ ಮತ್ತು ಅವರ ಕಾಯಕದ ಬದುಕನ್ನು ಮಕ್ಕಳು ಚಿಕ್ಕ ವಯಸ್ಸಿನಿಂದಲೇ ನೋಡುತ್ತಾ ಬೆಳೆದರೆ, ಅವರೂ ಅದನ್ನೇ ಅನುಕರಿಸುತ್ತಾರೆ. ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹೊನ್ನೇಬಾಗಿ ಬಸವರಾಜು ಮಾತನಾಡಿ, ತಾಲ್ಲೂಕಿನಲ್ಲಿ ಶರಣ ಪರಿಷತ್ತಿನ ವತಿಯಿಂದ ತಿಂಗಳಿಗೊಮ್ಮೆ ‘ಹಳ್ಳಿಗೊಂದು ವಚನ ದೀಪ’ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಶರಣರ ತತ್ವಾದರ್ಶಗಳನ್ನು…

